Homeಮುಖಪುಟಸೂಟ್‌ ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ : ಫೇಸ್‌ಬುಕ್‌ ಗೆಳೆಯನ ಬಂಧನ

ಸೂಟ್‌ ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ : ಫೇಸ್‌ಬುಕ್‌ ಗೆಳೆಯನ ಬಂಧನ

- Advertisement -
- Advertisement -

ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಶವ ಸೂಟ್‌ಕೇಸ್‌ನಲ್ಲಿ ಪತ್ತೆಯಾದ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಸೋಮವಾರ (ಮಾ.3) ಬಂಧಿಸಿದ್ದಾರೆ.

ಮೃತ ಹಿಮಾನಿ ಅವರ ಫೇಸ್‌ಬುಕ್ ಗೆಳೆಯ, ಹರಿಯಾಣದ ಜಜ್ಜರ್ ಜಿಲ್ಲೆಯ ಕೈಪುರ್ ಗ್ರಾಮದ ಸಚಿನ್ ಅಲಿಯಾಸ್ ಧಿಲ್ಲು (30) ಬಂಧಿತ ವ್ಯಕ್ತಿ.

ಈತ ಕಳೆದ ಒಂದೂವರೆ ವರ್ಷದಿಂದ ಫೇಸ್‌ಬುಕ್ ಮೂಲಕ ಹಿಮಾನಿ ಅವರಿಗೆ ಪರಿಚಯವಿದ್ದ. ಕಳೆದ ಏಳು ತಿಂಗಳಿನಿಂದ ಹರಿಯಾಣದ ರೋಹ್ತಕ್‌ ಜಿಲ್ಲೆಯ ವಿಜಯನಗರದ ಹಿಮಾನಿಯವರ ಮನೆಗೆ ಆಗಾಗ ಭೇಟಿ ನೀಡುತ್ತಿದ್ದ. ಹಿಮಾನಿ ಅವರ ಸಹೋದರ ಮತ್ತು ತಾಯಿ ದೀರ್ಘ ಸಮಯದಿಂದ ದೆಹಲಿಯಲ್ಲಿ ವಾಸಿಸುತ್ತಿದ್ದರು.

ಆರೋಪಿ ಸಚಿನ್‌ಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆತನನ್ನು ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಪೊಲೀಸರು ಹಿಮಾನಿಯವರಿಗೆ ಸಂಬಂಧಿಸಿದ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಮತ್ತು ಆಭರಣವನ್ನು ಜಜ್ಜರ್‌ನ ಕನೋಡ ಗ್ರಾಮದಲ್ಲಿರುವ ಆರೋಪಿಯ ಮೊಬೈಲ್ ಅಂಗಡಿಯಿಂದ ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

ಮಾರ್ಚ್ 1ರಂದು ರೋಹ್ತಕ್-ದೆಹಲಿ ಹೆದ್ದಾರಿಯ ಸಂಪ್ಲಾ ಬಸ್ ನಿಲ್ದಾಣದ ಬಳಿ ಸೂಟ್‌ಕೇಸ್‌ನಲ್ಲಿ ಹಿಮಾನಿಯವರ ಶವವನ್ನು ಪೊಲೀಸರು ಪತ್ತೆ ಮಾಡಿದ್ದರು.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿರುವ ರೋಹ್ತಕ್ ರೇಂಜ್‌ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಕ್ರಿಶನ್ ಕುಮಾರ್ ರಾವ್, “ಫೆಬ್ರವರಿ 28ರಂದು ಮನೆಯಲ್ಲಿ ನಡೆದ ಜಗಳದಲ್ಲಿ ಸಚಿನ್ ಮೊಬೈಲ್ ಫೋನ್ ಚಾರ್ಜರ್ ಸಹಾಯದಿಂದ ಹಿಮಾನಿ ಅವರನ್ನು ಕೊಂದಿದ್ದಾನೆ” ಎಂದು ಹೇಳಿದ್ದಾರೆ.

“ಆರೋಪಿ ಸಾಮಾಜಿಕ ಜಾಲತಾಣದ ಮೂಲಕ ಕಳೆದ ಒಂದೂವರೆ ವರ್ಷದಿಂದ ಹಿಮಾನಿ ಅವರ ಜೊತೆ ಸಂಪರ್ಕದಲ್ಲಿದ್ದ. ವಿಜಯನಗರದ ಅವರ ಮನೆಗೆ ಕಳೆದ ಅರೇಳು ತಿಂಗಳಿನಿಂದ ಆತ ಆಗಾಗ ಭೇಟಿ ಕೊಡುತ್ತಿದ್ದ. ಫೆಬ್ರವರಿ 27ರಂದು ಹಿಮಾನಿ ಮನೆಗೆ ಹೋಗಿದ್ದ ಆರೋಪಿ ಇಡೀ ರಾತ್ರಿ ಆಕೆಯೊಂದಿಗೆ ಕಳೆದಿದ್ದ. ಮರುದಿನ ಹಣಕಾಸಿನ ವಿಷಯಕ್ಕೆ ಅವರಿಬ್ಬರ ನಡುವೆ ಜಗಳ ಶುರುವಾಗಿದೆ. ಅದು ತಾರಕಕ್ಕೇರಿ ಸಚಿನ್ ಹಿಮಾನಿಯ ಕೈಗಳನ್ನು ಆಕೆಯ ದುಪಟ್ಟದಿಂದ ಕಟ್ಟಿದ್ದು, ಬಳಿಕ ಮೊಬೈಲ್ ಚಾರ್ಜರ್‌ನಿಂದ ಆಕೆಯ ಕತ್ತು ಬಿಗಿದಿದ್ದಾನೆ. ನಂತರ ಆಕೆಯ ದೇಹವನ್ನು ರಕ್ತದ ಕಲೆಗಳಿದ್ದ ಹೊದಿಕೆಯೊಂದಿಗೆ ಸೂಟ್‌ಕೇಸ್‌ನಲ್ಲಿ ತುಂಬಿದ್ದಾನೆ” ಎಂದು ಎಡಿಜಿಪಿ ತಿಳಿಸಿದ್ದಾರೆ.

“ಕೊಲೆ ಬಳಿಕ ಹಿಮಾನಿಯ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಮತ್ತು ಆಭರಣಗಳನ್ನು ತೆಗೆದುಕೊಂಡ ಸಚಿನ್, ಅದನ್ನು ಜಜ್ಜರ್‌ನ ಕನೋಡ ಗ್ರಾಮದಲ್ಲಿರುವ ಆತನ ಮೊಬೈಲ್‌ ಅಂಗಡಿಗೆ ಕೊಂಡೊಯ್ದಿದ್ದ”.

“ಆರೋಪಿ ಸಚಿನ್ ಕಳವುಗೈದ ವಸ್ತುಗಳನ್ನು ಸಾಗಿಸಲು ಹಿಮಾನಿಯ ಸ್ಕೂಟರ್ ಬಳಸಿದ್ದ. ಬಳಿಕ ಹಿಮಾನಿಯ ಮನೆಗೆ ವಾಪಸ್ ಬಂದ ಆತ, ಹಿಮಾನಿಯ ಶವ ತುಂಬಿದ್ದ ಸೂಟ್‌ಕೇಸ್‌ ಜೊತೆ ರೋಹ್ತಕ್‌ನ ವಿಜಯ್ ನಗರದಿಂದ ದೆಹಲಿ ಬೈಪಾಸ್‌ವರೆಗೆ ಆಟೋದಲ್ಲಿ ತೆರಳಿದ್ದ. ಅಲ್ಲಿಂದ ಸಂಪ್ಲಾಗೆ (ಸುಮಾರು 26 ಕಿ.ಮೀ) ಬಸ್‌ನಲ್ಲಿ ಪ್ರಯಾಣಿಸಿದ್ದ. ನಂತರ, ಸುಮಾರು 80 ಮೀಟರ್‌ಗಳಷ್ಟು ಕಾಲ್ನಡಿಗೆಯಲ್ಲಿ ಹೋಗಿ ಸೂಟ್‌ಕೇಸ್ ಅನ್ನು ಪೊದೆಗೆ ಎಸೆದಿದ್ದ” ಎಂದು ಎಡಿಜಿಪಿ ಹೇಳಿದ್ದಾರೆ.

“ಹಿಮಾನಿ ಯುವ ಕಾಂಗ್ರೆಸ್ ಕಾರ್ಯಕರ್ತೆಯಾಗಿದ್ದರು. ಆರೋಪಿಗೆ ಯಾವುದೇ ರಾಜಕೀಯ ಸಂಪರ್ಕವಿಲ್ಲ. ಆಕೆ ಆತನಿಂದ ಹಣ ಪಡೆಯುತ್ತಿದ್ದರೋ ಅಥವಾ ಆತ ಆಕೆಯಿಂದ ಹಣ ಪಡೆಯುತ್ತಿದ್ದರೋ ಎಂಬ ಬಗ್ಗೆ ಇದುವರೆಗೆ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ. ಆರೋಪಿ ಈಗಾಗಲೇ ವಿವಾಹಿತನಾಗಿರುವುದರಿಂದ ಮತ್ತು ಆಕೆ ಒಂಟಿಯಾಗಿರುವುದರಿಂದ ಮದುವೆಯಾಗಲು ಎರಡೂ ಕಡೆಯಿಂದ ಒತ್ತಡವಿತ್ತು ಎನ್ನಲಾಗಿದೆ. ಈ ಬಗ್ಗೆಯೂ ಇಲ್ಲಿಯವರೆಗೆ ಯಾವುದೇ ಮಾಹಿತಿ ದೊರೆತಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ.

ರೋಹ್ತಕ್‌ನ ವೈಶ್ ಕಾನೂನು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಹಿಮಾನಿ, ಮಾರ್ಚ್ 1ರಂದು ಶವ ಪತ್ತೆಯಾಗುವ ಮೊದಲೇ ನಾಪತ್ತೆಯಾಗಿದ್ದರು. ಇವರು ಭಾರತ್ ಜೋಡೋ ಯಾತ್ರೆಯ ಹರಿಯಾಣದ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿ ಗಮನ ಸೆಳೆದಿದ್ದರು.

ಸಿಸಿಟಿವಿ ವಿಡಿಯೋ ವೈರಲ್ : ಆರೋಪಿ ಸಚಿನ್ ರೋಹ್ತಕ್‌ನ ವಿಜಯನಗರದ ಮನೆಯಿಂದ ಹಿಮಾನಿಯವರ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿಕೊಂಡು ಹೋಗಿದ್ದಾರೆ ಎನ್ನಲಾದ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.

ಚಂಡೀಗಢ| ರೈತ ನಾಯಕರನ್ನು ಮಧ್ಯರಾತ್ರಿ ಬಂಧಿಸಿದ ಪಂಜಾಬ್ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...