Homeಕರ್ನಾಟಕಕೆ.ಆರ್.ಪೇಟೆ ಚಲೋ: ಜಾಗೃತ ಸಮುದಾಯ ಜೀವಂತ ಆಗಿರುತ್ತದೆ, ಅದರ ಮೇಲೆ ದಾಳಿ ಆಗಲ್ಲ; ಜ್ಞಾನ ಪ್ರಕಾಶ್...

ಕೆ.ಆರ್.ಪೇಟೆ ಚಲೋ: ಜಾಗೃತ ಸಮುದಾಯ ಜೀವಂತ ಆಗಿರುತ್ತದೆ, ಅದರ ಮೇಲೆ ದಾಳಿ ಆಗಲ್ಲ; ಜ್ಞಾನ ಪ್ರಕಾಶ್ ಸ್ವಾಮಿ

- Advertisement -
- Advertisement -

‘‘ಯಾವ ಸಮುದಾಯ ಜಾಗೃತವಾಗಿ ಇರುತ್ತದೋ ಅದು ಜೀವಂತ ಆಗಿರುತ್ತದೆ. ಎಚ್ಚೆತ್ತ ಸಮುದಾಯಗಳ ಮೇಲೆ ದಾಳಿ ಆಗಲ್ಲ’’ ಎಂದು ಉರಿಲಿಂಗಪೆದ್ದಿ ಮಠದ ಪೀಠಾಧೀಶ ಜ್ಞಾನ ಪ್ರಕಾಶ್ ಸ್ವಾಮಿ ಮಂಗಳವಾರ ಹೇಳಿದರು. ಅವರು ಕೆ.ಆರ್. ಪೇಟೆ ತಾಲ್ಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ಮೇ 17ರಂದು ನಡೆದ ದಲಿತ ಯುವಕ ಜಯಕುಮಾರ್‌ ಹತ್ಯೆ ವಿರೋಧಿಸಿ ಮೇ 27ರಂದು ನಡೆದ ಕೆ.ಆರ್. ಪೇಟೆ ಚಲೋ ಹೋರಾಟದಲ್ಲಿ ಭಾಗಿಯಾಗಿ ಮಾತನಾಡುತ್ತಿದ್ದರು. ಜಾಗೃತ ಸಮುದಾಯ ಜೀವಂತ

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಕರಾಳ ಚರಿತ್ರೆಗೆ 75 ವರ್ಷ ಆಗಿದ್ದು, ಸರ್ಕಾರಕ್ಕೆ ನಾಚಿಕೆ ಆಗಬೇಕು. ಮಂಡ್ಯ ಹಾಗೂ ಕೆ.ಆರ್. ಪೇಟೆ ಆಡಳಿತಕ್ಕೂ ನಾಚಿಕೆ ಆಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. “ಎಚ್.ಡಿ. ಕೋಟೆ ತಾಲ್ಲೂಕಿನಲ್ಲಿ ತನ್ನ ಮಗಳು ಅನ್ಯ ಜಾತಿ ಯುವಕನನ್ನು ಮದುವೆ ಆಗಿದ್ದಕ್ಕೆ ಕೊಲೆ ಮಾಡಿದ್ದರು. ಯಾವ ಸಮುದಾಯ ಜಾಗೃತವಾಗಿ ಇರುತ್ತದೋ ಅದು ಜೀವಂತ ಆಗಿರುತ್ತದೆ, ಎಚ್ಚೆತ್ತ ಸಮುದಾಯಗಳ ಮೇಲೆ ದಾಳಿ ಆಗಲ್ಲ” ಎಂದು ಅವರು ಹೇಳಿದರು.

“ಮುಂದೆ ನಮ್ಮ ಎಲ್ಲರ ಮನೆಗಳೂ ಬೂದಿ ಆಗುತ್ತವೆ. ಕೆ.ಆರ್ ಪೇಟೆಯಲ್ಲಿ ಇಂತ ಪ್ರಕರಣಗಳು ನಡೆಯುತ್ತಲೇ ಇವೆ. ಜಯಕುಮಾರ್ ಹತ್ಯೆ ಪ್ರಕರಣವನ್ನ ಆತ್ಮಹತ್ಯೆ ಎಂದು ಹೇಳಿದ ಪೊಲೀಸ್ ಅಧಿಕಾರಿ ಯೂನಿಫಾರಂ ಬಿಚ್ಚಿಸಬೇಕು. ಆತ್ಮಹತ್ಯೆ ಎಂದು ಹೇಳುವುದಕ್ಕೆ ಆತನೇನು ನ್ಯಾಯಾಧೀಶನೆ” ಎಂದು ಅವರು ಪ್ರಶ್ನಿಸಿದರು.

ಜಯಕುಮಾರ್ ಪರ ಹೋರಾಟದಲ್ಲಿ ಅವರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಾನು ಜೊತೆಯಲ್ಲಿ ಇರುತ್ತೇನೆ ಎಂದು ಅವರು ಪ್ರತಿಜ್ಞೆ ಮಾಡಿದ್ದಾರೆ. “ನಾನು ಭಾಷಣ ಮಾಡಿ ಹೋಗುವುದಕ್ಕೆ ಇಲ್ಲಿಗೆ ಬಂದಿಲ್ಲ. ನಿರ್ಲಕ್ಷ್ಯ ತೋರಿದ ಅಧಿಕಾರಿಗಳಿಗೆ ನಮ್ಮ ಶಕ್ತಿ ತೋರಿಸುತ್ತೇವೆ. ದಲಿತರ ಶಕ್ತಿ ಏನೆಂದು ಅವರಿಗೆ ಗೊತ್ತಿಲ್ಲ. ಪೊಲೀಸರು ಸರಿಯಾಗಿ ಕಾರ್ಯ ನಿರ್ವಹಿಸಿದ್ದರೆ ಈ ಪ್ರಕರಣ ನಡೆಯುತ್ತಿರಲಿಲ್ಲ. ಯಾವುದೇ ಕಾರಣಕ್ಕೂ ಪೊಲೀಸರನ್ನು ಸುಮ್ಮನೆ ಬಿಡುವ ಮಾತಿಲ್ಲ” ಎಂದರು. ಮುಖ್ಯಮಂತ್ರಿಗಳ ಜೊತೆಗೆ ಮಾತನಾಡಿ ಎಸ್.ಐ.ಟಿ ತನಿಖೆ ಮಾಡಿಸುತ್ತೇವೆ ಎಂದು ಅವರು ಹೇಳಿದರು.

“ಆತ್ಮಹತ್ಯೆ ಎಂದು ಬಿಂಬಿಸಲು ಹೊರಟ ಇನ್ಸ್‌ಪೆಕ್ಟರ್‌ ಮತ್ತು ಸರ್ಕಲ್ ಇನ್ಸ್‌ಪೆಕ್ಟರ್‌ ಅವರನ್ನು ಸುಮ್ಮನೆ ಬಿಡುವುದಿಲ್ಲ. ಕಾಕಿ ಬಟ್ಟೆ ಹಾಕಿದವರಿಗೆ ಕನಿಷ್ಟ ಮಾನವೀಯತೆ ಇರಬೇಕು. ರಾಗಿ ಬಿತ್ತಿದರೆ ಜೋಳ ಬರುವುದಿಲ್ಲ. ಮುಂದಿನ ದಿನಗಳಲ್ಲಿ ನಿಮ್ಮ ಮನೆಯ ಹೆಣ್ಣು ಮಕ್ಕಳಿಗೂ ಇಂತಹ ಸ್ಥಿತಿ ಬರಬಹುದು. 135 ಸೀಟು ಕೊಟ್ಟು ನಾವು ಬೀದಿಯಲ್ಲಿ ತಮಟೆ ಹೊಡೆದುಕೊಂಡು ಸುಮ್ಮನೆ ಕೂರಬೇಕ” ಎಂದು ಅವರು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದರು.

ಇದೇ ವೇಳೆ ಮಾತನಾಡಿದ ಸಿಪಿಐಎಂ ನಾಯಕಿ ಕುಮಾರಿ ಅವರು, “ತಮ್ಮ ಮಕ್ಕಳಿಗಾಗಿ ಜಯಕುಮಾರ್ ಬೆಂಗಳೂರಿನಲ್ಲಿ ಕೆಲಸ ಬಿಟ್ಟು ಹಳ್ಳಿಗೆ ಬಂದಿದ್ದರು. ಸರ್ಕಾರ ನೀಡಿದ್ದ ಜಮೀನನ್ನು ಹಸನು ಮಾಡುತ್ತಿದ್ದರು. ಅಲ್ಲಿ ಕೃಷಿ ಮಾಡಲು ಯೋಚಿಸುತ್ತಿದ್ದರು. ಆದರೆ ಅದನ್ನು ಸಹಿಸದ ಆರೋಪಿ ಜಯಕುಮಾರ್ ಅವರನ್ನು ಕೊಲೆ ಮಾಡಿದ್ದಾನೆ. ಅವನಿಗೆ ಪೊಲೀಸರು ಬೆಂಬಲ ನೀಡುತ್ತಿದ್ದಾರೆ.” ಎಂದು ಆರೋಪಿಸಿದರು.

“15 ನೆ ತಾರೀಖು ನಡೆದ ಗಲಾಟೆ ಬಗ್ಗೆ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಿತ್ತು. ಆದರೆ ಆತನಿಗೆ ಎಚ್ಚರಿಕೆ ನೀಡದಂತೆ ಪೊಲೀಸರನ್ನು ತಡೆದವರು ಯಾರು? ಆತನೇ ನಾಗಮಂಗಲ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಆತನಿಗೆ ಬೆಂಬಲ ನೀಡಿರುವವರು ಯಾರು ಎಂಬುದು ಗೊತ್ತಾಗಬೇಕು” ಎಂದು ಕುಮಾರಿ ಅವರು ಹೇಳಿದರು. ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸುತ್ತಿದ್ದು, ಆತನ ರಕ್ಷಣೆಗೆ ದೊಡ್ಡ ಶಕ್ತಿ ನಿಂತಿದೆ ಎಂದು ಆರೋಪಿಸಿದ ಅವರು, ಅದು ಯಾವ ಶಕ್ತಿ ಎಂದು ಗೊತ್ತಾಗಬೇಕು, ಸತ್ಯ ಹೊರಬರಬೇಕಾದರೆ ಎಸ್ಐಟಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು. ಜಾಗೃತ ಸಮುದಾಯ ಜೀವಂತ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...