Homeಮುಖಪುಟಜಾರ್ಖಂಡ್‌ನ ಏಕೈಕ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ

ಜಾರ್ಖಂಡ್‌ನ ಏಕೈಕ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ

- Advertisement -
- Advertisement -

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಅವರ ಪತ್ನಿ ಹಾಗೂ ಕಾಂಗ್ರೆಸ್‌ನ ಏಕೈಕ ಸಂಸದೆ ಗೀತಾ ಕೋಡಾ ಅವರು ಸೋಮವಾರ ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ.

ಗೀತಾ ಕೋಡಾ ನಿರ್ಗಮನದಿಂದ ಕಾಂಗ್ರೆಸ್ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮೈತ್ರಿಕೂಟದಲ್ಲಿ ವಿಜಯ್ ಹನ್ಸ್‌ಡಾಕ್‌ ಒಬ್ಬರು ಮಾತ್ರ ಸಂಸದರಾಗಿ ಉಳಿದಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 14 ಸ್ಥಾನಗಳಲ್ಲಿ 12 ಸ್ಥಾನಗಳನ್ನು ಗೆದ್ದಿತ್ತು. ಉಳಿದ ಎರಡು ಸ್ಥಾನಗಳ ಪೈಕಿ ತಲಾ ಒಂದು ಸ್ಥಾನವನ್ನು ಕಾಂಗ್ರೆಸ್ ಮತ್ತು ಜೆಎಂಎಂ ಗೆದ್ದುಕೊಂಡಿತ್ತು.

ಗೀತಾ ಕೋಡಾ ಜೊತೆ ಅವರ ಪತಿ, 2017ರ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣದಲ್ಲಿ 4,000 ಕೋಟಿ ರೂಪಾಯಿ ಅವ್ಯವಹಾರದ ಆರೋಪ ಹೊತ್ತಿದ್ದ ಹಾಗೂ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಮಧು ಕೋಡಾ ಕೂಡ ಬಿಜೆಪಿ ಸೇರಿದ್ದಾರೆ.

ಸಿಂಗ್‌ಭೂಮ್ ಕ್ಷೇತ್ರದ ಸಂಸದೆಯಾಗಿರುವ ಗೀತಾ ಅವರು ಪಕ್ಷಕ್ಕೆ ಸೇರ್ಪಡೆಗೊಂಡಿರುವುದರಿಂದ ಕೊಲ್ಹಾನ್ ವಿಭಾಗದಲ್ಲಿ ಪಕ್ಷಕ್ಕೆ ಬಲ ಬರಲಿದೆ ಎಂದು ಬಿಜೆಪಿಯ ಆಂತರಿಕ ಮೂಲಗಳು ಹೇಳಿವೆ. ಕೊಲ್ಹಾನ್ ವಿಭಾಗದಲ್ಲಿ
ಪೂರ್ವ ಸಿಂಗ್‌ಭೂಮ್, ಪಶ್ಚಿಮ ಸಿಂಗ್‌ಭೂಮ್ ಮತ್ತು ಸರೈಕೆಲಾ-ಖಾರ್ಸಾವಾನ್ ಈ ಮೂರು ಜಿಲ್ಲೆಗಳು ಒಳಗೊಂಡಿವೆ. 2019ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಈ ಪ್ರದೇಶದಲ್ಲಿ ಖಾತೆ ತೆರೆಯುವಲ್ಲಿ ವಿಫಲವಾಗಿತ್ತು.

ಗೀತಾ ಕೋಡಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಬಳಿಕ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ, ಕಾಂಗ್ರೆಸ್ ಮಧು ಕೋಡಾ ಅವರನ್ನು ಸಿಎಂ ಮಾಡಿದ ನಂತರ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಅರ್ಜುನ್ ಮುಂಡಾ ನೇತೃತ್ವದ ಎನ್‌ಡಿಎ ಸರ್ಕಾರದ ಪತನದ ನಂತರ, 2006 ರಲ್ಲಿ ಸ್ವತಂತ್ರ ಶಾಸಕರಾಗಿದ್ದ ಮಧು ಕೋಡಾ ಜಾರ್ಖಂಡ್‌ನ ಸಿಎಂ ಆಗಿದ್ದರು. ಯುಪಿಎ ಒಕ್ಕೂಟ ಇವರನ್ನು ಒಮ್ಮತದ ಅಭ್ಯರ್ಥಿಯಾಗಿ ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿತ್ತು. ಮಧು ಕೋಡಾ ಅವರ ಸರ್ಕಾರಕ್ಕೆ ಕಾಂಗ್ರೆಸ್ ಹೊರಗಿನಿಂದ ಬೆಂಬಲ ನೀಡಿತ್ತು.

ಆದರೆ, 2008ರಲ್ಲಿ ಯುಪಿಎಯ ಮೈತ್ರಿಕೂಟದ ಪಕ್ಷಗಳಲ್ಲಿ ಒಂದಾಗಿದ್ದ ಜೆಎಂಎಂ ತನ್ನ ಬೆಂಬಲವನ್ನು ಹಿಂಪಡೆದು ಮಧು ಕೋಡಾ ಸರ್ಕಾರದ ಪತನಕ್ಕೆ ಕಾರಣವಾಗಿತ್ತು. ಆ ಸಂದರ್ಭದಲ್ಲಿ ಮಧುಕೋಡಾ ಸರ್ಕಾರಕ್ಕೆ ಕಾಂಗ್ರೆಸ್ ಹೂಡಿದ ಸಂಚು ಕಾರಣ ಎಂದು ಹೇಳಲಾಗಿತ್ತು.

ನಂತರ ಮಧು ಕೋಡಾ ಅವರನ್ನು ಜಾರ್ಖಂಡ್‌ನ ಯುಪಿಎ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. ಆಗ ಜೆಎಂಎಂನ ಶಿಬು ಸೊರೆನ್ ಸಿಎಂ ಆಗಿದ್ದರು.

ಗೀತಾ ಕೋಡಾ ಅವರು ತಕ್ಷ ಪಕ್ಷ ತೊರೆದು ಬಿಜೆಪಿ ಸೇರಿರುವುದಕ್ಕೆ ಕಾಂಗ್ರೆಸ್ ನಾಯಕರು ಆಘಾತ ವ್ಯಕ್ತಪಡಿಸಿದ್ದಾರೆ. “ಈ ಬಗ್ಗೆ ನಮಗೆ ಯಾವುದೇ ಸುಳಿವು ಇರಲಿಲ್ಲ. ಪಕ್ಷದೊಂದಿಗೆ ಅವರಿಗೆ ಅಸಮಾಧಾನದ ಇತ್ತು ಎನ್ನುವುದು ಸುಳ್ಳು. ಗೀತಾ ಅವರು ಭಾನುವಾರ ಪಕ್ಷದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಗೀತಾ ಅವರು 2009ರಲ್ಲಿ ರಾಜಕೀಯ ಪ್ರವೇಶಿಸಿದ್ದರು. ಆ ವರ್ಷದಲ್ಲಿ ಅವರು ಜೈ ಭಾರತ್ ಸಮಂತಾ ಪಕ್ಷದ ಅಭ್ಯರ್ಥಿಯಾಗಿ ಜಗನ್ನಾಥಪುರ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ್ದರು. ಜೈ ಭಾರತ್ ಸಮಂತಾ ಪಕ್ಷವನ್ನು ಮಧುಕೋಡಾ ಸ್ಥಾಪಿದ್ದರು. ಗೀತಾ ಜಗನ್ನಾಥಪುರದಿಂದ ಗೆಲ್ಲುವ ಮುನ್ನ, ಇದೇ ಕ್ಷೇತ್ರದಿಂದ ಎರಡು ಬಾರಿ (2000ರಲ್ಲಿ ಬಿಜೆಪಿ ಮತ್ತು 2005ರಲ್ಲಿ ಸ್ವತಂತ್ರ) ಮಧು ಕೋಡಾ ಈ ಕ್ಷೇತ್ರದಿಂದ ಗೆಲುವುದ ದಾಖಲಿಸಿದ್ದರು.

ಕಾಂಗ್ರೆಸ್‌ನಿಂದ ಗೆದ್ದ ಏಕೈಕ ಅಭ್ಯರ್ಥಿ ಗೀತಾ ಅವರು, 2014ರಲ್ಲಿ ಮೋದಿ ಅಲೆಯನ್ನು ಎದುರಿಸಿ ಸೀಟು ಉಳಿಸಿಕೊಂಡಿದ್ದರು. 2018 ರಲ್ಲಿ ಅವರ ಜೈ ಭಾರತ್ ಸಮಂತಾ ಪಕ್ಷವು ಕಾಂಗ್ರೆಸ್‌ನಲ್ಲಿ ವಿಲೀನಗೊಳಿಸಿದ್ದರು.

ಸಕ್ರಿಯ ಸಂಸದೀಯ ಪಟುವಾಗಿರುವ ಗೀತಾ ಕೋಡಾ ಅವರು, ಈ ಅವಧಿಯ ಲೋಕಸಭೆಯಲ್ಲಿ ಶೇ.69 ಹಾಜರಾತಿ ಹೊಂದಿದ್ದಾರೆ. ಗೀತಾ ಅವರು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರಾಗಿದ್ದಾರೆ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿಯ ಸಲಹಾ ಸಮಿತಿಯ ಸದಸ್ಯರಾಗಿದ್ದಾರೆ.

ಡಿಸೆಂಬರ್ 2021ರಲ್ಲಿ ಜನ ಗಣತಿ ನಡೆದಾಗ ಬುಡಕಟ್ಟು ಸಮುದಾಯದ ಜನರಿಗೆ ‘ಸರ್ನಾ ಧಾರ್ಮಿಕ ಸಂಹಿತೆ’ ಪ್ರತ್ಯೇಕ ಕೋಡ್ ಕೊಡುವಂತೆ ಗೀತಾ ಧ್ವನಿಯೆತ್ತಿದ್ದರು. ಈ ವಿಷಯದ ಬಗ್ಗೆ ಮೋದಿ ಸರ್ಕಾರದ ನಿಲುವನ್ನು ಅವರು ಪ್ರಶ್ನಿಸಿದ್ದರು. ಲೋಕಸಭೆಯಲ್ಲಿ ಮಾತನಾಡಿದ್ದ ಗೀತಾ, “ಸ್ಪೀಕರ್ ಸರ್, ಆದಿವಾಸಿಗಳು ಭಾರತದ ಮೂಲನಿವಾಸಿಗಳು ಮತ್ತು ಅವರ ಅಸ್ತಿತ್ವವು ಅಪಾಯದಲ್ಲಿದೆ ಎಂದು ನಾನು ನಿಮಗೆ ಹೇಳಲು ಬಯಸುತ್ತೇನೆ. ಈ ವಿಷಯವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ಕೇವಲ ಯೋಜನೆಗಳು ಬುಡಕಟ್ಟು ಜನರಿಗೆ ಪ್ರಯೋಜನವನ್ನು ನೀಡುವುದಿಲ್ಲ. ಸರ್ಕಾರ ಆದಿವಾಸಿಗಳ ಪರ ಇದೆ ಎಂಬುವುದನ್ನು ತೋರಿಸಿಕೊಡಬೇಕು. ಅವರ ಪರ ಜೋರಾಗಿ ಮಾತನಾಡಬೇಕು. ಇಂದು ಆದಿವಾಸಿಗಳು ಅಪಾಯದಲ್ಲಿದ್ದಾರೆ” ಎಂದು ಹೇಳಿದ್ದರು.

ಇದನ್ನೂ ಓದಿ : ಆಂಧ್ರ ವಿಧಾನಸಭೆ ಚುನಾವಣೆ: ಮೊದಲ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...