Homeಕರ್ನಾಟಕಕಾಂಗ್ರೆಸ್‌ನ 6ನೇ ಗ್ಯಾರೆಂಟಿ- 'PSI, ಬಿಟ್‌ಕಾಯಿನ್ ಹಗರಣ'ಗಳಿಗೆ ತಾರ್ಕಿಕ ಅಂತ್ಯ ಕಾಣಿಸುತ್ತೇವೆ: ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್‌ನ 6ನೇ ಗ್ಯಾರೆಂಟಿ- ‘PSI, ಬಿಟ್‌ಕಾಯಿನ್ ಹಗರಣ’ಗಳಿಗೆ ತಾರ್ಕಿಕ ಅಂತ್ಯ ಕಾಣಿಸುತ್ತೇವೆ: ಪ್ರಿಯಾಂಕ್ ಖರ್ಗೆ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಕೊಟ್ಟಂತಹ ಐದು ಗ್ಯಾರಂಟಿಗಳ ಘೋಷಣೆಯಿಂದ ಭರ್ಜರಿ ಗೆಲುವು ದಾಖಲಿಸಿದೆ. ”ಐದು ಗ್ಯಾರೆಂಟಿಗಳು ಪ್ರಮುಖವಾಗಿದದ್ದು, ಈಗ ಸರ್ಕಾರ ರಚನೆಯ ಬಳಿಕ ಪಿಎಸ್‌ಐ ಹಾಗೂ ಬಿಟ್‌ ಕಾಯಿನ್‌ ಹಗರಣಗಳಿಗೆ ತಾರ್ಕಿಕ ಅಂತ್ಯದೆಡೆಗೆ ತೆಗೆದುಕೊಂಡು ಹೋಗುವುದೇ ನಮ್ಮ ಆರನೇ ಗ್ಯಾರಂಟಿ” ಎಂದು ನೂತನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಪ್ರಿಯಾಂಕ್ ಖರ್ಗೆ ಅವರು, ”ಬಿಜೆಪಿ ಸರ್ಕಾರದ ಬಿಟ್‌ ಕಾಯಿನ್‌ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಶಿಕ್ಷೆ ನೀಡಲಾಗುವುದು” ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈ ವೇಳೆ ಐದು ಗ್ಯಾರೆಂಟಿಗಳಿ ಶರತ್ತು ವಿಧಿಸಿರುವ ಬಗ್ಗೆಮಾಧ್ಯಮದವರು  ಪ್ರಶ್ನೆ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ”ಈಗಾಗಲೇ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳಿಗೆ ನಿಬಂಧನೆಗಳು ಅನ್ವಯಿಸಲಿವೆ. ಯಾವುದೇ ಸರ್ಕಾರ ಯೋಜನೆಗಳನ್ನ ಜಾರಿಗೊಳಿಸಿದರೇ ಷರತ್ತುಗಳಿಲ್ಲದೆ ಜಾರಿಗೊಳಿಸಲು ಸಾಧ್ಯವಾ?” ಎಂದು ಪ್ರಶ್ನಿಸಿದ್ದಾರೆ.

”ಕೇಂದ್ರ ಸರ್ಕಾರದ ಯೋಜನೆಗಳಿರಲಿ ಅಥವಾ ರಾಜ್ಯ ಸರ್ಕಾರದ ಯೋಜನೆಗಳಿರಲಿ ಷರತ್ತುಗಳು ಅನ್ವಯಿಸಲಿವೆ. ಬಡವರಿಗೆ ಅನುಕೂಲ ಮಾಡಿಕೊಡಲು ಈ ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಯಾಬಿನೆಟಟ್‌ನಲ್ಲಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತ ಆದೇಶ ಆಗಬಹುದು” ಎಂದು ಹೇಳಿದ್ದಾರೆ.

”ಚಿತ್ತಾಪುರದಿಂದ ಮೂರು ಬಾರಿ ಗೆದ್ದಿದ್ದೇನೆ. ನನ್ನನ್ನು ಸೋಲಿಸಲು ಅನೇಕ ರೀತಿಯಲ್ಲಿ ಬಿಜೆಪಿ ಪ್ರಯತ್ನ ಮಾಡಿತ್ತು. ಆದರೆ, ನನ್ನ ಕ್ಷೇತ್ರದ ಜನ ನನ್ನ ಕೈ ಬಿಡಲಿಲ್ಲ. ನನ್ನ ವಿರುದ್ಧ ಪ್ರಚಾರಕ್ಕೆಂದು ಬಿಜೆಪಿಯ ಘಟಾನುಘಟಿ ನಾಯಕರು ಬಂದಿದ್ದರು. ಆದರೂ ನನಗೇ ಗೆಲುವಾಗಿದ್ದು ಈಗ ಸಚಿವ ಸ್ಥಾನ ನೀಡಿದ್ದಾರೆ. ಅದಕ್ಕಾಗಿ ಪಕ್ಷದ ಎಲ್ಲ ನಾಯಕರನ್ನು ಅಭಿನಂದಿಸುತ್ತೇನೆ” ಎಂದು ಪ್ರಿಯಾಂಕ್‌ ಖರ್ಗೆ ಹೇಳಿದರು.

ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ಮಾಡಿರುವ ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಪ್ರಮುಖ ಕಾರಣವಾಗಿವೆ. ಕಳೆದ ಅವಧಿಯ ಬಿಜೆಪಿ ಸರ್ಕಾರದ ಹಗರಣಗಳನ್ನು ಎಳೆ ಎಳೆಯಾಗಿ ಜನರ ಮುಂದೆ ಇಟ್ಟು ಸರ್ಕಾರದ ಅವ್ಯವಹಾರವನ್ನು ಹೊರಗೆಳಿದ್ದರು. ಹೀಗಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಗೆ ಅವಕಾಶವನ್ನ ಮಾಡಿಕೊಡಬಾರದು ಎಂದು ಕಾಂಗೆಸ್‌ ಸರ್ಕಾರವು ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ಸೋಲಿಗೆ ಈ ಐದು ಅಂಶಗಳು ಪ್ರಮುಖ ಕಾರಣ

ಪಿಎಸ್‌ಐ ಹಗರಣ

ಸಿಎಂ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್‌ಐ ಹಗರಣ ಬೆಳಕಿಗೆ ಬಂದಿತು. 2021ರ ಅಕ್ಟೋಬರ್‌ನಲ್ಲಿ ನಡೆದ 545 ಪಿಎಸ್‌ಐ ಹುದ್ದೆ ನೇಮಕಾತಿಯಲ್ಲಿ ಕೆಲ ಅಭ್ಯರ್ಥಿಗಳಿಂದ ಕೋಟಿಗಟ್ಟಲೆ ಹಣ ಪಡೆದು ಅಕ್ರಮವೆಸಗಲಾಗಿತ್ತು. ಕೇವಲ 21 ಪ್ರಶ್ನೆಗಳಿಗೆ ಉತ್ತರ ಬರೆದವರಿಗೆ 100 ಅಂಕ ನೀಡಲಾಗಿತ್ತು. ಖಾಲಿ ಬಿಟ್ಟ ಓಎಂಆರ್ ಶೀಟ್‌ಅನ್ನು ಪರೀಕ್ಷೆ ಮುಗಿದ ಬಳಿಕ ತುಂಬಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಗರಣದ ಕಿಂಗ್ ಪಿನ್ ದಿವ್ಯಾ ಹಾಗರಗಿ ಕಲಬುರಗಿಯ ಬಿಜೆಪಿ ನಾಯಕಿಯಾಗಿದ್ದು ಅವರನ್ನು ಬಂಧಿಸಲಾಗಿತ್ತು. ಅವರು ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥನಾರಾಯಣ ಗೌಡರೊಂದಿಗೆ ಇರುವ ಫೋಟೊಗಳು ವೈರಲ್ ಆಗಿದ್ದವು. ಆದರೆ ಇದರ ತನಿಖೆಯು ತಾರ್ಕಿಕ ಅಂತ್ಯ ಕಂಡಿಲ್ಲ.

ಬಿಟ್ ಕಾಯಿನ್ ಹಗರಣ

ಬೊಮ್ಮಾಯಿಯವರು ಮುಖ್ಯಮಂತ್ರಿ ಆದ ಮೂರೇ ತಿಂಗಳಿನಲ್ಲಿ ಬಿಟ್ ಕಾಯಿನ್ ಹಗರಣದಲ್ಲಿ ಪ್ರಮುಖ ಆರೋಪಿಯಾಗಿ ಅವರ ಹೆಸರು ಕೇಳಿಬಂದಿತ್ತು. ‘ಕಾಂಗ್ರೆಸ್‌ನವರು ಇದರಲ್ಲಿ ಇದ್ದಾರೆ ಎಚ್ಚರಿಕೆ’ ಎಂಬ ಹೇಳಿಕೆಗಳನ್ನು ಅವರು ನೀಡಿದರೇ ಹೊರತು ನಿಷ್ಪಕ್ಷಪಾತ ತನಿಖೆಗೆ ಮುಂದಾಗಲಿಲ್ಲ. ಆನಂತರ ಶ್ರೀಕಿ ಎಂಬ ಹ್ಯಾಕರ್‌ನನ್ನು ಬಂಧಿಸಲಾಯಿತು. ಡ್ರಗ್ಸ್ ಜಾಲ ಎಂದು ಕರೆಯಲಾಯಿತಾದರೂ, ಬಿಜೆಪಿಯವರೆ ಈ ಬಿಟ್ ಕಾಯಿನ್ ಹಗರಣ ಮಾಹಿತಿಯನ್ನು ಹೊರಹಾಕಿದ್ದರು. ಆದರೆ ಅದರ ತನಿಖೆ ಮಾತ್ರ ಸರಿಯಾದ ರೀತಿಯಲ್ಲಿ ನಡೆಸಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...