Homeಮುಖಪುಟಸೂಟ್‌ ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ : ಫೇಸ್‌ಬುಕ್‌ ಗೆಳೆಯನ ಬಂಧನ

ಸೂಟ್‌ ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ : ಫೇಸ್‌ಬುಕ್‌ ಗೆಳೆಯನ ಬಂಧನ

- Advertisement -
- Advertisement -

ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಶವ ಸೂಟ್‌ಕೇಸ್‌ನಲ್ಲಿ ಪತ್ತೆಯಾದ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಸೋಮವಾರ (ಮಾ.3) ಬಂಧಿಸಿದ್ದಾರೆ.

ಮೃತ ಹಿಮಾನಿ ಅವರ ಫೇಸ್‌ಬುಕ್ ಗೆಳೆಯ, ಹರಿಯಾಣದ ಜಜ್ಜರ್ ಜಿಲ್ಲೆಯ ಕೈಪುರ್ ಗ್ರಾಮದ ಸಚಿನ್ ಅಲಿಯಾಸ್ ಧಿಲ್ಲು (30) ಬಂಧಿತ ವ್ಯಕ್ತಿ.

ಈತ ಕಳೆದ ಒಂದೂವರೆ ವರ್ಷದಿಂದ ಫೇಸ್‌ಬುಕ್ ಮೂಲಕ ಹಿಮಾನಿ ಅವರಿಗೆ ಪರಿಚಯವಿದ್ದ. ಕಳೆದ ಏಳು ತಿಂಗಳಿನಿಂದ ಹರಿಯಾಣದ ರೋಹ್ತಕ್‌ ಜಿಲ್ಲೆಯ ವಿಜಯನಗರದ ಹಿಮಾನಿಯವರ ಮನೆಗೆ ಆಗಾಗ ಭೇಟಿ ನೀಡುತ್ತಿದ್ದ. ಹಿಮಾನಿ ಅವರ ಸಹೋದರ ಮತ್ತು ತಾಯಿ ದೀರ್ಘ ಸಮಯದಿಂದ ದೆಹಲಿಯಲ್ಲಿ ವಾಸಿಸುತ್ತಿದ್ದರು.

ಆರೋಪಿ ಸಚಿನ್‌ಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆತನನ್ನು ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಪೊಲೀಸರು ಹಿಮಾನಿಯವರಿಗೆ ಸಂಬಂಧಿಸಿದ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಮತ್ತು ಆಭರಣವನ್ನು ಜಜ್ಜರ್‌ನ ಕನೋಡ ಗ್ರಾಮದಲ್ಲಿರುವ ಆರೋಪಿಯ ಮೊಬೈಲ್ ಅಂಗಡಿಯಿಂದ ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

ಮಾರ್ಚ್ 1ರಂದು ರೋಹ್ತಕ್-ದೆಹಲಿ ಹೆದ್ದಾರಿಯ ಸಂಪ್ಲಾ ಬಸ್ ನಿಲ್ದಾಣದ ಬಳಿ ಸೂಟ್‌ಕೇಸ್‌ನಲ್ಲಿ ಹಿಮಾನಿಯವರ ಶವವನ್ನು ಪೊಲೀಸರು ಪತ್ತೆ ಮಾಡಿದ್ದರು.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿರುವ ರೋಹ್ತಕ್ ರೇಂಜ್‌ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಕ್ರಿಶನ್ ಕುಮಾರ್ ರಾವ್, “ಫೆಬ್ರವರಿ 28ರಂದು ಮನೆಯಲ್ಲಿ ನಡೆದ ಜಗಳದಲ್ಲಿ ಸಚಿನ್ ಮೊಬೈಲ್ ಫೋನ್ ಚಾರ್ಜರ್ ಸಹಾಯದಿಂದ ಹಿಮಾನಿ ಅವರನ್ನು ಕೊಂದಿದ್ದಾನೆ” ಎಂದು ಹೇಳಿದ್ದಾರೆ.

“ಆರೋಪಿ ಸಾಮಾಜಿಕ ಜಾಲತಾಣದ ಮೂಲಕ ಕಳೆದ ಒಂದೂವರೆ ವರ್ಷದಿಂದ ಹಿಮಾನಿ ಅವರ ಜೊತೆ ಸಂಪರ್ಕದಲ್ಲಿದ್ದ. ವಿಜಯನಗರದ ಅವರ ಮನೆಗೆ ಕಳೆದ ಅರೇಳು ತಿಂಗಳಿನಿಂದ ಆತ ಆಗಾಗ ಭೇಟಿ ಕೊಡುತ್ತಿದ್ದ. ಫೆಬ್ರವರಿ 27ರಂದು ಹಿಮಾನಿ ಮನೆಗೆ ಹೋಗಿದ್ದ ಆರೋಪಿ ಇಡೀ ರಾತ್ರಿ ಆಕೆಯೊಂದಿಗೆ ಕಳೆದಿದ್ದ. ಮರುದಿನ ಹಣಕಾಸಿನ ವಿಷಯಕ್ಕೆ ಅವರಿಬ್ಬರ ನಡುವೆ ಜಗಳ ಶುರುವಾಗಿದೆ. ಅದು ತಾರಕಕ್ಕೇರಿ ಸಚಿನ್ ಹಿಮಾನಿಯ ಕೈಗಳನ್ನು ಆಕೆಯ ದುಪಟ್ಟದಿಂದ ಕಟ್ಟಿದ್ದು, ಬಳಿಕ ಮೊಬೈಲ್ ಚಾರ್ಜರ್‌ನಿಂದ ಆಕೆಯ ಕತ್ತು ಬಿಗಿದಿದ್ದಾನೆ. ನಂತರ ಆಕೆಯ ದೇಹವನ್ನು ರಕ್ತದ ಕಲೆಗಳಿದ್ದ ಹೊದಿಕೆಯೊಂದಿಗೆ ಸೂಟ್‌ಕೇಸ್‌ನಲ್ಲಿ ತುಂಬಿದ್ದಾನೆ” ಎಂದು ಎಡಿಜಿಪಿ ತಿಳಿಸಿದ್ದಾರೆ.

“ಕೊಲೆ ಬಳಿಕ ಹಿಮಾನಿಯ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಮತ್ತು ಆಭರಣಗಳನ್ನು ತೆಗೆದುಕೊಂಡ ಸಚಿನ್, ಅದನ್ನು ಜಜ್ಜರ್‌ನ ಕನೋಡ ಗ್ರಾಮದಲ್ಲಿರುವ ಆತನ ಮೊಬೈಲ್‌ ಅಂಗಡಿಗೆ ಕೊಂಡೊಯ್ದಿದ್ದ”.

“ಆರೋಪಿ ಸಚಿನ್ ಕಳವುಗೈದ ವಸ್ತುಗಳನ್ನು ಸಾಗಿಸಲು ಹಿಮಾನಿಯ ಸ್ಕೂಟರ್ ಬಳಸಿದ್ದ. ಬಳಿಕ ಹಿಮಾನಿಯ ಮನೆಗೆ ವಾಪಸ್ ಬಂದ ಆತ, ಹಿಮಾನಿಯ ಶವ ತುಂಬಿದ್ದ ಸೂಟ್‌ಕೇಸ್‌ ಜೊತೆ ರೋಹ್ತಕ್‌ನ ವಿಜಯ್ ನಗರದಿಂದ ದೆಹಲಿ ಬೈಪಾಸ್‌ವರೆಗೆ ಆಟೋದಲ್ಲಿ ತೆರಳಿದ್ದ. ಅಲ್ಲಿಂದ ಸಂಪ್ಲಾಗೆ (ಸುಮಾರು 26 ಕಿ.ಮೀ) ಬಸ್‌ನಲ್ಲಿ ಪ್ರಯಾಣಿಸಿದ್ದ. ನಂತರ, ಸುಮಾರು 80 ಮೀಟರ್‌ಗಳಷ್ಟು ಕಾಲ್ನಡಿಗೆಯಲ್ಲಿ ಹೋಗಿ ಸೂಟ್‌ಕೇಸ್ ಅನ್ನು ಪೊದೆಗೆ ಎಸೆದಿದ್ದ” ಎಂದು ಎಡಿಜಿಪಿ ಹೇಳಿದ್ದಾರೆ.

“ಹಿಮಾನಿ ಯುವ ಕಾಂಗ್ರೆಸ್ ಕಾರ್ಯಕರ್ತೆಯಾಗಿದ್ದರು. ಆರೋಪಿಗೆ ಯಾವುದೇ ರಾಜಕೀಯ ಸಂಪರ್ಕವಿಲ್ಲ. ಆಕೆ ಆತನಿಂದ ಹಣ ಪಡೆಯುತ್ತಿದ್ದರೋ ಅಥವಾ ಆತ ಆಕೆಯಿಂದ ಹಣ ಪಡೆಯುತ್ತಿದ್ದರೋ ಎಂಬ ಬಗ್ಗೆ ಇದುವರೆಗೆ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ. ಆರೋಪಿ ಈಗಾಗಲೇ ವಿವಾಹಿತನಾಗಿರುವುದರಿಂದ ಮತ್ತು ಆಕೆ ಒಂಟಿಯಾಗಿರುವುದರಿಂದ ಮದುವೆಯಾಗಲು ಎರಡೂ ಕಡೆಯಿಂದ ಒತ್ತಡವಿತ್ತು ಎನ್ನಲಾಗಿದೆ. ಈ ಬಗ್ಗೆಯೂ ಇಲ್ಲಿಯವರೆಗೆ ಯಾವುದೇ ಮಾಹಿತಿ ದೊರೆತಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ.

ರೋಹ್ತಕ್‌ನ ವೈಶ್ ಕಾನೂನು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಹಿಮಾನಿ, ಮಾರ್ಚ್ 1ರಂದು ಶವ ಪತ್ತೆಯಾಗುವ ಮೊದಲೇ ನಾಪತ್ತೆಯಾಗಿದ್ದರು. ಇವರು ಭಾರತ್ ಜೋಡೋ ಯಾತ್ರೆಯ ಹರಿಯಾಣದ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿ ಗಮನ ಸೆಳೆದಿದ್ದರು.

ಸಿಸಿಟಿವಿ ವಿಡಿಯೋ ವೈರಲ್ : ಆರೋಪಿ ಸಚಿನ್ ರೋಹ್ತಕ್‌ನ ವಿಜಯನಗರದ ಮನೆಯಿಂದ ಹಿಮಾನಿಯವರ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿಕೊಂಡು ಹೋಗಿದ್ದಾರೆ ಎನ್ನಲಾದ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.

ಚಂಡೀಗಢ| ರೈತ ನಾಯಕರನ್ನು ಮಧ್ಯರಾತ್ರಿ ಬಂಧಿಸಿದ ಪಂಜಾಬ್ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...