Homeಮುಖಪುಟಬಿಜೆಪಿ ಉದ್ಯಮಿಗಳ ಸಾಲ ಮನ್ನಾ ಮಾಡುವುದನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಿ: ಸುಪ್ರೀಂಗೆ ತಮಿಳುನಾಡು...

ಬಿಜೆಪಿ ಉದ್ಯಮಿಗಳ ಸಾಲ ಮನ್ನಾ ಮಾಡುವುದನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಿ: ಸುಪ್ರೀಂಗೆ ತಮಿಳುನಾಡು ಸಿಎಂ ಸ್ಟಾಲಿನ್ ಅರ್ಜಿ

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆ ನೀಡುವ ಭರವಸೆಯನ್ನು ಪ್ರಶ್ನಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ

- Advertisement -
- Advertisement -

ಉಚಿತ ಯೋಜನೆಗಳ ಕುರಿತು ನಡೆಯುತ್ತಿರುವ ಪ್ರಕರಣದ ವಿಚಾರದಲ್ಲಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆಯು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ‘ಉಚಿತ ಕೊಡುಗೆ’ ಎಂಬ ಪದದ ವ್ಯಾಪ್ತಿ ತುಂಬಾ ವಿಸ್ತಾರವಾಗಿದ್ದು, ‘ಇದರ ಬಗ್ಗೆ ಪರಿಗಣಿಸಬೇಕಾದ ಅಂಶಗಳು ಬಹಳ ಇವೆ’ ಎಂದು ವಾದಿಸಿದೆ. ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅವರು ಸರ್ಕಾರಗಳ ಉಚಿತ ಕೊಡುಗೆಗಳ ಭರವಸೆಗಳನ್ನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಭರವಸೆಯನ್ನು ಪ್ರಶ್ನಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ನಡೆಸುತ್ತಿದೆ. ಈ ರೀತಿಯ ಸಂಪ್ರದಾಯವು ರಾಜ್ಯವನ್ನು ಆರ್ಥಿಕವಾಗಿ ನಾಶಪಡಿಸುತ್ತದೆ ಎಂದು ಬಿಜೆಪಿ ಪ್ರತಿಪಾದಿಸಿದೆ. ತಮಿಳುನಾಡು ಸರ್ಕಾರ ಮಾತ್ರವಲ್ಲದೆ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಕೂಡಾ ತಾನು ಆಳುವ ರಾಜ್ಯಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರನ್ನು ಒದಗಿಸುವ ಭರವಸೆ ನೀಡಿ, ಅಧಿಕಾರಕ್ಕೆ ಬಂದ ಕೂಡಲೇ ಅವುಗಳನ್ನು ಈಡೇರಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮಿಳುನಾಡು ಚುನಾವಣೆಯ ಸಮಯದಲ್ಲಿ ಸಾಂಪ್ರದಾಯಿಕವಾಗಿ ಎಲ್ಲಾ ಪಕ್ಷಗಳೂ ಉಚಿತ ಯೋಜನೆಗಳ ಭರವಸೆಯನ್ನು ನೀಡುತ್ತದೆ. ಅಲ್ಲದೆ ಚುನಾವಣೆಗೂ ಮುನ್ನ ಕೂಡಾ ಜನರಿಗೆ ಬಟ್ಟೆ, ಆಹಾರ, ಗೃಹೋಪಯೋಗಿ ವಸ್ತುಗಳನ್ನು ವಿತರಿಸಲಾಗಿದ್ದು, ಕೆಲವೊಮ್ಮೆ ನೀತಿ ಸಂಹಿತೆ ಉಲ್ಲಂಘಿಸಲಾಗಿತ್ತು.

ಇದನ್ನೂ ಓದಿ: ’ಉಚಿತ ಕೊಡುಗೆ’ ಒಂದು ರೋಗವೆ? ಸುಪ್ರೀಂ ಕೋರ್ಟಿನ ವಿಚಾರಣೆ ಮತ್ತು ಬಡ ಭಾರತದ ಪ್ರಜಾಪ್ರಭುತ್ವ

ಚುನಾವಣೆಯ ನಂತರ, ನಂತರದ ಸರ್ಕಾರಗಳು ಆಹಾರ ಮತ್ತು ಇತರ ವಸ್ತುಗಳ ಮೇಲೆ ಭಾರಿ ಸಬ್ಸಿಡಿಗಳನ್ನು ನೀಡಿವೆ. ಪ್ರತಿಪಕ್ಷ ಎಐಎಡಿಎಂಕೆಯ ದಿವಂಗತ ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ‘ಅಮ್ಮ ಕ್ಯಾಂಟೀನ್’ಗಳಿಗೆ ಹೆಸರುವಾಸಿಯಾಗಿದ್ದರು. ಈ ಕ್ಯಾಂಟೀನ್‌ಗಳಲ್ಲಿ ಕೆಲವೇ ರೂಪಾಯಿಗಳಲ್ಲಿ ಊಟವನ್ನು ಮಾಡಬಹುದಿತ್ತು.

ಪ್ರಕರಣದ ಕುರಿತು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪಕ್ಷವಾದ ಡಿಎಂಕೆಯು ರಾಜ್ಯ ಸರ್ಕಾರ ಪರಿಚಯಿಸಿದ ಕಲ್ಯಾಣ ಯೋಜನೆಯನ್ನು ಮಾತ್ರ ಉಚಿತ ಕೊಡುಗೆ ಎಂದು ವರ್ಗೀಕರಿಸಲು ಸಾಧ್ಯವಿಲ್ಲ ಎಂದು ವಾದಿಸಿದೆ.

“ಕೇಂದ್ರದ ಆಡಳಿತರೂಢ ಪಕ್ಷವೂ ವಿದೇಶಿ ಕಂಪನಿಗಳಿಗೆ ತೆರಿಗೆ ರಜೆ ನೀಡುವುದು, ಪ್ರಭಾವಿ ಕೈಗಾರಿಕೋದ್ಯಮಿಗಳ ಸುಸ್ತಿ ಸಾಲ ಮನ್ನಾ ಮಾಡುವುದು, ತಮಗೆ ಬೇಕಾದ ಕಂಪನಿಗಳಿಗೆ ಬಹುಮುಖ್ಯವಾದ ಗುತ್ತಿಗೆಗಳನ್ನು ನೀಡುವುದು ಇತ್ಯಾದಿಗಳನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಬೇಕು” ಎಂದು ಡಿಎಂಕೆ ಅರ್ಜಿಯಲ್ಲಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿದೆ.

ಇದನ್ನೂ ಓದಿ: ಭ್ರಷ್ಟ ಉದ್ಯಮಿಗಳ 10 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ: ಮೋದಿ ವಿರುದ್ಧ ಬಿಜೆಪಿ ಸಂಸದ ವರುಣ್ ಕಿಡಿ 

“ಸೂಕ್ಷ್ಮ ಮತ್ತು ಸ್ಥೂಲ ಮಟ್ಟದಲ್ಲಿ ಫಲಿತಾಂಶದ ಪರಿಣಾಮಗಳು ಮತ್ತು ಸಾಮಾಜ ಕಲ್ಯಾಣದ ಪ್ರಮಾಣವನ್ನು ಪರಿಗಣಿಸದೆ ಕೇಂದ್ರ ಹಾಗೂ ರಾಜ್ಯ ಶಾಸಕಾಂಗವು ಯಾವುದೇ ಯೋಜನೆ ಅಥವಾ ಕಾರ್ಯವನ್ನು ‘ಉಚಿತ ಕೊಡುಗೆ’ ಎಂದು ವರ್ಗೀಕರಿಸಲು ಗೌರವಾನ್ವಿತ ನ್ಯಾಯಾಲಯಕ್ಕೆ ಯಾವುದೇ ನಿರ್ಬಂಧಿತ ವಿಧಾನವನ್ನು ಹೊಂದಲು ಸಾಧ್ಯವಿಲ್ಲ” ಎಂದು ಡಿಎಂಕೆ ವಾದಿಸಿದೆ.

ಕಲ್ಯಾಣ ಯೋಜನೆಗಳನ್ನು ಸಂವಿಧಾನದ 38 ನೇ ವಿಧಿಯ ಅಡಿಯಲ್ಲಿ ಸಾಮಾಜಿಕ ಸುವ್ಯವಸ್ಥೆ ಮತ್ತು ಆರ್ಥಿಕ ನ್ಯಾಯವನ್ನು ಭದ್ರಪಡಿಸುವ ಉದ್ದೇಶದಿಂದ ‘ಆದಾಯ, ಸ್ಥಾನಮಾನ, ಸೌಲಭ್ಯಗಳು ಮತ್ತು ಅವಕಾಶಗಳಲ್ಲಿನ ಅಸಮಾನತೆಗಳನ್ನು ಕಡಿಮೆ ಮಾಡಲು’ ಉಚಿತ ಸೇವೆಯನ್ನು ಪರಿಚಯಿಸಲಾಗಿದೆ ಎಂದು ಡಿಎಂಕೆ ಅರ್ಜಿಯಲ್ಲಿ ತಿಳಿಸಲಾಗಿದೆ.

“ಯಾವುದೇ ಕಾರಣಕ್ಕೂ ಇದನ್ನು ‘ಉಚಿತ ಕೊಡುಗೆ’ ಎಂದು ಅರ್ಥೈಸಲು ಸಾಧ್ಯವಿಲ್ಲ” ಎಂದು ಡಿಎಂಕೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಲಾಗಿದೆ.

ಈ ಹಿಂದೆ ನಡೆದ ವಿಚಾರಣೆಯೊಂದರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠವು, ಉಚಿತ ಕೊಡುಗೆಗಳನ್ನು ಒದಗಿಸುವುದು ಗಂಭೀರ ಆರ್ಥಿಕ ಸಮಸ್ಯೆಯಾಗಿದ್ದು, ಚುನಾವಣಾ ಸಮಯದಲ್ಲಿ ಘೋಷಿಸಿದುವ “ಉಚಿತ ಬಜೆಟ್” ಸಾಮಾನ್ಯ ಬಜೆಟ್‌ಗಿಂತ ಹೆಚ್ಚಾಗಿರುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ: ಉಚಿತ ಬಸ್‌ ಪಾಸ್‌ – ದಿಲ್ಲಿ ಮಹಿಳೆಯರು ದಿಲ್‌ ಖುಷ್‌.. : ಮುಂದಿನ ಕೊಡುಗೆ ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರಿಗೆ  

ಈ ವಿಚಾರದಲ್ಲಿ ಮಾರ್ಗಸೂಚಿ ರೂಪಿಸುವಂತೆ ಚುನಾವಣಾ ಆಯೋಗಕ್ಕೆ ಪೀಠ ಸೂಚಿಸಿತ್ತು. ಆದರೆ ಯಾವುದೇ ಕಾನೂನುಗಳು ಇಲ್ಲದೆ ಇರುವುದರಿಂದ ಅಧಿಕಾರಕ್ಕೆ ಬಂದರೆ ಉಚಿತ ಕೊಡುಗೆಗಳನ್ನು ನೀಡುವ ರಾಜಕೀಯ ಪಕ್ಷಗಳ ಭರವಸೆಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಪ್ರತಿಕ್ರಿಯಿಸಿತ್ತ೮.

ಅರವಿಂದ್ ಕೇಜ್ರಿವಾಲ್ ಅವರ ಎಎಪಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಡಿಎಂಕೆಯಂತೆಯೇ ವಾದ ಮಂಡಿಸಿದೆ. ಅರ್ಹ ಮತ್ತು ಹಿಂದುಳಿದ ಜನಸಾಮಾನ್ಯರ ಸಾಮಾಜಿಕ-ಆರ್ಥಿಕ ಕಲ್ಯಾಣಕ್ಕಾಗಿ ಯೋಜನೆಗಳನ್ನು “ಉಚಿತ ಕೊಡುಗೆ” ಎಂದು ವಿವರಿಸಲು ಸಾಧ್ಯವಿಲ್ಲ ಎಂದು ಎಎಪಿ ತನ್ನ ಅರ್ಜಿಯಲ್ಲಿ ಪ್ರತಿಪಾದಿಸಿದೆ. ಅರ್ಜಿದಾರರಾದ ಅಶ್ವಿನಿ ಉಪಾಧ್ಯಾಯ ಅವರು ಕಾನೂನು ವಿಧಾನಗಳ ಮೂಲಕ ರಾಜಕೀಯ ಕಾರ್ಯಸೂಚಿಯನ್ನು ಮುಚ್ಚಿಡಲು ಪ್ರಯತ್ನಿಸುತ್ತಿದ್ದಾರೆ ಎಂದು ಅದು ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...