Homeಮುಖಪುಟಜಾರ್ಖಂಡ್‌ನ ಏಕೈಕ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ

ಜಾರ್ಖಂಡ್‌ನ ಏಕೈಕ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ

- Advertisement -
- Advertisement -

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಅವರ ಪತ್ನಿ ಹಾಗೂ ಕಾಂಗ್ರೆಸ್‌ನ ಏಕೈಕ ಸಂಸದೆ ಗೀತಾ ಕೋಡಾ ಅವರು ಸೋಮವಾರ ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ.

ಗೀತಾ ಕೋಡಾ ನಿರ್ಗಮನದಿಂದ ಕಾಂಗ್ರೆಸ್ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮೈತ್ರಿಕೂಟದಲ್ಲಿ ವಿಜಯ್ ಹನ್ಸ್‌ಡಾಕ್‌ ಒಬ್ಬರು ಮಾತ್ರ ಸಂಸದರಾಗಿ ಉಳಿದಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 14 ಸ್ಥಾನಗಳಲ್ಲಿ 12 ಸ್ಥಾನಗಳನ್ನು ಗೆದ್ದಿತ್ತು. ಉಳಿದ ಎರಡು ಸ್ಥಾನಗಳ ಪೈಕಿ ತಲಾ ಒಂದು ಸ್ಥಾನವನ್ನು ಕಾಂಗ್ರೆಸ್ ಮತ್ತು ಜೆಎಂಎಂ ಗೆದ್ದುಕೊಂಡಿತ್ತು.

ಗೀತಾ ಕೋಡಾ ಜೊತೆ ಅವರ ಪತಿ, 2017ರ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣದಲ್ಲಿ 4,000 ಕೋಟಿ ರೂಪಾಯಿ ಅವ್ಯವಹಾರದ ಆರೋಪ ಹೊತ್ತಿದ್ದ ಹಾಗೂ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಮಧು ಕೋಡಾ ಕೂಡ ಬಿಜೆಪಿ ಸೇರಿದ್ದಾರೆ.

ಸಿಂಗ್‌ಭೂಮ್ ಕ್ಷೇತ್ರದ ಸಂಸದೆಯಾಗಿರುವ ಗೀತಾ ಅವರು ಪಕ್ಷಕ್ಕೆ ಸೇರ್ಪಡೆಗೊಂಡಿರುವುದರಿಂದ ಕೊಲ್ಹಾನ್ ವಿಭಾಗದಲ್ಲಿ ಪಕ್ಷಕ್ಕೆ ಬಲ ಬರಲಿದೆ ಎಂದು ಬಿಜೆಪಿಯ ಆಂತರಿಕ ಮೂಲಗಳು ಹೇಳಿವೆ. ಕೊಲ್ಹಾನ್ ವಿಭಾಗದಲ್ಲಿ
ಪೂರ್ವ ಸಿಂಗ್‌ಭೂಮ್, ಪಶ್ಚಿಮ ಸಿಂಗ್‌ಭೂಮ್ ಮತ್ತು ಸರೈಕೆಲಾ-ಖಾರ್ಸಾವಾನ್ ಈ ಮೂರು ಜಿಲ್ಲೆಗಳು ಒಳಗೊಂಡಿವೆ. 2019ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಈ ಪ್ರದೇಶದಲ್ಲಿ ಖಾತೆ ತೆರೆಯುವಲ್ಲಿ ವಿಫಲವಾಗಿತ್ತು.

ಗೀತಾ ಕೋಡಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಬಳಿಕ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ, ಕಾಂಗ್ರೆಸ್ ಮಧು ಕೋಡಾ ಅವರನ್ನು ಸಿಎಂ ಮಾಡಿದ ನಂತರ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಅರ್ಜುನ್ ಮುಂಡಾ ನೇತೃತ್ವದ ಎನ್‌ಡಿಎ ಸರ್ಕಾರದ ಪತನದ ನಂತರ, 2006 ರಲ್ಲಿ ಸ್ವತಂತ್ರ ಶಾಸಕರಾಗಿದ್ದ ಮಧು ಕೋಡಾ ಜಾರ್ಖಂಡ್‌ನ ಸಿಎಂ ಆಗಿದ್ದರು. ಯುಪಿಎ ಒಕ್ಕೂಟ ಇವರನ್ನು ಒಮ್ಮತದ ಅಭ್ಯರ್ಥಿಯಾಗಿ ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿತ್ತು. ಮಧು ಕೋಡಾ ಅವರ ಸರ್ಕಾರಕ್ಕೆ ಕಾಂಗ್ರೆಸ್ ಹೊರಗಿನಿಂದ ಬೆಂಬಲ ನೀಡಿತ್ತು.

ಆದರೆ, 2008ರಲ್ಲಿ ಯುಪಿಎಯ ಮೈತ್ರಿಕೂಟದ ಪಕ್ಷಗಳಲ್ಲಿ ಒಂದಾಗಿದ್ದ ಜೆಎಂಎಂ ತನ್ನ ಬೆಂಬಲವನ್ನು ಹಿಂಪಡೆದು ಮಧು ಕೋಡಾ ಸರ್ಕಾರದ ಪತನಕ್ಕೆ ಕಾರಣವಾಗಿತ್ತು. ಆ ಸಂದರ್ಭದಲ್ಲಿ ಮಧುಕೋಡಾ ಸರ್ಕಾರಕ್ಕೆ ಕಾಂಗ್ರೆಸ್ ಹೂಡಿದ ಸಂಚು ಕಾರಣ ಎಂದು ಹೇಳಲಾಗಿತ್ತು.

ನಂತರ ಮಧು ಕೋಡಾ ಅವರನ್ನು ಜಾರ್ಖಂಡ್‌ನ ಯುಪಿಎ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. ಆಗ ಜೆಎಂಎಂನ ಶಿಬು ಸೊರೆನ್ ಸಿಎಂ ಆಗಿದ್ದರು.

ಗೀತಾ ಕೋಡಾ ಅವರು ತಕ್ಷ ಪಕ್ಷ ತೊರೆದು ಬಿಜೆಪಿ ಸೇರಿರುವುದಕ್ಕೆ ಕಾಂಗ್ರೆಸ್ ನಾಯಕರು ಆಘಾತ ವ್ಯಕ್ತಪಡಿಸಿದ್ದಾರೆ. “ಈ ಬಗ್ಗೆ ನಮಗೆ ಯಾವುದೇ ಸುಳಿವು ಇರಲಿಲ್ಲ. ಪಕ್ಷದೊಂದಿಗೆ ಅವರಿಗೆ ಅಸಮಾಧಾನದ ಇತ್ತು ಎನ್ನುವುದು ಸುಳ್ಳು. ಗೀತಾ ಅವರು ಭಾನುವಾರ ಪಕ್ಷದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಗೀತಾ ಅವರು 2009ರಲ್ಲಿ ರಾಜಕೀಯ ಪ್ರವೇಶಿಸಿದ್ದರು. ಆ ವರ್ಷದಲ್ಲಿ ಅವರು ಜೈ ಭಾರತ್ ಸಮಂತಾ ಪಕ್ಷದ ಅಭ್ಯರ್ಥಿಯಾಗಿ ಜಗನ್ನಾಥಪುರ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ್ದರು. ಜೈ ಭಾರತ್ ಸಮಂತಾ ಪಕ್ಷವನ್ನು ಮಧುಕೋಡಾ ಸ್ಥಾಪಿದ್ದರು. ಗೀತಾ ಜಗನ್ನಾಥಪುರದಿಂದ ಗೆಲ್ಲುವ ಮುನ್ನ, ಇದೇ ಕ್ಷೇತ್ರದಿಂದ ಎರಡು ಬಾರಿ (2000ರಲ್ಲಿ ಬಿಜೆಪಿ ಮತ್ತು 2005ರಲ್ಲಿ ಸ್ವತಂತ್ರ) ಮಧು ಕೋಡಾ ಈ ಕ್ಷೇತ್ರದಿಂದ ಗೆಲುವುದ ದಾಖಲಿಸಿದ್ದರು.

ಕಾಂಗ್ರೆಸ್‌ನಿಂದ ಗೆದ್ದ ಏಕೈಕ ಅಭ್ಯರ್ಥಿ ಗೀತಾ ಅವರು, 2014ರಲ್ಲಿ ಮೋದಿ ಅಲೆಯನ್ನು ಎದುರಿಸಿ ಸೀಟು ಉಳಿಸಿಕೊಂಡಿದ್ದರು. 2018 ರಲ್ಲಿ ಅವರ ಜೈ ಭಾರತ್ ಸಮಂತಾ ಪಕ್ಷವು ಕಾಂಗ್ರೆಸ್‌ನಲ್ಲಿ ವಿಲೀನಗೊಳಿಸಿದ್ದರು.

ಸಕ್ರಿಯ ಸಂಸದೀಯ ಪಟುವಾಗಿರುವ ಗೀತಾ ಕೋಡಾ ಅವರು, ಈ ಅವಧಿಯ ಲೋಕಸಭೆಯಲ್ಲಿ ಶೇ.69 ಹಾಜರಾತಿ ಹೊಂದಿದ್ದಾರೆ. ಗೀತಾ ಅವರು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರಾಗಿದ್ದಾರೆ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿಯ ಸಲಹಾ ಸಮಿತಿಯ ಸದಸ್ಯರಾಗಿದ್ದಾರೆ.

ಡಿಸೆಂಬರ್ 2021ರಲ್ಲಿ ಜನ ಗಣತಿ ನಡೆದಾಗ ಬುಡಕಟ್ಟು ಸಮುದಾಯದ ಜನರಿಗೆ ‘ಸರ್ನಾ ಧಾರ್ಮಿಕ ಸಂಹಿತೆ’ ಪ್ರತ್ಯೇಕ ಕೋಡ್ ಕೊಡುವಂತೆ ಗೀತಾ ಧ್ವನಿಯೆತ್ತಿದ್ದರು. ಈ ವಿಷಯದ ಬಗ್ಗೆ ಮೋದಿ ಸರ್ಕಾರದ ನಿಲುವನ್ನು ಅವರು ಪ್ರಶ್ನಿಸಿದ್ದರು. ಲೋಕಸಭೆಯಲ್ಲಿ ಮಾತನಾಡಿದ್ದ ಗೀತಾ, “ಸ್ಪೀಕರ್ ಸರ್, ಆದಿವಾಸಿಗಳು ಭಾರತದ ಮೂಲನಿವಾಸಿಗಳು ಮತ್ತು ಅವರ ಅಸ್ತಿತ್ವವು ಅಪಾಯದಲ್ಲಿದೆ ಎಂದು ನಾನು ನಿಮಗೆ ಹೇಳಲು ಬಯಸುತ್ತೇನೆ. ಈ ವಿಷಯವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ಕೇವಲ ಯೋಜನೆಗಳು ಬುಡಕಟ್ಟು ಜನರಿಗೆ ಪ್ರಯೋಜನವನ್ನು ನೀಡುವುದಿಲ್ಲ. ಸರ್ಕಾರ ಆದಿವಾಸಿಗಳ ಪರ ಇದೆ ಎಂಬುವುದನ್ನು ತೋರಿಸಿಕೊಡಬೇಕು. ಅವರ ಪರ ಜೋರಾಗಿ ಮಾತನಾಡಬೇಕು. ಇಂದು ಆದಿವಾಸಿಗಳು ಅಪಾಯದಲ್ಲಿದ್ದಾರೆ” ಎಂದು ಹೇಳಿದ್ದರು.

ಇದನ್ನೂ ಓದಿ : ಆಂಧ್ರ ವಿಧಾನಸಭೆ ಚುನಾವಣೆ: ಮೊದಲ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...