Homeಮುಖಪುಟಧರ್ಮಾಧಾರಿತ ಪೌರತ್ವ: ಇಂದಿನ ಭಾರತದ ಬಗ್ಗೆ 70 ವರ್ಷಗಳ ಹಿಂದೆಯೇ ಚರ್ಚಿಸಿದ್ದ ಸಂವಿಧಾನ ಸಭೆ

ಧರ್ಮಾಧಾರಿತ ಪೌರತ್ವ: ಇಂದಿನ ಭಾರತದ ಬಗ್ಗೆ 70 ವರ್ಷಗಳ ಹಿಂದೆಯೇ ಚರ್ಚಿಸಿದ್ದ ಸಂವಿಧಾನ ಸಭೆ

ಭಾರತೀಯ ಮುಸ್ಲಿಮರು ಮತ್ತು ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಇಂದು ವ್ಯಕ್ತಪಡಿಸಲಾಗುತ್ತಿರುವ ಅಭಿಪ್ರಾಯಗಳನ್ನು ಸಂವಿಧಾನ ಸಭೆಯು 70 ವರ್ಷಗಳ ಹಿಂದೆಯೇ ಚರ್ಚಿಸಿತ್ತು.

- Advertisement -
- Advertisement -

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ನವಂಬರ್ 1948ರಲ್ಲಿ ಸದಸ್ಯ ಝಡ್.ಎಚ್. ಲಾರಿ ಅವರು ಅಲ್ಪಸಂಖ್ಯಾತರ ಹಕ್ಕುಗಳ ಪರವಾಗಿ ಸಂವಿಧಾನ ಸಭೆಯಲ್ಲಿ ತನ್ನ ವಾದವನ್ನು ಮಂಡಿಸುತ್ತಿದ್ದಾಗ ಅವರನ್ನು ಮತ್ತೆಮತ್ತೆ ಅಣಕಿಸಲಾಗಿತ್ತು. ಯುನೈಟೆಡ್ ಪ್ರಾವಿನ್ಸಸ್ (ಬಹುತೇಕ ಈಗಿನ ಉತ್ತರ ಪ್ರದೇಶ)ನ ಈ ಮುಸ್ಲಿಮ್ ನಾಯಕನಲ್ಲಿ ಕೆಲವು ಸದಸ್ಯರು, ಪಾಕಿಸ್ತಾನದಲ್ಲಿ “ನಿಮ್ಮ ನಾಯಕರು” ಅಲ್ಲಿನ ಅಲ್ಪಸಂಖ್ಯಾತರ ರಕ್ಷಣೆಗೆ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸುವ ಮೂಲಕ ಅವರ ಭಾರತೀಯ ಪೌರತ್ವವನ್ನೇ ಪ್ರಶ್ನೆ ಮಾಡಿದ್ದರು.

“ನಾನು ನನ್ನ ಹಕ್ಕುಗಳನ್ನು ಪಾಕಿಸ್ತಾನಕ್ಕೆ ಅಡವು ಇಟ್ಟಿಲ್ಲ. ಪಾಕಿಸ್ತಾನ ಏನು ಮಾಡುತ್ತದೆ, ಏನು ಮಾಡುವುದಿಲ್ಲ ಎಂಬುದು ನನಗೆ ಸಂಬಂಧಿಸಿದ ವಿಷಯವಲ್ಲ” ಎಂದು ಅವರು ಅಂತವರಿಗೆ ಸರಿಯಾದ ಉತ್ತರವನ್ನೇ ನೀಡಿದ್ದರು. “ಭಾರತೀಯ ಮುಸ್ಲಿಮರು ಈ ಮಣ್ಣಿನ ಮಕ್ಕಳು. ಆದುದರಿಂದ ನಾವು ಭಾರತೀಯ ಪೌರರ ಹಕ್ಕುಗಳನ್ನು ಕೇಳುತ್ತಿದ್ದೇವೆ” ಎಂದು ವಕೀಲರಾದ ಅವರು ಹೇಳಿದ್ದರು.

ಇದೀಗ ಏಳು ದಶಕಗಳ ನಂತರ ಮುಸ್ಲಿಂ ಸಮುದಾಯವನ್ನು ಅದೇ ರೀತಿಯ, ಅಥವಾ ಅದಕ್ಕಿಂತ ಹೆಚ್ಚಿನ ಸಾರ್ವಜನಿಕ ಅಣಕಕ್ಕೆ ಗುರಿಪಡಿಸಲಾಗುತ್ತಿದೆ. ದೇಶದ ಪೌರತ್ವ ಕಾಯಿದೆಗೆ ಧಾರ್ಮಿಕ ಮಾನದಂಡ ನೀಡುವ ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ), ಎನ್‌ಪಿಎ ಮತ್ತು ಎನ್‌ಆರ್‌ಸಿ ವಿರುದ್ಧ ಲಕ್ಷಾಂತರ ಭಾರತೀಯರು ಬೀದಿಗಿಳಿದಿರುವ ಹೊತ್ತಿನಲ್ಲಿ ಅಂದು ಸಂವಿಧಾನ ಸಭೆಯಲ್ಲಿ ಎತ್ತಲಾಗಿದ್ದ ಕೆಲವು ಪ್ರಶ್ನೆಗಳನ್ನೇ ಈಗ ಎತ್ತಲಾಗುತ್ತಿದೆ.

ಸಂವಿಧಾನದ ಕುರಿತು ಹಲವಾರು ಭಯಗಳು, ಅಸಮ್ಮತಿಗಳು ಮತ್ತು ಟೀಕೆಗಳು ಇದ್ದ ಹೊರತಾಗಿಯೂ, ಭಾರತದ ಭವಿಷ್ಯ ಏನಾಗಿರಬೇಕು ಎಂಬದಕ್ಕಿಂತ ಹೆಚ್ಚಾಗಿ, ಏನಾಗಿರಬಾರದು ಎಂಬ ವಿವೇಕ ಅಂದು ಜಯಿಸಿತ್ತು. ಆಗಲೂ ಭಾರತವನ್ನು ಬಹುಸಂಖ್ಯಾತರ ದೇಶವನ್ನಾಗಿ ಮಾಡುವುದರ ಪರವಾಗಿ ಬೊಬ್ಬೆಗಳು ಇದ್ದರೂ, ಅದನ್ನು ಜಾತ್ಯಾತೀತ ಪ್ರಜಾಪ್ರಭುತ್ವವನ್ನಾಗಿ ಮಾಡಬೇಕು ಎಂದು ಅಂಬೇಡ್ಕರ್ ಮತ್ತು ನೆಹರೂ ನೇತೃತ್ವದಲ್ಲಿ ಸಂವಿಧಾನ ಸಭೆಯ ಸದಸ್ಯರು ನಿರ್ಣಾಯಕವಾಗಿ ನಿರ್ಧರಿಸಿದ್ದರು. ಆಗ ನಡೆದ ಚರ್ಚೆಗಳು ಇಂದಿನ ಸಂದರ್ಭವನ್ನು ಅರ್ಥ ಮಾಡಿಕೊಳ್ಳಲು ನೆರವಾಗಬಹುದು.

ರಕ್ತವೇ? ಹುಟ್ಟೇ?

ಸಂವಿಧಾನ ಸಭೆಯಲ್ಲಿ ನಡೆದ ಅತ್ಯಂತ ಕಠಿಣವಾದ ಕದನವು, ಭಾರತದ ಪೌರತ್ವವನ್ನು ಯಾವ ಆಧಾರದಲ್ಲಿ ನಿರ್ಣಯಿಸಬೇಕು ಎಂಬುದಾಗಿತ್ತು. ಇದು ಲೆಕ್ಸ್ ಸೋಲಿ (lex soli) ಅಂದರೆ, ಜನ್ಮಸ್ಥಾನದ ಕಾನೂನು ಮತ್ತು ಲೆಕ್ಸ್ ಸಾಂಗ್ವಿನಿಸ್ (lex sanguinis) ಅಂದರೆ, ರಕ್ತ ಸಂಬಂಧದ ಕಾನೂನುಗಳೆರಡರ ಪ್ರಕಾರವೂ ಪೌರತ್ವವು ನಿರ್ಧಾರವಾಗುತ್ತದೆ ಎಂದು ಅಲ್ಲಾಡಿ ಕೃಷ್ಣಸ್ವಾಮಿ ಅಯ್ಯಂಗಾರ್ ವಾದಿಸಿದ್ದರು. ಸಂವಿಧಾನದಲ್ಲಿರುವ “ನಾವು ಜನರು” ಎಂಬ ಉಲ್ಲೇಖದಂತೆ ದೇಶದಲ್ಲಿ ಹುಟ್ಟಿದ ಎಲ್ಲರನ್ನೂ ಯಾವುದೇ ಧರ್ಮದ ಹಂಗಿಲ್ಲದೆ ಭಾರತೀಯ ಪ್ರಜೆಗಳೆಂದು ಪರಿಗಣಿಸಬೇಕು ಎಂದು ಹಲವರು ವಾದಿಸಿದ್ದರು.

ಇದಕ್ಕೆ ವ್ಯತಿರಿಕ್ತವಾಗಿ ಎಲ್ಲಿಯೇ ಹುಟ್ಟಿದ್ದರೂ ರಕ್ತಸಂಬಂಧ, ನಿರ್ದಿಷ್ಟ ಜನಾಂಗಕ್ಕೆ ಸೇರಿದವರಿಗೆ ಪೌರತ್ವ ನೀಡಬೇಕು ಎಂದು ಕೆಲವರು ವಾದಿಸಿದ್ದರು. ಇಂದು ಇದೇ ವಾದ ಸಿಎಎ ಮೂಲಕ ಮತ್ತೆ ತಲೆಯೆತ್ತಿದೆ. ಅದರ ಪ್ರಕಾರ ನಿರ್ದಿಷ್ಟ ಜನಾಂಗಕ್ಕೆ, ಅಥವಾ ಧರ್ಮಕ್ಕೆ ಸೇರದ ಜನರು (ಮುಖ್ಯವಾಗಿ ಮುಸ್ಲಿಮರು) ಸಮಾನ ಹಕ್ಕುಗಳನ್ನು ಹೊಂದಿಲ್ಲ ಮತ್ತು ಅವರನ್ನು ನೈಸರ್ಗಿಕ ಪೌರರು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂಬುದು ಸಿಎಎ ಬೆಂಬಲಿಗರ ವಾದವಾಗಿದೆ.

ಜಾತ್ಯಾತೀತತೆ ಅಪರಾಧವೇ?

ಧರ್ಮಾಧರಿತ ಪೌರತ್ವವನ್ನು ಬಿ.ಆರ್. ಅಂಬೇಡ್ಕರ್, ಜವಾಹರಲಾಲ್ ನೆಹರೂ ಮತ್ತು ಹಲವಾರು ಇತರರು ವಿರೋಧಿಸಿದ್ದರು. ಆದರೆ ಕೆಲವರು- ನಾಝಿ ಜರ್ಮನಿಯ ತತ್ವಗಳು ಮತ್ತು ಫ್ಯಾಸಿಸ್ಟ್ ಇಟಲಿಯ ತತ್ವಗಳಿಂದ ಪ್ರಭಾವಿತರಾಗಿ ಅವುಗಳನ್ನು ಮೆಚ್ಚಿ ಅನುಸರಿಸುತ್ತಿದ್ದ ಕೆಲವು ಸಂಘಟನೆಗಳಿಗೆ ಸೇರಿದವರೇ ಧರ್ಮ ಮತ್ತು ಪೌರತ್ವಗಳ ನಡುವೆ ಸಂಬಂಧ ಕಲ್ಪಿಸಲು ಪಟ್ಟುಹಿಡಿದಿದ್ದರು. (ಅವರೇ ಇಂದಿಲ್ಲಿ ಅಧಿಕಾರ ಹಿಡಿದಿದ್ದಾರೆ.)  ಇವರಲ್ಲಿ ಪ್ರಮುಖರೆಂದರೆ ಪಿ. ಎಸ್. ದೇಶ್‌ಮುಖ್. ಅವರು ಆಗಸ್ಟ್ 11, 1949ರಂದು ಮಾಡಿದ ಭಾಷಣದ ಸಾರಾಂಶ ಕೆಳಗಿದೆ:

ಡಾ. ಬಿ.ಆರ್.  ಅಂಬೇಡ್ಕರ್ ಅವರ ಪೌರತ್ವ ಕುರಿತ ವ್ಯಾಖ್ಯಾನವು  ಭಾರತೀಯ ಪೌರತ್ವವನ್ನು “ವಿಶ್ವದಲ್ಲಿಯೇ ಅತ್ಯಂತ ಅಗ್ಗದ ಪೌರತ್ವ”ವನ್ನಾಗಿ ಮಾಡುವುದೆಂದು ದೇಶ್‌ಮುಖ್ ಅವರು ಭಾವಿಸಿದ್ದರು. ಹುಟ್ಟಿನಿಂದ ಪೌರತ್ವ ನೀಡುವ ಕುರಿತು ಅವರಿಗೆ ಅಸಮಾಧಾನವಿತ್ತು. ಕರಡು ವಿಧಿಯನ್ನು ಸ್ವೀಕರಿಸಿದರೆ ಮುಂಬಯಿ ಬಂದರಿನ ಮೂಲಕ ಪ್ರಯಾಣಿಸುವ ಮಹಿಳೆಯೊಬ್ಬಳು ಹೆತ್ತ ಮಗುವಿಗೂ ಪೌರತ್ವ ನೀಡಬೇಕಾಗುತ್ತದೆ ಎಂದು ಅವರು ವಾದಿಸಿದ್ದರು ದೇಶ್‌ಮುಖ್ ಅವರು ಕನಿಷ್ಟ ಎರಡು ತಿದ್ದುಪಡಿಗಳಿಗೆ ಬೇಡಿಕೆ ಇಟ್ಟಿದ್ದರು.

ಮೊದಲನೆಯದು ಕೇವಲ ಭಾರತದಲ್ಲಿ ಹುಟ್ಟುವುದು ಸಾಕಾಗದು; ಮಗು ಭಾರತೀಯ ಹೆತ್ತವರಿಗೆ ಹುಟ್ಟಿರಬೇಕು ಎಂಬುದು. ಎರಡನೆಯದೆಂದರೆ, ಹಿಂದೂಗಳು ಮತ್ತು ಸಿಕ್ಖರು ಪ್ರಪಂಚದ ಯಾವುದೇ ಕಡೆಯಲ್ಲಿ ವಾಸಿಸುತ್ತಿದ್ದರೂ ಭಾರತೀಯ ಪೌರತ್ವಕ್ಕೆ ಅರ್ಹರಾಗಿರಬೇಕು ಎಂಬುದು.

ಇದೇ ಅಭಿಪ್ರಾಯಗಳು ನರೇಂದ್ರ ಮೋದಿ ಚುನಾವಣಾ ಗೆಲುವಿನ ನಂತರ ಮೇ 2019ರಂದು ಮಾಡಿದ ಭಾಷಣದಲ್ಲಿ ಪ್ರತಿಫಲಿಸಿದೆ. ಅದರಲ್ಲಿ ಅವರು ಜಾತ್ಯತೀತ ಪರಿಕಲ್ಪನೆಯನ್ನು ದೂರಿ, ಯಾವ ರಾಜಕೀಯ ಪಕ್ಷವೂ ಜಾತ್ಯತೀತತೆಯ ಮುಖವಾಡದ ಹಿಂದೆ ಅಡಗುವ ಧೈರ್ಯ ತೋರಿಲ್ಲ ಎಂದು ಹೇಳಿದ್ದರು. ಅದರ ಬೆನ್ನಲ್ಲೇ ಪೌರತ್ವದ ಪ್ರಶ್ನೆ ಎದ್ದಿದೆ. ದೇಶವನ್ನು ತಳಮಳಕ್ಕೆ ದೂಡಿದೆ. ಇದು 1948ರ ನಾಝಿ, ಫ್ಯಾಸಿಸ್ಟ್ ಬೆಂಬಲಿಗರ ಪ್ರಯತ್ನವನ್ನು ಮುಂದುವರಿಸುವ ಯತ್ನ.

(ಜಾತ್ಯತೀತತೆಯ ಪರವಾಗಿ ಸಂವಿಧಾನ ಸಭೆಯಲ್ಲಿ ಅಂದು ನಡೆದ ಚರ್ಚೆಗಳ ಕುರಿತು ಪ್ರತ್ಯೇಕ ಲೇಖನವನ್ನು ನಿರೀಕ್ಷಿಸಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...