Homeಮುಖಪುಟಮಾಹಿತಿ ಆಯುಕ್ತರ ನೇಮಕಾತಿ ಪ್ರಕ್ರಿಯೆ ಗೌಪ್ಯವಾಗಿ ನಡೆದಿದೆ: ಅಧೀರ್ ಚೌಧರಿ ಆರೋಪ

ಮಾಹಿತಿ ಆಯುಕ್ತರ ನೇಮಕಾತಿ ಪ್ರಕ್ರಿಯೆ ಗೌಪ್ಯವಾಗಿ ನಡೆದಿದೆ: ಅಧೀರ್ ಚೌಧರಿ ಆರೋಪ

- Advertisement -
- Advertisement -

ಮಾಜಿ ಐಎಎಸ್ ಅಧಿಕಾರಿ ಹೀರಾಲಾಲ್ ಸಮರಿಯಾ ಅವರು ನಿನ್ನೆ ಮುಖ್ಯ ಮಾಹಿತಿ ಆಯುಕ್ತರಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರು ಆಯ್ಕೆಯನ್ನು ಸಂಪೂರ್ಣವಾಗಿ ಗೌಪ್ಯವಾಗಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನೇತೃತ್ವದ ಉನ್ನತಾಧಿಕಾರ ಆಯ್ಕೆ ಸಮಿತಿಯಲ್ಲಿನ ವಿರೋಧ ಪಕ್ಷದ ಸದಸ್ಯರು ಈ ಕುರಿತು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದು, ಮಾಹಿತಿ ಆಯುಕ್ತರ ಆಯ್ಕೆಯ ಬಗ್ಗೆ ಸರ್ಕಾರವು ಸಮಾಲೋಚಿಸಲಿಲ್ಲ ಎಂದು ಆರೋಪಿಸಿದ್ದಾರೆ.

ಅ.3ರಂದು ವೈ ಕೆ ಸಿನ್ಹಾ ಅವರ ಅಧಿಕಾರಾವಧಿ ಪೂರ್ಣಗೊಂಡ ನಂತರ ಸಿಐಸಿಯ ಹುದ್ದೆಯು ಖಾಲಿಯಾಗಿತ್ತು. ಹೀರಾಲಾಲ್ ಸಮರಿಯಾ ಕೇಂದ್ರ ಮಾಹಿತಿ ಆಯೋಗದ ಆಯುಕ್ತ (ಸಿಐಸಿ) ಹುದ್ದೆಗೆ ನೇಮಕಗೊಂಡ ಮೊದಲ ದಲಿತ ಸಮುದಾಯದ ಅಧಿಕಾರಿಯಾಗಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ಚೌಧರಿ ತಮ್ಮ ಪತ್ರದಲ್ಲಿ, ನಾನು ಆಯ್ಕೆ ಸಮಿತಿಯ ಸದಸ್ಯನಾಗಿದ್ದರೂ, ಆಯ್ಕೆಯ ಬಗ್ಗೆ ತಿಳಿಸದೆ ಸಂಪೂರ್ಣವಾಗಿ ಗೌಪ್ಯವಾಗಿ ಮಾಡಲಾಗಿದೆ. ನ.3, 2023ರಂದು ಪ್ರಧಾನಿಯವರ ನಿವಾಸದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪಿಎಂ ಮತ್ತು ಗೃಹ ಸಚಿವರು ಮಾತ್ರ ಸಭೆಯಲ್ಲಿ ಹಾಜರಿದ್ದರು. ವಿರೋಧ ಪಕ್ಷದ ನಾಯಕನಾದ ನನಗೆ ಆಹ್ವಾನಿಸಿಲ್ಲ. ಆಯ್ಕೆಯಾದವರ ಹೆಸರನ್ನು ಘೋಷಿಸಲಾಗಿದೆ. ಪ್ರಮಾಣವಚನ ಸ್ವೀಕರಿಸಲಾಗಿದೆ. ಆಯ್ಕೆ ಗೌಪ್ಯವಾಗಿ ನಡೆದ ಪ್ರಕ್ರಿಯೆ ಎಂದು ಅವರು ಆರೋಪಿಸಿದ್ದಾರೆ.

ಸಮಿತಿಯ ಸಭೆಗೆ ಆಹ್ವಾನಿಸಿ ಅಕ್ಟೋಬರ್ ಕೊನೆಯ ವಾರದಲ್ಲಿ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಅಧಿಕಾರಿಗಳು ಚೌದರಿಯ ಕಚೇರಿಗೆ ತೆರಳಿದ್ದರು. ಅವರು ನ.2 ರವರೆಗೆ ದೆಹಲಿಯಲ್ಲಿ ಇದ್ದು ಮತ್ತು ನ.3 ರಂದು ಪೂರ್ವ ನಿಗದಿತ ಸಭೆಯಲ್ಲಿ ಭಾಗವಹಿಸಲು ಪಶ್ಚಿಮ ಬಂಗಾಳಕ್ಕೆ ಹೋಗಬೇಕು ಎಂದು ತಿಳಿಸಲಾಗಿತ್ತು. ಆದರೆ ಸಮಿತಿಯ ಸಭೆಯು ನ.3ರಂದು ಸಂಜೆ 6 ಗಂಟೆಗೆ ನಡೆಯಲಿದೆ ಎಂದು ತಿಳಿಸಲಾಗಿತ್ತು. ನಂತರ  ಸಿಬ್ಬಂದಿಗಳು ಸಚಿವ ಜಿತೇಂದ್ರ ಸಿಂಗ್ ಅವರಿಗೆ ಪತ್ರ ಬರೆದಿದ್ದು, ಸಭೆಯನ್ನು ಮರು ನಿಗದಿಪಡಿಸುವಂತೆ ಒತ್ತಾಯಿಸಿದ್ದರು ಸಭೆಯನ್ನು 2023ರ ನ.1 ಅಥವಾ 2ರಂದು ಅಥವಾ ನ.3ರ ಸಂಜೆ 6 ಗಂಟೆಗೆ ಬದಲಾಗಿ ಬೆಳಿಗ್ಗೆ 9 ಗಂಟೆಗೆ ನಡೆಸಲು ಮರು ನಿಗದಿಪಡಿಸಲು ವಿನಂತಿಸಲಾಗಿತ್ತು ಎನ್ನಲಾಗಿದೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮರಿಯಾ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಉಪಾಧ್ಯಕ್ಷ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಅ.30ರಂದು ಸುಪ್ರೀಂಕೋರ್ಟ್ ಈ ಹುದ್ದೆ ಭರ್ತಿಗೆ ಕ್ರಮಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿತ್ತು. ಇಲ್ಲವಾದಲ್ಲಿ ಮಾಹಿತಿ ಹಕ್ಕು ಕುರಿತ 2005ರ ಕಾನೂನು ‘ಡೆಡ್ ಲೆಟರ್’ ಆಗಲಿದೆ ಎಂದು ಹೇಳಿತ್ತು.

ಇದನ್ನು ಓದಿ: ಪುತ್ತೂರು: ಪ್ರಖ್ಯಾತ ಹುಲಿ ವೇಷ ಕುಣಿತ ತಂಡದ ಸದಸ್ಯನ ಬರ್ಬರ ಕೊಲೆ: ಆರೋಪಿಗಳು ಪೊಲೀಸ್‌ ವಶಕ್ಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...