Homeಮುಖಪುಟಕ್ಷೇತ್ರ ಪುನರ್‌ವಿಂಗಡನೆ | ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಕೇರಳ ಸಿಎಂ ಪಿಣರಾಯಿ ಬೆಂಬಲ

ಕ್ಷೇತ್ರ ಪುನರ್‌ವಿಂಗಡನೆ | ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಕೇರಳ ಸಿಎಂ ಪಿಣರಾಯಿ ಬೆಂಬಲ

- Advertisement -
- Advertisement -

ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಸರ್ಕಾರ ನಡೆಸುತ್ತಿರುವ ಪ್ರಯತ್ನಗಳನ್ನು ಬೆಂಬಲಿಸುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಮಾರ್ಚ್ 7 ರಂದು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಪಂಜಾಬ್ ನಾಯಕರನ್ನು ಈ ಪ್ರಕ್ರಿಯೆಯ ವಿರುದ್ಧ ಜಂಟಿ ಕ್ರಿಯಾ ಸಮಿತಿಯನ್ನು ರಚಿಸುವಂತೆ ಕರೆ ನೀಡಿದ್ದರು. ಕ್ಷೇತ್ರ ಪುನರ್‌ವಿಂಗಡನೆ

ಡಿಎಂಕೆಯ ಮುಖ್ಯಸ್ಥರೂ ಆಗಿರುವ ಸ್ಟಾಲಿನ್ ಅವರು ಮಾರ್ಚ್ 22 ರಂದು ಚೆನ್ನೈನಲ್ಲಿ ನಡೆಯಲಿರುವ ಸಮಿತಿಯ ಮೊದಲ ಸಭೆಯಲ್ಲಿ ಏಳು ರಾಜ್ಯಗಳ ಮುಖ್ಯಮಂತ್ರಿಗಳನ್ನು ಸೇರುವಂತೆ ಒತ್ತಾಯಿಸಿದ್ದಾರೆ. ಶುಕ್ರವಾರದಂದು ತಮಿಳುನಾಡಿನ ಐಟಿ ಮತ್ತು ಡಿಜಿಟಲ್ ಸೇವೆಗಳ ಸಚಿವ ಪಳನಿವೇಲ್ ತ್ಯಾಗರಾಜನ್ ಮತ್ತು ದಕ್ಷಿಣ ಚೆನ್ನೈ ಸಂಸದ ತಮಿಝಾಚಿ ತಂಗಪಾಂಡ್ಯನ್ ಅವರು ತಮ್ಮನ್ನು ಭೇಟಿ ಮಾಡಿರುವುದಾಗಿ ಪಿಣರಾಯಿ ವಿಜಯನ್ ಹೇಳಿದ್ದು, ಅವರು ಸಮಿತಿ ಸಭೆಗೆ ತಮ್ಮನ್ನು ಆಹ್ವಾನಿಸಿದ್ದಾಗಿ ಹೇಳಿದ್ದಾರೆ.

“ಈ ಪ್ರಮುಖ ವಿಷಯದ ಬಗ್ಗೆ ಒಗ್ಗಟ್ಟಿನಿಂದ ನಿಲ್ಲಿರಿ” ಎಂದು ಸಿಎಂ ಪಿಣರಾಯಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಕರೆ ನೀಡಿದ್ದಾರೆ. ಕ್ಷೇತ್ರ ಪುನರ್‌ವಿಂಗಡನೆ

“ರಾಜ್ಯಗಳೊಂದಿಗೆ ಒಮ್ಮತಕ್ಕೆ ಬಂದ ನಂತರ ಲೋಕಸಭಾ ಕ್ಷೇತ್ರಗಳ ಪುನರ್‌ವಿಂಗಡನೆ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಸಿದ್ಧರಾಗಿರಬೇಕು. ಯಾವುದೇ ರಾಜ್ಯದ ಕ್ಷೇತ್ರಗಳ ಅನುಪಾತದ ಪಾಲನ್ನು ಕಡಿಮೆ ಮಾಡದೆ ಇದನ್ನು ಕೈಗೊಳ್ಳಬೇಕು.” ಎಂದು ಸಿಎಂ ಪಿಣರಾಯಿ ಅವರು ಹೇಳಿದ್ದಾರೆ.

ಸ್ವಾತಂತ್ರ್ಯದ ನಂತರ ಕೇಂದ್ರ ಸರ್ಕಾರಗಳು ಪರಿಚಯಿಸಿದ ಕುಟುಂಬ ಯೋಜನಾ ನೀತಿಗಳಿಗೆ ಅನುಗುಣವಾಗಿ ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದ ರಾಜ್ಯಗಳಿಗೆ ದಂಡ ವಿಧಿಸಬಾರದು ಎಂದು ಅವರು ಹೇಳಿದ್ದಾರೆ. “ಕೇಂದ್ರ ಸರ್ಕಾರದ ಈ ನಡೆಯು ಇಂತಹ ಕ್ರಮವುಗಳಲ್ಲಿ ವಿಫಲವಾದ ರಾಜ್ಯಗಳಿಗೆ ಬಹುಮಾನ ನೀಡಿದಂತೆ” ಎಂದು ಅವರು ಹೇಳಿದ್ದಾರೆ.

ದಕ್ಷಿಣ ರಾಜ್ಯಗಳು ಅನುಪಾತದ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಪಾಲನ್ನು ಪಡೆಯುತ್ತವೆ ಎಂಬ ಕೇಂದ್ರ ಸರ್ಕಾರದ ವಾದಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ ಎಂದು ಪಿಣರಾಯಿ ವಿಜಯನ್ ಇದೇ ವೇಳೆ ಹೇಳಿದ್ದಾರೆ.

ಜಂಟಿ ಕ್ರಿಯಾ ಸಮಿತಿಗೆ ಸೇರುವಂತೆ ಇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸ್ಟಾಲಿನ್ ಬರೆದ ಪತ್ರದಲ್ಲಿ, ಪ್ರಸ್ತಾವಿತ ಕ್ಷೇತ್ರ ಪುನರ್‌ವಿಂಗಡನೆಯ ಪ್ರಕ್ರಿಯೆಯನ್ನು “ಫೆಡರಲಿಸಂ ಮೇಲಿನ ಸ್ಪಷ್ಟ ದಾಳಿ” ಎಂದು ಕರೆದಿದ್ದಾರೆ. “ಭಾರತದ ಪ್ರಜಾಪ್ರಭುತ್ವದ ಸಾರವು ಅದರ ಫೆಡರಲ್ ಸ್ವರೂಪದ ಮೇಲೆ ನಿಂತಿದೆ. ಒಂದು ರಾಷ್ಟ್ರವಾಗಿ ನಮ್ಮ ಪವಿತ್ರ ಏಕತೆಯನ್ನು ಗೌರವಿಸುತ್ತಲೆ ಪ್ರತಿಯೊಂದು ರಾಜ್ಯಕ್ಕೂ ಅದರ ಸರಿಯಾದ ಧ್ವನಿಯನ್ನು ಎತ್ತಿಹಿಡಿಯುವ ವ್ಯವಸ್ಥೆ ಇದಾಗಿದೆ” ಎಂದು ಅವರು ಹೇಳಿದ್ದಾರೆ.

ಗುರುವಾರದಂದು ಸ್ಟಾಲಿನ್ ಅವರು ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಮತ್ತು ಅಲ್ಲಿನ ವಿರೋಧ ಪಕ್ಷ ಭಾರತ ರಾಷ್ಟ್ರ ಸಮಿತಿ ನಾಯಕರನ್ನು ಸಮಿತಿ ಸಭೆಗೆ ಆಹ್ವಾನಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಅವರು ಸಭೆಯಲ್ಲಿ ಭಾಗವಹಿಸಲು “ತಾತ್ವಿಕವಾಗಿ” ಒಪ್ಪಿಕೊಂಡಿದ್ದರೂ, ಪಕ್ಷದ ನಾಯಕತ್ವದಿಂದ ಅನುಮತಿ ಪಡೆಯುವುದಾಗಿ ಕಾಂಗ್ರೆಸ್‌ನ ರೆಡ್ಡಿ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಇದೇ ವೇಳೆ ಭಾರತ ರಾಷ್ಟ್ರ ಸಮಿತಿಯ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಅವರು ಆಹ್ವಾನವನ್ನು ಸ್ವೀಕರಿಸಿದ್ದಾರೆ.

ಜೊತೆಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಭೆಗೆ ಹಾಜರಾಗುವಂತೆ ಕೇಳಿಕೊಂಡಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗದಗ: ಹೋಳಿಯಲ್ಲಿ ರಾಸಾಯನಿಕ ಮಿಶ್ರಿತ ಬಣ್ಣ; ಉಸಿರಾಟದ ತೊಂದರೆಯಿಂದ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ಗದಗ: ಹೋಳಿಯಲ್ಲಿ ರಾಸಾಯನಿಕ ಮಿಶ್ರಿತ ಬಣ್ಣ; ಉಸಿರಾಟದ ತೊಂದರೆಯಿಂದ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...