Homeಮುಖಪುಟಸೂಟ್‌ ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ : ಫೇಸ್‌ಬುಕ್‌ ಗೆಳೆಯನ ಬಂಧನ

ಸೂಟ್‌ ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ : ಫೇಸ್‌ಬುಕ್‌ ಗೆಳೆಯನ ಬಂಧನ

- Advertisement -
- Advertisement -

ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಶವ ಸೂಟ್‌ಕೇಸ್‌ನಲ್ಲಿ ಪತ್ತೆಯಾದ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಸೋಮವಾರ (ಮಾ.3) ಬಂಧಿಸಿದ್ದಾರೆ.

ಮೃತ ಹಿಮಾನಿ ಅವರ ಫೇಸ್‌ಬುಕ್ ಗೆಳೆಯ, ಹರಿಯಾಣದ ಜಜ್ಜರ್ ಜಿಲ್ಲೆಯ ಕೈಪುರ್ ಗ್ರಾಮದ ಸಚಿನ್ ಅಲಿಯಾಸ್ ಧಿಲ್ಲು (30) ಬಂಧಿತ ವ್ಯಕ್ತಿ.

ಈತ ಕಳೆದ ಒಂದೂವರೆ ವರ್ಷದಿಂದ ಫೇಸ್‌ಬುಕ್ ಮೂಲಕ ಹಿಮಾನಿ ಅವರಿಗೆ ಪರಿಚಯವಿದ್ದ. ಕಳೆದ ಏಳು ತಿಂಗಳಿನಿಂದ ಹರಿಯಾಣದ ರೋಹ್ತಕ್‌ ಜಿಲ್ಲೆಯ ವಿಜಯನಗರದ ಹಿಮಾನಿಯವರ ಮನೆಗೆ ಆಗಾಗ ಭೇಟಿ ನೀಡುತ್ತಿದ್ದ. ಹಿಮಾನಿ ಅವರ ಸಹೋದರ ಮತ್ತು ತಾಯಿ ದೀರ್ಘ ಸಮಯದಿಂದ ದೆಹಲಿಯಲ್ಲಿ ವಾಸಿಸುತ್ತಿದ್ದರು.

ಆರೋಪಿ ಸಚಿನ್‌ಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆತನನ್ನು ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಪೊಲೀಸರು ಹಿಮಾನಿಯವರಿಗೆ ಸಂಬಂಧಿಸಿದ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಮತ್ತು ಆಭರಣವನ್ನು ಜಜ್ಜರ್‌ನ ಕನೋಡ ಗ್ರಾಮದಲ್ಲಿರುವ ಆರೋಪಿಯ ಮೊಬೈಲ್ ಅಂಗಡಿಯಿಂದ ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

ಮಾರ್ಚ್ 1ರಂದು ರೋಹ್ತಕ್-ದೆಹಲಿ ಹೆದ್ದಾರಿಯ ಸಂಪ್ಲಾ ಬಸ್ ನಿಲ್ದಾಣದ ಬಳಿ ಸೂಟ್‌ಕೇಸ್‌ನಲ್ಲಿ ಹಿಮಾನಿಯವರ ಶವವನ್ನು ಪೊಲೀಸರು ಪತ್ತೆ ಮಾಡಿದ್ದರು.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿರುವ ರೋಹ್ತಕ್ ರೇಂಜ್‌ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಕ್ರಿಶನ್ ಕುಮಾರ್ ರಾವ್, “ಫೆಬ್ರವರಿ 28ರಂದು ಮನೆಯಲ್ಲಿ ನಡೆದ ಜಗಳದಲ್ಲಿ ಸಚಿನ್ ಮೊಬೈಲ್ ಫೋನ್ ಚಾರ್ಜರ್ ಸಹಾಯದಿಂದ ಹಿಮಾನಿ ಅವರನ್ನು ಕೊಂದಿದ್ದಾನೆ” ಎಂದು ಹೇಳಿದ್ದಾರೆ.

“ಆರೋಪಿ ಸಾಮಾಜಿಕ ಜಾಲತಾಣದ ಮೂಲಕ ಕಳೆದ ಒಂದೂವರೆ ವರ್ಷದಿಂದ ಹಿಮಾನಿ ಅವರ ಜೊತೆ ಸಂಪರ್ಕದಲ್ಲಿದ್ದ. ವಿಜಯನಗರದ ಅವರ ಮನೆಗೆ ಕಳೆದ ಅರೇಳು ತಿಂಗಳಿನಿಂದ ಆತ ಆಗಾಗ ಭೇಟಿ ಕೊಡುತ್ತಿದ್ದ. ಫೆಬ್ರವರಿ 27ರಂದು ಹಿಮಾನಿ ಮನೆಗೆ ಹೋಗಿದ್ದ ಆರೋಪಿ ಇಡೀ ರಾತ್ರಿ ಆಕೆಯೊಂದಿಗೆ ಕಳೆದಿದ್ದ. ಮರುದಿನ ಹಣಕಾಸಿನ ವಿಷಯಕ್ಕೆ ಅವರಿಬ್ಬರ ನಡುವೆ ಜಗಳ ಶುರುವಾಗಿದೆ. ಅದು ತಾರಕಕ್ಕೇರಿ ಸಚಿನ್ ಹಿಮಾನಿಯ ಕೈಗಳನ್ನು ಆಕೆಯ ದುಪಟ್ಟದಿಂದ ಕಟ್ಟಿದ್ದು, ಬಳಿಕ ಮೊಬೈಲ್ ಚಾರ್ಜರ್‌ನಿಂದ ಆಕೆಯ ಕತ್ತು ಬಿಗಿದಿದ್ದಾನೆ. ನಂತರ ಆಕೆಯ ದೇಹವನ್ನು ರಕ್ತದ ಕಲೆಗಳಿದ್ದ ಹೊದಿಕೆಯೊಂದಿಗೆ ಸೂಟ್‌ಕೇಸ್‌ನಲ್ಲಿ ತುಂಬಿದ್ದಾನೆ” ಎಂದು ಎಡಿಜಿಪಿ ತಿಳಿಸಿದ್ದಾರೆ.

“ಕೊಲೆ ಬಳಿಕ ಹಿಮಾನಿಯ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಮತ್ತು ಆಭರಣಗಳನ್ನು ತೆಗೆದುಕೊಂಡ ಸಚಿನ್, ಅದನ್ನು ಜಜ್ಜರ್‌ನ ಕನೋಡ ಗ್ರಾಮದಲ್ಲಿರುವ ಆತನ ಮೊಬೈಲ್‌ ಅಂಗಡಿಗೆ ಕೊಂಡೊಯ್ದಿದ್ದ”.

“ಆರೋಪಿ ಸಚಿನ್ ಕಳವುಗೈದ ವಸ್ತುಗಳನ್ನು ಸಾಗಿಸಲು ಹಿಮಾನಿಯ ಸ್ಕೂಟರ್ ಬಳಸಿದ್ದ. ಬಳಿಕ ಹಿಮಾನಿಯ ಮನೆಗೆ ವಾಪಸ್ ಬಂದ ಆತ, ಹಿಮಾನಿಯ ಶವ ತುಂಬಿದ್ದ ಸೂಟ್‌ಕೇಸ್‌ ಜೊತೆ ರೋಹ್ತಕ್‌ನ ವಿಜಯ್ ನಗರದಿಂದ ದೆಹಲಿ ಬೈಪಾಸ್‌ವರೆಗೆ ಆಟೋದಲ್ಲಿ ತೆರಳಿದ್ದ. ಅಲ್ಲಿಂದ ಸಂಪ್ಲಾಗೆ (ಸುಮಾರು 26 ಕಿ.ಮೀ) ಬಸ್‌ನಲ್ಲಿ ಪ್ರಯಾಣಿಸಿದ್ದ. ನಂತರ, ಸುಮಾರು 80 ಮೀಟರ್‌ಗಳಷ್ಟು ಕಾಲ್ನಡಿಗೆಯಲ್ಲಿ ಹೋಗಿ ಸೂಟ್‌ಕೇಸ್ ಅನ್ನು ಪೊದೆಗೆ ಎಸೆದಿದ್ದ” ಎಂದು ಎಡಿಜಿಪಿ ಹೇಳಿದ್ದಾರೆ.

“ಹಿಮಾನಿ ಯುವ ಕಾಂಗ್ರೆಸ್ ಕಾರ್ಯಕರ್ತೆಯಾಗಿದ್ದರು. ಆರೋಪಿಗೆ ಯಾವುದೇ ರಾಜಕೀಯ ಸಂಪರ್ಕವಿಲ್ಲ. ಆಕೆ ಆತನಿಂದ ಹಣ ಪಡೆಯುತ್ತಿದ್ದರೋ ಅಥವಾ ಆತ ಆಕೆಯಿಂದ ಹಣ ಪಡೆಯುತ್ತಿದ್ದರೋ ಎಂಬ ಬಗ್ಗೆ ಇದುವರೆಗೆ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ. ಆರೋಪಿ ಈಗಾಗಲೇ ವಿವಾಹಿತನಾಗಿರುವುದರಿಂದ ಮತ್ತು ಆಕೆ ಒಂಟಿಯಾಗಿರುವುದರಿಂದ ಮದುವೆಯಾಗಲು ಎರಡೂ ಕಡೆಯಿಂದ ಒತ್ತಡವಿತ್ತು ಎನ್ನಲಾಗಿದೆ. ಈ ಬಗ್ಗೆಯೂ ಇಲ್ಲಿಯವರೆಗೆ ಯಾವುದೇ ಮಾಹಿತಿ ದೊರೆತಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ.

ರೋಹ್ತಕ್‌ನ ವೈಶ್ ಕಾನೂನು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಹಿಮಾನಿ, ಮಾರ್ಚ್ 1ರಂದು ಶವ ಪತ್ತೆಯಾಗುವ ಮೊದಲೇ ನಾಪತ್ತೆಯಾಗಿದ್ದರು. ಇವರು ಭಾರತ್ ಜೋಡೋ ಯಾತ್ರೆಯ ಹರಿಯಾಣದ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿ ಗಮನ ಸೆಳೆದಿದ್ದರು.

ಸಿಸಿಟಿವಿ ವಿಡಿಯೋ ವೈರಲ್ : ಆರೋಪಿ ಸಚಿನ್ ರೋಹ್ತಕ್‌ನ ವಿಜಯನಗರದ ಮನೆಯಿಂದ ಹಿಮಾನಿಯವರ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿಕೊಂಡು ಹೋಗಿದ್ದಾರೆ ಎನ್ನಲಾದ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.

ಚಂಡೀಗಢ| ರೈತ ನಾಯಕರನ್ನು ಮಧ್ಯರಾತ್ರಿ ಬಂಧಿಸಿದ ಪಂಜಾಬ್ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...