Homeಮುಖಪುಟಸಂಚುಕೋರ ದೀಪ್ ಸಿಧುವಿನ ವಿಡಿಯೋ ಅಪ್‌ಲೋಡ್ ಮಾಡುತ್ತಿರುವುದು ಅವನ ಫಾರಿನ್ ಗೆಳತಿ!

ಸಂಚುಕೋರ ದೀಪ್ ಸಿಧುವಿನ ವಿಡಿಯೋ ಅಪ್‌ಲೋಡ್ ಮಾಡುತ್ತಿರುವುದು ಅವನ ಫಾರಿನ್ ಗೆಳತಿ!

- Advertisement -
- Advertisement -

ಪಂಜಾಬಿ ನಟ, ಕೆಂಪುಕೋಟೆ ಹಿಂಸಾಚಾರದ ಸಂಚುಕೋರ ಎಂದೇ ಕುಖ್ಯಾತನಾಗಿ ತಲೆ ಮರೆಸಿಕೊಂಡಿರುವ ದೀಪ್ ಸಿಧು, ಆ ಘಟನೆಯ ನಂತರ ಏನೇನೋ ಹೇಳಿಕೊಂಡು ವಿಡಿಯೋಗಳನ್ನು ಅಪ್‌ಲೋಡ್ ಮಾಡುತ್ತಿದ್ದಾನೆ. ಈಗಲೂ ಆತನನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸಾಧ್ಯವಾಗಿಲ್ಲ!

“ಜನವರಿ 26 ರ ಘಟನೆ ನಂತರ ರೈತರ ಪ್ರತಿಭಟನೆಯ ಬಗ್ಗೆ ಸ್ಪಷ್ಟೀಕರಣಗಳನ್ನು ನೀಡುವ ಸಿಧು ವಿಡಿಯೊಗಳನ್ನು ವಿದೇಶದಲ್ಲಿರುವ ಅವನ ಗೆಳತಿ ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡುತ್ತಿದ್ದಾರೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಪ್ರಕರಣದಲ್ಲಿ ಆತನ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನವನ್ನು ದೆಹಲಿ ಪೊಲೀಸರು ಘೋಷಿಸಿದ್ದಾರೆ.

“ದೀಪ್ ಸಿಧುನ ಫೇಸ್ಬುಕ್ ಖಾತೆಯನ್ನು ಅವರ ಮಹಿಳಾ ಸ್ನೇಹಿತರೊಬ್ಬರು ನಿರ್ವಹಿಸುತ್ತಿದ್ದಾರೆ. ಅವನು ಆಕೆಗೆ ವೀಡಿಯೊಗಳನ್ನು ಕಳುಹಿಸುತ್ತಿದ್ದಾನೆ ಮತ್ತು ಆ ಗೆಳತಿ ಅವನ್ನು ವಿದೇಶದಿಂದ ಅಪ್ಲೋಡ್ ಮಾಡುತ್ತಾರೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಚಕ್ಕಾ ಜಾಮ್‌ಗೆ ಬೆಂಬಲ: ಹತ್ತಾರು ಕಾರ್ಮಿಕ ಮುಖಂಡರನ್ನು ಬಂಧಿಸುತ್ತಿರುವ ದೆಹಲಿ ಪೊಲೀಸರು

ದೀಪ್ ಸಿಧು ಬಿಜೆಪಿಯ ನಾಯಕರೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದ ಎಂಬುದಕ್ಕೆ ಹಲವಾರು ಫೋಟೊಗಳು ಸಾಕ್ಷಿಗಳಾಗಿವೆ. ಯಾವ ಬಿಜೆಪಿ ನಾಯಕನೂ ಈ ಫೋಟೊಗಳ ಬಗ್ಗೆ ಮಾತನಾಡಿಲ್ಲ. ದೀಪ್ ಸಿಧು ಮೋದಿ ಮತ್ತು ಶಾ ಅವರೊಂದಿಗೆ ಅತ್ಯಂತ ಸಲುಗೆಯಿಂದ ಇರುವ ಫೋಟೊಗಳು ಜ.26 ರ ಮಧ್ಯಾಹ್ನದಿಂದಲೇ ವೈರಲ್ ಆಗಿವೆ.

ದೆಹಲಿಯಲ್ಲಿ ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರದ ಪ್ರಮುಖ ಸಂಚುಕೋರ ದೀಪ್ ಸಿಧು ಎಂದು ಸ್ವತಂತ್ರ ಮಾಧ್ಯಮಗಳು ಆರೋಪಿಸಿದ ನಂತರ, ದೆಹಲಿ ಪೊಲೀಸರ ಅಪರಾಧ ವಿಭಾಗದ ಹಲವಾರು ತಂಡಗಳು ಸಿಧುಗೆ ನೋಟಿಸ್ ಕಳಿಸಿ, ಅವನನ್ನು ಹುಡುಕುತ್ತಿವೆ.

“ನನ್ನನ್ನು ಗದ್ದಾರ್ (ದೇಶದ್ರೋಹಿ) ಎಂದು ಹಣೆಪಟ್ಟಿ ಕಟ್ಟಲಾಗಿದ್ದರೆ, ಎಲ್ಲಾ ರೈತ ಮುಖಂಡರು ಗದ್ದಾರ್‌ಗಳು” ಎಂದು ದೀಪ್ ತನ್ನ ವೀಡಿಯೊವೊಂದರಲ್ಲಿ ಆರೋಪಿಸಿದ್ದ.

ಇದನ್ನೂ ಓದಿ: ಸ್ವಾರ್ಥ, ಹೇಡಿತನದಲ್ಲಿ ಚಿತ್ರನಟರನ್ನು ಮೀರಿಸಿದ ಕ್ರಿಕೆಟಿಗರು: ನಟ ಚೇತನ್ ಆಕ್ರೋಶ

ಏತನ್ಮಧ್ಯೆ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಜಗ್ಬೀರ್ ಸಿಂಗ್, ಬೂಟಾ ಸಿಂಗ್, ಸುಖದೇವ್ ಸಿಂಗ್ ಮತ್ತು ಇಕ್ಬಾಲ್ ಸಿಂಗ್ ಎಂಬ ನಾಲ್ವರನ್ನು ಬಂಧಿಸಲು ನೆರವಾಗುವ ಮಾಹಿತಿ ನೀಡಿದವರಿಗೆ ಪೊಲೀಸರು 50 ಸಾವಿರ ರೂ. ಬಹುಮಾನವನ್ನು ಘೋಷಿಸಿದ್ದಾರೆ.

ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸಿದ ಟ್ರಾಕ್ಟರ್ ರ್‍ಯಾಲಿ ಸಂದರ್ಭದಲ್ಲಿ ದೀಪ್ ಸಿಧು ನೇತೃತ್ವದ ಗುಂಪು ಕೆಲವು ರೈತರನ್ನು ದಾರಿ ತಪ್ಪಿಸಿ ಕೆಂಪುಕೋಟೆ ಪ್ರವೇಶ ಮಾಡುವಂತೆ ಮಾಡಿತ್ತು. ಅಲ್ಲಿ ಸಿಧು ಗ್ಯಾಂಗ್ ಸಿಖ್ ಧ್ವಜ ಹಾರಿಸಿದ್ದರು. ಆ ಸಂದರ್ಭದಲ್ಲಿ ರೈತರು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿ ಹಿಂಸಾಚಾರ ನಡೆದಿತ್ತು.

ಈ ಕೃತ್ಯ ತಮ್ಮ ಆಂದೋಲನವನ್ನು ಹಳಿ ತಪ್ಪಿಸುವ ಪಿತೂರಿ ಎಂದು ರೈತ ನಾಯಕರು ಆರೋಪಿಸಿದ್ದರು ಮತ್ತು ಸಿಧು “ಪಿತೂರಿ”ಯನ್ನು ಮುನ್ನಡೆಸಿದ ಸಂಚುಕೋರ ಎಂದೂ ಆರೋಪಿಸಿದ್ದರು.


ಇದನ್ನೂ ಓದಿ: ಗ್ರಾ.ಪಂ: ಮಹಿಳಾ ಸದಸ್ಯರಿಗೆ ಬೆದರಿಕೆಯೊಡ್ಡಿ ಅಧ್ಯಕ್ಷ ಸ್ಥಾನ ಕಸಿದುಕೊಂಡ ಸದಸ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...