Homeಮುಖಪುಟನರಸಿಂಗಾನಂದ ವಿರುದ್ದ ಸಂವಿಧಾನ ಮತ್ತು ಸುಪ್ರೀಂಕೋರ್ಟ್ ನಿಂದನೆ ಪ್ರಕ್ರಿಯೆ ಆರಂಭಿಸಲು ಸಮ್ಮತಿ

ನರಸಿಂಗಾನಂದ ವಿರುದ್ದ ಸಂವಿಧಾನ ಮತ್ತು ಸುಪ್ರೀಂಕೋರ್ಟ್ ನಿಂದನೆ ಪ್ರಕ್ರಿಯೆ ಆರಂಭಿಸಲು ಸಮ್ಮತಿ

- Advertisement -
- Advertisement -

ಹರಿದ್ವಾರದಲ್ಲಿ ದ್ವೇಷ ಭಾಷಣದ ‘ಧರ್ಮ ಸಂಸದ್’ ಆಯೋಜಿಸಿದ್ದ ನರಸಿಂಗಾನಂದ ಅವರು ಸುಪ್ರೀಂಕೋರ್ಟ್ ಮತ್ತು ಸಂವಿಧಾನದ ವಿರುದ್ದ ಇತ್ತೀಚೆಗೆ ನೀಡಿದ್ದ ಅವಹೇಳನಕಾರಿ ಹೇಳಿಕೆಗಳ ವಿರುದ್ದ ನಿಂದನೆ ಪ್ರಕ್ರಿಯೆ ಆರಂಭಿಸಲು ಭಾರತದ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಶುಕ್ರವಾರ ಸಮ್ಮತಿ ನೀಡಿದ್ದಾರೆ.

ಜನವರಿ 14 ರಂದು ಟ್ವಿಟ್ಟರ್‌ನಲ್ಲಿ ವೈರಲ್ ಆಗಿದ್ದ ಸಂದರ್ಶನದಲ್ಲಿ ನೀಡಿದ್ದ ಅವಹೇಳನಕಾರಿ ಹೇಳಿಕೆಗಳಿಗಾಗಿ ನರಸಿಂಗಾನಂದ ವಿರುದ್ಧ ಸಾಮಾಜಿಕ ಕಾರ್ಯಕರ್ತ ಶಚಿ ನೆಲ್ಲಿ ಬರೆದ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಅಟಾರ್ನಿ ಜನರಲ್‌ ಒಪ್ಪಿಗೆ ನೀಡಿದ್ದಾರೆ.

“ನರಸಿಂಗಾನಂದ ನೀಡಿದ್ದ ಹೇಳಿಕೆಗಳು ಖಂಡಿತವಾಗಿಯೂ ಭಾರತದ ಸರ್ವೋಚ್ಚ ನ್ಯಾಯಾಲಯದ ಅವಹೇಳನಕ್ಕೆ ಸಮಾನವಾಗಿರುತ್ತದೆ” ಎಂದು ಅಟಾರ್ನಿ ಜನರಲ್‌ ಹೇಳಿದ್ದಾರೆ.

ಇದನ್ನೂ ಓದಿ:ದ್ವೇಷ ಭಾಷಣ ಪ್ರಕರಣ: ಆರೋಪಿ ಯತಿ ನರಸಿಂಗಾನಂದ ಜಾಮೀನು ಅರ್ಜಿ ವಜಾ

“ಈ ವ್ಯವಸ್ಥೆಯನ್ನು ನಂಬುವವರು, ರಾಜಕಾರಣಿಗಳು, ಸುಪ್ರೀಂ ಕೋರ್ಟ್ ಮತ್ತು ಸೈನ್ಯದ ಎಲ್ಲರೂ ನಾಯಿ ಸತ್ತಂತೆ ಸಾಯುತ್ತಾರೆ” ಎಂದು ನರಸಿಂಗಾನಂದ ಹೇಳಿದ್ದರು. ಈ ಮಾತನ್ನು ಉಲ್ಲೇಖಿಸಿರುವ ಅಟಾರ್ನಿ ಜನರಲ್‌, “ಇದು ಸಾಮಾನ್ಯ ಜನರ ಮನಸ್ಸಿನಲ್ಲಿ ಸುಪ್ರೀಂ ಕೋರ್ಟ್‌ನ ಅಧಿಕಾರವನ್ನು ತುಚ್ಛವಾಗಿ ಕಾಣುವಂತೆ ಮಾಡುವ ನೇರ ಪ್ರಯತ್ನ” ಎಂದು ಭಾರತದ ಸರ್ವೋಚ್ಚ ನ್ಯಾಯಾಲಯದ ಕ್ರಿಮಿನಲ್ ನಿಂದನೆಯ ವಿಚಾರಣೆಯನ್ನು ಪ್ರಾರಂಭಿಸಲು ಸಮ್ಮತಿಯನ್ನು ನೀಡಿದ್ದಾರೆ.

ಹರಿದ್ವಾರದ ಧರ್ಮ ಸಂಸದ್‌ನಲ್ಲಿ ಮುಸ್ಲಿಂ ವಿರೋಧಿ ದ್ವೇಷದ ಭಾಷಣ ಮಾಡಿದ್ದಕ್ಕಾಗಿ ಉತ್ತರಾಖಂಡ್ ಪೊಲೀಸರು ಅವರನ್ನು ಬಂಧಿಸಿದ್ದು, ಪ್ರಸ್ತುತ ಬಂಧನದಲ್ಲಿದ್ದಾರೆ.

ಹರಿದ್ವಾರ ದ್ವೇಷದ ಭಾಷಣದ ಪ್ರಕರಣದಲ್ಲಿ ನ್ಯಾಯಾಲಯದ ಪ್ರಕ್ರಿಯೆಗಳ ಬಗ್ಗೆ ಮಾತನಾಡಿದ್ದ ನರಸಿಂಗಾನಂದ, “ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ನಮಗೆ ನಂಬಿಕೆ ಇಲ್ಲ. ಸಂವಿಧಾನ ಈ ದೇಶದ 100 ಕೋಟಿ ಹಿಂದೂಗಳನ್ನು ಕಬಳಿಸುತ್ತದೆ. ಈ ಸಂವಿಧಾನವನ್ನು ನಂಬುವವರು, ರಾಜಕಾರಣಿಗಳು, ಸುಪ್ರೀಂ ಕೋರ್ಟ್ ಮತ್ತು ಸೈನ್ಯದ ಎಲ್ಲರೂ ನಾಯಿ ಸತ್ತಂತೆ ಸಾಯುತ್ತಾರೆ” ಎಂದು ಹೇಳಿದ್ದರು. ಇದನ್ನು ಅಟಾರ್ನಿ ಜನರಲ್‌ಗೆ ಬರೆದಿದ್ದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:ಮುಸ್ಲಿಮರ ಹತ್ಯೆಗೆ ಕರೆ: ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....