Homeಮುಖಪುಟರಾಜಸ್ಥಾನ: ಶಿವರಾತ್ರಿ ಮೆರವಣಿಗೆ ವೇಳೆ ಪೊಲೀಸ್‌ ಪೇದೆಯ ಹತ್ಯೆ

ರಾಜಸ್ಥಾನ: ಶಿವರಾತ್ರಿ ಮೆರವಣಿಗೆ ವೇಳೆ ಪೊಲೀಸ್‌ ಪೇದೆಯ ಹತ್ಯೆ

- Advertisement -
- Advertisement -

ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಶಿವರಾತ್ರಿ ಮೆರವಣಿಗೆ ವೇಳೆ ಘರ್ಷಣೆ ನಡೆದಿದ್ದು, ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆಯೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.

ಸಿರೋಹಿ ಜಿಲ್ಲೆಯ ಸ್ವರೂಪಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಲೋಟಾನಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪೊಲೀಸ್ ಪೇದೆಯನ್ನು ಕೆಲವು ಅಪರಿಚಿತ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಮೃತ ಪೊಲೀಸ್‌ ಪೇದೆಯನ್ನು ನಾಗೌರ್ ಜಿಲ್ಲೆಯ ಗೋಟಾನ್ ನಿವಾಸಿ ನಿರಂಜನ್ ಸಿಂಗ್ ಎಂದು ಗುರುತಿಸಲಾಗಿದೆ.

ಘಟನೆಯ ಕುರಿತು ಮಾಹಿತಿಯನ್ನು ನೀಡಿದ ಪೊಲೀಸ್‌ ಅಧಿಕಾರಿ ಪಿಂಡ್ವಾರಾ ಜೇತು ಸಿಂಗ್, ಸಿರೋಹಿ ಜಿಲ್ಲೆಯ ಸ್ವರೂಪಗಂಜ್ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾದ ಕಾನ್‌ಸ್ಟೆಬಲ್ ಸಿಂಗ್, ಗ್ರಾಮದ ಸರ್ತಾನೇಶ್ವರ ಮಹಾದೇವ ದೇವಸ್ಥಾನದಲ್ಲಿ ಆಯೋಜಿಸಲಾದ ಮಹಾಶಿವರಾತ್ರಿ ಉತ್ಸವದ ಜಾತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಡರಾತ್ರಿಯಲ್ಲಿ ಆದಿವಾಸಿಗಳ ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದವು. ಕಾನ್ ಸ್ಟೇಬಲ್ ನಿರಂಜನ್ ಸಿಂಗ್ ಎರಡೂ ಕಡೆಯವರನ್ನು ಸಮಾಧಾನ ಪಡಿಸಲು ಯತ್ನಿಸುತ್ತಿದ್ದರು. ಇದೇ ವೇಳೆ ಕೆಲವು ದುಷ್ಕರ್ಮಿಗಳು ಚಾಕುವಿನಿಂದ ಕಾನ್‌ಸ್ಟೇಬಲ್‌ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎಂದು  ಹೇಳಿದ್ದಾರೆ.

ಕಾನ್ಸ್‌ಟೇಬಲ್‌ ಹತ್ಯೆಯ ಮಾಹಿತಿ ತಿಳಿದ ತಕ್ಷಣ ಎಸ್‌ಪಿ ಅನಿಲ್‌ ಕುಮಾರ್‌, ಪಿಂಡ್‌ವಾರಾ ಡಿವೈಎಸ್‌ಪಿ ಜೇತುಸಿಂಗ್‌ ಕರ್ನೋಟ್‌, ಪಿಂಡ್‌ವಾರಾ ಸಿಐ ಹಮೀರ್‌ಸಿಂಗ್‌ ಭಾಟಿ, ರೋಹಿಡಾ ಪೊಲೀಸ್‌ ಠಾಣಾಧಿಕಾರಿ ಜಿತೇಂದ್ರ ಸಿಂಗ್‌ ದೇವೊರಾ ಮತ್ತು ಸ್ವರೂಪಗಂಜ್‌ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. ಮೃತದೇಹವನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸಿ ಪ್ರಕರಣದ ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

ಘಟನೆಯ ನಂತರ ಲೋಟನಾ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆಯನ್ನು ಬೀಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್‌, ನಿರಂಜನ್ ಹಂತಕರನ್ನು ಕೂಡಲೇ ಬಂಧಿಸಬೇಕು ಮತ್ತು ಮೃತನ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನು ಓದಿ: ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ: ವಿಡಿಯೋ ಬಿಡುಗಡೆ ಮಾಡಿದ ಕೆನಡಾ ಸುದ್ದಿ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...