Homeಮುಖಪುಟಮಣಿಪುರ | ಮುಂದುವರಿದ ಹಿಂಸಾಚಾರ : ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಎನ್‌ಪಿಪಿ

ಮಣಿಪುರ | ಮುಂದುವರಿದ ಹಿಂಸಾಚಾರ : ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಎನ್‌ಪಿಪಿ

ಇನ್ನೆರಡು ಮೃತದೇಹಗಳು ಪತ್ತೆ, ಶಾಸಕರ ಮನೆಗಳ ಮೇಲೆ ದಾಳಿ

- Advertisement -
- Advertisement -

ಎನ್‌ಡಿಎ ಮಿತ್ರ ಪಕ್ಷವಾದ ಮೇಘಾಲಯ ಸಿಎಂ ಕಾನ್ರಾಡ್ ಕೆ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ನೀಡದ್ದ ಬೆಂಬಲವನ್ನು ಭಾನುವಾರ (ನ.18) ಹಿಂತೆಗೆದುಕೊಂಡಿದೆ.

ಕಳೆದ ಒಂದು ವರ್ಷದಿಂದ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಯುವಲ್ಲಿ ಮುಖ್ಯಮಂತ್ರಿ
ಎನ್. ಬಿರೇನ್ ಸಿಂಗ್ ‘ಸಂಪೂರ್ಣ ವಿಫಲರಾಗಿದ್ದಾರೆ’ ಎಂದು ಎನ್‌ಪಿಪಿ ಹೇಳಿಕೊಂಡಿದೆ.

“ಕಳೆದ ಕೆಲ ದಿನಗಳಿಂದ ಮಣಿಪುರದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಜನರು ಭಯದಿಂದ ಬದುಕುತ್ತಿದ್ದು, ಅತಿಯಾದ ಕಷ್ಟ ಅನುಭವಿಸುತ್ತಿದ್ದಾರೆ. ಆದರೆ, ಬಿಜೆಪಿ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ” ಎಂದು ಎನ್‌ಪಿಪಿ ಮುಖ್ಯಸ್ಥ ಕಾನ್ರಾಡ್ ಕೆ ಸಂಗ್ಮಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಒಟ್ಟು 60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ 7 ಮಂದಿ ಎನ್‌ಪಿಪಿ ಶಾಸಕರಿದ್ಧಾರೆ. ಇವರು ಬೆಂಬಲ ವಾಪಸ್ ಪಡೆದರೂ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಏಕೆಂದರೆ, ನಾಗಾ ಪೀಪಲ್ಸ್ ಫ್ರಂಟ್‌ (ಎನ್‌ಪಿಎಫ್‌) ನ ಐವರು ಮತ್ತು ಜನತಾದಳ ಯುನೈಟೆಡ್ (ಜೆಡಿಯು)ನ 6 ಮಂದಿ ಶಾಸಕ ಬೆಂಬಲದೊಂದಿಗೆ ಬಿಜೆಪಿ 32 ಸ್ಥಾನಗಳ ಸ್ಪಷ್ಟ ಬಹುಮತ ಹೊಂದಿದೆ.

ಮೂರು ಬಾರಿ ಸಿಎಂ ಆಗಿರುವ ಕಾಂಗ್ರೆಸ್‌ನ ಒಕ್ರಾಮ್ ಇಬೋಬಿ ಸಿಂಗ್ ಅವರು ಮುಖ್ಯಮಂತ್ರಿ ಬಿರೇನ್ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ವಿಫಲವಾಗಿದೆ. ಪ್ರಧಾನಿ ಮೋದಿ ತಕ್ಷಣ ಮಧ್ಯಪ್ರವೇಶಿಸದಿದ್ದರೆ, ಇತರ ಎನ್‌ಡಿಎಯೇತರ ಶಾಸಕರೊಂದಿಗೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

“ಮಹಿಳೆಯರು ಮತ್ತು ಮಕ್ಕಳನ್ನು ಕೊಲ್ಲುವುದು ಹಿಂಸಾಚಾರ ಮಿತಿ ಮೀರಿದೆ ಎಂಬುವುದನ್ನು ಸೂಚಿಸುತ್ತದೆ. ಸಿಎಂ ಬೀರೇನ್ ಸಿಂಗ್ ಸರ್ವಪಕ್ಷ ನಿಯೋಗ ಕೊಂಡೊಯ್ಯಲು ತಕ್ಷಣ ಪ್ರಧಾನಿಯೊಂದಿಗೆ ಸಮಯವಕಾಶ ಕೇಳಬೇಕು. ಪ್ರಧಾನಿ ವಿದೇಶದಿಂದ ಬಂದ ತಕ್ಷಣ ಭೇಟಿಯಾಗಲು ನಾವು ಸಿದ್ದರಿದ್ದೇವೆ” ಎಂದು ಒಕ್ರಾಮ್ ಇಬೋಬಿ ಹೇಳಿದ್ದಾರೆ.

ಇನ್ನೆರಡು ಮೃತದೇಹಗಳು ಪತ್ತೆ

ಇತ್ತೀಚಿನ ವರದಿಯ ಪ್ರಕಾರ, ಮಣಿಪುರದಲ್ಲಿ ಭಾನುವಾರ (ನ.17) ಇನ್ನೆರಡು ಮೃದೇಹಗಳು ಪತ್ತೆಯಾಗಿವೆ. ಗೋಣಿ ಚೀಲದಲ್ಲಿ ಕಟ್ಟಿದ್ದ ವಿವಸ್ತ್ರ ಮಹಿಳೆ ಮತ್ತು ಹೆಣ್ಣು ಮಗುವಿನ ಶವ ದಕ್ಷಿಣ ಅಸ್ಸಾಂನ ಬರಾಕ್ ನದಿಯಲ್ಲಿ ದೊರೆತಿದೆ.

ನವೆಂಬರ್ 11ರಿಂದ ಮೈತೇಯಿ ಸಮುದಾಯಕ್ಕೆ ಸೇರಿದ 6 ಮಂದಿಯನ್ನು ಕುಕಿ ಬಂಡುಕೋರರು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಬಳಿಕ ಶುಕ್ರವಾರ (ನ.15) ಮೂವರು ಮಹಿಳೆಯರ ಶವ ಪತ್ತೆಯಾಗಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿತ್ತು. ಇನ್ನೂ ಕೆಲ ಮಾಧ್ಯಮಗಳು ಒಬ್ಬರು ಮಹಿಳೆ ಮತ್ತು ಇಬ್ಬರು ಮಕ್ಕಳ ಮೃತದೇಹಗಳು ದೊರೆತಿವೆ ಎಂದಿತ್ತು. ಆದರೆ, ಶನಿವಾರ ಬೆಳಿಗ್ಗೆ 6 ಮಂದಿಯ ಶವಗಳೂ ಪತ್ತೆಯಾಗಿರುವುದಾಗಿ ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ನಿನ್ನೆ (ನ.17) ಮತ್ತೆರಡು ಮೃತದೇಹಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.

ಶಾಸಕರ ಮನೆ ಮೇಲೆ ದಾಳಿ

ಹಿಂಸಾಚಾರದ ನಡುವೆ ಇಂಫಾಲ್ ಕಣಿವೆಯಲ್ಲಿ ಒಂಬತ್ತು ಮಂದಿ ಬಿಜೆಪಿ ಶಾಸಕರು ಸೇರಿದಂತೆ 13 ಶಾಸಕರ ಮನೆಗಳ ಮೇಲೆ ಉದ್ರಿಕ್ತರ ಗುಂಪು ದಾಳಿ ನಡೆಸಿದೆ ಎಂದು ಭಾನುವಾರ (ನ.18) ವರದಿಯಾಗಿದೆ. ಪಶ್ಚಿಮ ಇಂಫಾಲದಲ್ಲಿರುವ ಬಿಜೆಪಿ ಶಾಸಕ ರಬೀಂದ್ರೊ ಅವರನ್ನು ಭೇಟಿ ಮಾಡಲು ಬಯಸಿದ ಪ್ರತಿಭಟನಾಕಾರರು, ಅವರ ನಿವಾಸವನ್ನು ಭಾನುವಾರ ಸಂಜೆ ಧ್ವಂಸಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ದೆಹಲಿ ಸಚಿವ ಕೈಲಾಶ್ ಗೆಹ್ಲೋಟ್ ರಾಜೀನಾಮೆ ಬೆನ್ನಿಗೆ ಬಿಜೆಪಿಯ ಪ್ರಮುಖ ನಾಯಕ ಎಎಪಿಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...