Homeಮುಖಪುಟಬಿಜೆಪಿ ಉದ್ಯಮಿಗಳ ಸಾಲ ಮನ್ನಾ ಮಾಡುವುದನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಿ: ಸುಪ್ರೀಂಗೆ ತಮಿಳುನಾಡು...

ಬಿಜೆಪಿ ಉದ್ಯಮಿಗಳ ಸಾಲ ಮನ್ನಾ ಮಾಡುವುದನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಿ: ಸುಪ್ರೀಂಗೆ ತಮಿಳುನಾಡು ಸಿಎಂ ಸ್ಟಾಲಿನ್ ಅರ್ಜಿ

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆ ನೀಡುವ ಭರವಸೆಯನ್ನು ಪ್ರಶ್ನಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ

- Advertisement -
- Advertisement -

ಉಚಿತ ಯೋಜನೆಗಳ ಕುರಿತು ನಡೆಯುತ್ತಿರುವ ಪ್ರಕರಣದ ವಿಚಾರದಲ್ಲಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆಯು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ‘ಉಚಿತ ಕೊಡುಗೆ’ ಎಂಬ ಪದದ ವ್ಯಾಪ್ತಿ ತುಂಬಾ ವಿಸ್ತಾರವಾಗಿದ್ದು, ‘ಇದರ ಬಗ್ಗೆ ಪರಿಗಣಿಸಬೇಕಾದ ಅಂಶಗಳು ಬಹಳ ಇವೆ’ ಎಂದು ವಾದಿಸಿದೆ. ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅವರು ಸರ್ಕಾರಗಳ ಉಚಿತ ಕೊಡುಗೆಗಳ ಭರವಸೆಗಳನ್ನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಭರವಸೆಯನ್ನು ಪ್ರಶ್ನಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ನಡೆಸುತ್ತಿದೆ. ಈ ರೀತಿಯ ಸಂಪ್ರದಾಯವು ರಾಜ್ಯವನ್ನು ಆರ್ಥಿಕವಾಗಿ ನಾಶಪಡಿಸುತ್ತದೆ ಎಂದು ಬಿಜೆಪಿ ಪ್ರತಿಪಾದಿಸಿದೆ. ತಮಿಳುನಾಡು ಸರ್ಕಾರ ಮಾತ್ರವಲ್ಲದೆ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಕೂಡಾ ತಾನು ಆಳುವ ರಾಜ್ಯಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರನ್ನು ಒದಗಿಸುವ ಭರವಸೆ ನೀಡಿ, ಅಧಿಕಾರಕ್ಕೆ ಬಂದ ಕೂಡಲೇ ಅವುಗಳನ್ನು ಈಡೇರಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮಿಳುನಾಡು ಚುನಾವಣೆಯ ಸಮಯದಲ್ಲಿ ಸಾಂಪ್ರದಾಯಿಕವಾಗಿ ಎಲ್ಲಾ ಪಕ್ಷಗಳೂ ಉಚಿತ ಯೋಜನೆಗಳ ಭರವಸೆಯನ್ನು ನೀಡುತ್ತದೆ. ಅಲ್ಲದೆ ಚುನಾವಣೆಗೂ ಮುನ್ನ ಕೂಡಾ ಜನರಿಗೆ ಬಟ್ಟೆ, ಆಹಾರ, ಗೃಹೋಪಯೋಗಿ ವಸ್ತುಗಳನ್ನು ವಿತರಿಸಲಾಗಿದ್ದು, ಕೆಲವೊಮ್ಮೆ ನೀತಿ ಸಂಹಿತೆ ಉಲ್ಲಂಘಿಸಲಾಗಿತ್ತು.

ಇದನ್ನೂ ಓದಿ: ’ಉಚಿತ ಕೊಡುಗೆ’ ಒಂದು ರೋಗವೆ? ಸುಪ್ರೀಂ ಕೋರ್ಟಿನ ವಿಚಾರಣೆ ಮತ್ತು ಬಡ ಭಾರತದ ಪ್ರಜಾಪ್ರಭುತ್ವ

ಚುನಾವಣೆಯ ನಂತರ, ನಂತರದ ಸರ್ಕಾರಗಳು ಆಹಾರ ಮತ್ತು ಇತರ ವಸ್ತುಗಳ ಮೇಲೆ ಭಾರಿ ಸಬ್ಸಿಡಿಗಳನ್ನು ನೀಡಿವೆ. ಪ್ರತಿಪಕ್ಷ ಎಐಎಡಿಎಂಕೆಯ ದಿವಂಗತ ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ‘ಅಮ್ಮ ಕ್ಯಾಂಟೀನ್’ಗಳಿಗೆ ಹೆಸರುವಾಸಿಯಾಗಿದ್ದರು. ಈ ಕ್ಯಾಂಟೀನ್‌ಗಳಲ್ಲಿ ಕೆಲವೇ ರೂಪಾಯಿಗಳಲ್ಲಿ ಊಟವನ್ನು ಮಾಡಬಹುದಿತ್ತು.

ಪ್ರಕರಣದ ಕುರಿತು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪಕ್ಷವಾದ ಡಿಎಂಕೆಯು ರಾಜ್ಯ ಸರ್ಕಾರ ಪರಿಚಯಿಸಿದ ಕಲ್ಯಾಣ ಯೋಜನೆಯನ್ನು ಮಾತ್ರ ಉಚಿತ ಕೊಡುಗೆ ಎಂದು ವರ್ಗೀಕರಿಸಲು ಸಾಧ್ಯವಿಲ್ಲ ಎಂದು ವಾದಿಸಿದೆ.

“ಕೇಂದ್ರದ ಆಡಳಿತರೂಢ ಪಕ್ಷವೂ ವಿದೇಶಿ ಕಂಪನಿಗಳಿಗೆ ತೆರಿಗೆ ರಜೆ ನೀಡುವುದು, ಪ್ರಭಾವಿ ಕೈಗಾರಿಕೋದ್ಯಮಿಗಳ ಸುಸ್ತಿ ಸಾಲ ಮನ್ನಾ ಮಾಡುವುದು, ತಮಗೆ ಬೇಕಾದ ಕಂಪನಿಗಳಿಗೆ ಬಹುಮುಖ್ಯವಾದ ಗುತ್ತಿಗೆಗಳನ್ನು ನೀಡುವುದು ಇತ್ಯಾದಿಗಳನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಬೇಕು” ಎಂದು ಡಿಎಂಕೆ ಅರ್ಜಿಯಲ್ಲಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿದೆ.

ಇದನ್ನೂ ಓದಿ: ಭ್ರಷ್ಟ ಉದ್ಯಮಿಗಳ 10 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ: ಮೋದಿ ವಿರುದ್ಧ ಬಿಜೆಪಿ ಸಂಸದ ವರುಣ್ ಕಿಡಿ 

“ಸೂಕ್ಷ್ಮ ಮತ್ತು ಸ್ಥೂಲ ಮಟ್ಟದಲ್ಲಿ ಫಲಿತಾಂಶದ ಪರಿಣಾಮಗಳು ಮತ್ತು ಸಾಮಾಜ ಕಲ್ಯಾಣದ ಪ್ರಮಾಣವನ್ನು ಪರಿಗಣಿಸದೆ ಕೇಂದ್ರ ಹಾಗೂ ರಾಜ್ಯ ಶಾಸಕಾಂಗವು ಯಾವುದೇ ಯೋಜನೆ ಅಥವಾ ಕಾರ್ಯವನ್ನು ‘ಉಚಿತ ಕೊಡುಗೆ’ ಎಂದು ವರ್ಗೀಕರಿಸಲು ಗೌರವಾನ್ವಿತ ನ್ಯಾಯಾಲಯಕ್ಕೆ ಯಾವುದೇ ನಿರ್ಬಂಧಿತ ವಿಧಾನವನ್ನು ಹೊಂದಲು ಸಾಧ್ಯವಿಲ್ಲ” ಎಂದು ಡಿಎಂಕೆ ವಾದಿಸಿದೆ.

ಕಲ್ಯಾಣ ಯೋಜನೆಗಳನ್ನು ಸಂವಿಧಾನದ 38 ನೇ ವಿಧಿಯ ಅಡಿಯಲ್ಲಿ ಸಾಮಾಜಿಕ ಸುವ್ಯವಸ್ಥೆ ಮತ್ತು ಆರ್ಥಿಕ ನ್ಯಾಯವನ್ನು ಭದ್ರಪಡಿಸುವ ಉದ್ದೇಶದಿಂದ ‘ಆದಾಯ, ಸ್ಥಾನಮಾನ, ಸೌಲಭ್ಯಗಳು ಮತ್ತು ಅವಕಾಶಗಳಲ್ಲಿನ ಅಸಮಾನತೆಗಳನ್ನು ಕಡಿಮೆ ಮಾಡಲು’ ಉಚಿತ ಸೇವೆಯನ್ನು ಪರಿಚಯಿಸಲಾಗಿದೆ ಎಂದು ಡಿಎಂಕೆ ಅರ್ಜಿಯಲ್ಲಿ ತಿಳಿಸಲಾಗಿದೆ.

“ಯಾವುದೇ ಕಾರಣಕ್ಕೂ ಇದನ್ನು ‘ಉಚಿತ ಕೊಡುಗೆ’ ಎಂದು ಅರ್ಥೈಸಲು ಸಾಧ್ಯವಿಲ್ಲ” ಎಂದು ಡಿಎಂಕೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಲಾಗಿದೆ.

ಈ ಹಿಂದೆ ನಡೆದ ವಿಚಾರಣೆಯೊಂದರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠವು, ಉಚಿತ ಕೊಡುಗೆಗಳನ್ನು ಒದಗಿಸುವುದು ಗಂಭೀರ ಆರ್ಥಿಕ ಸಮಸ್ಯೆಯಾಗಿದ್ದು, ಚುನಾವಣಾ ಸಮಯದಲ್ಲಿ ಘೋಷಿಸಿದುವ “ಉಚಿತ ಬಜೆಟ್” ಸಾಮಾನ್ಯ ಬಜೆಟ್‌ಗಿಂತ ಹೆಚ್ಚಾಗಿರುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ: ಉಚಿತ ಬಸ್‌ ಪಾಸ್‌ – ದಿಲ್ಲಿ ಮಹಿಳೆಯರು ದಿಲ್‌ ಖುಷ್‌.. : ಮುಂದಿನ ಕೊಡುಗೆ ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರಿಗೆ  

ಈ ವಿಚಾರದಲ್ಲಿ ಮಾರ್ಗಸೂಚಿ ರೂಪಿಸುವಂತೆ ಚುನಾವಣಾ ಆಯೋಗಕ್ಕೆ ಪೀಠ ಸೂಚಿಸಿತ್ತು. ಆದರೆ ಯಾವುದೇ ಕಾನೂನುಗಳು ಇಲ್ಲದೆ ಇರುವುದರಿಂದ ಅಧಿಕಾರಕ್ಕೆ ಬಂದರೆ ಉಚಿತ ಕೊಡುಗೆಗಳನ್ನು ನೀಡುವ ರಾಜಕೀಯ ಪಕ್ಷಗಳ ಭರವಸೆಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಪ್ರತಿಕ್ರಿಯಿಸಿತ್ತ೮.

ಅರವಿಂದ್ ಕೇಜ್ರಿವಾಲ್ ಅವರ ಎಎಪಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಡಿಎಂಕೆಯಂತೆಯೇ ವಾದ ಮಂಡಿಸಿದೆ. ಅರ್ಹ ಮತ್ತು ಹಿಂದುಳಿದ ಜನಸಾಮಾನ್ಯರ ಸಾಮಾಜಿಕ-ಆರ್ಥಿಕ ಕಲ್ಯಾಣಕ್ಕಾಗಿ ಯೋಜನೆಗಳನ್ನು “ಉಚಿತ ಕೊಡುಗೆ” ಎಂದು ವಿವರಿಸಲು ಸಾಧ್ಯವಿಲ್ಲ ಎಂದು ಎಎಪಿ ತನ್ನ ಅರ್ಜಿಯಲ್ಲಿ ಪ್ರತಿಪಾದಿಸಿದೆ. ಅರ್ಜಿದಾರರಾದ ಅಶ್ವಿನಿ ಉಪಾಧ್ಯಾಯ ಅವರು ಕಾನೂನು ವಿಧಾನಗಳ ಮೂಲಕ ರಾಜಕೀಯ ಕಾರ್ಯಸೂಚಿಯನ್ನು ಮುಚ್ಚಿಡಲು ಪ್ರಯತ್ನಿಸುತ್ತಿದ್ದಾರೆ ಎಂದು ಅದು ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...