Homeಮುಖಪುಟಮಣಿಪುರ | ಮುಂದುವರಿದ ಹಿಂಸಾಚಾರ : ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಎನ್‌ಪಿಪಿ

ಮಣಿಪುರ | ಮುಂದುವರಿದ ಹಿಂಸಾಚಾರ : ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಎನ್‌ಪಿಪಿ

ಇನ್ನೆರಡು ಮೃತದೇಹಗಳು ಪತ್ತೆ, ಶಾಸಕರ ಮನೆಗಳ ಮೇಲೆ ದಾಳಿ

- Advertisement -
- Advertisement -

ಎನ್‌ಡಿಎ ಮಿತ್ರ ಪಕ್ಷವಾದ ಮೇಘಾಲಯ ಸಿಎಂ ಕಾನ್ರಾಡ್ ಕೆ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ನೀಡದ್ದ ಬೆಂಬಲವನ್ನು ಭಾನುವಾರ (ನ.18) ಹಿಂತೆಗೆದುಕೊಂಡಿದೆ.

ಕಳೆದ ಒಂದು ವರ್ಷದಿಂದ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಯುವಲ್ಲಿ ಮುಖ್ಯಮಂತ್ರಿ
ಎನ್. ಬಿರೇನ್ ಸಿಂಗ್ ‘ಸಂಪೂರ್ಣ ವಿಫಲರಾಗಿದ್ದಾರೆ’ ಎಂದು ಎನ್‌ಪಿಪಿ ಹೇಳಿಕೊಂಡಿದೆ.

“ಕಳೆದ ಕೆಲ ದಿನಗಳಿಂದ ಮಣಿಪುರದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಜನರು ಭಯದಿಂದ ಬದುಕುತ್ತಿದ್ದು, ಅತಿಯಾದ ಕಷ್ಟ ಅನುಭವಿಸುತ್ತಿದ್ದಾರೆ. ಆದರೆ, ಬಿಜೆಪಿ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ” ಎಂದು ಎನ್‌ಪಿಪಿ ಮುಖ್ಯಸ್ಥ ಕಾನ್ರಾಡ್ ಕೆ ಸಂಗ್ಮಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಒಟ್ಟು 60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ 7 ಮಂದಿ ಎನ್‌ಪಿಪಿ ಶಾಸಕರಿದ್ಧಾರೆ. ಇವರು ಬೆಂಬಲ ವಾಪಸ್ ಪಡೆದರೂ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಏಕೆಂದರೆ, ನಾಗಾ ಪೀಪಲ್ಸ್ ಫ್ರಂಟ್‌ (ಎನ್‌ಪಿಎಫ್‌) ನ ಐವರು ಮತ್ತು ಜನತಾದಳ ಯುನೈಟೆಡ್ (ಜೆಡಿಯು)ನ 6 ಮಂದಿ ಶಾಸಕ ಬೆಂಬಲದೊಂದಿಗೆ ಬಿಜೆಪಿ 32 ಸ್ಥಾನಗಳ ಸ್ಪಷ್ಟ ಬಹುಮತ ಹೊಂದಿದೆ.

ಮೂರು ಬಾರಿ ಸಿಎಂ ಆಗಿರುವ ಕಾಂಗ್ರೆಸ್‌ನ ಒಕ್ರಾಮ್ ಇಬೋಬಿ ಸಿಂಗ್ ಅವರು ಮುಖ್ಯಮಂತ್ರಿ ಬಿರೇನ್ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ವಿಫಲವಾಗಿದೆ. ಪ್ರಧಾನಿ ಮೋದಿ ತಕ್ಷಣ ಮಧ್ಯಪ್ರವೇಶಿಸದಿದ್ದರೆ, ಇತರ ಎನ್‌ಡಿಎಯೇತರ ಶಾಸಕರೊಂದಿಗೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

“ಮಹಿಳೆಯರು ಮತ್ತು ಮಕ್ಕಳನ್ನು ಕೊಲ್ಲುವುದು ಹಿಂಸಾಚಾರ ಮಿತಿ ಮೀರಿದೆ ಎಂಬುವುದನ್ನು ಸೂಚಿಸುತ್ತದೆ. ಸಿಎಂ ಬೀರೇನ್ ಸಿಂಗ್ ಸರ್ವಪಕ್ಷ ನಿಯೋಗ ಕೊಂಡೊಯ್ಯಲು ತಕ್ಷಣ ಪ್ರಧಾನಿಯೊಂದಿಗೆ ಸಮಯವಕಾಶ ಕೇಳಬೇಕು. ಪ್ರಧಾನಿ ವಿದೇಶದಿಂದ ಬಂದ ತಕ್ಷಣ ಭೇಟಿಯಾಗಲು ನಾವು ಸಿದ್ದರಿದ್ದೇವೆ” ಎಂದು ಒಕ್ರಾಮ್ ಇಬೋಬಿ ಹೇಳಿದ್ದಾರೆ.

ಇನ್ನೆರಡು ಮೃತದೇಹಗಳು ಪತ್ತೆ

ಇತ್ತೀಚಿನ ವರದಿಯ ಪ್ರಕಾರ, ಮಣಿಪುರದಲ್ಲಿ ಭಾನುವಾರ (ನ.17) ಇನ್ನೆರಡು ಮೃದೇಹಗಳು ಪತ್ತೆಯಾಗಿವೆ. ಗೋಣಿ ಚೀಲದಲ್ಲಿ ಕಟ್ಟಿದ್ದ ವಿವಸ್ತ್ರ ಮಹಿಳೆ ಮತ್ತು ಹೆಣ್ಣು ಮಗುವಿನ ಶವ ದಕ್ಷಿಣ ಅಸ್ಸಾಂನ ಬರಾಕ್ ನದಿಯಲ್ಲಿ ದೊರೆತಿದೆ.

ನವೆಂಬರ್ 11ರಿಂದ ಮೈತೇಯಿ ಸಮುದಾಯಕ್ಕೆ ಸೇರಿದ 6 ಮಂದಿಯನ್ನು ಕುಕಿ ಬಂಡುಕೋರರು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಬಳಿಕ ಶುಕ್ರವಾರ (ನ.15) ಮೂವರು ಮಹಿಳೆಯರ ಶವ ಪತ್ತೆಯಾಗಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿತ್ತು. ಇನ್ನೂ ಕೆಲ ಮಾಧ್ಯಮಗಳು ಒಬ್ಬರು ಮಹಿಳೆ ಮತ್ತು ಇಬ್ಬರು ಮಕ್ಕಳ ಮೃತದೇಹಗಳು ದೊರೆತಿವೆ ಎಂದಿತ್ತು. ಆದರೆ, ಶನಿವಾರ ಬೆಳಿಗ್ಗೆ 6 ಮಂದಿಯ ಶವಗಳೂ ಪತ್ತೆಯಾಗಿರುವುದಾಗಿ ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ನಿನ್ನೆ (ನ.17) ಮತ್ತೆರಡು ಮೃತದೇಹಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.

ಶಾಸಕರ ಮನೆ ಮೇಲೆ ದಾಳಿ

ಹಿಂಸಾಚಾರದ ನಡುವೆ ಇಂಫಾಲ್ ಕಣಿವೆಯಲ್ಲಿ ಒಂಬತ್ತು ಮಂದಿ ಬಿಜೆಪಿ ಶಾಸಕರು ಸೇರಿದಂತೆ 13 ಶಾಸಕರ ಮನೆಗಳ ಮೇಲೆ ಉದ್ರಿಕ್ತರ ಗುಂಪು ದಾಳಿ ನಡೆಸಿದೆ ಎಂದು ಭಾನುವಾರ (ನ.18) ವರದಿಯಾಗಿದೆ. ಪಶ್ಚಿಮ ಇಂಫಾಲದಲ್ಲಿರುವ ಬಿಜೆಪಿ ಶಾಸಕ ರಬೀಂದ್ರೊ ಅವರನ್ನು ಭೇಟಿ ಮಾಡಲು ಬಯಸಿದ ಪ್ರತಿಭಟನಾಕಾರರು, ಅವರ ನಿವಾಸವನ್ನು ಭಾನುವಾರ ಸಂಜೆ ಧ್ವಂಸಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ದೆಹಲಿ ಸಚಿವ ಕೈಲಾಶ್ ಗೆಹ್ಲೋಟ್ ರಾಜೀನಾಮೆ ಬೆನ್ನಿಗೆ ಬಿಜೆಪಿಯ ಪ್ರಮುಖ ನಾಯಕ ಎಎಪಿಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...