Homeಮುಖಪುಟಸೂಟ್‌ ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ : ಫೇಸ್‌ಬುಕ್‌ ಗೆಳೆಯನ ಬಂಧನ

ಸೂಟ್‌ ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ : ಫೇಸ್‌ಬುಕ್‌ ಗೆಳೆಯನ ಬಂಧನ

- Advertisement -
- Advertisement -

ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಶವ ಸೂಟ್‌ಕೇಸ್‌ನಲ್ಲಿ ಪತ್ತೆಯಾದ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಸೋಮವಾರ (ಮಾ.3) ಬಂಧಿಸಿದ್ದಾರೆ.

ಮೃತ ಹಿಮಾನಿ ಅವರ ಫೇಸ್‌ಬುಕ್ ಗೆಳೆಯ, ಹರಿಯಾಣದ ಜಜ್ಜರ್ ಜಿಲ್ಲೆಯ ಕೈಪುರ್ ಗ್ರಾಮದ ಸಚಿನ್ ಅಲಿಯಾಸ್ ಧಿಲ್ಲು (30) ಬಂಧಿತ ವ್ಯಕ್ತಿ.

ಈತ ಕಳೆದ ಒಂದೂವರೆ ವರ್ಷದಿಂದ ಫೇಸ್‌ಬುಕ್ ಮೂಲಕ ಹಿಮಾನಿ ಅವರಿಗೆ ಪರಿಚಯವಿದ್ದ. ಕಳೆದ ಏಳು ತಿಂಗಳಿನಿಂದ ಹರಿಯಾಣದ ರೋಹ್ತಕ್‌ ಜಿಲ್ಲೆಯ ವಿಜಯನಗರದ ಹಿಮಾನಿಯವರ ಮನೆಗೆ ಆಗಾಗ ಭೇಟಿ ನೀಡುತ್ತಿದ್ದ. ಹಿಮಾನಿ ಅವರ ಸಹೋದರ ಮತ್ತು ತಾಯಿ ದೀರ್ಘ ಸಮಯದಿಂದ ದೆಹಲಿಯಲ್ಲಿ ವಾಸಿಸುತ್ತಿದ್ದರು.

ಆರೋಪಿ ಸಚಿನ್‌ಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆತನನ್ನು ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಪೊಲೀಸರು ಹಿಮಾನಿಯವರಿಗೆ ಸಂಬಂಧಿಸಿದ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಮತ್ತು ಆಭರಣವನ್ನು ಜಜ್ಜರ್‌ನ ಕನೋಡ ಗ್ರಾಮದಲ್ಲಿರುವ ಆರೋಪಿಯ ಮೊಬೈಲ್ ಅಂಗಡಿಯಿಂದ ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

ಮಾರ್ಚ್ 1ರಂದು ರೋಹ್ತಕ್-ದೆಹಲಿ ಹೆದ್ದಾರಿಯ ಸಂಪ್ಲಾ ಬಸ್ ನಿಲ್ದಾಣದ ಬಳಿ ಸೂಟ್‌ಕೇಸ್‌ನಲ್ಲಿ ಹಿಮಾನಿಯವರ ಶವವನ್ನು ಪೊಲೀಸರು ಪತ್ತೆ ಮಾಡಿದ್ದರು.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿರುವ ರೋಹ್ತಕ್ ರೇಂಜ್‌ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಕ್ರಿಶನ್ ಕುಮಾರ್ ರಾವ್, “ಫೆಬ್ರವರಿ 28ರಂದು ಮನೆಯಲ್ಲಿ ನಡೆದ ಜಗಳದಲ್ಲಿ ಸಚಿನ್ ಮೊಬೈಲ್ ಫೋನ್ ಚಾರ್ಜರ್ ಸಹಾಯದಿಂದ ಹಿಮಾನಿ ಅವರನ್ನು ಕೊಂದಿದ್ದಾನೆ” ಎಂದು ಹೇಳಿದ್ದಾರೆ.

“ಆರೋಪಿ ಸಾಮಾಜಿಕ ಜಾಲತಾಣದ ಮೂಲಕ ಕಳೆದ ಒಂದೂವರೆ ವರ್ಷದಿಂದ ಹಿಮಾನಿ ಅವರ ಜೊತೆ ಸಂಪರ್ಕದಲ್ಲಿದ್ದ. ವಿಜಯನಗರದ ಅವರ ಮನೆಗೆ ಕಳೆದ ಅರೇಳು ತಿಂಗಳಿನಿಂದ ಆತ ಆಗಾಗ ಭೇಟಿ ಕೊಡುತ್ತಿದ್ದ. ಫೆಬ್ರವರಿ 27ರಂದು ಹಿಮಾನಿ ಮನೆಗೆ ಹೋಗಿದ್ದ ಆರೋಪಿ ಇಡೀ ರಾತ್ರಿ ಆಕೆಯೊಂದಿಗೆ ಕಳೆದಿದ್ದ. ಮರುದಿನ ಹಣಕಾಸಿನ ವಿಷಯಕ್ಕೆ ಅವರಿಬ್ಬರ ನಡುವೆ ಜಗಳ ಶುರುವಾಗಿದೆ. ಅದು ತಾರಕಕ್ಕೇರಿ ಸಚಿನ್ ಹಿಮಾನಿಯ ಕೈಗಳನ್ನು ಆಕೆಯ ದುಪಟ್ಟದಿಂದ ಕಟ್ಟಿದ್ದು, ಬಳಿಕ ಮೊಬೈಲ್ ಚಾರ್ಜರ್‌ನಿಂದ ಆಕೆಯ ಕತ್ತು ಬಿಗಿದಿದ್ದಾನೆ. ನಂತರ ಆಕೆಯ ದೇಹವನ್ನು ರಕ್ತದ ಕಲೆಗಳಿದ್ದ ಹೊದಿಕೆಯೊಂದಿಗೆ ಸೂಟ್‌ಕೇಸ್‌ನಲ್ಲಿ ತುಂಬಿದ್ದಾನೆ” ಎಂದು ಎಡಿಜಿಪಿ ತಿಳಿಸಿದ್ದಾರೆ.

“ಕೊಲೆ ಬಳಿಕ ಹಿಮಾನಿಯ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಮತ್ತು ಆಭರಣಗಳನ್ನು ತೆಗೆದುಕೊಂಡ ಸಚಿನ್, ಅದನ್ನು ಜಜ್ಜರ್‌ನ ಕನೋಡ ಗ್ರಾಮದಲ್ಲಿರುವ ಆತನ ಮೊಬೈಲ್‌ ಅಂಗಡಿಗೆ ಕೊಂಡೊಯ್ದಿದ್ದ”.

“ಆರೋಪಿ ಸಚಿನ್ ಕಳವುಗೈದ ವಸ್ತುಗಳನ್ನು ಸಾಗಿಸಲು ಹಿಮಾನಿಯ ಸ್ಕೂಟರ್ ಬಳಸಿದ್ದ. ಬಳಿಕ ಹಿಮಾನಿಯ ಮನೆಗೆ ವಾಪಸ್ ಬಂದ ಆತ, ಹಿಮಾನಿಯ ಶವ ತುಂಬಿದ್ದ ಸೂಟ್‌ಕೇಸ್‌ ಜೊತೆ ರೋಹ್ತಕ್‌ನ ವಿಜಯ್ ನಗರದಿಂದ ದೆಹಲಿ ಬೈಪಾಸ್‌ವರೆಗೆ ಆಟೋದಲ್ಲಿ ತೆರಳಿದ್ದ. ಅಲ್ಲಿಂದ ಸಂಪ್ಲಾಗೆ (ಸುಮಾರು 26 ಕಿ.ಮೀ) ಬಸ್‌ನಲ್ಲಿ ಪ್ರಯಾಣಿಸಿದ್ದ. ನಂತರ, ಸುಮಾರು 80 ಮೀಟರ್‌ಗಳಷ್ಟು ಕಾಲ್ನಡಿಗೆಯಲ್ಲಿ ಹೋಗಿ ಸೂಟ್‌ಕೇಸ್ ಅನ್ನು ಪೊದೆಗೆ ಎಸೆದಿದ್ದ” ಎಂದು ಎಡಿಜಿಪಿ ಹೇಳಿದ್ದಾರೆ.

“ಹಿಮಾನಿ ಯುವ ಕಾಂಗ್ರೆಸ್ ಕಾರ್ಯಕರ್ತೆಯಾಗಿದ್ದರು. ಆರೋಪಿಗೆ ಯಾವುದೇ ರಾಜಕೀಯ ಸಂಪರ್ಕವಿಲ್ಲ. ಆಕೆ ಆತನಿಂದ ಹಣ ಪಡೆಯುತ್ತಿದ್ದರೋ ಅಥವಾ ಆತ ಆಕೆಯಿಂದ ಹಣ ಪಡೆಯುತ್ತಿದ್ದರೋ ಎಂಬ ಬಗ್ಗೆ ಇದುವರೆಗೆ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ. ಆರೋಪಿ ಈಗಾಗಲೇ ವಿವಾಹಿತನಾಗಿರುವುದರಿಂದ ಮತ್ತು ಆಕೆ ಒಂಟಿಯಾಗಿರುವುದರಿಂದ ಮದುವೆಯಾಗಲು ಎರಡೂ ಕಡೆಯಿಂದ ಒತ್ತಡವಿತ್ತು ಎನ್ನಲಾಗಿದೆ. ಈ ಬಗ್ಗೆಯೂ ಇಲ್ಲಿಯವರೆಗೆ ಯಾವುದೇ ಮಾಹಿತಿ ದೊರೆತಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ.

ರೋಹ್ತಕ್‌ನ ವೈಶ್ ಕಾನೂನು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಹಿಮಾನಿ, ಮಾರ್ಚ್ 1ರಂದು ಶವ ಪತ್ತೆಯಾಗುವ ಮೊದಲೇ ನಾಪತ್ತೆಯಾಗಿದ್ದರು. ಇವರು ಭಾರತ್ ಜೋಡೋ ಯಾತ್ರೆಯ ಹರಿಯಾಣದ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿ ಗಮನ ಸೆಳೆದಿದ್ದರು.

ಸಿಸಿಟಿವಿ ವಿಡಿಯೋ ವೈರಲ್ : ಆರೋಪಿ ಸಚಿನ್ ರೋಹ್ತಕ್‌ನ ವಿಜಯನಗರದ ಮನೆಯಿಂದ ಹಿಮಾನಿಯವರ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿಕೊಂಡು ಹೋಗಿದ್ದಾರೆ ಎನ್ನಲಾದ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.

ಚಂಡೀಗಢ| ರೈತ ನಾಯಕರನ್ನು ಮಧ್ಯರಾತ್ರಿ ಬಂಧಿಸಿದ ಪಂಜಾಬ್ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...