Homeಕರ್ನಾಟಕಕೆ.ಆರ್.ಪೇಟೆ ಚಲೋ: ಜಾಗೃತ ಸಮುದಾಯ ಜೀವಂತ ಆಗಿರುತ್ತದೆ, ಅದರ ಮೇಲೆ ದಾಳಿ ಆಗಲ್ಲ; ಜ್ಞಾನ ಪ್ರಕಾಶ್...

ಕೆ.ಆರ್.ಪೇಟೆ ಚಲೋ: ಜಾಗೃತ ಸಮುದಾಯ ಜೀವಂತ ಆಗಿರುತ್ತದೆ, ಅದರ ಮೇಲೆ ದಾಳಿ ಆಗಲ್ಲ; ಜ್ಞಾನ ಪ್ರಕಾಶ್ ಸ್ವಾಮಿ

- Advertisement -
- Advertisement -

‘‘ಯಾವ ಸಮುದಾಯ ಜಾಗೃತವಾಗಿ ಇರುತ್ತದೋ ಅದು ಜೀವಂತ ಆಗಿರುತ್ತದೆ. ಎಚ್ಚೆತ್ತ ಸಮುದಾಯಗಳ ಮೇಲೆ ದಾಳಿ ಆಗಲ್ಲ’’ ಎಂದು ಉರಿಲಿಂಗಪೆದ್ದಿ ಮಠದ ಪೀಠಾಧೀಶ ಜ್ಞಾನ ಪ್ರಕಾಶ್ ಸ್ವಾಮಿ ಮಂಗಳವಾರ ಹೇಳಿದರು. ಅವರು ಕೆ.ಆರ್. ಪೇಟೆ ತಾಲ್ಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ಮೇ 17ರಂದು ನಡೆದ ದಲಿತ ಯುವಕ ಜಯಕುಮಾರ್‌ ಹತ್ಯೆ ವಿರೋಧಿಸಿ ಮೇ 27ರಂದು ನಡೆದ ಕೆ.ಆರ್. ಪೇಟೆ ಚಲೋ ಹೋರಾಟದಲ್ಲಿ ಭಾಗಿಯಾಗಿ ಮಾತನಾಡುತ್ತಿದ್ದರು. ಜಾಗೃತ ಸಮುದಾಯ ಜೀವಂತ

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಕರಾಳ ಚರಿತ್ರೆಗೆ 75 ವರ್ಷ ಆಗಿದ್ದು, ಸರ್ಕಾರಕ್ಕೆ ನಾಚಿಕೆ ಆಗಬೇಕು. ಮಂಡ್ಯ ಹಾಗೂ ಕೆ.ಆರ್. ಪೇಟೆ ಆಡಳಿತಕ್ಕೂ ನಾಚಿಕೆ ಆಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. “ಎಚ್.ಡಿ. ಕೋಟೆ ತಾಲ್ಲೂಕಿನಲ್ಲಿ ತನ್ನ ಮಗಳು ಅನ್ಯ ಜಾತಿ ಯುವಕನನ್ನು ಮದುವೆ ಆಗಿದ್ದಕ್ಕೆ ಕೊಲೆ ಮಾಡಿದ್ದರು. ಯಾವ ಸಮುದಾಯ ಜಾಗೃತವಾಗಿ ಇರುತ್ತದೋ ಅದು ಜೀವಂತ ಆಗಿರುತ್ತದೆ, ಎಚ್ಚೆತ್ತ ಸಮುದಾಯಗಳ ಮೇಲೆ ದಾಳಿ ಆಗಲ್ಲ” ಎಂದು ಅವರು ಹೇಳಿದರು.

“ಮುಂದೆ ನಮ್ಮ ಎಲ್ಲರ ಮನೆಗಳೂ ಬೂದಿ ಆಗುತ್ತವೆ. ಕೆ.ಆರ್ ಪೇಟೆಯಲ್ಲಿ ಇಂತ ಪ್ರಕರಣಗಳು ನಡೆಯುತ್ತಲೇ ಇವೆ. ಜಯಕುಮಾರ್ ಹತ್ಯೆ ಪ್ರಕರಣವನ್ನ ಆತ್ಮಹತ್ಯೆ ಎಂದು ಹೇಳಿದ ಪೊಲೀಸ್ ಅಧಿಕಾರಿ ಯೂನಿಫಾರಂ ಬಿಚ್ಚಿಸಬೇಕು. ಆತ್ಮಹತ್ಯೆ ಎಂದು ಹೇಳುವುದಕ್ಕೆ ಆತನೇನು ನ್ಯಾಯಾಧೀಶನೆ” ಎಂದು ಅವರು ಪ್ರಶ್ನಿಸಿದರು.

ಜಯಕುಮಾರ್ ಪರ ಹೋರಾಟದಲ್ಲಿ ಅವರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಾನು ಜೊತೆಯಲ್ಲಿ ಇರುತ್ತೇನೆ ಎಂದು ಅವರು ಪ್ರತಿಜ್ಞೆ ಮಾಡಿದ್ದಾರೆ. “ನಾನು ಭಾಷಣ ಮಾಡಿ ಹೋಗುವುದಕ್ಕೆ ಇಲ್ಲಿಗೆ ಬಂದಿಲ್ಲ. ನಿರ್ಲಕ್ಷ್ಯ ತೋರಿದ ಅಧಿಕಾರಿಗಳಿಗೆ ನಮ್ಮ ಶಕ್ತಿ ತೋರಿಸುತ್ತೇವೆ. ದಲಿತರ ಶಕ್ತಿ ಏನೆಂದು ಅವರಿಗೆ ಗೊತ್ತಿಲ್ಲ. ಪೊಲೀಸರು ಸರಿಯಾಗಿ ಕಾರ್ಯ ನಿರ್ವಹಿಸಿದ್ದರೆ ಈ ಪ್ರಕರಣ ನಡೆಯುತ್ತಿರಲಿಲ್ಲ. ಯಾವುದೇ ಕಾರಣಕ್ಕೂ ಪೊಲೀಸರನ್ನು ಸುಮ್ಮನೆ ಬಿಡುವ ಮಾತಿಲ್ಲ” ಎಂದರು. ಮುಖ್ಯಮಂತ್ರಿಗಳ ಜೊತೆಗೆ ಮಾತನಾಡಿ ಎಸ್.ಐ.ಟಿ ತನಿಖೆ ಮಾಡಿಸುತ್ತೇವೆ ಎಂದು ಅವರು ಹೇಳಿದರು.

“ಆತ್ಮಹತ್ಯೆ ಎಂದು ಬಿಂಬಿಸಲು ಹೊರಟ ಇನ್ಸ್‌ಪೆಕ್ಟರ್‌ ಮತ್ತು ಸರ್ಕಲ್ ಇನ್ಸ್‌ಪೆಕ್ಟರ್‌ ಅವರನ್ನು ಸುಮ್ಮನೆ ಬಿಡುವುದಿಲ್ಲ. ಕಾಕಿ ಬಟ್ಟೆ ಹಾಕಿದವರಿಗೆ ಕನಿಷ್ಟ ಮಾನವೀಯತೆ ಇರಬೇಕು. ರಾಗಿ ಬಿತ್ತಿದರೆ ಜೋಳ ಬರುವುದಿಲ್ಲ. ಮುಂದಿನ ದಿನಗಳಲ್ಲಿ ನಿಮ್ಮ ಮನೆಯ ಹೆಣ್ಣು ಮಕ್ಕಳಿಗೂ ಇಂತಹ ಸ್ಥಿತಿ ಬರಬಹುದು. 135 ಸೀಟು ಕೊಟ್ಟು ನಾವು ಬೀದಿಯಲ್ಲಿ ತಮಟೆ ಹೊಡೆದುಕೊಂಡು ಸುಮ್ಮನೆ ಕೂರಬೇಕ” ಎಂದು ಅವರು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದರು.

ಇದೇ ವೇಳೆ ಮಾತನಾಡಿದ ಸಿಪಿಐಎಂ ನಾಯಕಿ ಕುಮಾರಿ ಅವರು, “ತಮ್ಮ ಮಕ್ಕಳಿಗಾಗಿ ಜಯಕುಮಾರ್ ಬೆಂಗಳೂರಿನಲ್ಲಿ ಕೆಲಸ ಬಿಟ್ಟು ಹಳ್ಳಿಗೆ ಬಂದಿದ್ದರು. ಸರ್ಕಾರ ನೀಡಿದ್ದ ಜಮೀನನ್ನು ಹಸನು ಮಾಡುತ್ತಿದ್ದರು. ಅಲ್ಲಿ ಕೃಷಿ ಮಾಡಲು ಯೋಚಿಸುತ್ತಿದ್ದರು. ಆದರೆ ಅದನ್ನು ಸಹಿಸದ ಆರೋಪಿ ಜಯಕುಮಾರ್ ಅವರನ್ನು ಕೊಲೆ ಮಾಡಿದ್ದಾನೆ. ಅವನಿಗೆ ಪೊಲೀಸರು ಬೆಂಬಲ ನೀಡುತ್ತಿದ್ದಾರೆ.” ಎಂದು ಆರೋಪಿಸಿದರು.

“15 ನೆ ತಾರೀಖು ನಡೆದ ಗಲಾಟೆ ಬಗ್ಗೆ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಿತ್ತು. ಆದರೆ ಆತನಿಗೆ ಎಚ್ಚರಿಕೆ ನೀಡದಂತೆ ಪೊಲೀಸರನ್ನು ತಡೆದವರು ಯಾರು? ಆತನೇ ನಾಗಮಂಗಲ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಆತನಿಗೆ ಬೆಂಬಲ ನೀಡಿರುವವರು ಯಾರು ಎಂಬುದು ಗೊತ್ತಾಗಬೇಕು” ಎಂದು ಕುಮಾರಿ ಅವರು ಹೇಳಿದರು. ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸುತ್ತಿದ್ದು, ಆತನ ರಕ್ಷಣೆಗೆ ದೊಡ್ಡ ಶಕ್ತಿ ನಿಂತಿದೆ ಎಂದು ಆರೋಪಿಸಿದ ಅವರು, ಅದು ಯಾವ ಶಕ್ತಿ ಎಂದು ಗೊತ್ತಾಗಬೇಕು, ಸತ್ಯ ಹೊರಬರಬೇಕಾದರೆ ಎಸ್ಐಟಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು. ಜಾಗೃತ ಸಮುದಾಯ ಜೀವಂತ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...