Homeಕರ್ನಾಟಕಕಾಂಗ್ರೆಸ್‌ನ 6ನೇ ಗ್ಯಾರೆಂಟಿ- 'PSI, ಬಿಟ್‌ಕಾಯಿನ್ ಹಗರಣ'ಗಳಿಗೆ ತಾರ್ಕಿಕ ಅಂತ್ಯ ಕಾಣಿಸುತ್ತೇವೆ: ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್‌ನ 6ನೇ ಗ್ಯಾರೆಂಟಿ- ‘PSI, ಬಿಟ್‌ಕಾಯಿನ್ ಹಗರಣ’ಗಳಿಗೆ ತಾರ್ಕಿಕ ಅಂತ್ಯ ಕಾಣಿಸುತ್ತೇವೆ: ಪ್ರಿಯಾಂಕ್ ಖರ್ಗೆ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಕೊಟ್ಟಂತಹ ಐದು ಗ್ಯಾರಂಟಿಗಳ ಘೋಷಣೆಯಿಂದ ಭರ್ಜರಿ ಗೆಲುವು ದಾಖಲಿಸಿದೆ. ”ಐದು ಗ್ಯಾರೆಂಟಿಗಳು ಪ್ರಮುಖವಾಗಿದದ್ದು, ಈಗ ಸರ್ಕಾರ ರಚನೆಯ ಬಳಿಕ ಪಿಎಸ್‌ಐ ಹಾಗೂ ಬಿಟ್‌ ಕಾಯಿನ್‌ ಹಗರಣಗಳಿಗೆ ತಾರ್ಕಿಕ ಅಂತ್ಯದೆಡೆಗೆ ತೆಗೆದುಕೊಂಡು ಹೋಗುವುದೇ ನಮ್ಮ ಆರನೇ ಗ್ಯಾರಂಟಿ” ಎಂದು ನೂತನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಪ್ರಿಯಾಂಕ್ ಖರ್ಗೆ ಅವರು, ”ಬಿಜೆಪಿ ಸರ್ಕಾರದ ಬಿಟ್‌ ಕಾಯಿನ್‌ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಶಿಕ್ಷೆ ನೀಡಲಾಗುವುದು” ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈ ವೇಳೆ ಐದು ಗ್ಯಾರೆಂಟಿಗಳಿ ಶರತ್ತು ವಿಧಿಸಿರುವ ಬಗ್ಗೆಮಾಧ್ಯಮದವರು  ಪ್ರಶ್ನೆ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ”ಈಗಾಗಲೇ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳಿಗೆ ನಿಬಂಧನೆಗಳು ಅನ್ವಯಿಸಲಿವೆ. ಯಾವುದೇ ಸರ್ಕಾರ ಯೋಜನೆಗಳನ್ನ ಜಾರಿಗೊಳಿಸಿದರೇ ಷರತ್ತುಗಳಿಲ್ಲದೆ ಜಾರಿಗೊಳಿಸಲು ಸಾಧ್ಯವಾ?” ಎಂದು ಪ್ರಶ್ನಿಸಿದ್ದಾರೆ.

”ಕೇಂದ್ರ ಸರ್ಕಾರದ ಯೋಜನೆಗಳಿರಲಿ ಅಥವಾ ರಾಜ್ಯ ಸರ್ಕಾರದ ಯೋಜನೆಗಳಿರಲಿ ಷರತ್ತುಗಳು ಅನ್ವಯಿಸಲಿವೆ. ಬಡವರಿಗೆ ಅನುಕೂಲ ಮಾಡಿಕೊಡಲು ಈ ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಯಾಬಿನೆಟಟ್‌ನಲ್ಲಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತ ಆದೇಶ ಆಗಬಹುದು” ಎಂದು ಹೇಳಿದ್ದಾರೆ.

”ಚಿತ್ತಾಪುರದಿಂದ ಮೂರು ಬಾರಿ ಗೆದ್ದಿದ್ದೇನೆ. ನನ್ನನ್ನು ಸೋಲಿಸಲು ಅನೇಕ ರೀತಿಯಲ್ಲಿ ಬಿಜೆಪಿ ಪ್ರಯತ್ನ ಮಾಡಿತ್ತು. ಆದರೆ, ನನ್ನ ಕ್ಷೇತ್ರದ ಜನ ನನ್ನ ಕೈ ಬಿಡಲಿಲ್ಲ. ನನ್ನ ವಿರುದ್ಧ ಪ್ರಚಾರಕ್ಕೆಂದು ಬಿಜೆಪಿಯ ಘಟಾನುಘಟಿ ನಾಯಕರು ಬಂದಿದ್ದರು. ಆದರೂ ನನಗೇ ಗೆಲುವಾಗಿದ್ದು ಈಗ ಸಚಿವ ಸ್ಥಾನ ನೀಡಿದ್ದಾರೆ. ಅದಕ್ಕಾಗಿ ಪಕ್ಷದ ಎಲ್ಲ ನಾಯಕರನ್ನು ಅಭಿನಂದಿಸುತ್ತೇನೆ” ಎಂದು ಪ್ರಿಯಾಂಕ್‌ ಖರ್ಗೆ ಹೇಳಿದರು.

ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ಮಾಡಿರುವ ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಪ್ರಮುಖ ಕಾರಣವಾಗಿವೆ. ಕಳೆದ ಅವಧಿಯ ಬಿಜೆಪಿ ಸರ್ಕಾರದ ಹಗರಣಗಳನ್ನು ಎಳೆ ಎಳೆಯಾಗಿ ಜನರ ಮುಂದೆ ಇಟ್ಟು ಸರ್ಕಾರದ ಅವ್ಯವಹಾರವನ್ನು ಹೊರಗೆಳಿದ್ದರು. ಹೀಗಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಗೆ ಅವಕಾಶವನ್ನ ಮಾಡಿಕೊಡಬಾರದು ಎಂದು ಕಾಂಗೆಸ್‌ ಸರ್ಕಾರವು ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ಸೋಲಿಗೆ ಈ ಐದು ಅಂಶಗಳು ಪ್ರಮುಖ ಕಾರಣ

ಪಿಎಸ್‌ಐ ಹಗರಣ

ಸಿಎಂ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್‌ಐ ಹಗರಣ ಬೆಳಕಿಗೆ ಬಂದಿತು. 2021ರ ಅಕ್ಟೋಬರ್‌ನಲ್ಲಿ ನಡೆದ 545 ಪಿಎಸ್‌ಐ ಹುದ್ದೆ ನೇಮಕಾತಿಯಲ್ಲಿ ಕೆಲ ಅಭ್ಯರ್ಥಿಗಳಿಂದ ಕೋಟಿಗಟ್ಟಲೆ ಹಣ ಪಡೆದು ಅಕ್ರಮವೆಸಗಲಾಗಿತ್ತು. ಕೇವಲ 21 ಪ್ರಶ್ನೆಗಳಿಗೆ ಉತ್ತರ ಬರೆದವರಿಗೆ 100 ಅಂಕ ನೀಡಲಾಗಿತ್ತು. ಖಾಲಿ ಬಿಟ್ಟ ಓಎಂಆರ್ ಶೀಟ್‌ಅನ್ನು ಪರೀಕ್ಷೆ ಮುಗಿದ ಬಳಿಕ ತುಂಬಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಗರಣದ ಕಿಂಗ್ ಪಿನ್ ದಿವ್ಯಾ ಹಾಗರಗಿ ಕಲಬುರಗಿಯ ಬಿಜೆಪಿ ನಾಯಕಿಯಾಗಿದ್ದು ಅವರನ್ನು ಬಂಧಿಸಲಾಗಿತ್ತು. ಅವರು ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥನಾರಾಯಣ ಗೌಡರೊಂದಿಗೆ ಇರುವ ಫೋಟೊಗಳು ವೈರಲ್ ಆಗಿದ್ದವು. ಆದರೆ ಇದರ ತನಿಖೆಯು ತಾರ್ಕಿಕ ಅಂತ್ಯ ಕಂಡಿಲ್ಲ.

ಬಿಟ್ ಕಾಯಿನ್ ಹಗರಣ

ಬೊಮ್ಮಾಯಿಯವರು ಮುಖ್ಯಮಂತ್ರಿ ಆದ ಮೂರೇ ತಿಂಗಳಿನಲ್ಲಿ ಬಿಟ್ ಕಾಯಿನ್ ಹಗರಣದಲ್ಲಿ ಪ್ರಮುಖ ಆರೋಪಿಯಾಗಿ ಅವರ ಹೆಸರು ಕೇಳಿಬಂದಿತ್ತು. ‘ಕಾಂಗ್ರೆಸ್‌ನವರು ಇದರಲ್ಲಿ ಇದ್ದಾರೆ ಎಚ್ಚರಿಕೆ’ ಎಂಬ ಹೇಳಿಕೆಗಳನ್ನು ಅವರು ನೀಡಿದರೇ ಹೊರತು ನಿಷ್ಪಕ್ಷಪಾತ ತನಿಖೆಗೆ ಮುಂದಾಗಲಿಲ್ಲ. ಆನಂತರ ಶ್ರೀಕಿ ಎಂಬ ಹ್ಯಾಕರ್‌ನನ್ನು ಬಂಧಿಸಲಾಯಿತು. ಡ್ರಗ್ಸ್ ಜಾಲ ಎಂದು ಕರೆಯಲಾಯಿತಾದರೂ, ಬಿಜೆಪಿಯವರೆ ಈ ಬಿಟ್ ಕಾಯಿನ್ ಹಗರಣ ಮಾಹಿತಿಯನ್ನು ಹೊರಹಾಕಿದ್ದರು. ಆದರೆ ಅದರ ತನಿಖೆ ಮಾತ್ರ ಸರಿಯಾದ ರೀತಿಯಲ್ಲಿ ನಡೆಸಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...