Homeಮುಖಪುಟಮುನವ್ವರ್ ಫಾರೂಕಿ ಹತ್ಯೆಗೆ ಸಂಚು: ಇಬ್ಬರು ಗ್ಯಾಂಗ್‌ಸ್ಟರ್‌ಗಳ ಬಂಧನ

ಮುನವ್ವರ್ ಫಾರೂಕಿ ಹತ್ಯೆಗೆ ಸಂಚು: ಇಬ್ಬರು ಗ್ಯಾಂಗ್‌ಸ್ಟರ್‌ಗಳ ಬಂಧನ

- Advertisement -
- Advertisement -

ಸ್ಟಾಂಡ್‌-ಅಪ್ ಕಾಮಿಡಿಯನ್ ಮುನವ್ವರ್ ಫಾರೂಕಿ ಕೊಲೆಗೆ ಸಂಚು ರೂಪಿಸಿದ್ದ ಗೋಲ್ಡಿ ಬ್ರಾರ್ ಗುಂಪಿನ ಇಬ್ಬರು ಸದಸ್ಯರನ್ನು ಗುರುವಾರ (ಅ.2) ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನವದೆಹಲಿಯ ಜೈತ್ಪುರ-ಕಾಳಿಂದಿ ಕುಂಜ್ ರಸ್ತೆಯಲ್ಲಿ ನಡೆದ ಗುಂಡಿನ ಚಕಮಕಿಯ ಬಳಿಕ, ಹರಿಯಾಣದ ಪಾಣಿಪತ್ ನಿವಾಸಿ ರಾಹುಲ್ ಮತ್ತು ಭಿವಾನಿಯ ಸಾಹಿಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದರು. ಇದಕ್ಕೆ ಪ್ರತಿಯಾಗಿ ಪೊಲೀಸರು ಅವರ ಕಾಲುಗಳಿಗೆ ಗುಂಡಿಕ್ಕಿ ವಶಕ್ಕೆ ಪಡೆದಿದ್ದಾರೆ. ನಂತರ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಸಂಚರಿಸುತ್ತಿದ್ದ ಬೈಕ್ ಮತ್ತು ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ.

ಅಧಿಕಾರಿಗಳ ಪ್ರಕಾರ, ಇಬ್ಬರೂ ಕೆನಡಾ ಮೂಲದ ಗೋಲ್ಡಿ ಬ್ರಾರ್ ಮತ್ತು ತಲೆಮರೆಸಿಕೊಂಡಿರುವ ಕ್ರಿಮಿನಲ್ ವೀರೇಂದ್ರ ಚರಣ್ ಜೊತೆ ಸಂಬಂಧ ಹೊಂದಿರುವ ವಿದೇಶಿ ಮೂಲದ ಗ್ಯಾಂಗ್‌ಸ್ಟರ್ ರೋಹಿತ್ ಗೋದಾರನಿಂದ ಸೂಚನೆಗಳನ್ನು ಪಡೆಯುತ್ತಿದ್ದರು.

ದೆಹಲಿ-ಎನ್‌ಸಿಆರ್‌ನಲ್ಲಿ ಉದ್ದೇಶಿತ ಹತ್ಯೆಗಳನ್ನು ನಡೆಸಲು ಬಂಧಿತ ಇಬ್ಬರನ್ನು ಸಜ್ಜುಗೊಳಿಸಲಾಗಿತ್ತು. ಫಾರೂಕಿಯ ಚಲನವಲನಗಳನ್ನು ಪತ್ತೆಹಚ್ಚಲು ಮುಂಬೈ ಮತ್ತು ಬೆಂಗಳೂರಿನಲ್ಲಿ ಕಣ್ಣಿಡಲಾಗಿತ್ತು.

“ಸೆಲೆಬ್ರಿಟಿ ವಲಯದಲ್ಲಿ ತಮ್ಮ ಪ್ರಭಾವವನ್ನು ವಿಸ್ತರಿಸಲು ಬಂಧಿತರ ಗ್ಯಾಂಗ್ ಪ್ರಯತ್ನಿಸುತ್ತಿದೆ. ಮುನವ್ವರ್ ಫಾರೂಕಿ ಅವರ ದೀರ್ಘಕಾಲದ ಗುರಿಗಳಲ್ಲಿ ಒಬ್ಬರು. ನಟಿ ದಿಶಾ ಪಟಾನಿ ಅವರ ಬರೇಲಿ ನಿವಾಸದ ಹೊರಗೆ ಇತ್ತೀಚೆಗೆ ನಡೆದ ಗುಂಡಿನ ದಾಳಿ ಸೇರಿದಂತೆ ಇತರ ಸೆಲೆಬ್ರಿಟಿಗಳ ಮೇಲೆ ದಾಳಿ ಮಾಡಲು ಈ ಗ್ಯಾಂಗ್ ಈ ಹಿಂದೆ ಸಂಚು ರೂಪಿಸಿತ್ತು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

2024ರ ಡಿಸೆಂಬರ್‌ನಲ್ಲಿ ಹರಿಯಾಣದ ಯಮುನಾನಗರದಲ್ಲಿ ನಡೆದ ಸಂಚಲನ ಮೂಡಿಸಿದ್ದ ತ್ರಿವಳಿ ಕೊಲೆ ಪ್ರಕರಣದಲ್ಲಿ ಇಂದು ಗುಂಡೇಟಿನಿಂದ ಗಾಯಗೊಂಡಿರುವ ರಾಹುಲ್ ಬೇಕಾಗಿದ್ದ. ಪ್ರಾಥಮಿಕ ವಿಚಾರಣೆಯಲ್ಲಿ ಆ ಕೊಲೆ ಅಪರಾಧದಲ್ಲಿ ಭಾಗಿಯಾಗಿರುವ ಗುರುತಿಸಲಾಗದ ದಾಳಿಕೋರಲ್ಲಿ ಆತನೂ ಒಬ್ಬನೆಂದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ರಾಜಸ್ಥಾನದ ಬಿಕನೇರ್‌ನಲ್ಲಿ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಈತನನ್ನು ಬಂಧಿಸಲಾಗಿತ್ತು, ಅಲ್ಲಿಯೂ ಈತನನ್ನು ಇದೇ ರೀತಿಯ ಅಪಾಯಕಾರಿ ಕೆಲಸಕ್ಕೆ ಕಳುಹಿಸಲಾಗಿತ್ತು.

ಸಾಹಿಲ್ ವಿರುದ್ಧ ಭಿವಾನಿ ಮತ್ತು ಸಿರ್ಸಾ ನ್ಯಾಯಾಲಯಗಳಲ್ಲಿ ಹಲವಾರು ಆರ್ಥಿಕ ದುರುಪಯೋಗ ಪ್ರಕರಣಗಳು ಬಾಕಿ ಇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈ ಮತ್ತು ಬೆಂಗಳೂರಿನಲ್ಲಿರುವ ಪ್ರಮುಖ ಸಾಮಾಜಿಕ ಮಾಧ್ಯಮ ಪ್ರಭಾವಿಗಳನ್ನು ಗುರಿಯಾಗಿಸಿಕೊಳ್ಳುವ ಅವರ ಹಿಂದಿನ ಯೋಜನೆ ವಿದೇಶದಲ್ಲಿರುವ ಹ್ಯಾಂಡ್ಲರ್‌ಗಳೊಂದಿಗಿನ ಸಂವಹನ ಅಂತರದಿಂದಾಗಿ ಕಾರ್ಯರೂಪಕ್ಕೆ ಬರದ ಕಾರಣ, ಇಬ್ಬರನ್ನೂ ಇತ್ತೀಚೆಗೆ ದೆಹಲಿಗೆ ಕಳುಹಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗ್ಯಾಂಗ್‌ನ ಇತರ ಸದಸ್ಯರು ಮತ್ತು ಅವರ ಗುರಿಗಳನ್ನು ಗುರುತಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

2024ರಲ್ಲಿ ‘ಬಿಗ್ ಬಾಸ್’ ರಿಯಾಲಿಟಿ ಶೋ ಗೆದ್ದ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ 14 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್ಸ್ ಹೊಂದಿರುವ ಮುನವ್ವರ್ ಫಾರೂಕಿ ಮೇಲೆ ಹಲವಾರು ಗ್ಯಾಂಗ್‌ಗಳು ನಿಗಾ ಇಟ್ಟಿವೆ ಎಂದು ಪೊಲೀಸರು ವಿವರಿಸಿದ್ದಾರೆ.

2023ರಲ್ಲಿ ದೇಶದಾದ್ಯಂತ 24,678 ರೈಲ್ವೆ ಅಪಘಾತಗಳು, 21,803 ಜನರು ಸಾವು: ಎನ್‌ಸಿಆರ್‌ಬಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...