Homeಮುಖಪುಟಮುನವ್ವರ್ ಫಾರೂಕಿ ಹತ್ಯೆಗೆ ಸಂಚು: ಇಬ್ಬರು ಗ್ಯಾಂಗ್‌ಸ್ಟರ್‌ಗಳ ಬಂಧನ

ಮುನವ್ವರ್ ಫಾರೂಕಿ ಹತ್ಯೆಗೆ ಸಂಚು: ಇಬ್ಬರು ಗ್ಯಾಂಗ್‌ಸ್ಟರ್‌ಗಳ ಬಂಧನ

- Advertisement -
- Advertisement -

ಸ್ಟಾಂಡ್‌-ಅಪ್ ಕಾಮಿಡಿಯನ್ ಮುನವ್ವರ್ ಫಾರೂಕಿ ಕೊಲೆಗೆ ಸಂಚು ರೂಪಿಸಿದ್ದ ಗೋಲ್ಡಿ ಬ್ರಾರ್ ಗುಂಪಿನ ಇಬ್ಬರು ಸದಸ್ಯರನ್ನು ಗುರುವಾರ (ಅ.2) ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನವದೆಹಲಿಯ ಜೈತ್ಪುರ-ಕಾಳಿಂದಿ ಕುಂಜ್ ರಸ್ತೆಯಲ್ಲಿ ನಡೆದ ಗುಂಡಿನ ಚಕಮಕಿಯ ಬಳಿಕ, ಹರಿಯಾಣದ ಪಾಣಿಪತ್ ನಿವಾಸಿ ರಾಹುಲ್ ಮತ್ತು ಭಿವಾನಿಯ ಸಾಹಿಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದರು. ಇದಕ್ಕೆ ಪ್ರತಿಯಾಗಿ ಪೊಲೀಸರು ಅವರ ಕಾಲುಗಳಿಗೆ ಗುಂಡಿಕ್ಕಿ ವಶಕ್ಕೆ ಪಡೆದಿದ್ದಾರೆ. ನಂತರ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಸಂಚರಿಸುತ್ತಿದ್ದ ಬೈಕ್ ಮತ್ತು ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ.

ಅಧಿಕಾರಿಗಳ ಪ್ರಕಾರ, ಇಬ್ಬರೂ ಕೆನಡಾ ಮೂಲದ ಗೋಲ್ಡಿ ಬ್ರಾರ್ ಮತ್ತು ತಲೆಮರೆಸಿಕೊಂಡಿರುವ ಕ್ರಿಮಿನಲ್ ವೀರೇಂದ್ರ ಚರಣ್ ಜೊತೆ ಸಂಬಂಧ ಹೊಂದಿರುವ ವಿದೇಶಿ ಮೂಲದ ಗ್ಯಾಂಗ್‌ಸ್ಟರ್ ರೋಹಿತ್ ಗೋದಾರನಿಂದ ಸೂಚನೆಗಳನ್ನು ಪಡೆಯುತ್ತಿದ್ದರು.

ದೆಹಲಿ-ಎನ್‌ಸಿಆರ್‌ನಲ್ಲಿ ಉದ್ದೇಶಿತ ಹತ್ಯೆಗಳನ್ನು ನಡೆಸಲು ಬಂಧಿತ ಇಬ್ಬರನ್ನು ಸಜ್ಜುಗೊಳಿಸಲಾಗಿತ್ತು. ಫಾರೂಕಿಯ ಚಲನವಲನಗಳನ್ನು ಪತ್ತೆಹಚ್ಚಲು ಮುಂಬೈ ಮತ್ತು ಬೆಂಗಳೂರಿನಲ್ಲಿ ಕಣ್ಣಿಡಲಾಗಿತ್ತು.

“ಸೆಲೆಬ್ರಿಟಿ ವಲಯದಲ್ಲಿ ತಮ್ಮ ಪ್ರಭಾವವನ್ನು ವಿಸ್ತರಿಸಲು ಬಂಧಿತರ ಗ್ಯಾಂಗ್ ಪ್ರಯತ್ನಿಸುತ್ತಿದೆ. ಮುನವ್ವರ್ ಫಾರೂಕಿ ಅವರ ದೀರ್ಘಕಾಲದ ಗುರಿಗಳಲ್ಲಿ ಒಬ್ಬರು. ನಟಿ ದಿಶಾ ಪಟಾನಿ ಅವರ ಬರೇಲಿ ನಿವಾಸದ ಹೊರಗೆ ಇತ್ತೀಚೆಗೆ ನಡೆದ ಗುಂಡಿನ ದಾಳಿ ಸೇರಿದಂತೆ ಇತರ ಸೆಲೆಬ್ರಿಟಿಗಳ ಮೇಲೆ ದಾಳಿ ಮಾಡಲು ಈ ಗ್ಯಾಂಗ್ ಈ ಹಿಂದೆ ಸಂಚು ರೂಪಿಸಿತ್ತು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

2024ರ ಡಿಸೆಂಬರ್‌ನಲ್ಲಿ ಹರಿಯಾಣದ ಯಮುನಾನಗರದಲ್ಲಿ ನಡೆದ ಸಂಚಲನ ಮೂಡಿಸಿದ್ದ ತ್ರಿವಳಿ ಕೊಲೆ ಪ್ರಕರಣದಲ್ಲಿ ಇಂದು ಗುಂಡೇಟಿನಿಂದ ಗಾಯಗೊಂಡಿರುವ ರಾಹುಲ್ ಬೇಕಾಗಿದ್ದ. ಪ್ರಾಥಮಿಕ ವಿಚಾರಣೆಯಲ್ಲಿ ಆ ಕೊಲೆ ಅಪರಾಧದಲ್ಲಿ ಭಾಗಿಯಾಗಿರುವ ಗುರುತಿಸಲಾಗದ ದಾಳಿಕೋರಲ್ಲಿ ಆತನೂ ಒಬ್ಬನೆಂದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ರಾಜಸ್ಥಾನದ ಬಿಕನೇರ್‌ನಲ್ಲಿ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಈತನನ್ನು ಬಂಧಿಸಲಾಗಿತ್ತು, ಅಲ್ಲಿಯೂ ಈತನನ್ನು ಇದೇ ರೀತಿಯ ಅಪಾಯಕಾರಿ ಕೆಲಸಕ್ಕೆ ಕಳುಹಿಸಲಾಗಿತ್ತು.

ಸಾಹಿಲ್ ವಿರುದ್ಧ ಭಿವಾನಿ ಮತ್ತು ಸಿರ್ಸಾ ನ್ಯಾಯಾಲಯಗಳಲ್ಲಿ ಹಲವಾರು ಆರ್ಥಿಕ ದುರುಪಯೋಗ ಪ್ರಕರಣಗಳು ಬಾಕಿ ಇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈ ಮತ್ತು ಬೆಂಗಳೂರಿನಲ್ಲಿರುವ ಪ್ರಮುಖ ಸಾಮಾಜಿಕ ಮಾಧ್ಯಮ ಪ್ರಭಾವಿಗಳನ್ನು ಗುರಿಯಾಗಿಸಿಕೊಳ್ಳುವ ಅವರ ಹಿಂದಿನ ಯೋಜನೆ ವಿದೇಶದಲ್ಲಿರುವ ಹ್ಯಾಂಡ್ಲರ್‌ಗಳೊಂದಿಗಿನ ಸಂವಹನ ಅಂತರದಿಂದಾಗಿ ಕಾರ್ಯರೂಪಕ್ಕೆ ಬರದ ಕಾರಣ, ಇಬ್ಬರನ್ನೂ ಇತ್ತೀಚೆಗೆ ದೆಹಲಿಗೆ ಕಳುಹಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗ್ಯಾಂಗ್‌ನ ಇತರ ಸದಸ್ಯರು ಮತ್ತು ಅವರ ಗುರಿಗಳನ್ನು ಗುರುತಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

2024ರಲ್ಲಿ ‘ಬಿಗ್ ಬಾಸ್’ ರಿಯಾಲಿಟಿ ಶೋ ಗೆದ್ದ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ 14 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್ಸ್ ಹೊಂದಿರುವ ಮುನವ್ವರ್ ಫಾರೂಕಿ ಮೇಲೆ ಹಲವಾರು ಗ್ಯಾಂಗ್‌ಗಳು ನಿಗಾ ಇಟ್ಟಿವೆ ಎಂದು ಪೊಲೀಸರು ವಿವರಿಸಿದ್ದಾರೆ.

2023ರಲ್ಲಿ ದೇಶದಾದ್ಯಂತ 24,678 ರೈಲ್ವೆ ಅಪಘಾತಗಳು, 21,803 ಜನರು ಸಾವು: ಎನ್‌ಸಿಆರ್‌ಬಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...