Homeಮುಖಪುಟಸಂಚುಕೋರ ದೀಪ್ ಸಿಧುವಿನ ವಿಡಿಯೋ ಅಪ್‌ಲೋಡ್ ಮಾಡುತ್ತಿರುವುದು ಅವನ ಫಾರಿನ್ ಗೆಳತಿ!

ಸಂಚುಕೋರ ದೀಪ್ ಸಿಧುವಿನ ವಿಡಿಯೋ ಅಪ್‌ಲೋಡ್ ಮಾಡುತ್ತಿರುವುದು ಅವನ ಫಾರಿನ್ ಗೆಳತಿ!

- Advertisement -
- Advertisement -

ಪಂಜಾಬಿ ನಟ, ಕೆಂಪುಕೋಟೆ ಹಿಂಸಾಚಾರದ ಸಂಚುಕೋರ ಎಂದೇ ಕುಖ್ಯಾತನಾಗಿ ತಲೆ ಮರೆಸಿಕೊಂಡಿರುವ ದೀಪ್ ಸಿಧು, ಆ ಘಟನೆಯ ನಂತರ ಏನೇನೋ ಹೇಳಿಕೊಂಡು ವಿಡಿಯೋಗಳನ್ನು ಅಪ್‌ಲೋಡ್ ಮಾಡುತ್ತಿದ್ದಾನೆ. ಈಗಲೂ ಆತನನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸಾಧ್ಯವಾಗಿಲ್ಲ!

“ಜನವರಿ 26 ರ ಘಟನೆ ನಂತರ ರೈತರ ಪ್ರತಿಭಟನೆಯ ಬಗ್ಗೆ ಸ್ಪಷ್ಟೀಕರಣಗಳನ್ನು ನೀಡುವ ಸಿಧು ವಿಡಿಯೊಗಳನ್ನು ವಿದೇಶದಲ್ಲಿರುವ ಅವನ ಗೆಳತಿ ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡುತ್ತಿದ್ದಾರೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಪ್ರಕರಣದಲ್ಲಿ ಆತನ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನವನ್ನು ದೆಹಲಿ ಪೊಲೀಸರು ಘೋಷಿಸಿದ್ದಾರೆ.

“ದೀಪ್ ಸಿಧುನ ಫೇಸ್ಬುಕ್ ಖಾತೆಯನ್ನು ಅವರ ಮಹಿಳಾ ಸ್ನೇಹಿತರೊಬ್ಬರು ನಿರ್ವಹಿಸುತ್ತಿದ್ದಾರೆ. ಅವನು ಆಕೆಗೆ ವೀಡಿಯೊಗಳನ್ನು ಕಳುಹಿಸುತ್ತಿದ್ದಾನೆ ಮತ್ತು ಆ ಗೆಳತಿ ಅವನ್ನು ವಿದೇಶದಿಂದ ಅಪ್ಲೋಡ್ ಮಾಡುತ್ತಾರೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಚಕ್ಕಾ ಜಾಮ್‌ಗೆ ಬೆಂಬಲ: ಹತ್ತಾರು ಕಾರ್ಮಿಕ ಮುಖಂಡರನ್ನು ಬಂಧಿಸುತ್ತಿರುವ ದೆಹಲಿ ಪೊಲೀಸರು

ದೀಪ್ ಸಿಧು ಬಿಜೆಪಿಯ ನಾಯಕರೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದ ಎಂಬುದಕ್ಕೆ ಹಲವಾರು ಫೋಟೊಗಳು ಸಾಕ್ಷಿಗಳಾಗಿವೆ. ಯಾವ ಬಿಜೆಪಿ ನಾಯಕನೂ ಈ ಫೋಟೊಗಳ ಬಗ್ಗೆ ಮಾತನಾಡಿಲ್ಲ. ದೀಪ್ ಸಿಧು ಮೋದಿ ಮತ್ತು ಶಾ ಅವರೊಂದಿಗೆ ಅತ್ಯಂತ ಸಲುಗೆಯಿಂದ ಇರುವ ಫೋಟೊಗಳು ಜ.26 ರ ಮಧ್ಯಾಹ್ನದಿಂದಲೇ ವೈರಲ್ ಆಗಿವೆ.

ದೆಹಲಿಯಲ್ಲಿ ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರದ ಪ್ರಮುಖ ಸಂಚುಕೋರ ದೀಪ್ ಸಿಧು ಎಂದು ಸ್ವತಂತ್ರ ಮಾಧ್ಯಮಗಳು ಆರೋಪಿಸಿದ ನಂತರ, ದೆಹಲಿ ಪೊಲೀಸರ ಅಪರಾಧ ವಿಭಾಗದ ಹಲವಾರು ತಂಡಗಳು ಸಿಧುಗೆ ನೋಟಿಸ್ ಕಳಿಸಿ, ಅವನನ್ನು ಹುಡುಕುತ್ತಿವೆ.

“ನನ್ನನ್ನು ಗದ್ದಾರ್ (ದೇಶದ್ರೋಹಿ) ಎಂದು ಹಣೆಪಟ್ಟಿ ಕಟ್ಟಲಾಗಿದ್ದರೆ, ಎಲ್ಲಾ ರೈತ ಮುಖಂಡರು ಗದ್ದಾರ್‌ಗಳು” ಎಂದು ದೀಪ್ ತನ್ನ ವೀಡಿಯೊವೊಂದರಲ್ಲಿ ಆರೋಪಿಸಿದ್ದ.

ಇದನ್ನೂ ಓದಿ: ಸ್ವಾರ್ಥ, ಹೇಡಿತನದಲ್ಲಿ ಚಿತ್ರನಟರನ್ನು ಮೀರಿಸಿದ ಕ್ರಿಕೆಟಿಗರು: ನಟ ಚೇತನ್ ಆಕ್ರೋಶ

ಏತನ್ಮಧ್ಯೆ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಜಗ್ಬೀರ್ ಸಿಂಗ್, ಬೂಟಾ ಸಿಂಗ್, ಸುಖದೇವ್ ಸಿಂಗ್ ಮತ್ತು ಇಕ್ಬಾಲ್ ಸಿಂಗ್ ಎಂಬ ನಾಲ್ವರನ್ನು ಬಂಧಿಸಲು ನೆರವಾಗುವ ಮಾಹಿತಿ ನೀಡಿದವರಿಗೆ ಪೊಲೀಸರು 50 ಸಾವಿರ ರೂ. ಬಹುಮಾನವನ್ನು ಘೋಷಿಸಿದ್ದಾರೆ.

ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸಿದ ಟ್ರಾಕ್ಟರ್ ರ್‍ಯಾಲಿ ಸಂದರ್ಭದಲ್ಲಿ ದೀಪ್ ಸಿಧು ನೇತೃತ್ವದ ಗುಂಪು ಕೆಲವು ರೈತರನ್ನು ದಾರಿ ತಪ್ಪಿಸಿ ಕೆಂಪುಕೋಟೆ ಪ್ರವೇಶ ಮಾಡುವಂತೆ ಮಾಡಿತ್ತು. ಅಲ್ಲಿ ಸಿಧು ಗ್ಯಾಂಗ್ ಸಿಖ್ ಧ್ವಜ ಹಾರಿಸಿದ್ದರು. ಆ ಸಂದರ್ಭದಲ್ಲಿ ರೈತರು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿ ಹಿಂಸಾಚಾರ ನಡೆದಿತ್ತು.

ಈ ಕೃತ್ಯ ತಮ್ಮ ಆಂದೋಲನವನ್ನು ಹಳಿ ತಪ್ಪಿಸುವ ಪಿತೂರಿ ಎಂದು ರೈತ ನಾಯಕರು ಆರೋಪಿಸಿದ್ದರು ಮತ್ತು ಸಿಧು “ಪಿತೂರಿ”ಯನ್ನು ಮುನ್ನಡೆಸಿದ ಸಂಚುಕೋರ ಎಂದೂ ಆರೋಪಿಸಿದ್ದರು.


ಇದನ್ನೂ ಓದಿ: ಗ್ರಾ.ಪಂ: ಮಹಿಳಾ ಸದಸ್ಯರಿಗೆ ಬೆದರಿಕೆಯೊಡ್ಡಿ ಅಧ್ಯಕ್ಷ ಸ್ಥಾನ ಕಸಿದುಕೊಂಡ ಸದಸ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...