Homeಮುಖಪುಟಕ್ಷೇತ್ರ ಪುನರ್ವಿಂಗಡಣೆ ವಿವಾದ | ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾದರೆ ದಂಗೆ ನಡೆಯಲಿದೆ: ಸಿಎಂ ರೇವಂತ್ ರೆಡ್ಡಿ...

ಕ್ಷೇತ್ರ ಪುನರ್ವಿಂಗಡಣೆ ವಿವಾದ | ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾದರೆ ದಂಗೆ ನಡೆಯಲಿದೆ: ಸಿಎಂ ರೇವಂತ್ ರೆಡ್ಡಿ ಎಚ್ಚರಿಕೆ

- Advertisement -
- Advertisement -

ದೇಶದ ದಕ್ಷಿಣ ಭಾಗದಲ್ಲಿ ಪಕ್ಷಕ್ಕೆ ಹಿಡಿತವಿಲ್ಲದ ಕಾರಣ, ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಮೂಲಕ ದಕ್ಷಿಣ ರಾಜ್ಯಗಳನ್ನು ರಾಜಕೀಯವಾಗಿ ಮತ್ತು ಆರ್ಥಿಕವಾಗಿ ದುರ್ಬಲಗೊಳಿಸಲು ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಶುಕ್ರವಾರ ಆರೋಪಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಜನಸಂಖ್ಯಾ ಬೆಳವಣಿಗೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿದ್ದಕ್ಕಾಗಿ ದಕ್ಷಿಣ ರಾಜ್ಯಗಳನ್ನು ಶಿಕ್ಷಿಸುವುದು “ದಂಗೆ”ಗೆ ಕಾರಣವಾಗಲಿದೆ ಎಂದು ರೆಡ್ಡಿ ಎಚ್ಚರಿಸಿದ್ದಾರೆ. ಕ್ಷೇತ್ರ ಪುನರ್ವಿಂಗಡಣೆ ವಿವಾದ

“ತಮ್ಮ ಪ್ರಾತಿನಿಧ್ಯ ಕಡಿಮೆ ಇರುವ ರಾಜ್ಯಗಳು ಕೇಂದ್ರದಲ್ಲಿ ಪಾಲು ಹೊಂದಿರಬಾರದು ಎಂದು ಖಚಿತಪಡಿಸಿಕೊಳ್ಳುವುದು ಅವರ ಯೋಜನೆಯಾಗಿದೆ. ಅವರ ಪಿತೂರಿಯನ್ನು ವಿರೋಧಿಸಲಾಗುವುದು.” ಎಂದು ಸಿಎಂ ರೆಡ್ಡಿ ಹೇಳಿದ್ದಾರೆ.

ಕ್ಷೇತ್ರ ಪುನರ್ವಿಂಗಡಣೆ ಎಂದರೆ ಮತದಾರರ ಪ್ರಾದೇಶಿಕ ಗಡಿಗಳನ್ನು ಮರುರೂಪಿಸುವ ಪ್ರಕ್ರಿಯೆಯಾಗಿದೆ. ಸಂವಿಧಾನದ 82 ನೇ ವಿಧಿಯು ಪ್ರತಿ ಜನಗಣತಿ ಪೂರ್ಣಗೊಂಡ ನಂತರ, ಪ್ರತಿ ರಾಜ್ಯಕ್ಕೆ ಲೋಕಸಭಾ ಸ್ಥಾನಗಳ ಹಂಚಿಕೆಯನ್ನು ಅವುಗಳ ಜನಸಂಖ್ಯೆಯಲ್ಲಿನ ಬದಲಾವಣೆಗಳ ಆಧಾರದ ಮೇಲೆ ಸರಿಹೊಂದಿಸಬೇಕು ಎಂದು ಹೇಳುತ್ತದೆ. ಕ್ಷೇತ್ರ ಪುನರ್ವಿಂಗಡಣೆ ವಿವಾದ

ಪ್ರಸ್ತುತ ಲೋಕಸಭೆಯ ಸಂಯೋಜನೆಯು 1971 ರ ಜನಗಣತಿಯನ್ನು ಆಧರಿಸಿ ಮಾಡಲಾಗಿತ್ತು. 2026ರ ಜನಸಂಖ್ಯೆ ಆಧಾರಿತ ಕ್ಷೇತ್ರ ವಿಂಗಡಣೆಯು ಲೋಕಸಭೆಯಲ್ಲಿ ದೇಶದ ಉತ್ತರ ಮತ್ತು ಮಧ್ಯ ರಾಜ್ಯಗಳಿಗೆ ಅನಗತ್ಯ ಪ್ರಯೋಜನವನ್ನು ನೀಡಲಿದೆ ಎಂದು ದಕ್ಷಿಣದ ರಾಜ್ಯಗಳು ಕಳವಳ ವ್ಯಕ್ತಪಡಿಸಿವೆ.

ಪ್ರಸ್ತಾವಿತ ಕ್ಷೇತ್ರ ವಿಂಗಡಣೆ ಪ್ರತಿಕ್ರಿಯೆಯಿಂದಾಗಿ ದಕ್ಷಿಣದ ರಾಜ್ಯಗಳು ತೊಂದರೆ ಅನುಭವಿಸುವುದಿಲ್ಲ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭರವಸೆಯನ್ನು ಶುಕ್ರವಾರ ರೆಡ್ಡಿ ಪ್ರಶ್ನಿಸಿದ್ದಾರೆ.

“ಅಸ್ತಿತ್ವದಲ್ಲಿರುವ (ಸೀಟುಗಳ ಸಂಖ್ಯೆಯಲ್ಲಿ) ಯಾವುದೇ ಇಳಿಕೆ ಇರುವುದಿಲ್ಲ ಎಂದು ಅಮಿತ್ ಶಾ ಜಿ ಹೇಳುತ್ತಾರೆ. ಆದರೆ ದಕ್ಷಿಣ ರಾಜ್ಯಗಳಿಗೆ ಸಿಗುವ ಸೀಟುಗಳ ಹೆಚ್ಚಳ ಎಷ್ಟು ಎಂದು ಅವರು ಹೇಳುತ್ತಿಲ್ಲ. (ಸೀಟು ವಿಂಗಡಣೆಗೆ) ನಿಮ್ಮ ಅವಧಿ ಏನು? ಅದು ಜನಸಂಖ್ಯೆಯ ಆಧಾರದ ಮೇಲೆಯೇ ಅಥವಾ ಅನುಪಾತದ ಆಧಾರದ ಮೇಲೆಯೇ ಎಂದು ಹೇಳದೆ, ಅಮಿತ್ ಶಾ ಅವರು ಯಾವುದೇ ಇಳಿಕೆ ಇರುವುದಿಲ್ಲ ಎಂದು ಹೇಗೆ ಹೇಳುತ್ತಾರೆ.” ಎಂದು ಸಿಎಂ ರೆಡ್ಡಿ ಹೇಳಿದ್ದಾರೆ.

ಬುಧವಾರದಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಸ್ತಾವಿತ ರಾಷ್ಟ್ರವ್ಯಾಪಿ ಕ್ಷೇತ್ರ ವಿಂಗಡಣೆ ಪ್ರಕ್ರಿಯೆಯಿಂದಾಗಿ ದಕ್ಷಿಣ ಭಾರತದ ರಾಜ್ಯಗಳು ಒಂದೇ ಒಂದು ಲೋಕಸಭಾ ಸ್ಥಾನವನ್ನು ಕಳೆದುಕೊಳ್ಳುವುದಿಲ್ಲ ಎಂದು ಹೇಳಿದ್ದರು.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಾರ್ಚ್ 5 ರಂದು ಚೆನ್ನೈನಲ್ಲಿ ಸರ್ವಪಕ್ಷ ಸಭೆಯನ್ನು ಘೋಷಿಸಿದ ಒಂದು ದಿನದ ನಂತರ ಬುಧವಾರ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ. ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆಯ ಪರಿಣಾಮದ ಬಗ್ಗೆ ಚರ್ಚಿಸಲು ಈ ಸಭೆಯನ್ನು ಸ್ಟಾಲಿನ್ ಕರೆದಿದ್ದು, ಇದರಿಂದಾಗಿ ತಮ್ಮ ರಾಜ್ಯದ ಎಂಟು ಲೋಕಸಭಾ ಸ್ಥಾನಗಳು ನಷ್ಟವಾಗಲಿದೆ ಎಂದು ಅವರು ಹೇಳಿದ್ದರು.

ಸಿಎಂ ರೆಡ್ಡಿ ಮತ್ತು ಸಿಎಂ ಸ್ಟಾಲಿನ್ ಅವರಂತೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಅಮಿತ್ ಶಾ ಅವರ ಭರವಸೆಗಳು ವಿಶ್ವಾಸಾರ್ಹವಲ್ಲ ಎಂದು ಹೇಳಿದ್ದಾರೆ. “ದಕ್ಷಿಣ ರಾಜ್ಯಗಳಲ್ಲಿ ಗೊಂದಲ ಸೃಷ್ಟಿಸುವ ದುರುದ್ದೇಶಪೂರಿತ ಉದ್ದೇಶದಿಂದ ಇದನ್ನು ಮಾಡಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

ಲೋಕಸಭಾ ಕ್ಷೇತ್ರವು ಮರು ವಿಂಗಡನೆಯಾದರೆ, ಹಿಂದಿ ಭಾಷೆಯನ್ನು ಮಾತನಾಡುವ ಅತಿದೊಡ್ಡ ರಾಜ್ಯವಾದ ಉತ್ತರ ಪ್ರದೇಶದಲ್ಲಿ, ಪ್ರಸ್ತುತ 80 ಸ್ಥಾನಗಳಿದ್ದು, 143 ಸ್ಥಾನಗಳು ಹೆಚ್ಚಾಗಲಿವೆ. ಅದೇ ರೀತಿ, ಬಿಹಾರದ ಸ್ಥಾನಗಳು 40 ರಿಂದ 79 ಕ್ಕೆ ಬಹುತೇಕ ದ್ವಿಗುಣಗೊಳ್ಳಲಿವೆ ಎಂದು ವರದಿಯಾಗಿದೆ.

ಒಟ್ಟಾರೆಯಾಗಿ, 10 ಹಿಂದಿ ಭಾಷೆ ಮಾತನಾಡುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಬಿಹಾರ, ಛತ್ತೀಸ್‌ಗಢ, ದೆಹಲಿ, ಹರಿಯಾಣ, ಹಿಮಾಚಲ ಪ್ರದೇಶ, ಜಾರ್ಖಂಡ್, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಉತ್ತರಾಖಂಡಗಳಲ್ಲಿನ ಲೋಕಸಭಾ ಸ್ಥಾನಗಳ ಪ್ರಮಾಣವು ಈಗಿರುವ ಸುಮಾರು 42% ರಿಂದ ಸುಮಾರು 48% ಕ್ಕೆ ಏರಲಿದೆ ಎಂದು ಅದು ಹೇಳಿದೆ. ಇದಕ್ಕೆ ಅನುಗುಣವಾಗಿ, ಹಿಂದಿ ಭಾಷೆ ಮಾತನಾಡದ ಕೇರಳ, ಪಶ್ಚಿಮ ಬಂಗಾಳ ಮತ್ತು ಈಶಾನ್ಯದಂತಹ ಹಲವಾರು ರಾಜ್ಯಗಳ ಪ್ರಾತಿನಿಧ್ಯ ಕುಸಿಯಲಿದೆ ಎಂದು ವರದಿಯಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರಾಖಂಡ ಹಿಮಪಾತ : ಗಾಯಗೊಂಡಿದ್ದ ನಾಲ್ವರು ಕಾರ್ಮಿಕರ ಸಾವು, ಇನ್ನೂ ಐವರು ನಾಪತ್ತೆ

ಉತ್ತರಾಖಂಡ ಹಿಮಪಾತ : ಗಾಯಗೊಂಡಿದ್ದ ನಾಲ್ವರು ಕಾರ್ಮಿಕರ ಸಾವು, ಇನ್ನೂ ಐವರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...