Homeಮುಖಪುಟಸೂಟ್‌ ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ : ಫೇಸ್‌ಬುಕ್‌ ಗೆಳೆಯನ ಬಂಧನ

ಸೂಟ್‌ ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ : ಫೇಸ್‌ಬುಕ್‌ ಗೆಳೆಯನ ಬಂಧನ

- Advertisement -
- Advertisement -

ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಶವ ಸೂಟ್‌ಕೇಸ್‌ನಲ್ಲಿ ಪತ್ತೆಯಾದ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಸೋಮವಾರ (ಮಾ.3) ಬಂಧಿಸಿದ್ದಾರೆ.

ಮೃತ ಹಿಮಾನಿ ಅವರ ಫೇಸ್‌ಬುಕ್ ಗೆಳೆಯ, ಹರಿಯಾಣದ ಜಜ್ಜರ್ ಜಿಲ್ಲೆಯ ಕೈಪುರ್ ಗ್ರಾಮದ ಸಚಿನ್ ಅಲಿಯಾಸ್ ಧಿಲ್ಲು (30) ಬಂಧಿತ ವ್ಯಕ್ತಿ.

ಈತ ಕಳೆದ ಒಂದೂವರೆ ವರ್ಷದಿಂದ ಫೇಸ್‌ಬುಕ್ ಮೂಲಕ ಹಿಮಾನಿ ಅವರಿಗೆ ಪರಿಚಯವಿದ್ದ. ಕಳೆದ ಏಳು ತಿಂಗಳಿನಿಂದ ಹರಿಯಾಣದ ರೋಹ್ತಕ್‌ ಜಿಲ್ಲೆಯ ವಿಜಯನಗರದ ಹಿಮಾನಿಯವರ ಮನೆಗೆ ಆಗಾಗ ಭೇಟಿ ನೀಡುತ್ತಿದ್ದ. ಹಿಮಾನಿ ಅವರ ಸಹೋದರ ಮತ್ತು ತಾಯಿ ದೀರ್ಘ ಸಮಯದಿಂದ ದೆಹಲಿಯಲ್ಲಿ ವಾಸಿಸುತ್ತಿದ್ದರು.

ಆರೋಪಿ ಸಚಿನ್‌ಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆತನನ್ನು ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಪೊಲೀಸರು ಹಿಮಾನಿಯವರಿಗೆ ಸಂಬಂಧಿಸಿದ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಮತ್ತು ಆಭರಣವನ್ನು ಜಜ್ಜರ್‌ನ ಕನೋಡ ಗ್ರಾಮದಲ್ಲಿರುವ ಆರೋಪಿಯ ಮೊಬೈಲ್ ಅಂಗಡಿಯಿಂದ ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

ಮಾರ್ಚ್ 1ರಂದು ರೋಹ್ತಕ್-ದೆಹಲಿ ಹೆದ್ದಾರಿಯ ಸಂಪ್ಲಾ ಬಸ್ ನಿಲ್ದಾಣದ ಬಳಿ ಸೂಟ್‌ಕೇಸ್‌ನಲ್ಲಿ ಹಿಮಾನಿಯವರ ಶವವನ್ನು ಪೊಲೀಸರು ಪತ್ತೆ ಮಾಡಿದ್ದರು.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿರುವ ರೋಹ್ತಕ್ ರೇಂಜ್‌ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಕ್ರಿಶನ್ ಕುಮಾರ್ ರಾವ್, “ಫೆಬ್ರವರಿ 28ರಂದು ಮನೆಯಲ್ಲಿ ನಡೆದ ಜಗಳದಲ್ಲಿ ಸಚಿನ್ ಮೊಬೈಲ್ ಫೋನ್ ಚಾರ್ಜರ್ ಸಹಾಯದಿಂದ ಹಿಮಾನಿ ಅವರನ್ನು ಕೊಂದಿದ್ದಾನೆ” ಎಂದು ಹೇಳಿದ್ದಾರೆ.

“ಆರೋಪಿ ಸಾಮಾಜಿಕ ಜಾಲತಾಣದ ಮೂಲಕ ಕಳೆದ ಒಂದೂವರೆ ವರ್ಷದಿಂದ ಹಿಮಾನಿ ಅವರ ಜೊತೆ ಸಂಪರ್ಕದಲ್ಲಿದ್ದ. ವಿಜಯನಗರದ ಅವರ ಮನೆಗೆ ಕಳೆದ ಅರೇಳು ತಿಂಗಳಿನಿಂದ ಆತ ಆಗಾಗ ಭೇಟಿ ಕೊಡುತ್ತಿದ್ದ. ಫೆಬ್ರವರಿ 27ರಂದು ಹಿಮಾನಿ ಮನೆಗೆ ಹೋಗಿದ್ದ ಆರೋಪಿ ಇಡೀ ರಾತ್ರಿ ಆಕೆಯೊಂದಿಗೆ ಕಳೆದಿದ್ದ. ಮರುದಿನ ಹಣಕಾಸಿನ ವಿಷಯಕ್ಕೆ ಅವರಿಬ್ಬರ ನಡುವೆ ಜಗಳ ಶುರುವಾಗಿದೆ. ಅದು ತಾರಕಕ್ಕೇರಿ ಸಚಿನ್ ಹಿಮಾನಿಯ ಕೈಗಳನ್ನು ಆಕೆಯ ದುಪಟ್ಟದಿಂದ ಕಟ್ಟಿದ್ದು, ಬಳಿಕ ಮೊಬೈಲ್ ಚಾರ್ಜರ್‌ನಿಂದ ಆಕೆಯ ಕತ್ತು ಬಿಗಿದಿದ್ದಾನೆ. ನಂತರ ಆಕೆಯ ದೇಹವನ್ನು ರಕ್ತದ ಕಲೆಗಳಿದ್ದ ಹೊದಿಕೆಯೊಂದಿಗೆ ಸೂಟ್‌ಕೇಸ್‌ನಲ್ಲಿ ತುಂಬಿದ್ದಾನೆ” ಎಂದು ಎಡಿಜಿಪಿ ತಿಳಿಸಿದ್ದಾರೆ.

“ಕೊಲೆ ಬಳಿಕ ಹಿಮಾನಿಯ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಮತ್ತು ಆಭರಣಗಳನ್ನು ತೆಗೆದುಕೊಂಡ ಸಚಿನ್, ಅದನ್ನು ಜಜ್ಜರ್‌ನ ಕನೋಡ ಗ್ರಾಮದಲ್ಲಿರುವ ಆತನ ಮೊಬೈಲ್‌ ಅಂಗಡಿಗೆ ಕೊಂಡೊಯ್ದಿದ್ದ”.

“ಆರೋಪಿ ಸಚಿನ್ ಕಳವುಗೈದ ವಸ್ತುಗಳನ್ನು ಸಾಗಿಸಲು ಹಿಮಾನಿಯ ಸ್ಕೂಟರ್ ಬಳಸಿದ್ದ. ಬಳಿಕ ಹಿಮಾನಿಯ ಮನೆಗೆ ವಾಪಸ್ ಬಂದ ಆತ, ಹಿಮಾನಿಯ ಶವ ತುಂಬಿದ್ದ ಸೂಟ್‌ಕೇಸ್‌ ಜೊತೆ ರೋಹ್ತಕ್‌ನ ವಿಜಯ್ ನಗರದಿಂದ ದೆಹಲಿ ಬೈಪಾಸ್‌ವರೆಗೆ ಆಟೋದಲ್ಲಿ ತೆರಳಿದ್ದ. ಅಲ್ಲಿಂದ ಸಂಪ್ಲಾಗೆ (ಸುಮಾರು 26 ಕಿ.ಮೀ) ಬಸ್‌ನಲ್ಲಿ ಪ್ರಯಾಣಿಸಿದ್ದ. ನಂತರ, ಸುಮಾರು 80 ಮೀಟರ್‌ಗಳಷ್ಟು ಕಾಲ್ನಡಿಗೆಯಲ್ಲಿ ಹೋಗಿ ಸೂಟ್‌ಕೇಸ್ ಅನ್ನು ಪೊದೆಗೆ ಎಸೆದಿದ್ದ” ಎಂದು ಎಡಿಜಿಪಿ ಹೇಳಿದ್ದಾರೆ.

“ಹಿಮಾನಿ ಯುವ ಕಾಂಗ್ರೆಸ್ ಕಾರ್ಯಕರ್ತೆಯಾಗಿದ್ದರು. ಆರೋಪಿಗೆ ಯಾವುದೇ ರಾಜಕೀಯ ಸಂಪರ್ಕವಿಲ್ಲ. ಆಕೆ ಆತನಿಂದ ಹಣ ಪಡೆಯುತ್ತಿದ್ದರೋ ಅಥವಾ ಆತ ಆಕೆಯಿಂದ ಹಣ ಪಡೆಯುತ್ತಿದ್ದರೋ ಎಂಬ ಬಗ್ಗೆ ಇದುವರೆಗೆ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ. ಆರೋಪಿ ಈಗಾಗಲೇ ವಿವಾಹಿತನಾಗಿರುವುದರಿಂದ ಮತ್ತು ಆಕೆ ಒಂಟಿಯಾಗಿರುವುದರಿಂದ ಮದುವೆಯಾಗಲು ಎರಡೂ ಕಡೆಯಿಂದ ಒತ್ತಡವಿತ್ತು ಎನ್ನಲಾಗಿದೆ. ಈ ಬಗ್ಗೆಯೂ ಇಲ್ಲಿಯವರೆಗೆ ಯಾವುದೇ ಮಾಹಿತಿ ದೊರೆತಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ.

ರೋಹ್ತಕ್‌ನ ವೈಶ್ ಕಾನೂನು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಹಿಮಾನಿ, ಮಾರ್ಚ್ 1ರಂದು ಶವ ಪತ್ತೆಯಾಗುವ ಮೊದಲೇ ನಾಪತ್ತೆಯಾಗಿದ್ದರು. ಇವರು ಭಾರತ್ ಜೋಡೋ ಯಾತ್ರೆಯ ಹರಿಯಾಣದ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿ ಗಮನ ಸೆಳೆದಿದ್ದರು.

ಸಿಸಿಟಿವಿ ವಿಡಿಯೋ ವೈರಲ್ : ಆರೋಪಿ ಸಚಿನ್ ರೋಹ್ತಕ್‌ನ ವಿಜಯನಗರದ ಮನೆಯಿಂದ ಹಿಮಾನಿಯವರ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿಕೊಂಡು ಹೋಗಿದ್ದಾರೆ ಎನ್ನಲಾದ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.

ಚಂಡೀಗಢ| ರೈತ ನಾಯಕರನ್ನು ಮಧ್ಯರಾತ್ರಿ ಬಂಧಿಸಿದ ಪಂಜಾಬ್ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...