Homeಮುಖಪುಟಜಾರ್ಖಂಡ್‌ನ ಏಕೈಕ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ

ಜಾರ್ಖಂಡ್‌ನ ಏಕೈಕ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ

- Advertisement -
- Advertisement -

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಅವರ ಪತ್ನಿ ಹಾಗೂ ಕಾಂಗ್ರೆಸ್‌ನ ಏಕೈಕ ಸಂಸದೆ ಗೀತಾ ಕೋಡಾ ಅವರು ಸೋಮವಾರ ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ.

ಗೀತಾ ಕೋಡಾ ನಿರ್ಗಮನದಿಂದ ಕಾಂಗ್ರೆಸ್ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮೈತ್ರಿಕೂಟದಲ್ಲಿ ವಿಜಯ್ ಹನ್ಸ್‌ಡಾಕ್‌ ಒಬ್ಬರು ಮಾತ್ರ ಸಂಸದರಾಗಿ ಉಳಿದಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 14 ಸ್ಥಾನಗಳಲ್ಲಿ 12 ಸ್ಥಾನಗಳನ್ನು ಗೆದ್ದಿತ್ತು. ಉಳಿದ ಎರಡು ಸ್ಥಾನಗಳ ಪೈಕಿ ತಲಾ ಒಂದು ಸ್ಥಾನವನ್ನು ಕಾಂಗ್ರೆಸ್ ಮತ್ತು ಜೆಎಂಎಂ ಗೆದ್ದುಕೊಂಡಿತ್ತು.

ಗೀತಾ ಕೋಡಾ ಜೊತೆ ಅವರ ಪತಿ, 2017ರ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣದಲ್ಲಿ 4,000 ಕೋಟಿ ರೂಪಾಯಿ ಅವ್ಯವಹಾರದ ಆರೋಪ ಹೊತ್ತಿದ್ದ ಹಾಗೂ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಮಧು ಕೋಡಾ ಕೂಡ ಬಿಜೆಪಿ ಸೇರಿದ್ದಾರೆ.

ಸಿಂಗ್‌ಭೂಮ್ ಕ್ಷೇತ್ರದ ಸಂಸದೆಯಾಗಿರುವ ಗೀತಾ ಅವರು ಪಕ್ಷಕ್ಕೆ ಸೇರ್ಪಡೆಗೊಂಡಿರುವುದರಿಂದ ಕೊಲ್ಹಾನ್ ವಿಭಾಗದಲ್ಲಿ ಪಕ್ಷಕ್ಕೆ ಬಲ ಬರಲಿದೆ ಎಂದು ಬಿಜೆಪಿಯ ಆಂತರಿಕ ಮೂಲಗಳು ಹೇಳಿವೆ. ಕೊಲ್ಹಾನ್ ವಿಭಾಗದಲ್ಲಿ
ಪೂರ್ವ ಸಿಂಗ್‌ಭೂಮ್, ಪಶ್ಚಿಮ ಸಿಂಗ್‌ಭೂಮ್ ಮತ್ತು ಸರೈಕೆಲಾ-ಖಾರ್ಸಾವಾನ್ ಈ ಮೂರು ಜಿಲ್ಲೆಗಳು ಒಳಗೊಂಡಿವೆ. 2019ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಈ ಪ್ರದೇಶದಲ್ಲಿ ಖಾತೆ ತೆರೆಯುವಲ್ಲಿ ವಿಫಲವಾಗಿತ್ತು.

ಗೀತಾ ಕೋಡಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಬಳಿಕ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ, ಕಾಂಗ್ರೆಸ್ ಮಧು ಕೋಡಾ ಅವರನ್ನು ಸಿಎಂ ಮಾಡಿದ ನಂತರ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಅರ್ಜುನ್ ಮುಂಡಾ ನೇತೃತ್ವದ ಎನ್‌ಡಿಎ ಸರ್ಕಾರದ ಪತನದ ನಂತರ, 2006 ರಲ್ಲಿ ಸ್ವತಂತ್ರ ಶಾಸಕರಾಗಿದ್ದ ಮಧು ಕೋಡಾ ಜಾರ್ಖಂಡ್‌ನ ಸಿಎಂ ಆಗಿದ್ದರು. ಯುಪಿಎ ಒಕ್ಕೂಟ ಇವರನ್ನು ಒಮ್ಮತದ ಅಭ್ಯರ್ಥಿಯಾಗಿ ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿತ್ತು. ಮಧು ಕೋಡಾ ಅವರ ಸರ್ಕಾರಕ್ಕೆ ಕಾಂಗ್ರೆಸ್ ಹೊರಗಿನಿಂದ ಬೆಂಬಲ ನೀಡಿತ್ತು.

ಆದರೆ, 2008ರಲ್ಲಿ ಯುಪಿಎಯ ಮೈತ್ರಿಕೂಟದ ಪಕ್ಷಗಳಲ್ಲಿ ಒಂದಾಗಿದ್ದ ಜೆಎಂಎಂ ತನ್ನ ಬೆಂಬಲವನ್ನು ಹಿಂಪಡೆದು ಮಧು ಕೋಡಾ ಸರ್ಕಾರದ ಪತನಕ್ಕೆ ಕಾರಣವಾಗಿತ್ತು. ಆ ಸಂದರ್ಭದಲ್ಲಿ ಮಧುಕೋಡಾ ಸರ್ಕಾರಕ್ಕೆ ಕಾಂಗ್ರೆಸ್ ಹೂಡಿದ ಸಂಚು ಕಾರಣ ಎಂದು ಹೇಳಲಾಗಿತ್ತು.

ನಂತರ ಮಧು ಕೋಡಾ ಅವರನ್ನು ಜಾರ್ಖಂಡ್‌ನ ಯುಪಿಎ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. ಆಗ ಜೆಎಂಎಂನ ಶಿಬು ಸೊರೆನ್ ಸಿಎಂ ಆಗಿದ್ದರು.

ಗೀತಾ ಕೋಡಾ ಅವರು ತಕ್ಷ ಪಕ್ಷ ತೊರೆದು ಬಿಜೆಪಿ ಸೇರಿರುವುದಕ್ಕೆ ಕಾಂಗ್ರೆಸ್ ನಾಯಕರು ಆಘಾತ ವ್ಯಕ್ತಪಡಿಸಿದ್ದಾರೆ. “ಈ ಬಗ್ಗೆ ನಮಗೆ ಯಾವುದೇ ಸುಳಿವು ಇರಲಿಲ್ಲ. ಪಕ್ಷದೊಂದಿಗೆ ಅವರಿಗೆ ಅಸಮಾಧಾನದ ಇತ್ತು ಎನ್ನುವುದು ಸುಳ್ಳು. ಗೀತಾ ಅವರು ಭಾನುವಾರ ಪಕ್ಷದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಗೀತಾ ಅವರು 2009ರಲ್ಲಿ ರಾಜಕೀಯ ಪ್ರವೇಶಿಸಿದ್ದರು. ಆ ವರ್ಷದಲ್ಲಿ ಅವರು ಜೈ ಭಾರತ್ ಸಮಂತಾ ಪಕ್ಷದ ಅಭ್ಯರ್ಥಿಯಾಗಿ ಜಗನ್ನಾಥಪುರ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ್ದರು. ಜೈ ಭಾರತ್ ಸಮಂತಾ ಪಕ್ಷವನ್ನು ಮಧುಕೋಡಾ ಸ್ಥಾಪಿದ್ದರು. ಗೀತಾ ಜಗನ್ನಾಥಪುರದಿಂದ ಗೆಲ್ಲುವ ಮುನ್ನ, ಇದೇ ಕ್ಷೇತ್ರದಿಂದ ಎರಡು ಬಾರಿ (2000ರಲ್ಲಿ ಬಿಜೆಪಿ ಮತ್ತು 2005ರಲ್ಲಿ ಸ್ವತಂತ್ರ) ಮಧು ಕೋಡಾ ಈ ಕ್ಷೇತ್ರದಿಂದ ಗೆಲುವುದ ದಾಖಲಿಸಿದ್ದರು.

ಕಾಂಗ್ರೆಸ್‌ನಿಂದ ಗೆದ್ದ ಏಕೈಕ ಅಭ್ಯರ್ಥಿ ಗೀತಾ ಅವರು, 2014ರಲ್ಲಿ ಮೋದಿ ಅಲೆಯನ್ನು ಎದುರಿಸಿ ಸೀಟು ಉಳಿಸಿಕೊಂಡಿದ್ದರು. 2018 ರಲ್ಲಿ ಅವರ ಜೈ ಭಾರತ್ ಸಮಂತಾ ಪಕ್ಷವು ಕಾಂಗ್ರೆಸ್‌ನಲ್ಲಿ ವಿಲೀನಗೊಳಿಸಿದ್ದರು.

ಸಕ್ರಿಯ ಸಂಸದೀಯ ಪಟುವಾಗಿರುವ ಗೀತಾ ಕೋಡಾ ಅವರು, ಈ ಅವಧಿಯ ಲೋಕಸಭೆಯಲ್ಲಿ ಶೇ.69 ಹಾಜರಾತಿ ಹೊಂದಿದ್ದಾರೆ. ಗೀತಾ ಅವರು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರಾಗಿದ್ದಾರೆ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿಯ ಸಲಹಾ ಸಮಿತಿಯ ಸದಸ್ಯರಾಗಿದ್ದಾರೆ.

ಡಿಸೆಂಬರ್ 2021ರಲ್ಲಿ ಜನ ಗಣತಿ ನಡೆದಾಗ ಬುಡಕಟ್ಟು ಸಮುದಾಯದ ಜನರಿಗೆ ‘ಸರ್ನಾ ಧಾರ್ಮಿಕ ಸಂಹಿತೆ’ ಪ್ರತ್ಯೇಕ ಕೋಡ್ ಕೊಡುವಂತೆ ಗೀತಾ ಧ್ವನಿಯೆತ್ತಿದ್ದರು. ಈ ವಿಷಯದ ಬಗ್ಗೆ ಮೋದಿ ಸರ್ಕಾರದ ನಿಲುವನ್ನು ಅವರು ಪ್ರಶ್ನಿಸಿದ್ದರು. ಲೋಕಸಭೆಯಲ್ಲಿ ಮಾತನಾಡಿದ್ದ ಗೀತಾ, “ಸ್ಪೀಕರ್ ಸರ್, ಆದಿವಾಸಿಗಳು ಭಾರತದ ಮೂಲನಿವಾಸಿಗಳು ಮತ್ತು ಅವರ ಅಸ್ತಿತ್ವವು ಅಪಾಯದಲ್ಲಿದೆ ಎಂದು ನಾನು ನಿಮಗೆ ಹೇಳಲು ಬಯಸುತ್ತೇನೆ. ಈ ವಿಷಯವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ಕೇವಲ ಯೋಜನೆಗಳು ಬುಡಕಟ್ಟು ಜನರಿಗೆ ಪ್ರಯೋಜನವನ್ನು ನೀಡುವುದಿಲ್ಲ. ಸರ್ಕಾರ ಆದಿವಾಸಿಗಳ ಪರ ಇದೆ ಎಂಬುವುದನ್ನು ತೋರಿಸಿಕೊಡಬೇಕು. ಅವರ ಪರ ಜೋರಾಗಿ ಮಾತನಾಡಬೇಕು. ಇಂದು ಆದಿವಾಸಿಗಳು ಅಪಾಯದಲ್ಲಿದ್ದಾರೆ” ಎಂದು ಹೇಳಿದ್ದರು.

ಇದನ್ನೂ ಓದಿ : ಆಂಧ್ರ ವಿಧಾನಸಭೆ ಚುನಾವಣೆ: ಮೊದಲ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...