Homeಮುಖಪುಟಧರ್ಮಾಧಾರಿತ ಪೌರತ್ವ: ಇಂದಿನ ಭಾರತದ ಬಗ್ಗೆ 70 ವರ್ಷಗಳ ಹಿಂದೆಯೇ ಚರ್ಚಿಸಿದ್ದ ಸಂವಿಧಾನ ಸಭೆ

ಧರ್ಮಾಧಾರಿತ ಪೌರತ್ವ: ಇಂದಿನ ಭಾರತದ ಬಗ್ಗೆ 70 ವರ್ಷಗಳ ಹಿಂದೆಯೇ ಚರ್ಚಿಸಿದ್ದ ಸಂವಿಧಾನ ಸಭೆ

ಭಾರತೀಯ ಮುಸ್ಲಿಮರು ಮತ್ತು ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಇಂದು ವ್ಯಕ್ತಪಡಿಸಲಾಗುತ್ತಿರುವ ಅಭಿಪ್ರಾಯಗಳನ್ನು ಸಂವಿಧಾನ ಸಭೆಯು 70 ವರ್ಷಗಳ ಹಿಂದೆಯೇ ಚರ್ಚಿಸಿತ್ತು.

- Advertisement -
- Advertisement -

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ನವಂಬರ್ 1948ರಲ್ಲಿ ಸದಸ್ಯ ಝಡ್.ಎಚ್. ಲಾರಿ ಅವರು ಅಲ್ಪಸಂಖ್ಯಾತರ ಹಕ್ಕುಗಳ ಪರವಾಗಿ ಸಂವಿಧಾನ ಸಭೆಯಲ್ಲಿ ತನ್ನ ವಾದವನ್ನು ಮಂಡಿಸುತ್ತಿದ್ದಾಗ ಅವರನ್ನು ಮತ್ತೆಮತ್ತೆ ಅಣಕಿಸಲಾಗಿತ್ತು. ಯುನೈಟೆಡ್ ಪ್ರಾವಿನ್ಸಸ್ (ಬಹುತೇಕ ಈಗಿನ ಉತ್ತರ ಪ್ರದೇಶ)ನ ಈ ಮುಸ್ಲಿಮ್ ನಾಯಕನಲ್ಲಿ ಕೆಲವು ಸದಸ್ಯರು, ಪಾಕಿಸ್ತಾನದಲ್ಲಿ “ನಿಮ್ಮ ನಾಯಕರು” ಅಲ್ಲಿನ ಅಲ್ಪಸಂಖ್ಯಾತರ ರಕ್ಷಣೆಗೆ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸುವ ಮೂಲಕ ಅವರ ಭಾರತೀಯ ಪೌರತ್ವವನ್ನೇ ಪ್ರಶ್ನೆ ಮಾಡಿದ್ದರು.

“ನಾನು ನನ್ನ ಹಕ್ಕುಗಳನ್ನು ಪಾಕಿಸ್ತಾನಕ್ಕೆ ಅಡವು ಇಟ್ಟಿಲ್ಲ. ಪಾಕಿಸ್ತಾನ ಏನು ಮಾಡುತ್ತದೆ, ಏನು ಮಾಡುವುದಿಲ್ಲ ಎಂಬುದು ನನಗೆ ಸಂಬಂಧಿಸಿದ ವಿಷಯವಲ್ಲ” ಎಂದು ಅವರು ಅಂತವರಿಗೆ ಸರಿಯಾದ ಉತ್ತರವನ್ನೇ ನೀಡಿದ್ದರು. “ಭಾರತೀಯ ಮುಸ್ಲಿಮರು ಈ ಮಣ್ಣಿನ ಮಕ್ಕಳು. ಆದುದರಿಂದ ನಾವು ಭಾರತೀಯ ಪೌರರ ಹಕ್ಕುಗಳನ್ನು ಕೇಳುತ್ತಿದ್ದೇವೆ” ಎಂದು ವಕೀಲರಾದ ಅವರು ಹೇಳಿದ್ದರು.

ಇದೀಗ ಏಳು ದಶಕಗಳ ನಂತರ ಮುಸ್ಲಿಂ ಸಮುದಾಯವನ್ನು ಅದೇ ರೀತಿಯ, ಅಥವಾ ಅದಕ್ಕಿಂತ ಹೆಚ್ಚಿನ ಸಾರ್ವಜನಿಕ ಅಣಕಕ್ಕೆ ಗುರಿಪಡಿಸಲಾಗುತ್ತಿದೆ. ದೇಶದ ಪೌರತ್ವ ಕಾಯಿದೆಗೆ ಧಾರ್ಮಿಕ ಮಾನದಂಡ ನೀಡುವ ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ), ಎನ್‌ಪಿಎ ಮತ್ತು ಎನ್‌ಆರ್‌ಸಿ ವಿರುದ್ಧ ಲಕ್ಷಾಂತರ ಭಾರತೀಯರು ಬೀದಿಗಿಳಿದಿರುವ ಹೊತ್ತಿನಲ್ಲಿ ಅಂದು ಸಂವಿಧಾನ ಸಭೆಯಲ್ಲಿ ಎತ್ತಲಾಗಿದ್ದ ಕೆಲವು ಪ್ರಶ್ನೆಗಳನ್ನೇ ಈಗ ಎತ್ತಲಾಗುತ್ತಿದೆ.

ಸಂವಿಧಾನದ ಕುರಿತು ಹಲವಾರು ಭಯಗಳು, ಅಸಮ್ಮತಿಗಳು ಮತ್ತು ಟೀಕೆಗಳು ಇದ್ದ ಹೊರತಾಗಿಯೂ, ಭಾರತದ ಭವಿಷ್ಯ ಏನಾಗಿರಬೇಕು ಎಂಬದಕ್ಕಿಂತ ಹೆಚ್ಚಾಗಿ, ಏನಾಗಿರಬಾರದು ಎಂಬ ವಿವೇಕ ಅಂದು ಜಯಿಸಿತ್ತು. ಆಗಲೂ ಭಾರತವನ್ನು ಬಹುಸಂಖ್ಯಾತರ ದೇಶವನ್ನಾಗಿ ಮಾಡುವುದರ ಪರವಾಗಿ ಬೊಬ್ಬೆಗಳು ಇದ್ದರೂ, ಅದನ್ನು ಜಾತ್ಯಾತೀತ ಪ್ರಜಾಪ್ರಭುತ್ವವನ್ನಾಗಿ ಮಾಡಬೇಕು ಎಂದು ಅಂಬೇಡ್ಕರ್ ಮತ್ತು ನೆಹರೂ ನೇತೃತ್ವದಲ್ಲಿ ಸಂವಿಧಾನ ಸಭೆಯ ಸದಸ್ಯರು ನಿರ್ಣಾಯಕವಾಗಿ ನಿರ್ಧರಿಸಿದ್ದರು. ಆಗ ನಡೆದ ಚರ್ಚೆಗಳು ಇಂದಿನ ಸಂದರ್ಭವನ್ನು ಅರ್ಥ ಮಾಡಿಕೊಳ್ಳಲು ನೆರವಾಗಬಹುದು.

ರಕ್ತವೇ? ಹುಟ್ಟೇ?

ಸಂವಿಧಾನ ಸಭೆಯಲ್ಲಿ ನಡೆದ ಅತ್ಯಂತ ಕಠಿಣವಾದ ಕದನವು, ಭಾರತದ ಪೌರತ್ವವನ್ನು ಯಾವ ಆಧಾರದಲ್ಲಿ ನಿರ್ಣಯಿಸಬೇಕು ಎಂಬುದಾಗಿತ್ತು. ಇದು ಲೆಕ್ಸ್ ಸೋಲಿ (lex soli) ಅಂದರೆ, ಜನ್ಮಸ್ಥಾನದ ಕಾನೂನು ಮತ್ತು ಲೆಕ್ಸ್ ಸಾಂಗ್ವಿನಿಸ್ (lex sanguinis) ಅಂದರೆ, ರಕ್ತ ಸಂಬಂಧದ ಕಾನೂನುಗಳೆರಡರ ಪ್ರಕಾರವೂ ಪೌರತ್ವವು ನಿರ್ಧಾರವಾಗುತ್ತದೆ ಎಂದು ಅಲ್ಲಾಡಿ ಕೃಷ್ಣಸ್ವಾಮಿ ಅಯ್ಯಂಗಾರ್ ವಾದಿಸಿದ್ದರು. ಸಂವಿಧಾನದಲ್ಲಿರುವ “ನಾವು ಜನರು” ಎಂಬ ಉಲ್ಲೇಖದಂತೆ ದೇಶದಲ್ಲಿ ಹುಟ್ಟಿದ ಎಲ್ಲರನ್ನೂ ಯಾವುದೇ ಧರ್ಮದ ಹಂಗಿಲ್ಲದೆ ಭಾರತೀಯ ಪ್ರಜೆಗಳೆಂದು ಪರಿಗಣಿಸಬೇಕು ಎಂದು ಹಲವರು ವಾದಿಸಿದ್ದರು.

ಇದಕ್ಕೆ ವ್ಯತಿರಿಕ್ತವಾಗಿ ಎಲ್ಲಿಯೇ ಹುಟ್ಟಿದ್ದರೂ ರಕ್ತಸಂಬಂಧ, ನಿರ್ದಿಷ್ಟ ಜನಾಂಗಕ್ಕೆ ಸೇರಿದವರಿಗೆ ಪೌರತ್ವ ನೀಡಬೇಕು ಎಂದು ಕೆಲವರು ವಾದಿಸಿದ್ದರು. ಇಂದು ಇದೇ ವಾದ ಸಿಎಎ ಮೂಲಕ ಮತ್ತೆ ತಲೆಯೆತ್ತಿದೆ. ಅದರ ಪ್ರಕಾರ ನಿರ್ದಿಷ್ಟ ಜನಾಂಗಕ್ಕೆ, ಅಥವಾ ಧರ್ಮಕ್ಕೆ ಸೇರದ ಜನರು (ಮುಖ್ಯವಾಗಿ ಮುಸ್ಲಿಮರು) ಸಮಾನ ಹಕ್ಕುಗಳನ್ನು ಹೊಂದಿಲ್ಲ ಮತ್ತು ಅವರನ್ನು ನೈಸರ್ಗಿಕ ಪೌರರು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂಬುದು ಸಿಎಎ ಬೆಂಬಲಿಗರ ವಾದವಾಗಿದೆ.

ಜಾತ್ಯಾತೀತತೆ ಅಪರಾಧವೇ?

ಧರ್ಮಾಧರಿತ ಪೌರತ್ವವನ್ನು ಬಿ.ಆರ್. ಅಂಬೇಡ್ಕರ್, ಜವಾಹರಲಾಲ್ ನೆಹರೂ ಮತ್ತು ಹಲವಾರು ಇತರರು ವಿರೋಧಿಸಿದ್ದರು. ಆದರೆ ಕೆಲವರು- ನಾಝಿ ಜರ್ಮನಿಯ ತತ್ವಗಳು ಮತ್ತು ಫ್ಯಾಸಿಸ್ಟ್ ಇಟಲಿಯ ತತ್ವಗಳಿಂದ ಪ್ರಭಾವಿತರಾಗಿ ಅವುಗಳನ್ನು ಮೆಚ್ಚಿ ಅನುಸರಿಸುತ್ತಿದ್ದ ಕೆಲವು ಸಂಘಟನೆಗಳಿಗೆ ಸೇರಿದವರೇ ಧರ್ಮ ಮತ್ತು ಪೌರತ್ವಗಳ ನಡುವೆ ಸಂಬಂಧ ಕಲ್ಪಿಸಲು ಪಟ್ಟುಹಿಡಿದಿದ್ದರು. (ಅವರೇ ಇಂದಿಲ್ಲಿ ಅಧಿಕಾರ ಹಿಡಿದಿದ್ದಾರೆ.)  ಇವರಲ್ಲಿ ಪ್ರಮುಖರೆಂದರೆ ಪಿ. ಎಸ್. ದೇಶ್‌ಮುಖ್. ಅವರು ಆಗಸ್ಟ್ 11, 1949ರಂದು ಮಾಡಿದ ಭಾಷಣದ ಸಾರಾಂಶ ಕೆಳಗಿದೆ:

ಡಾ. ಬಿ.ಆರ್.  ಅಂಬೇಡ್ಕರ್ ಅವರ ಪೌರತ್ವ ಕುರಿತ ವ್ಯಾಖ್ಯಾನವು  ಭಾರತೀಯ ಪೌರತ್ವವನ್ನು “ವಿಶ್ವದಲ್ಲಿಯೇ ಅತ್ಯಂತ ಅಗ್ಗದ ಪೌರತ್ವ”ವನ್ನಾಗಿ ಮಾಡುವುದೆಂದು ದೇಶ್‌ಮುಖ್ ಅವರು ಭಾವಿಸಿದ್ದರು. ಹುಟ್ಟಿನಿಂದ ಪೌರತ್ವ ನೀಡುವ ಕುರಿತು ಅವರಿಗೆ ಅಸಮಾಧಾನವಿತ್ತು. ಕರಡು ವಿಧಿಯನ್ನು ಸ್ವೀಕರಿಸಿದರೆ ಮುಂಬಯಿ ಬಂದರಿನ ಮೂಲಕ ಪ್ರಯಾಣಿಸುವ ಮಹಿಳೆಯೊಬ್ಬಳು ಹೆತ್ತ ಮಗುವಿಗೂ ಪೌರತ್ವ ನೀಡಬೇಕಾಗುತ್ತದೆ ಎಂದು ಅವರು ವಾದಿಸಿದ್ದರು ದೇಶ್‌ಮುಖ್ ಅವರು ಕನಿಷ್ಟ ಎರಡು ತಿದ್ದುಪಡಿಗಳಿಗೆ ಬೇಡಿಕೆ ಇಟ್ಟಿದ್ದರು.

ಮೊದಲನೆಯದು ಕೇವಲ ಭಾರತದಲ್ಲಿ ಹುಟ್ಟುವುದು ಸಾಕಾಗದು; ಮಗು ಭಾರತೀಯ ಹೆತ್ತವರಿಗೆ ಹುಟ್ಟಿರಬೇಕು ಎಂಬುದು. ಎರಡನೆಯದೆಂದರೆ, ಹಿಂದೂಗಳು ಮತ್ತು ಸಿಕ್ಖರು ಪ್ರಪಂಚದ ಯಾವುದೇ ಕಡೆಯಲ್ಲಿ ವಾಸಿಸುತ್ತಿದ್ದರೂ ಭಾರತೀಯ ಪೌರತ್ವಕ್ಕೆ ಅರ್ಹರಾಗಿರಬೇಕು ಎಂಬುದು.

ಇದೇ ಅಭಿಪ್ರಾಯಗಳು ನರೇಂದ್ರ ಮೋದಿ ಚುನಾವಣಾ ಗೆಲುವಿನ ನಂತರ ಮೇ 2019ರಂದು ಮಾಡಿದ ಭಾಷಣದಲ್ಲಿ ಪ್ರತಿಫಲಿಸಿದೆ. ಅದರಲ್ಲಿ ಅವರು ಜಾತ್ಯತೀತ ಪರಿಕಲ್ಪನೆಯನ್ನು ದೂರಿ, ಯಾವ ರಾಜಕೀಯ ಪಕ್ಷವೂ ಜಾತ್ಯತೀತತೆಯ ಮುಖವಾಡದ ಹಿಂದೆ ಅಡಗುವ ಧೈರ್ಯ ತೋರಿಲ್ಲ ಎಂದು ಹೇಳಿದ್ದರು. ಅದರ ಬೆನ್ನಲ್ಲೇ ಪೌರತ್ವದ ಪ್ರಶ್ನೆ ಎದ್ದಿದೆ. ದೇಶವನ್ನು ತಳಮಳಕ್ಕೆ ದೂಡಿದೆ. ಇದು 1948ರ ನಾಝಿ, ಫ್ಯಾಸಿಸ್ಟ್ ಬೆಂಬಲಿಗರ ಪ್ರಯತ್ನವನ್ನು ಮುಂದುವರಿಸುವ ಯತ್ನ.

(ಜಾತ್ಯತೀತತೆಯ ಪರವಾಗಿ ಸಂವಿಧಾನ ಸಭೆಯಲ್ಲಿ ಅಂದು ನಡೆದ ಚರ್ಚೆಗಳ ಕುರಿತು ಪ್ರತ್ಯೇಕ ಲೇಖನವನ್ನು ನಿರೀಕ್ಷಿಸಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿತ್ರದುರ್ಗ: ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ನಾಯಕನಹಟ್ಟಿ (ಚಿತ್ರದುರ್ಗ ಜಿಲ್ಲೆ): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಆಕೆಯ ಗರ್ಭಪಾತ ಮಾಡಿದ ಆರೋಪದ ಮೇಲೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀಡಿದ ದೂರು ಆಧರಿಸಿ...

ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ : ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೋರಿದ್ದ ಮಹಿಳೆಯ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಿರುವ ಮಹಿಳೆಯೊಬ್ಬರು ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಏ.10) ತಿರಸ್ಕರಿಸಿದೆ ಎಂದು ಕಾನೂನು...

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ. ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ....

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...