Homeಮುಖಪುಟಸಂಚುಕೋರ ದೀಪ್ ಸಿಧುವಿನ ವಿಡಿಯೋ ಅಪ್‌ಲೋಡ್ ಮಾಡುತ್ತಿರುವುದು ಅವನ ಫಾರಿನ್ ಗೆಳತಿ!

ಸಂಚುಕೋರ ದೀಪ್ ಸಿಧುವಿನ ವಿಡಿಯೋ ಅಪ್‌ಲೋಡ್ ಮಾಡುತ್ತಿರುವುದು ಅವನ ಫಾರಿನ್ ಗೆಳತಿ!

- Advertisement -
- Advertisement -

ಪಂಜಾಬಿ ನಟ, ಕೆಂಪುಕೋಟೆ ಹಿಂಸಾಚಾರದ ಸಂಚುಕೋರ ಎಂದೇ ಕುಖ್ಯಾತನಾಗಿ ತಲೆ ಮರೆಸಿಕೊಂಡಿರುವ ದೀಪ್ ಸಿಧು, ಆ ಘಟನೆಯ ನಂತರ ಏನೇನೋ ಹೇಳಿಕೊಂಡು ವಿಡಿಯೋಗಳನ್ನು ಅಪ್‌ಲೋಡ್ ಮಾಡುತ್ತಿದ್ದಾನೆ. ಈಗಲೂ ಆತನನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸಾಧ್ಯವಾಗಿಲ್ಲ!

“ಜನವರಿ 26 ರ ಘಟನೆ ನಂತರ ರೈತರ ಪ್ರತಿಭಟನೆಯ ಬಗ್ಗೆ ಸ್ಪಷ್ಟೀಕರಣಗಳನ್ನು ನೀಡುವ ಸಿಧು ವಿಡಿಯೊಗಳನ್ನು ವಿದೇಶದಲ್ಲಿರುವ ಅವನ ಗೆಳತಿ ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡುತ್ತಿದ್ದಾರೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಪ್ರಕರಣದಲ್ಲಿ ಆತನ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನವನ್ನು ದೆಹಲಿ ಪೊಲೀಸರು ಘೋಷಿಸಿದ್ದಾರೆ.

“ದೀಪ್ ಸಿಧುನ ಫೇಸ್ಬುಕ್ ಖಾತೆಯನ್ನು ಅವರ ಮಹಿಳಾ ಸ್ನೇಹಿತರೊಬ್ಬರು ನಿರ್ವಹಿಸುತ್ತಿದ್ದಾರೆ. ಅವನು ಆಕೆಗೆ ವೀಡಿಯೊಗಳನ್ನು ಕಳುಹಿಸುತ್ತಿದ್ದಾನೆ ಮತ್ತು ಆ ಗೆಳತಿ ಅವನ್ನು ವಿದೇಶದಿಂದ ಅಪ್ಲೋಡ್ ಮಾಡುತ್ತಾರೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಚಕ್ಕಾ ಜಾಮ್‌ಗೆ ಬೆಂಬಲ: ಹತ್ತಾರು ಕಾರ್ಮಿಕ ಮುಖಂಡರನ್ನು ಬಂಧಿಸುತ್ತಿರುವ ದೆಹಲಿ ಪೊಲೀಸರು

ದೀಪ್ ಸಿಧು ಬಿಜೆಪಿಯ ನಾಯಕರೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದ ಎಂಬುದಕ್ಕೆ ಹಲವಾರು ಫೋಟೊಗಳು ಸಾಕ್ಷಿಗಳಾಗಿವೆ. ಯಾವ ಬಿಜೆಪಿ ನಾಯಕನೂ ಈ ಫೋಟೊಗಳ ಬಗ್ಗೆ ಮಾತನಾಡಿಲ್ಲ. ದೀಪ್ ಸಿಧು ಮೋದಿ ಮತ್ತು ಶಾ ಅವರೊಂದಿಗೆ ಅತ್ಯಂತ ಸಲುಗೆಯಿಂದ ಇರುವ ಫೋಟೊಗಳು ಜ.26 ರ ಮಧ್ಯಾಹ್ನದಿಂದಲೇ ವೈರಲ್ ಆಗಿವೆ.

ದೆಹಲಿಯಲ್ಲಿ ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರದ ಪ್ರಮುಖ ಸಂಚುಕೋರ ದೀಪ್ ಸಿಧು ಎಂದು ಸ್ವತಂತ್ರ ಮಾಧ್ಯಮಗಳು ಆರೋಪಿಸಿದ ನಂತರ, ದೆಹಲಿ ಪೊಲೀಸರ ಅಪರಾಧ ವಿಭಾಗದ ಹಲವಾರು ತಂಡಗಳು ಸಿಧುಗೆ ನೋಟಿಸ್ ಕಳಿಸಿ, ಅವನನ್ನು ಹುಡುಕುತ್ತಿವೆ.

“ನನ್ನನ್ನು ಗದ್ದಾರ್ (ದೇಶದ್ರೋಹಿ) ಎಂದು ಹಣೆಪಟ್ಟಿ ಕಟ್ಟಲಾಗಿದ್ದರೆ, ಎಲ್ಲಾ ರೈತ ಮುಖಂಡರು ಗದ್ದಾರ್‌ಗಳು” ಎಂದು ದೀಪ್ ತನ್ನ ವೀಡಿಯೊವೊಂದರಲ್ಲಿ ಆರೋಪಿಸಿದ್ದ.

ಇದನ್ನೂ ಓದಿ: ಸ್ವಾರ್ಥ, ಹೇಡಿತನದಲ್ಲಿ ಚಿತ್ರನಟರನ್ನು ಮೀರಿಸಿದ ಕ್ರಿಕೆಟಿಗರು: ನಟ ಚೇತನ್ ಆಕ್ರೋಶ

ಏತನ್ಮಧ್ಯೆ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಜಗ್ಬೀರ್ ಸಿಂಗ್, ಬೂಟಾ ಸಿಂಗ್, ಸುಖದೇವ್ ಸಿಂಗ್ ಮತ್ತು ಇಕ್ಬಾಲ್ ಸಿಂಗ್ ಎಂಬ ನಾಲ್ವರನ್ನು ಬಂಧಿಸಲು ನೆರವಾಗುವ ಮಾಹಿತಿ ನೀಡಿದವರಿಗೆ ಪೊಲೀಸರು 50 ಸಾವಿರ ರೂ. ಬಹುಮಾನವನ್ನು ಘೋಷಿಸಿದ್ದಾರೆ.

ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸಿದ ಟ್ರಾಕ್ಟರ್ ರ್‍ಯಾಲಿ ಸಂದರ್ಭದಲ್ಲಿ ದೀಪ್ ಸಿಧು ನೇತೃತ್ವದ ಗುಂಪು ಕೆಲವು ರೈತರನ್ನು ದಾರಿ ತಪ್ಪಿಸಿ ಕೆಂಪುಕೋಟೆ ಪ್ರವೇಶ ಮಾಡುವಂತೆ ಮಾಡಿತ್ತು. ಅಲ್ಲಿ ಸಿಧು ಗ್ಯಾಂಗ್ ಸಿಖ್ ಧ್ವಜ ಹಾರಿಸಿದ್ದರು. ಆ ಸಂದರ್ಭದಲ್ಲಿ ರೈತರು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿ ಹಿಂಸಾಚಾರ ನಡೆದಿತ್ತು.

ಈ ಕೃತ್ಯ ತಮ್ಮ ಆಂದೋಲನವನ್ನು ಹಳಿ ತಪ್ಪಿಸುವ ಪಿತೂರಿ ಎಂದು ರೈತ ನಾಯಕರು ಆರೋಪಿಸಿದ್ದರು ಮತ್ತು ಸಿಧು “ಪಿತೂರಿ”ಯನ್ನು ಮುನ್ನಡೆಸಿದ ಸಂಚುಕೋರ ಎಂದೂ ಆರೋಪಿಸಿದ್ದರು.


ಇದನ್ನೂ ಓದಿ: ಗ್ರಾ.ಪಂ: ಮಹಿಳಾ ಸದಸ್ಯರಿಗೆ ಬೆದರಿಕೆಯೊಡ್ಡಿ ಅಧ್ಯಕ್ಷ ಸ್ಥಾನ ಕಸಿದುಕೊಂಡ ಸದಸ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...