Homeಮುಖಪುಟನರಸಿಂಗಾನಂದ ವಿರುದ್ದ ಸಂವಿಧಾನ ಮತ್ತು ಸುಪ್ರೀಂಕೋರ್ಟ್ ನಿಂದನೆ ಪ್ರಕ್ರಿಯೆ ಆರಂಭಿಸಲು ಸಮ್ಮತಿ

ನರಸಿಂಗಾನಂದ ವಿರುದ್ದ ಸಂವಿಧಾನ ಮತ್ತು ಸುಪ್ರೀಂಕೋರ್ಟ್ ನಿಂದನೆ ಪ್ರಕ್ರಿಯೆ ಆರಂಭಿಸಲು ಸಮ್ಮತಿ

- Advertisement -
- Advertisement -

ಹರಿದ್ವಾರದಲ್ಲಿ ದ್ವೇಷ ಭಾಷಣದ ‘ಧರ್ಮ ಸಂಸದ್’ ಆಯೋಜಿಸಿದ್ದ ನರಸಿಂಗಾನಂದ ಅವರು ಸುಪ್ರೀಂಕೋರ್ಟ್ ಮತ್ತು ಸಂವಿಧಾನದ ವಿರುದ್ದ ಇತ್ತೀಚೆಗೆ ನೀಡಿದ್ದ ಅವಹೇಳನಕಾರಿ ಹೇಳಿಕೆಗಳ ವಿರುದ್ದ ನಿಂದನೆ ಪ್ರಕ್ರಿಯೆ ಆರಂಭಿಸಲು ಭಾರತದ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಶುಕ್ರವಾರ ಸಮ್ಮತಿ ನೀಡಿದ್ದಾರೆ.

ಜನವರಿ 14 ರಂದು ಟ್ವಿಟ್ಟರ್‌ನಲ್ಲಿ ವೈರಲ್ ಆಗಿದ್ದ ಸಂದರ್ಶನದಲ್ಲಿ ನೀಡಿದ್ದ ಅವಹೇಳನಕಾರಿ ಹೇಳಿಕೆಗಳಿಗಾಗಿ ನರಸಿಂಗಾನಂದ ವಿರುದ್ಧ ಸಾಮಾಜಿಕ ಕಾರ್ಯಕರ್ತ ಶಚಿ ನೆಲ್ಲಿ ಬರೆದ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಅಟಾರ್ನಿ ಜನರಲ್‌ ಒಪ್ಪಿಗೆ ನೀಡಿದ್ದಾರೆ.

“ನರಸಿಂಗಾನಂದ ನೀಡಿದ್ದ ಹೇಳಿಕೆಗಳು ಖಂಡಿತವಾಗಿಯೂ ಭಾರತದ ಸರ್ವೋಚ್ಚ ನ್ಯಾಯಾಲಯದ ಅವಹೇಳನಕ್ಕೆ ಸಮಾನವಾಗಿರುತ್ತದೆ” ಎಂದು ಅಟಾರ್ನಿ ಜನರಲ್‌ ಹೇಳಿದ್ದಾರೆ.

ಇದನ್ನೂ ಓದಿ:ದ್ವೇಷ ಭಾಷಣ ಪ್ರಕರಣ: ಆರೋಪಿ ಯತಿ ನರಸಿಂಗಾನಂದ ಜಾಮೀನು ಅರ್ಜಿ ವಜಾ

“ಈ ವ್ಯವಸ್ಥೆಯನ್ನು ನಂಬುವವರು, ರಾಜಕಾರಣಿಗಳು, ಸುಪ್ರೀಂ ಕೋರ್ಟ್ ಮತ್ತು ಸೈನ್ಯದ ಎಲ್ಲರೂ ನಾಯಿ ಸತ್ತಂತೆ ಸಾಯುತ್ತಾರೆ” ಎಂದು ನರಸಿಂಗಾನಂದ ಹೇಳಿದ್ದರು. ಈ ಮಾತನ್ನು ಉಲ್ಲೇಖಿಸಿರುವ ಅಟಾರ್ನಿ ಜನರಲ್‌, “ಇದು ಸಾಮಾನ್ಯ ಜನರ ಮನಸ್ಸಿನಲ್ಲಿ ಸುಪ್ರೀಂ ಕೋರ್ಟ್‌ನ ಅಧಿಕಾರವನ್ನು ತುಚ್ಛವಾಗಿ ಕಾಣುವಂತೆ ಮಾಡುವ ನೇರ ಪ್ರಯತ್ನ” ಎಂದು ಭಾರತದ ಸರ್ವೋಚ್ಚ ನ್ಯಾಯಾಲಯದ ಕ್ರಿಮಿನಲ್ ನಿಂದನೆಯ ವಿಚಾರಣೆಯನ್ನು ಪ್ರಾರಂಭಿಸಲು ಸಮ್ಮತಿಯನ್ನು ನೀಡಿದ್ದಾರೆ.

ಹರಿದ್ವಾರದ ಧರ್ಮ ಸಂಸದ್‌ನಲ್ಲಿ ಮುಸ್ಲಿಂ ವಿರೋಧಿ ದ್ವೇಷದ ಭಾಷಣ ಮಾಡಿದ್ದಕ್ಕಾಗಿ ಉತ್ತರಾಖಂಡ್ ಪೊಲೀಸರು ಅವರನ್ನು ಬಂಧಿಸಿದ್ದು, ಪ್ರಸ್ತುತ ಬಂಧನದಲ್ಲಿದ್ದಾರೆ.

ಹರಿದ್ವಾರ ದ್ವೇಷದ ಭಾಷಣದ ಪ್ರಕರಣದಲ್ಲಿ ನ್ಯಾಯಾಲಯದ ಪ್ರಕ್ರಿಯೆಗಳ ಬಗ್ಗೆ ಮಾತನಾಡಿದ್ದ ನರಸಿಂಗಾನಂದ, “ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ನಮಗೆ ನಂಬಿಕೆ ಇಲ್ಲ. ಸಂವಿಧಾನ ಈ ದೇಶದ 100 ಕೋಟಿ ಹಿಂದೂಗಳನ್ನು ಕಬಳಿಸುತ್ತದೆ. ಈ ಸಂವಿಧಾನವನ್ನು ನಂಬುವವರು, ರಾಜಕಾರಣಿಗಳು, ಸುಪ್ರೀಂ ಕೋರ್ಟ್ ಮತ್ತು ಸೈನ್ಯದ ಎಲ್ಲರೂ ನಾಯಿ ಸತ್ತಂತೆ ಸಾಯುತ್ತಾರೆ” ಎಂದು ಹೇಳಿದ್ದರು. ಇದನ್ನು ಅಟಾರ್ನಿ ಜನರಲ್‌ಗೆ ಬರೆದಿದ್ದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:ಮುಸ್ಲಿಮರ ಹತ್ಯೆಗೆ ಕರೆ: ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...