Homeಮುಖಪುಟಮಣಿಪುರ | ಮುಂದುವರಿದ ಹಿಂಸಾಚಾರ : ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಎನ್‌ಪಿಪಿ

ಮಣಿಪುರ | ಮುಂದುವರಿದ ಹಿಂಸಾಚಾರ : ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಎನ್‌ಪಿಪಿ

ಇನ್ನೆರಡು ಮೃತದೇಹಗಳು ಪತ್ತೆ, ಶಾಸಕರ ಮನೆಗಳ ಮೇಲೆ ದಾಳಿ

- Advertisement -
- Advertisement -

ಎನ್‌ಡಿಎ ಮಿತ್ರ ಪಕ್ಷವಾದ ಮೇಘಾಲಯ ಸಿಎಂ ಕಾನ್ರಾಡ್ ಕೆ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ನೀಡದ್ದ ಬೆಂಬಲವನ್ನು ಭಾನುವಾರ (ನ.18) ಹಿಂತೆಗೆದುಕೊಂಡಿದೆ.

ಕಳೆದ ಒಂದು ವರ್ಷದಿಂದ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಯುವಲ್ಲಿ ಮುಖ್ಯಮಂತ್ರಿ
ಎನ್. ಬಿರೇನ್ ಸಿಂಗ್ ‘ಸಂಪೂರ್ಣ ವಿಫಲರಾಗಿದ್ದಾರೆ’ ಎಂದು ಎನ್‌ಪಿಪಿ ಹೇಳಿಕೊಂಡಿದೆ.

“ಕಳೆದ ಕೆಲ ದಿನಗಳಿಂದ ಮಣಿಪುರದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಜನರು ಭಯದಿಂದ ಬದುಕುತ್ತಿದ್ದು, ಅತಿಯಾದ ಕಷ್ಟ ಅನುಭವಿಸುತ್ತಿದ್ದಾರೆ. ಆದರೆ, ಬಿಜೆಪಿ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ” ಎಂದು ಎನ್‌ಪಿಪಿ ಮುಖ್ಯಸ್ಥ ಕಾನ್ರಾಡ್ ಕೆ ಸಂಗ್ಮಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಒಟ್ಟು 60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ 7 ಮಂದಿ ಎನ್‌ಪಿಪಿ ಶಾಸಕರಿದ್ಧಾರೆ. ಇವರು ಬೆಂಬಲ ವಾಪಸ್ ಪಡೆದರೂ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಏಕೆಂದರೆ, ನಾಗಾ ಪೀಪಲ್ಸ್ ಫ್ರಂಟ್‌ (ಎನ್‌ಪಿಎಫ್‌) ನ ಐವರು ಮತ್ತು ಜನತಾದಳ ಯುನೈಟೆಡ್ (ಜೆಡಿಯು)ನ 6 ಮಂದಿ ಶಾಸಕ ಬೆಂಬಲದೊಂದಿಗೆ ಬಿಜೆಪಿ 32 ಸ್ಥಾನಗಳ ಸ್ಪಷ್ಟ ಬಹುಮತ ಹೊಂದಿದೆ.

ಮೂರು ಬಾರಿ ಸಿಎಂ ಆಗಿರುವ ಕಾಂಗ್ರೆಸ್‌ನ ಒಕ್ರಾಮ್ ಇಬೋಬಿ ಸಿಂಗ್ ಅವರು ಮುಖ್ಯಮಂತ್ರಿ ಬಿರೇನ್ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ವಿಫಲವಾಗಿದೆ. ಪ್ರಧಾನಿ ಮೋದಿ ತಕ್ಷಣ ಮಧ್ಯಪ್ರವೇಶಿಸದಿದ್ದರೆ, ಇತರ ಎನ್‌ಡಿಎಯೇತರ ಶಾಸಕರೊಂದಿಗೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

“ಮಹಿಳೆಯರು ಮತ್ತು ಮಕ್ಕಳನ್ನು ಕೊಲ್ಲುವುದು ಹಿಂಸಾಚಾರ ಮಿತಿ ಮೀರಿದೆ ಎಂಬುವುದನ್ನು ಸೂಚಿಸುತ್ತದೆ. ಸಿಎಂ ಬೀರೇನ್ ಸಿಂಗ್ ಸರ್ವಪಕ್ಷ ನಿಯೋಗ ಕೊಂಡೊಯ್ಯಲು ತಕ್ಷಣ ಪ್ರಧಾನಿಯೊಂದಿಗೆ ಸಮಯವಕಾಶ ಕೇಳಬೇಕು. ಪ್ರಧಾನಿ ವಿದೇಶದಿಂದ ಬಂದ ತಕ್ಷಣ ಭೇಟಿಯಾಗಲು ನಾವು ಸಿದ್ದರಿದ್ದೇವೆ” ಎಂದು ಒಕ್ರಾಮ್ ಇಬೋಬಿ ಹೇಳಿದ್ದಾರೆ.

ಇನ್ನೆರಡು ಮೃತದೇಹಗಳು ಪತ್ತೆ

ಇತ್ತೀಚಿನ ವರದಿಯ ಪ್ರಕಾರ, ಮಣಿಪುರದಲ್ಲಿ ಭಾನುವಾರ (ನ.17) ಇನ್ನೆರಡು ಮೃದೇಹಗಳು ಪತ್ತೆಯಾಗಿವೆ. ಗೋಣಿ ಚೀಲದಲ್ಲಿ ಕಟ್ಟಿದ್ದ ವಿವಸ್ತ್ರ ಮಹಿಳೆ ಮತ್ತು ಹೆಣ್ಣು ಮಗುವಿನ ಶವ ದಕ್ಷಿಣ ಅಸ್ಸಾಂನ ಬರಾಕ್ ನದಿಯಲ್ಲಿ ದೊರೆತಿದೆ.

ನವೆಂಬರ್ 11ರಿಂದ ಮೈತೇಯಿ ಸಮುದಾಯಕ್ಕೆ ಸೇರಿದ 6 ಮಂದಿಯನ್ನು ಕುಕಿ ಬಂಡುಕೋರರು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಬಳಿಕ ಶುಕ್ರವಾರ (ನ.15) ಮೂವರು ಮಹಿಳೆಯರ ಶವ ಪತ್ತೆಯಾಗಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿತ್ತು. ಇನ್ನೂ ಕೆಲ ಮಾಧ್ಯಮಗಳು ಒಬ್ಬರು ಮಹಿಳೆ ಮತ್ತು ಇಬ್ಬರು ಮಕ್ಕಳ ಮೃತದೇಹಗಳು ದೊರೆತಿವೆ ಎಂದಿತ್ತು. ಆದರೆ, ಶನಿವಾರ ಬೆಳಿಗ್ಗೆ 6 ಮಂದಿಯ ಶವಗಳೂ ಪತ್ತೆಯಾಗಿರುವುದಾಗಿ ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ನಿನ್ನೆ (ನ.17) ಮತ್ತೆರಡು ಮೃತದೇಹಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.

ಶಾಸಕರ ಮನೆ ಮೇಲೆ ದಾಳಿ

ಹಿಂಸಾಚಾರದ ನಡುವೆ ಇಂಫಾಲ್ ಕಣಿವೆಯಲ್ಲಿ ಒಂಬತ್ತು ಮಂದಿ ಬಿಜೆಪಿ ಶಾಸಕರು ಸೇರಿದಂತೆ 13 ಶಾಸಕರ ಮನೆಗಳ ಮೇಲೆ ಉದ್ರಿಕ್ತರ ಗುಂಪು ದಾಳಿ ನಡೆಸಿದೆ ಎಂದು ಭಾನುವಾರ (ನ.18) ವರದಿಯಾಗಿದೆ. ಪಶ್ಚಿಮ ಇಂಫಾಲದಲ್ಲಿರುವ ಬಿಜೆಪಿ ಶಾಸಕ ರಬೀಂದ್ರೊ ಅವರನ್ನು ಭೇಟಿ ಮಾಡಲು ಬಯಸಿದ ಪ್ರತಿಭಟನಾಕಾರರು, ಅವರ ನಿವಾಸವನ್ನು ಭಾನುವಾರ ಸಂಜೆ ಧ್ವಂಸಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ದೆಹಲಿ ಸಚಿವ ಕೈಲಾಶ್ ಗೆಹ್ಲೋಟ್ ರಾಜೀನಾಮೆ ಬೆನ್ನಿಗೆ ಬಿಜೆಪಿಯ ಪ್ರಮುಖ ನಾಯಕ ಎಎಪಿಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...