Homeಮುಖಪುಟಧರ್ಮಾಧಾರಿತ ಪೌರತ್ವ: ಇಂದಿನ ಭಾರತದ ಬಗ್ಗೆ 70 ವರ್ಷಗಳ ಹಿಂದೆಯೇ ಚರ್ಚಿಸಿದ್ದ ಸಂವಿಧಾನ ಸಭೆ

ಧರ್ಮಾಧಾರಿತ ಪೌರತ್ವ: ಇಂದಿನ ಭಾರತದ ಬಗ್ಗೆ 70 ವರ್ಷಗಳ ಹಿಂದೆಯೇ ಚರ್ಚಿಸಿದ್ದ ಸಂವಿಧಾನ ಸಭೆ

ಭಾರತೀಯ ಮುಸ್ಲಿಮರು ಮತ್ತು ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಇಂದು ವ್ಯಕ್ತಪಡಿಸಲಾಗುತ್ತಿರುವ ಅಭಿಪ್ರಾಯಗಳನ್ನು ಸಂವಿಧಾನ ಸಭೆಯು 70 ವರ್ಷಗಳ ಹಿಂದೆಯೇ ಚರ್ಚಿಸಿತ್ತು.

- Advertisement -
- Advertisement -

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ನವಂಬರ್ 1948ರಲ್ಲಿ ಸದಸ್ಯ ಝಡ್.ಎಚ್. ಲಾರಿ ಅವರು ಅಲ್ಪಸಂಖ್ಯಾತರ ಹಕ್ಕುಗಳ ಪರವಾಗಿ ಸಂವಿಧಾನ ಸಭೆಯಲ್ಲಿ ತನ್ನ ವಾದವನ್ನು ಮಂಡಿಸುತ್ತಿದ್ದಾಗ ಅವರನ್ನು ಮತ್ತೆಮತ್ತೆ ಅಣಕಿಸಲಾಗಿತ್ತು. ಯುನೈಟೆಡ್ ಪ್ರಾವಿನ್ಸಸ್ (ಬಹುತೇಕ ಈಗಿನ ಉತ್ತರ ಪ್ರದೇಶ)ನ ಈ ಮುಸ್ಲಿಮ್ ನಾಯಕನಲ್ಲಿ ಕೆಲವು ಸದಸ್ಯರು, ಪಾಕಿಸ್ತಾನದಲ್ಲಿ “ನಿಮ್ಮ ನಾಯಕರು” ಅಲ್ಲಿನ ಅಲ್ಪಸಂಖ್ಯಾತರ ರಕ್ಷಣೆಗೆ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸುವ ಮೂಲಕ ಅವರ ಭಾರತೀಯ ಪೌರತ್ವವನ್ನೇ ಪ್ರಶ್ನೆ ಮಾಡಿದ್ದರು.

“ನಾನು ನನ್ನ ಹಕ್ಕುಗಳನ್ನು ಪಾಕಿಸ್ತಾನಕ್ಕೆ ಅಡವು ಇಟ್ಟಿಲ್ಲ. ಪಾಕಿಸ್ತಾನ ಏನು ಮಾಡುತ್ತದೆ, ಏನು ಮಾಡುವುದಿಲ್ಲ ಎಂಬುದು ನನಗೆ ಸಂಬಂಧಿಸಿದ ವಿಷಯವಲ್ಲ” ಎಂದು ಅವರು ಅಂತವರಿಗೆ ಸರಿಯಾದ ಉತ್ತರವನ್ನೇ ನೀಡಿದ್ದರು. “ಭಾರತೀಯ ಮುಸ್ಲಿಮರು ಈ ಮಣ್ಣಿನ ಮಕ್ಕಳು. ಆದುದರಿಂದ ನಾವು ಭಾರತೀಯ ಪೌರರ ಹಕ್ಕುಗಳನ್ನು ಕೇಳುತ್ತಿದ್ದೇವೆ” ಎಂದು ವಕೀಲರಾದ ಅವರು ಹೇಳಿದ್ದರು.

ಇದೀಗ ಏಳು ದಶಕಗಳ ನಂತರ ಮುಸ್ಲಿಂ ಸಮುದಾಯವನ್ನು ಅದೇ ರೀತಿಯ, ಅಥವಾ ಅದಕ್ಕಿಂತ ಹೆಚ್ಚಿನ ಸಾರ್ವಜನಿಕ ಅಣಕಕ್ಕೆ ಗುರಿಪಡಿಸಲಾಗುತ್ತಿದೆ. ದೇಶದ ಪೌರತ್ವ ಕಾಯಿದೆಗೆ ಧಾರ್ಮಿಕ ಮಾನದಂಡ ನೀಡುವ ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ), ಎನ್‌ಪಿಎ ಮತ್ತು ಎನ್‌ಆರ್‌ಸಿ ವಿರುದ್ಧ ಲಕ್ಷಾಂತರ ಭಾರತೀಯರು ಬೀದಿಗಿಳಿದಿರುವ ಹೊತ್ತಿನಲ್ಲಿ ಅಂದು ಸಂವಿಧಾನ ಸಭೆಯಲ್ಲಿ ಎತ್ತಲಾಗಿದ್ದ ಕೆಲವು ಪ್ರಶ್ನೆಗಳನ್ನೇ ಈಗ ಎತ್ತಲಾಗುತ್ತಿದೆ.

ಸಂವಿಧಾನದ ಕುರಿತು ಹಲವಾರು ಭಯಗಳು, ಅಸಮ್ಮತಿಗಳು ಮತ್ತು ಟೀಕೆಗಳು ಇದ್ದ ಹೊರತಾಗಿಯೂ, ಭಾರತದ ಭವಿಷ್ಯ ಏನಾಗಿರಬೇಕು ಎಂಬದಕ್ಕಿಂತ ಹೆಚ್ಚಾಗಿ, ಏನಾಗಿರಬಾರದು ಎಂಬ ವಿವೇಕ ಅಂದು ಜಯಿಸಿತ್ತು. ಆಗಲೂ ಭಾರತವನ್ನು ಬಹುಸಂಖ್ಯಾತರ ದೇಶವನ್ನಾಗಿ ಮಾಡುವುದರ ಪರವಾಗಿ ಬೊಬ್ಬೆಗಳು ಇದ್ದರೂ, ಅದನ್ನು ಜಾತ್ಯಾತೀತ ಪ್ರಜಾಪ್ರಭುತ್ವವನ್ನಾಗಿ ಮಾಡಬೇಕು ಎಂದು ಅಂಬೇಡ್ಕರ್ ಮತ್ತು ನೆಹರೂ ನೇತೃತ್ವದಲ್ಲಿ ಸಂವಿಧಾನ ಸಭೆಯ ಸದಸ್ಯರು ನಿರ್ಣಾಯಕವಾಗಿ ನಿರ್ಧರಿಸಿದ್ದರು. ಆಗ ನಡೆದ ಚರ್ಚೆಗಳು ಇಂದಿನ ಸಂದರ್ಭವನ್ನು ಅರ್ಥ ಮಾಡಿಕೊಳ್ಳಲು ನೆರವಾಗಬಹುದು.

ರಕ್ತವೇ? ಹುಟ್ಟೇ?

ಸಂವಿಧಾನ ಸಭೆಯಲ್ಲಿ ನಡೆದ ಅತ್ಯಂತ ಕಠಿಣವಾದ ಕದನವು, ಭಾರತದ ಪೌರತ್ವವನ್ನು ಯಾವ ಆಧಾರದಲ್ಲಿ ನಿರ್ಣಯಿಸಬೇಕು ಎಂಬುದಾಗಿತ್ತು. ಇದು ಲೆಕ್ಸ್ ಸೋಲಿ (lex soli) ಅಂದರೆ, ಜನ್ಮಸ್ಥಾನದ ಕಾನೂನು ಮತ್ತು ಲೆಕ್ಸ್ ಸಾಂಗ್ವಿನಿಸ್ (lex sanguinis) ಅಂದರೆ, ರಕ್ತ ಸಂಬಂಧದ ಕಾನೂನುಗಳೆರಡರ ಪ್ರಕಾರವೂ ಪೌರತ್ವವು ನಿರ್ಧಾರವಾಗುತ್ತದೆ ಎಂದು ಅಲ್ಲಾಡಿ ಕೃಷ್ಣಸ್ವಾಮಿ ಅಯ್ಯಂಗಾರ್ ವಾದಿಸಿದ್ದರು. ಸಂವಿಧಾನದಲ್ಲಿರುವ “ನಾವು ಜನರು” ಎಂಬ ಉಲ್ಲೇಖದಂತೆ ದೇಶದಲ್ಲಿ ಹುಟ್ಟಿದ ಎಲ್ಲರನ್ನೂ ಯಾವುದೇ ಧರ್ಮದ ಹಂಗಿಲ್ಲದೆ ಭಾರತೀಯ ಪ್ರಜೆಗಳೆಂದು ಪರಿಗಣಿಸಬೇಕು ಎಂದು ಹಲವರು ವಾದಿಸಿದ್ದರು.

ಇದಕ್ಕೆ ವ್ಯತಿರಿಕ್ತವಾಗಿ ಎಲ್ಲಿಯೇ ಹುಟ್ಟಿದ್ದರೂ ರಕ್ತಸಂಬಂಧ, ನಿರ್ದಿಷ್ಟ ಜನಾಂಗಕ್ಕೆ ಸೇರಿದವರಿಗೆ ಪೌರತ್ವ ನೀಡಬೇಕು ಎಂದು ಕೆಲವರು ವಾದಿಸಿದ್ದರು. ಇಂದು ಇದೇ ವಾದ ಸಿಎಎ ಮೂಲಕ ಮತ್ತೆ ತಲೆಯೆತ್ತಿದೆ. ಅದರ ಪ್ರಕಾರ ನಿರ್ದಿಷ್ಟ ಜನಾಂಗಕ್ಕೆ, ಅಥವಾ ಧರ್ಮಕ್ಕೆ ಸೇರದ ಜನರು (ಮುಖ್ಯವಾಗಿ ಮುಸ್ಲಿಮರು) ಸಮಾನ ಹಕ್ಕುಗಳನ್ನು ಹೊಂದಿಲ್ಲ ಮತ್ತು ಅವರನ್ನು ನೈಸರ್ಗಿಕ ಪೌರರು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂಬುದು ಸಿಎಎ ಬೆಂಬಲಿಗರ ವಾದವಾಗಿದೆ.

ಜಾತ್ಯಾತೀತತೆ ಅಪರಾಧವೇ?

ಧರ್ಮಾಧರಿತ ಪೌರತ್ವವನ್ನು ಬಿ.ಆರ್. ಅಂಬೇಡ್ಕರ್, ಜವಾಹರಲಾಲ್ ನೆಹರೂ ಮತ್ತು ಹಲವಾರು ಇತರರು ವಿರೋಧಿಸಿದ್ದರು. ಆದರೆ ಕೆಲವರು- ನಾಝಿ ಜರ್ಮನಿಯ ತತ್ವಗಳು ಮತ್ತು ಫ್ಯಾಸಿಸ್ಟ್ ಇಟಲಿಯ ತತ್ವಗಳಿಂದ ಪ್ರಭಾವಿತರಾಗಿ ಅವುಗಳನ್ನು ಮೆಚ್ಚಿ ಅನುಸರಿಸುತ್ತಿದ್ದ ಕೆಲವು ಸಂಘಟನೆಗಳಿಗೆ ಸೇರಿದವರೇ ಧರ್ಮ ಮತ್ತು ಪೌರತ್ವಗಳ ನಡುವೆ ಸಂಬಂಧ ಕಲ್ಪಿಸಲು ಪಟ್ಟುಹಿಡಿದಿದ್ದರು. (ಅವರೇ ಇಂದಿಲ್ಲಿ ಅಧಿಕಾರ ಹಿಡಿದಿದ್ದಾರೆ.)  ಇವರಲ್ಲಿ ಪ್ರಮುಖರೆಂದರೆ ಪಿ. ಎಸ್. ದೇಶ್‌ಮುಖ್. ಅವರು ಆಗಸ್ಟ್ 11, 1949ರಂದು ಮಾಡಿದ ಭಾಷಣದ ಸಾರಾಂಶ ಕೆಳಗಿದೆ:

ಡಾ. ಬಿ.ಆರ್.  ಅಂಬೇಡ್ಕರ್ ಅವರ ಪೌರತ್ವ ಕುರಿತ ವ್ಯಾಖ್ಯಾನವು  ಭಾರತೀಯ ಪೌರತ್ವವನ್ನು “ವಿಶ್ವದಲ್ಲಿಯೇ ಅತ್ಯಂತ ಅಗ್ಗದ ಪೌರತ್ವ”ವನ್ನಾಗಿ ಮಾಡುವುದೆಂದು ದೇಶ್‌ಮುಖ್ ಅವರು ಭಾವಿಸಿದ್ದರು. ಹುಟ್ಟಿನಿಂದ ಪೌರತ್ವ ನೀಡುವ ಕುರಿತು ಅವರಿಗೆ ಅಸಮಾಧಾನವಿತ್ತು. ಕರಡು ವಿಧಿಯನ್ನು ಸ್ವೀಕರಿಸಿದರೆ ಮುಂಬಯಿ ಬಂದರಿನ ಮೂಲಕ ಪ್ರಯಾಣಿಸುವ ಮಹಿಳೆಯೊಬ್ಬಳು ಹೆತ್ತ ಮಗುವಿಗೂ ಪೌರತ್ವ ನೀಡಬೇಕಾಗುತ್ತದೆ ಎಂದು ಅವರು ವಾದಿಸಿದ್ದರು ದೇಶ್‌ಮುಖ್ ಅವರು ಕನಿಷ್ಟ ಎರಡು ತಿದ್ದುಪಡಿಗಳಿಗೆ ಬೇಡಿಕೆ ಇಟ್ಟಿದ್ದರು.

ಮೊದಲನೆಯದು ಕೇವಲ ಭಾರತದಲ್ಲಿ ಹುಟ್ಟುವುದು ಸಾಕಾಗದು; ಮಗು ಭಾರತೀಯ ಹೆತ್ತವರಿಗೆ ಹುಟ್ಟಿರಬೇಕು ಎಂಬುದು. ಎರಡನೆಯದೆಂದರೆ, ಹಿಂದೂಗಳು ಮತ್ತು ಸಿಕ್ಖರು ಪ್ರಪಂಚದ ಯಾವುದೇ ಕಡೆಯಲ್ಲಿ ವಾಸಿಸುತ್ತಿದ್ದರೂ ಭಾರತೀಯ ಪೌರತ್ವಕ್ಕೆ ಅರ್ಹರಾಗಿರಬೇಕು ಎಂಬುದು.

ಇದೇ ಅಭಿಪ್ರಾಯಗಳು ನರೇಂದ್ರ ಮೋದಿ ಚುನಾವಣಾ ಗೆಲುವಿನ ನಂತರ ಮೇ 2019ರಂದು ಮಾಡಿದ ಭಾಷಣದಲ್ಲಿ ಪ್ರತಿಫಲಿಸಿದೆ. ಅದರಲ್ಲಿ ಅವರು ಜಾತ್ಯತೀತ ಪರಿಕಲ್ಪನೆಯನ್ನು ದೂರಿ, ಯಾವ ರಾಜಕೀಯ ಪಕ್ಷವೂ ಜಾತ್ಯತೀತತೆಯ ಮುಖವಾಡದ ಹಿಂದೆ ಅಡಗುವ ಧೈರ್ಯ ತೋರಿಲ್ಲ ಎಂದು ಹೇಳಿದ್ದರು. ಅದರ ಬೆನ್ನಲ್ಲೇ ಪೌರತ್ವದ ಪ್ರಶ್ನೆ ಎದ್ದಿದೆ. ದೇಶವನ್ನು ತಳಮಳಕ್ಕೆ ದೂಡಿದೆ. ಇದು 1948ರ ನಾಝಿ, ಫ್ಯಾಸಿಸ್ಟ್ ಬೆಂಬಲಿಗರ ಪ್ರಯತ್ನವನ್ನು ಮುಂದುವರಿಸುವ ಯತ್ನ.

(ಜಾತ್ಯತೀತತೆಯ ಪರವಾಗಿ ಸಂವಿಧಾನ ಸಭೆಯಲ್ಲಿ ಅಂದು ನಡೆದ ಚರ್ಚೆಗಳ ಕುರಿತು ಪ್ರತ್ಯೇಕ ಲೇಖನವನ್ನು ನಿರೀಕ್ಷಿಸಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...