Homeಮುಖಪುಟಧರ್ಮಾಧಾರಿತ ಪೌರತ್ವ: ಇಂದಿನ ಭಾರತದ ಬಗ್ಗೆ 70 ವರ್ಷಗಳ ಹಿಂದೆಯೇ ಚರ್ಚಿಸಿದ್ದ ಸಂವಿಧಾನ ಸಭೆ

ಧರ್ಮಾಧಾರಿತ ಪೌರತ್ವ: ಇಂದಿನ ಭಾರತದ ಬಗ್ಗೆ 70 ವರ್ಷಗಳ ಹಿಂದೆಯೇ ಚರ್ಚಿಸಿದ್ದ ಸಂವಿಧಾನ ಸಭೆ

ಭಾರತೀಯ ಮುಸ್ಲಿಮರು ಮತ್ತು ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಇಂದು ವ್ಯಕ್ತಪಡಿಸಲಾಗುತ್ತಿರುವ ಅಭಿಪ್ರಾಯಗಳನ್ನು ಸಂವಿಧಾನ ಸಭೆಯು 70 ವರ್ಷಗಳ ಹಿಂದೆಯೇ ಚರ್ಚಿಸಿತ್ತು.

- Advertisement -
- Advertisement -

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ನವಂಬರ್ 1948ರಲ್ಲಿ ಸದಸ್ಯ ಝಡ್.ಎಚ್. ಲಾರಿ ಅವರು ಅಲ್ಪಸಂಖ್ಯಾತರ ಹಕ್ಕುಗಳ ಪರವಾಗಿ ಸಂವಿಧಾನ ಸಭೆಯಲ್ಲಿ ತನ್ನ ವಾದವನ್ನು ಮಂಡಿಸುತ್ತಿದ್ದಾಗ ಅವರನ್ನು ಮತ್ತೆಮತ್ತೆ ಅಣಕಿಸಲಾಗಿತ್ತು. ಯುನೈಟೆಡ್ ಪ್ರಾವಿನ್ಸಸ್ (ಬಹುತೇಕ ಈಗಿನ ಉತ್ತರ ಪ್ರದೇಶ)ನ ಈ ಮುಸ್ಲಿಮ್ ನಾಯಕನಲ್ಲಿ ಕೆಲವು ಸದಸ್ಯರು, ಪಾಕಿಸ್ತಾನದಲ್ಲಿ “ನಿಮ್ಮ ನಾಯಕರು” ಅಲ್ಲಿನ ಅಲ್ಪಸಂಖ್ಯಾತರ ರಕ್ಷಣೆಗೆ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸುವ ಮೂಲಕ ಅವರ ಭಾರತೀಯ ಪೌರತ್ವವನ್ನೇ ಪ್ರಶ್ನೆ ಮಾಡಿದ್ದರು.

“ನಾನು ನನ್ನ ಹಕ್ಕುಗಳನ್ನು ಪಾಕಿಸ್ತಾನಕ್ಕೆ ಅಡವು ಇಟ್ಟಿಲ್ಲ. ಪಾಕಿಸ್ತಾನ ಏನು ಮಾಡುತ್ತದೆ, ಏನು ಮಾಡುವುದಿಲ್ಲ ಎಂಬುದು ನನಗೆ ಸಂಬಂಧಿಸಿದ ವಿಷಯವಲ್ಲ” ಎಂದು ಅವರು ಅಂತವರಿಗೆ ಸರಿಯಾದ ಉತ್ತರವನ್ನೇ ನೀಡಿದ್ದರು. “ಭಾರತೀಯ ಮುಸ್ಲಿಮರು ಈ ಮಣ್ಣಿನ ಮಕ್ಕಳು. ಆದುದರಿಂದ ನಾವು ಭಾರತೀಯ ಪೌರರ ಹಕ್ಕುಗಳನ್ನು ಕೇಳುತ್ತಿದ್ದೇವೆ” ಎಂದು ವಕೀಲರಾದ ಅವರು ಹೇಳಿದ್ದರು.

ಇದೀಗ ಏಳು ದಶಕಗಳ ನಂತರ ಮುಸ್ಲಿಂ ಸಮುದಾಯವನ್ನು ಅದೇ ರೀತಿಯ, ಅಥವಾ ಅದಕ್ಕಿಂತ ಹೆಚ್ಚಿನ ಸಾರ್ವಜನಿಕ ಅಣಕಕ್ಕೆ ಗುರಿಪಡಿಸಲಾಗುತ್ತಿದೆ. ದೇಶದ ಪೌರತ್ವ ಕಾಯಿದೆಗೆ ಧಾರ್ಮಿಕ ಮಾನದಂಡ ನೀಡುವ ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ), ಎನ್‌ಪಿಎ ಮತ್ತು ಎನ್‌ಆರ್‌ಸಿ ವಿರುದ್ಧ ಲಕ್ಷಾಂತರ ಭಾರತೀಯರು ಬೀದಿಗಿಳಿದಿರುವ ಹೊತ್ತಿನಲ್ಲಿ ಅಂದು ಸಂವಿಧಾನ ಸಭೆಯಲ್ಲಿ ಎತ್ತಲಾಗಿದ್ದ ಕೆಲವು ಪ್ರಶ್ನೆಗಳನ್ನೇ ಈಗ ಎತ್ತಲಾಗುತ್ತಿದೆ.

ಸಂವಿಧಾನದ ಕುರಿತು ಹಲವಾರು ಭಯಗಳು, ಅಸಮ್ಮತಿಗಳು ಮತ್ತು ಟೀಕೆಗಳು ಇದ್ದ ಹೊರತಾಗಿಯೂ, ಭಾರತದ ಭವಿಷ್ಯ ಏನಾಗಿರಬೇಕು ಎಂಬದಕ್ಕಿಂತ ಹೆಚ್ಚಾಗಿ, ಏನಾಗಿರಬಾರದು ಎಂಬ ವಿವೇಕ ಅಂದು ಜಯಿಸಿತ್ತು. ಆಗಲೂ ಭಾರತವನ್ನು ಬಹುಸಂಖ್ಯಾತರ ದೇಶವನ್ನಾಗಿ ಮಾಡುವುದರ ಪರವಾಗಿ ಬೊಬ್ಬೆಗಳು ಇದ್ದರೂ, ಅದನ್ನು ಜಾತ್ಯಾತೀತ ಪ್ರಜಾಪ್ರಭುತ್ವವನ್ನಾಗಿ ಮಾಡಬೇಕು ಎಂದು ಅಂಬೇಡ್ಕರ್ ಮತ್ತು ನೆಹರೂ ನೇತೃತ್ವದಲ್ಲಿ ಸಂವಿಧಾನ ಸಭೆಯ ಸದಸ್ಯರು ನಿರ್ಣಾಯಕವಾಗಿ ನಿರ್ಧರಿಸಿದ್ದರು. ಆಗ ನಡೆದ ಚರ್ಚೆಗಳು ಇಂದಿನ ಸಂದರ್ಭವನ್ನು ಅರ್ಥ ಮಾಡಿಕೊಳ್ಳಲು ನೆರವಾಗಬಹುದು.

ರಕ್ತವೇ? ಹುಟ್ಟೇ?

ಸಂವಿಧಾನ ಸಭೆಯಲ್ಲಿ ನಡೆದ ಅತ್ಯಂತ ಕಠಿಣವಾದ ಕದನವು, ಭಾರತದ ಪೌರತ್ವವನ್ನು ಯಾವ ಆಧಾರದಲ್ಲಿ ನಿರ್ಣಯಿಸಬೇಕು ಎಂಬುದಾಗಿತ್ತು. ಇದು ಲೆಕ್ಸ್ ಸೋಲಿ (lex soli) ಅಂದರೆ, ಜನ್ಮಸ್ಥಾನದ ಕಾನೂನು ಮತ್ತು ಲೆಕ್ಸ್ ಸಾಂಗ್ವಿನಿಸ್ (lex sanguinis) ಅಂದರೆ, ರಕ್ತ ಸಂಬಂಧದ ಕಾನೂನುಗಳೆರಡರ ಪ್ರಕಾರವೂ ಪೌರತ್ವವು ನಿರ್ಧಾರವಾಗುತ್ತದೆ ಎಂದು ಅಲ್ಲಾಡಿ ಕೃಷ್ಣಸ್ವಾಮಿ ಅಯ್ಯಂಗಾರ್ ವಾದಿಸಿದ್ದರು. ಸಂವಿಧಾನದಲ್ಲಿರುವ “ನಾವು ಜನರು” ಎಂಬ ಉಲ್ಲೇಖದಂತೆ ದೇಶದಲ್ಲಿ ಹುಟ್ಟಿದ ಎಲ್ಲರನ್ನೂ ಯಾವುದೇ ಧರ್ಮದ ಹಂಗಿಲ್ಲದೆ ಭಾರತೀಯ ಪ್ರಜೆಗಳೆಂದು ಪರಿಗಣಿಸಬೇಕು ಎಂದು ಹಲವರು ವಾದಿಸಿದ್ದರು.

ಇದಕ್ಕೆ ವ್ಯತಿರಿಕ್ತವಾಗಿ ಎಲ್ಲಿಯೇ ಹುಟ್ಟಿದ್ದರೂ ರಕ್ತಸಂಬಂಧ, ನಿರ್ದಿಷ್ಟ ಜನಾಂಗಕ್ಕೆ ಸೇರಿದವರಿಗೆ ಪೌರತ್ವ ನೀಡಬೇಕು ಎಂದು ಕೆಲವರು ವಾದಿಸಿದ್ದರು. ಇಂದು ಇದೇ ವಾದ ಸಿಎಎ ಮೂಲಕ ಮತ್ತೆ ತಲೆಯೆತ್ತಿದೆ. ಅದರ ಪ್ರಕಾರ ನಿರ್ದಿಷ್ಟ ಜನಾಂಗಕ್ಕೆ, ಅಥವಾ ಧರ್ಮಕ್ಕೆ ಸೇರದ ಜನರು (ಮುಖ್ಯವಾಗಿ ಮುಸ್ಲಿಮರು) ಸಮಾನ ಹಕ್ಕುಗಳನ್ನು ಹೊಂದಿಲ್ಲ ಮತ್ತು ಅವರನ್ನು ನೈಸರ್ಗಿಕ ಪೌರರು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂಬುದು ಸಿಎಎ ಬೆಂಬಲಿಗರ ವಾದವಾಗಿದೆ.

ಜಾತ್ಯಾತೀತತೆ ಅಪರಾಧವೇ?

ಧರ್ಮಾಧರಿತ ಪೌರತ್ವವನ್ನು ಬಿ.ಆರ್. ಅಂಬೇಡ್ಕರ್, ಜವಾಹರಲಾಲ್ ನೆಹರೂ ಮತ್ತು ಹಲವಾರು ಇತರರು ವಿರೋಧಿಸಿದ್ದರು. ಆದರೆ ಕೆಲವರು- ನಾಝಿ ಜರ್ಮನಿಯ ತತ್ವಗಳು ಮತ್ತು ಫ್ಯಾಸಿಸ್ಟ್ ಇಟಲಿಯ ತತ್ವಗಳಿಂದ ಪ್ರಭಾವಿತರಾಗಿ ಅವುಗಳನ್ನು ಮೆಚ್ಚಿ ಅನುಸರಿಸುತ್ತಿದ್ದ ಕೆಲವು ಸಂಘಟನೆಗಳಿಗೆ ಸೇರಿದವರೇ ಧರ್ಮ ಮತ್ತು ಪೌರತ್ವಗಳ ನಡುವೆ ಸಂಬಂಧ ಕಲ್ಪಿಸಲು ಪಟ್ಟುಹಿಡಿದಿದ್ದರು. (ಅವರೇ ಇಂದಿಲ್ಲಿ ಅಧಿಕಾರ ಹಿಡಿದಿದ್ದಾರೆ.)  ಇವರಲ್ಲಿ ಪ್ರಮುಖರೆಂದರೆ ಪಿ. ಎಸ್. ದೇಶ್‌ಮುಖ್. ಅವರು ಆಗಸ್ಟ್ 11, 1949ರಂದು ಮಾಡಿದ ಭಾಷಣದ ಸಾರಾಂಶ ಕೆಳಗಿದೆ:

ಡಾ. ಬಿ.ಆರ್.  ಅಂಬೇಡ್ಕರ್ ಅವರ ಪೌರತ್ವ ಕುರಿತ ವ್ಯಾಖ್ಯಾನವು  ಭಾರತೀಯ ಪೌರತ್ವವನ್ನು “ವಿಶ್ವದಲ್ಲಿಯೇ ಅತ್ಯಂತ ಅಗ್ಗದ ಪೌರತ್ವ”ವನ್ನಾಗಿ ಮಾಡುವುದೆಂದು ದೇಶ್‌ಮುಖ್ ಅವರು ಭಾವಿಸಿದ್ದರು. ಹುಟ್ಟಿನಿಂದ ಪೌರತ್ವ ನೀಡುವ ಕುರಿತು ಅವರಿಗೆ ಅಸಮಾಧಾನವಿತ್ತು. ಕರಡು ವಿಧಿಯನ್ನು ಸ್ವೀಕರಿಸಿದರೆ ಮುಂಬಯಿ ಬಂದರಿನ ಮೂಲಕ ಪ್ರಯಾಣಿಸುವ ಮಹಿಳೆಯೊಬ್ಬಳು ಹೆತ್ತ ಮಗುವಿಗೂ ಪೌರತ್ವ ನೀಡಬೇಕಾಗುತ್ತದೆ ಎಂದು ಅವರು ವಾದಿಸಿದ್ದರು ದೇಶ್‌ಮುಖ್ ಅವರು ಕನಿಷ್ಟ ಎರಡು ತಿದ್ದುಪಡಿಗಳಿಗೆ ಬೇಡಿಕೆ ಇಟ್ಟಿದ್ದರು.

ಮೊದಲನೆಯದು ಕೇವಲ ಭಾರತದಲ್ಲಿ ಹುಟ್ಟುವುದು ಸಾಕಾಗದು; ಮಗು ಭಾರತೀಯ ಹೆತ್ತವರಿಗೆ ಹುಟ್ಟಿರಬೇಕು ಎಂಬುದು. ಎರಡನೆಯದೆಂದರೆ, ಹಿಂದೂಗಳು ಮತ್ತು ಸಿಕ್ಖರು ಪ್ರಪಂಚದ ಯಾವುದೇ ಕಡೆಯಲ್ಲಿ ವಾಸಿಸುತ್ತಿದ್ದರೂ ಭಾರತೀಯ ಪೌರತ್ವಕ್ಕೆ ಅರ್ಹರಾಗಿರಬೇಕು ಎಂಬುದು.

ಇದೇ ಅಭಿಪ್ರಾಯಗಳು ನರೇಂದ್ರ ಮೋದಿ ಚುನಾವಣಾ ಗೆಲುವಿನ ನಂತರ ಮೇ 2019ರಂದು ಮಾಡಿದ ಭಾಷಣದಲ್ಲಿ ಪ್ರತಿಫಲಿಸಿದೆ. ಅದರಲ್ಲಿ ಅವರು ಜಾತ್ಯತೀತ ಪರಿಕಲ್ಪನೆಯನ್ನು ದೂರಿ, ಯಾವ ರಾಜಕೀಯ ಪಕ್ಷವೂ ಜಾತ್ಯತೀತತೆಯ ಮುಖವಾಡದ ಹಿಂದೆ ಅಡಗುವ ಧೈರ್ಯ ತೋರಿಲ್ಲ ಎಂದು ಹೇಳಿದ್ದರು. ಅದರ ಬೆನ್ನಲ್ಲೇ ಪೌರತ್ವದ ಪ್ರಶ್ನೆ ಎದ್ದಿದೆ. ದೇಶವನ್ನು ತಳಮಳಕ್ಕೆ ದೂಡಿದೆ. ಇದು 1948ರ ನಾಝಿ, ಫ್ಯಾಸಿಸ್ಟ್ ಬೆಂಬಲಿಗರ ಪ್ರಯತ್ನವನ್ನು ಮುಂದುವರಿಸುವ ಯತ್ನ.

(ಜಾತ್ಯತೀತತೆಯ ಪರವಾಗಿ ಸಂವಿಧಾನ ಸಭೆಯಲ್ಲಿ ಅಂದು ನಡೆದ ಚರ್ಚೆಗಳ ಕುರಿತು ಪ್ರತ್ಯೇಕ ಲೇಖನವನ್ನು ನಿರೀಕ್ಷಿಸಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...