Homeಮುಖಪುಟಬಿಜೆಪಿ ಉದ್ಯಮಿಗಳ ಸಾಲ ಮನ್ನಾ ಮಾಡುವುದನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಿ: ಸುಪ್ರೀಂಗೆ ತಮಿಳುನಾಡು...

ಬಿಜೆಪಿ ಉದ್ಯಮಿಗಳ ಸಾಲ ಮನ್ನಾ ಮಾಡುವುದನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಿ: ಸುಪ್ರೀಂಗೆ ತಮಿಳುನಾಡು ಸಿಎಂ ಸ್ಟಾಲಿನ್ ಅರ್ಜಿ

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆ ನೀಡುವ ಭರವಸೆಯನ್ನು ಪ್ರಶ್ನಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ

- Advertisement -
- Advertisement -

ಉಚಿತ ಯೋಜನೆಗಳ ಕುರಿತು ನಡೆಯುತ್ತಿರುವ ಪ್ರಕರಣದ ವಿಚಾರದಲ್ಲಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆಯು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ‘ಉಚಿತ ಕೊಡುಗೆ’ ಎಂಬ ಪದದ ವ್ಯಾಪ್ತಿ ತುಂಬಾ ವಿಸ್ತಾರವಾಗಿದ್ದು, ‘ಇದರ ಬಗ್ಗೆ ಪರಿಗಣಿಸಬೇಕಾದ ಅಂಶಗಳು ಬಹಳ ಇವೆ’ ಎಂದು ವಾದಿಸಿದೆ. ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅವರು ಸರ್ಕಾರಗಳ ಉಚಿತ ಕೊಡುಗೆಗಳ ಭರವಸೆಗಳನ್ನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಭರವಸೆಯನ್ನು ಪ್ರಶ್ನಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ನಡೆಸುತ್ತಿದೆ. ಈ ರೀತಿಯ ಸಂಪ್ರದಾಯವು ರಾಜ್ಯವನ್ನು ಆರ್ಥಿಕವಾಗಿ ನಾಶಪಡಿಸುತ್ತದೆ ಎಂದು ಬಿಜೆಪಿ ಪ್ರತಿಪಾದಿಸಿದೆ. ತಮಿಳುನಾಡು ಸರ್ಕಾರ ಮಾತ್ರವಲ್ಲದೆ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಕೂಡಾ ತಾನು ಆಳುವ ರಾಜ್ಯಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರನ್ನು ಒದಗಿಸುವ ಭರವಸೆ ನೀಡಿ, ಅಧಿಕಾರಕ್ಕೆ ಬಂದ ಕೂಡಲೇ ಅವುಗಳನ್ನು ಈಡೇರಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮಿಳುನಾಡು ಚುನಾವಣೆಯ ಸಮಯದಲ್ಲಿ ಸಾಂಪ್ರದಾಯಿಕವಾಗಿ ಎಲ್ಲಾ ಪಕ್ಷಗಳೂ ಉಚಿತ ಯೋಜನೆಗಳ ಭರವಸೆಯನ್ನು ನೀಡುತ್ತದೆ. ಅಲ್ಲದೆ ಚುನಾವಣೆಗೂ ಮುನ್ನ ಕೂಡಾ ಜನರಿಗೆ ಬಟ್ಟೆ, ಆಹಾರ, ಗೃಹೋಪಯೋಗಿ ವಸ್ತುಗಳನ್ನು ವಿತರಿಸಲಾಗಿದ್ದು, ಕೆಲವೊಮ್ಮೆ ನೀತಿ ಸಂಹಿತೆ ಉಲ್ಲಂಘಿಸಲಾಗಿತ್ತು.

ಇದನ್ನೂ ಓದಿ: ’ಉಚಿತ ಕೊಡುಗೆ’ ಒಂದು ರೋಗವೆ? ಸುಪ್ರೀಂ ಕೋರ್ಟಿನ ವಿಚಾರಣೆ ಮತ್ತು ಬಡ ಭಾರತದ ಪ್ರಜಾಪ್ರಭುತ್ವ

ಚುನಾವಣೆಯ ನಂತರ, ನಂತರದ ಸರ್ಕಾರಗಳು ಆಹಾರ ಮತ್ತು ಇತರ ವಸ್ತುಗಳ ಮೇಲೆ ಭಾರಿ ಸಬ್ಸಿಡಿಗಳನ್ನು ನೀಡಿವೆ. ಪ್ರತಿಪಕ್ಷ ಎಐಎಡಿಎಂಕೆಯ ದಿವಂಗತ ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ‘ಅಮ್ಮ ಕ್ಯಾಂಟೀನ್’ಗಳಿಗೆ ಹೆಸರುವಾಸಿಯಾಗಿದ್ದರು. ಈ ಕ್ಯಾಂಟೀನ್‌ಗಳಲ್ಲಿ ಕೆಲವೇ ರೂಪಾಯಿಗಳಲ್ಲಿ ಊಟವನ್ನು ಮಾಡಬಹುದಿತ್ತು.

ಪ್ರಕರಣದ ಕುರಿತು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪಕ್ಷವಾದ ಡಿಎಂಕೆಯು ರಾಜ್ಯ ಸರ್ಕಾರ ಪರಿಚಯಿಸಿದ ಕಲ್ಯಾಣ ಯೋಜನೆಯನ್ನು ಮಾತ್ರ ಉಚಿತ ಕೊಡುಗೆ ಎಂದು ವರ್ಗೀಕರಿಸಲು ಸಾಧ್ಯವಿಲ್ಲ ಎಂದು ವಾದಿಸಿದೆ.

“ಕೇಂದ್ರದ ಆಡಳಿತರೂಢ ಪಕ್ಷವೂ ವಿದೇಶಿ ಕಂಪನಿಗಳಿಗೆ ತೆರಿಗೆ ರಜೆ ನೀಡುವುದು, ಪ್ರಭಾವಿ ಕೈಗಾರಿಕೋದ್ಯಮಿಗಳ ಸುಸ್ತಿ ಸಾಲ ಮನ್ನಾ ಮಾಡುವುದು, ತಮಗೆ ಬೇಕಾದ ಕಂಪನಿಗಳಿಗೆ ಬಹುಮುಖ್ಯವಾದ ಗುತ್ತಿಗೆಗಳನ್ನು ನೀಡುವುದು ಇತ್ಯಾದಿಗಳನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಬೇಕು” ಎಂದು ಡಿಎಂಕೆ ಅರ್ಜಿಯಲ್ಲಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿದೆ.

ಇದನ್ನೂ ಓದಿ: ಭ್ರಷ್ಟ ಉದ್ಯಮಿಗಳ 10 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ: ಮೋದಿ ವಿರುದ್ಧ ಬಿಜೆಪಿ ಸಂಸದ ವರುಣ್ ಕಿಡಿ 

“ಸೂಕ್ಷ್ಮ ಮತ್ತು ಸ್ಥೂಲ ಮಟ್ಟದಲ್ಲಿ ಫಲಿತಾಂಶದ ಪರಿಣಾಮಗಳು ಮತ್ತು ಸಾಮಾಜ ಕಲ್ಯಾಣದ ಪ್ರಮಾಣವನ್ನು ಪರಿಗಣಿಸದೆ ಕೇಂದ್ರ ಹಾಗೂ ರಾಜ್ಯ ಶಾಸಕಾಂಗವು ಯಾವುದೇ ಯೋಜನೆ ಅಥವಾ ಕಾರ್ಯವನ್ನು ‘ಉಚಿತ ಕೊಡುಗೆ’ ಎಂದು ವರ್ಗೀಕರಿಸಲು ಗೌರವಾನ್ವಿತ ನ್ಯಾಯಾಲಯಕ್ಕೆ ಯಾವುದೇ ನಿರ್ಬಂಧಿತ ವಿಧಾನವನ್ನು ಹೊಂದಲು ಸಾಧ್ಯವಿಲ್ಲ” ಎಂದು ಡಿಎಂಕೆ ವಾದಿಸಿದೆ.

ಕಲ್ಯಾಣ ಯೋಜನೆಗಳನ್ನು ಸಂವಿಧಾನದ 38 ನೇ ವಿಧಿಯ ಅಡಿಯಲ್ಲಿ ಸಾಮಾಜಿಕ ಸುವ್ಯವಸ್ಥೆ ಮತ್ತು ಆರ್ಥಿಕ ನ್ಯಾಯವನ್ನು ಭದ್ರಪಡಿಸುವ ಉದ್ದೇಶದಿಂದ ‘ಆದಾಯ, ಸ್ಥಾನಮಾನ, ಸೌಲಭ್ಯಗಳು ಮತ್ತು ಅವಕಾಶಗಳಲ್ಲಿನ ಅಸಮಾನತೆಗಳನ್ನು ಕಡಿಮೆ ಮಾಡಲು’ ಉಚಿತ ಸೇವೆಯನ್ನು ಪರಿಚಯಿಸಲಾಗಿದೆ ಎಂದು ಡಿಎಂಕೆ ಅರ್ಜಿಯಲ್ಲಿ ತಿಳಿಸಲಾಗಿದೆ.

“ಯಾವುದೇ ಕಾರಣಕ್ಕೂ ಇದನ್ನು ‘ಉಚಿತ ಕೊಡುಗೆ’ ಎಂದು ಅರ್ಥೈಸಲು ಸಾಧ್ಯವಿಲ್ಲ” ಎಂದು ಡಿಎಂಕೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಲಾಗಿದೆ.

ಈ ಹಿಂದೆ ನಡೆದ ವಿಚಾರಣೆಯೊಂದರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠವು, ಉಚಿತ ಕೊಡುಗೆಗಳನ್ನು ಒದಗಿಸುವುದು ಗಂಭೀರ ಆರ್ಥಿಕ ಸಮಸ್ಯೆಯಾಗಿದ್ದು, ಚುನಾವಣಾ ಸಮಯದಲ್ಲಿ ಘೋಷಿಸಿದುವ “ಉಚಿತ ಬಜೆಟ್” ಸಾಮಾನ್ಯ ಬಜೆಟ್‌ಗಿಂತ ಹೆಚ್ಚಾಗಿರುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ: ಉಚಿತ ಬಸ್‌ ಪಾಸ್‌ – ದಿಲ್ಲಿ ಮಹಿಳೆಯರು ದಿಲ್‌ ಖುಷ್‌.. : ಮುಂದಿನ ಕೊಡುಗೆ ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರಿಗೆ  

ಈ ವಿಚಾರದಲ್ಲಿ ಮಾರ್ಗಸೂಚಿ ರೂಪಿಸುವಂತೆ ಚುನಾವಣಾ ಆಯೋಗಕ್ಕೆ ಪೀಠ ಸೂಚಿಸಿತ್ತು. ಆದರೆ ಯಾವುದೇ ಕಾನೂನುಗಳು ಇಲ್ಲದೆ ಇರುವುದರಿಂದ ಅಧಿಕಾರಕ್ಕೆ ಬಂದರೆ ಉಚಿತ ಕೊಡುಗೆಗಳನ್ನು ನೀಡುವ ರಾಜಕೀಯ ಪಕ್ಷಗಳ ಭರವಸೆಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಪ್ರತಿಕ್ರಿಯಿಸಿತ್ತ೮.

ಅರವಿಂದ್ ಕೇಜ್ರಿವಾಲ್ ಅವರ ಎಎಪಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಡಿಎಂಕೆಯಂತೆಯೇ ವಾದ ಮಂಡಿಸಿದೆ. ಅರ್ಹ ಮತ್ತು ಹಿಂದುಳಿದ ಜನಸಾಮಾನ್ಯರ ಸಾಮಾಜಿಕ-ಆರ್ಥಿಕ ಕಲ್ಯಾಣಕ್ಕಾಗಿ ಯೋಜನೆಗಳನ್ನು “ಉಚಿತ ಕೊಡುಗೆ” ಎಂದು ವಿವರಿಸಲು ಸಾಧ್ಯವಿಲ್ಲ ಎಂದು ಎಎಪಿ ತನ್ನ ಅರ್ಜಿಯಲ್ಲಿ ಪ್ರತಿಪಾದಿಸಿದೆ. ಅರ್ಜಿದಾರರಾದ ಅಶ್ವಿನಿ ಉಪಾಧ್ಯಾಯ ಅವರು ಕಾನೂನು ವಿಧಾನಗಳ ಮೂಲಕ ರಾಜಕೀಯ ಕಾರ್ಯಸೂಚಿಯನ್ನು ಮುಚ್ಚಿಡಲು ಪ್ರಯತ್ನಿಸುತ್ತಿದ್ದಾರೆ ಎಂದು ಅದು ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....