Homeಮುಖಪುಟನರಸಿಂಗಾನಂದ ವಿರುದ್ದ ಸಂವಿಧಾನ ಮತ್ತು ಸುಪ್ರೀಂಕೋರ್ಟ್ ನಿಂದನೆ ಪ್ರಕ್ರಿಯೆ ಆರಂಭಿಸಲು ಸಮ್ಮತಿ

ನರಸಿಂಗಾನಂದ ವಿರುದ್ದ ಸಂವಿಧಾನ ಮತ್ತು ಸುಪ್ರೀಂಕೋರ್ಟ್ ನಿಂದನೆ ಪ್ರಕ್ರಿಯೆ ಆರಂಭಿಸಲು ಸಮ್ಮತಿ

- Advertisement -
- Advertisement -

ಹರಿದ್ವಾರದಲ್ಲಿ ದ್ವೇಷ ಭಾಷಣದ ‘ಧರ್ಮ ಸಂಸದ್’ ಆಯೋಜಿಸಿದ್ದ ನರಸಿಂಗಾನಂದ ಅವರು ಸುಪ್ರೀಂಕೋರ್ಟ್ ಮತ್ತು ಸಂವಿಧಾನದ ವಿರುದ್ದ ಇತ್ತೀಚೆಗೆ ನೀಡಿದ್ದ ಅವಹೇಳನಕಾರಿ ಹೇಳಿಕೆಗಳ ವಿರುದ್ದ ನಿಂದನೆ ಪ್ರಕ್ರಿಯೆ ಆರಂಭಿಸಲು ಭಾರತದ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಶುಕ್ರವಾರ ಸಮ್ಮತಿ ನೀಡಿದ್ದಾರೆ.

ಜನವರಿ 14 ರಂದು ಟ್ವಿಟ್ಟರ್‌ನಲ್ಲಿ ವೈರಲ್ ಆಗಿದ್ದ ಸಂದರ್ಶನದಲ್ಲಿ ನೀಡಿದ್ದ ಅವಹೇಳನಕಾರಿ ಹೇಳಿಕೆಗಳಿಗಾಗಿ ನರಸಿಂಗಾನಂದ ವಿರುದ್ಧ ಸಾಮಾಜಿಕ ಕಾರ್ಯಕರ್ತ ಶಚಿ ನೆಲ್ಲಿ ಬರೆದ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಅಟಾರ್ನಿ ಜನರಲ್‌ ಒಪ್ಪಿಗೆ ನೀಡಿದ್ದಾರೆ.

“ನರಸಿಂಗಾನಂದ ನೀಡಿದ್ದ ಹೇಳಿಕೆಗಳು ಖಂಡಿತವಾಗಿಯೂ ಭಾರತದ ಸರ್ವೋಚ್ಚ ನ್ಯಾಯಾಲಯದ ಅವಹೇಳನಕ್ಕೆ ಸಮಾನವಾಗಿರುತ್ತದೆ” ಎಂದು ಅಟಾರ್ನಿ ಜನರಲ್‌ ಹೇಳಿದ್ದಾರೆ.

ಇದನ್ನೂ ಓದಿ:ದ್ವೇಷ ಭಾಷಣ ಪ್ರಕರಣ: ಆರೋಪಿ ಯತಿ ನರಸಿಂಗಾನಂದ ಜಾಮೀನು ಅರ್ಜಿ ವಜಾ

“ಈ ವ್ಯವಸ್ಥೆಯನ್ನು ನಂಬುವವರು, ರಾಜಕಾರಣಿಗಳು, ಸುಪ್ರೀಂ ಕೋರ್ಟ್ ಮತ್ತು ಸೈನ್ಯದ ಎಲ್ಲರೂ ನಾಯಿ ಸತ್ತಂತೆ ಸಾಯುತ್ತಾರೆ” ಎಂದು ನರಸಿಂಗಾನಂದ ಹೇಳಿದ್ದರು. ಈ ಮಾತನ್ನು ಉಲ್ಲೇಖಿಸಿರುವ ಅಟಾರ್ನಿ ಜನರಲ್‌, “ಇದು ಸಾಮಾನ್ಯ ಜನರ ಮನಸ್ಸಿನಲ್ಲಿ ಸುಪ್ರೀಂ ಕೋರ್ಟ್‌ನ ಅಧಿಕಾರವನ್ನು ತುಚ್ಛವಾಗಿ ಕಾಣುವಂತೆ ಮಾಡುವ ನೇರ ಪ್ರಯತ್ನ” ಎಂದು ಭಾರತದ ಸರ್ವೋಚ್ಚ ನ್ಯಾಯಾಲಯದ ಕ್ರಿಮಿನಲ್ ನಿಂದನೆಯ ವಿಚಾರಣೆಯನ್ನು ಪ್ರಾರಂಭಿಸಲು ಸಮ್ಮತಿಯನ್ನು ನೀಡಿದ್ದಾರೆ.

ಹರಿದ್ವಾರದ ಧರ್ಮ ಸಂಸದ್‌ನಲ್ಲಿ ಮುಸ್ಲಿಂ ವಿರೋಧಿ ದ್ವೇಷದ ಭಾಷಣ ಮಾಡಿದ್ದಕ್ಕಾಗಿ ಉತ್ತರಾಖಂಡ್ ಪೊಲೀಸರು ಅವರನ್ನು ಬಂಧಿಸಿದ್ದು, ಪ್ರಸ್ತುತ ಬಂಧನದಲ್ಲಿದ್ದಾರೆ.

ಹರಿದ್ವಾರ ದ್ವೇಷದ ಭಾಷಣದ ಪ್ರಕರಣದಲ್ಲಿ ನ್ಯಾಯಾಲಯದ ಪ್ರಕ್ರಿಯೆಗಳ ಬಗ್ಗೆ ಮಾತನಾಡಿದ್ದ ನರಸಿಂಗಾನಂದ, “ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ನಮಗೆ ನಂಬಿಕೆ ಇಲ್ಲ. ಸಂವಿಧಾನ ಈ ದೇಶದ 100 ಕೋಟಿ ಹಿಂದೂಗಳನ್ನು ಕಬಳಿಸುತ್ತದೆ. ಈ ಸಂವಿಧಾನವನ್ನು ನಂಬುವವರು, ರಾಜಕಾರಣಿಗಳು, ಸುಪ್ರೀಂ ಕೋರ್ಟ್ ಮತ್ತು ಸೈನ್ಯದ ಎಲ್ಲರೂ ನಾಯಿ ಸತ್ತಂತೆ ಸಾಯುತ್ತಾರೆ” ಎಂದು ಹೇಳಿದ್ದರು. ಇದನ್ನು ಅಟಾರ್ನಿ ಜನರಲ್‌ಗೆ ಬರೆದಿದ್ದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:ಮುಸ್ಲಿಮರ ಹತ್ಯೆಗೆ ಕರೆ: ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...