Homeಕರ್ನಾಟಕರೈತರ ಬೇಡಿಕೆ ಪರಿಗಣಿಸಿ ದೇವನಹಳ್ಳಿ ಭೂಸ್ವಾಧೀನ ಕೈಬಿಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ

ರೈತರ ಬೇಡಿಕೆ ಪರಿಗಣಿಸಿ ದೇವನಹಳ್ಳಿ ಭೂಸ್ವಾಧೀನ ಕೈಬಿಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ರೈತರ ಬೇಡಿಕೆ ಪರಿಗಣಿಸಿ ದೇವನಹಳ್ಳಿ ತಾಲೂಕಿನ 13 ಹಳ್ಳಿಗಳ ಭೂ ಸ್ವಾಧೀನವನ್ನು ಸಂಪೂರ್ಣವಾಗಿ ಕೈ ಬಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳವಾರ ರೈತರು, ಹೋರಾಟಗಾರರ ಜೊತೆ ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಸರ್ಕಾರ ಭೂ ಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಿದೆ ಎಂದರು.

ಜಮೀನು ಕೊಡುವ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ಪರಿಹಾರವನ್ನು ಸರ್ಕಾರ ನೀಡಲಿದೆ. ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಮುಂದುವರೆಸಿಕೊಂಡು ಹೋಗಬಹುದಾಗಿದೆ ಎಂದು ಹೇಳಿದರು.

ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ ಎಂದರು.

1,777 ಎಕರೆ ಜಮೀನು ಸ್ವಾಧೀನಪಡಿಸಿ, ಅಲ್ಲಿ ಏರೋಸ್ಪೇಸ್ ಪಾರ್ಕ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶವಾಗಿತ್ತು. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು ಎಂದು ತಿಳಿಸಿದರು.

ರಾಜ್ಯದಲ್ಲಿ ಭೂ ಸ್ವಾಧೀನದ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ದೇವನಹಳ್ಳಿಯದ್ದು ಫಲವತ್ತಾದ, ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಆಗ್ರಹಿಸಿದ್ದರು ಎಂದರು.

ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆ ಉತ್ತೇಜನ ನೀಡುವುದು ಅಗತ್ಯವಿದೆ. ಯಾವುದೇ ಕಾರಣಕ್ಕೆ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ, ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ ಎಂದು ಸಿಎಂ ಹೇಳಿದರು.

ಸಚಿವರಾದ ಎಂ.ಬಿ ಪಾಟೀಲ್, ಕೆ.ಎಚ್ ಮುನಿಯಪ್ಪ, ಹೆಚ್.ಕೆ ಪಾಟೀಲ್, ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ, ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ, ರೈತ ಪ್ರತಿನಿಧಿಗಳು ಮತ್ತಿತರರು ಸಿಎಂ ಪತ್ರಿಕಾಗೋಷ್ಠಿ ವೇಳೆ ಉಪಸ್ಥಿತರಿದ್ದರು.

BREAKING NEWS: ಚನ್ನರಾಯಪಟ್ಟಣ ರೈತರಿಗೆ ಐತಿಹಾಸಿಕ ಗೆಲುವು; ಕೆಐಎಡಿಬಿ ಅಂತಿಮ ಅಧಿಸೂಚನೆ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...