Homeಮುಖಪುಟಧರ್ಮಾಧಾರಿತ ಪೌರತ್ವ: ಇಂದಿನ ಭಾರತದ ಬಗ್ಗೆ 70 ವರ್ಷಗಳ ಹಿಂದೆಯೇ ಚರ್ಚಿಸಿದ್ದ ಸಂವಿಧಾನ ಸಭೆ

ಧರ್ಮಾಧಾರಿತ ಪೌರತ್ವ: ಇಂದಿನ ಭಾರತದ ಬಗ್ಗೆ 70 ವರ್ಷಗಳ ಹಿಂದೆಯೇ ಚರ್ಚಿಸಿದ್ದ ಸಂವಿಧಾನ ಸಭೆ

ಭಾರತೀಯ ಮುಸ್ಲಿಮರು ಮತ್ತು ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಇಂದು ವ್ಯಕ್ತಪಡಿಸಲಾಗುತ್ತಿರುವ ಅಭಿಪ್ರಾಯಗಳನ್ನು ಸಂವಿಧಾನ ಸಭೆಯು 70 ವರ್ಷಗಳ ಹಿಂದೆಯೇ ಚರ್ಚಿಸಿತ್ತು.

- Advertisement -
- Advertisement -

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ನವಂಬರ್ 1948ರಲ್ಲಿ ಸದಸ್ಯ ಝಡ್.ಎಚ್. ಲಾರಿ ಅವರು ಅಲ್ಪಸಂಖ್ಯಾತರ ಹಕ್ಕುಗಳ ಪರವಾಗಿ ಸಂವಿಧಾನ ಸಭೆಯಲ್ಲಿ ತನ್ನ ವಾದವನ್ನು ಮಂಡಿಸುತ್ತಿದ್ದಾಗ ಅವರನ್ನು ಮತ್ತೆಮತ್ತೆ ಅಣಕಿಸಲಾಗಿತ್ತು. ಯುನೈಟೆಡ್ ಪ್ರಾವಿನ್ಸಸ್ (ಬಹುತೇಕ ಈಗಿನ ಉತ್ತರ ಪ್ರದೇಶ)ನ ಈ ಮುಸ್ಲಿಮ್ ನಾಯಕನಲ್ಲಿ ಕೆಲವು ಸದಸ್ಯರು, ಪಾಕಿಸ್ತಾನದಲ್ಲಿ “ನಿಮ್ಮ ನಾಯಕರು” ಅಲ್ಲಿನ ಅಲ್ಪಸಂಖ್ಯಾತರ ರಕ್ಷಣೆಗೆ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸುವ ಮೂಲಕ ಅವರ ಭಾರತೀಯ ಪೌರತ್ವವನ್ನೇ ಪ್ರಶ್ನೆ ಮಾಡಿದ್ದರು.

“ನಾನು ನನ್ನ ಹಕ್ಕುಗಳನ್ನು ಪಾಕಿಸ್ತಾನಕ್ಕೆ ಅಡವು ಇಟ್ಟಿಲ್ಲ. ಪಾಕಿಸ್ತಾನ ಏನು ಮಾಡುತ್ತದೆ, ಏನು ಮಾಡುವುದಿಲ್ಲ ಎಂಬುದು ನನಗೆ ಸಂಬಂಧಿಸಿದ ವಿಷಯವಲ್ಲ” ಎಂದು ಅವರು ಅಂತವರಿಗೆ ಸರಿಯಾದ ಉತ್ತರವನ್ನೇ ನೀಡಿದ್ದರು. “ಭಾರತೀಯ ಮುಸ್ಲಿಮರು ಈ ಮಣ್ಣಿನ ಮಕ್ಕಳು. ಆದುದರಿಂದ ನಾವು ಭಾರತೀಯ ಪೌರರ ಹಕ್ಕುಗಳನ್ನು ಕೇಳುತ್ತಿದ್ದೇವೆ” ಎಂದು ವಕೀಲರಾದ ಅವರು ಹೇಳಿದ್ದರು.

ಇದೀಗ ಏಳು ದಶಕಗಳ ನಂತರ ಮುಸ್ಲಿಂ ಸಮುದಾಯವನ್ನು ಅದೇ ರೀತಿಯ, ಅಥವಾ ಅದಕ್ಕಿಂತ ಹೆಚ್ಚಿನ ಸಾರ್ವಜನಿಕ ಅಣಕಕ್ಕೆ ಗುರಿಪಡಿಸಲಾಗುತ್ತಿದೆ. ದೇಶದ ಪೌರತ್ವ ಕಾಯಿದೆಗೆ ಧಾರ್ಮಿಕ ಮಾನದಂಡ ನೀಡುವ ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ), ಎನ್‌ಪಿಎ ಮತ್ತು ಎನ್‌ಆರ್‌ಸಿ ವಿರುದ್ಧ ಲಕ್ಷಾಂತರ ಭಾರತೀಯರು ಬೀದಿಗಿಳಿದಿರುವ ಹೊತ್ತಿನಲ್ಲಿ ಅಂದು ಸಂವಿಧಾನ ಸಭೆಯಲ್ಲಿ ಎತ್ತಲಾಗಿದ್ದ ಕೆಲವು ಪ್ರಶ್ನೆಗಳನ್ನೇ ಈಗ ಎತ್ತಲಾಗುತ್ತಿದೆ.

ಸಂವಿಧಾನದ ಕುರಿತು ಹಲವಾರು ಭಯಗಳು, ಅಸಮ್ಮತಿಗಳು ಮತ್ತು ಟೀಕೆಗಳು ಇದ್ದ ಹೊರತಾಗಿಯೂ, ಭಾರತದ ಭವಿಷ್ಯ ಏನಾಗಿರಬೇಕು ಎಂಬದಕ್ಕಿಂತ ಹೆಚ್ಚಾಗಿ, ಏನಾಗಿರಬಾರದು ಎಂಬ ವಿವೇಕ ಅಂದು ಜಯಿಸಿತ್ತು. ಆಗಲೂ ಭಾರತವನ್ನು ಬಹುಸಂಖ್ಯಾತರ ದೇಶವನ್ನಾಗಿ ಮಾಡುವುದರ ಪರವಾಗಿ ಬೊಬ್ಬೆಗಳು ಇದ್ದರೂ, ಅದನ್ನು ಜಾತ್ಯಾತೀತ ಪ್ರಜಾಪ್ರಭುತ್ವವನ್ನಾಗಿ ಮಾಡಬೇಕು ಎಂದು ಅಂಬೇಡ್ಕರ್ ಮತ್ತು ನೆಹರೂ ನೇತೃತ್ವದಲ್ಲಿ ಸಂವಿಧಾನ ಸಭೆಯ ಸದಸ್ಯರು ನಿರ್ಣಾಯಕವಾಗಿ ನಿರ್ಧರಿಸಿದ್ದರು. ಆಗ ನಡೆದ ಚರ್ಚೆಗಳು ಇಂದಿನ ಸಂದರ್ಭವನ್ನು ಅರ್ಥ ಮಾಡಿಕೊಳ್ಳಲು ನೆರವಾಗಬಹುದು.

ರಕ್ತವೇ? ಹುಟ್ಟೇ?

ಸಂವಿಧಾನ ಸಭೆಯಲ್ಲಿ ನಡೆದ ಅತ್ಯಂತ ಕಠಿಣವಾದ ಕದನವು, ಭಾರತದ ಪೌರತ್ವವನ್ನು ಯಾವ ಆಧಾರದಲ್ಲಿ ನಿರ್ಣಯಿಸಬೇಕು ಎಂಬುದಾಗಿತ್ತು. ಇದು ಲೆಕ್ಸ್ ಸೋಲಿ (lex soli) ಅಂದರೆ, ಜನ್ಮಸ್ಥಾನದ ಕಾನೂನು ಮತ್ತು ಲೆಕ್ಸ್ ಸಾಂಗ್ವಿನಿಸ್ (lex sanguinis) ಅಂದರೆ, ರಕ್ತ ಸಂಬಂಧದ ಕಾನೂನುಗಳೆರಡರ ಪ್ರಕಾರವೂ ಪೌರತ್ವವು ನಿರ್ಧಾರವಾಗುತ್ತದೆ ಎಂದು ಅಲ್ಲಾಡಿ ಕೃಷ್ಣಸ್ವಾಮಿ ಅಯ್ಯಂಗಾರ್ ವಾದಿಸಿದ್ದರು. ಸಂವಿಧಾನದಲ್ಲಿರುವ “ನಾವು ಜನರು” ಎಂಬ ಉಲ್ಲೇಖದಂತೆ ದೇಶದಲ್ಲಿ ಹುಟ್ಟಿದ ಎಲ್ಲರನ್ನೂ ಯಾವುದೇ ಧರ್ಮದ ಹಂಗಿಲ್ಲದೆ ಭಾರತೀಯ ಪ್ರಜೆಗಳೆಂದು ಪರಿಗಣಿಸಬೇಕು ಎಂದು ಹಲವರು ವಾದಿಸಿದ್ದರು.

ಇದಕ್ಕೆ ವ್ಯತಿರಿಕ್ತವಾಗಿ ಎಲ್ಲಿಯೇ ಹುಟ್ಟಿದ್ದರೂ ರಕ್ತಸಂಬಂಧ, ನಿರ್ದಿಷ್ಟ ಜನಾಂಗಕ್ಕೆ ಸೇರಿದವರಿಗೆ ಪೌರತ್ವ ನೀಡಬೇಕು ಎಂದು ಕೆಲವರು ವಾದಿಸಿದ್ದರು. ಇಂದು ಇದೇ ವಾದ ಸಿಎಎ ಮೂಲಕ ಮತ್ತೆ ತಲೆಯೆತ್ತಿದೆ. ಅದರ ಪ್ರಕಾರ ನಿರ್ದಿಷ್ಟ ಜನಾಂಗಕ್ಕೆ, ಅಥವಾ ಧರ್ಮಕ್ಕೆ ಸೇರದ ಜನರು (ಮುಖ್ಯವಾಗಿ ಮುಸ್ಲಿಮರು) ಸಮಾನ ಹಕ್ಕುಗಳನ್ನು ಹೊಂದಿಲ್ಲ ಮತ್ತು ಅವರನ್ನು ನೈಸರ್ಗಿಕ ಪೌರರು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂಬುದು ಸಿಎಎ ಬೆಂಬಲಿಗರ ವಾದವಾಗಿದೆ.

ಜಾತ್ಯಾತೀತತೆ ಅಪರಾಧವೇ?

ಧರ್ಮಾಧರಿತ ಪೌರತ್ವವನ್ನು ಬಿ.ಆರ್. ಅಂಬೇಡ್ಕರ್, ಜವಾಹರಲಾಲ್ ನೆಹರೂ ಮತ್ತು ಹಲವಾರು ಇತರರು ವಿರೋಧಿಸಿದ್ದರು. ಆದರೆ ಕೆಲವರು- ನಾಝಿ ಜರ್ಮನಿಯ ತತ್ವಗಳು ಮತ್ತು ಫ್ಯಾಸಿಸ್ಟ್ ಇಟಲಿಯ ತತ್ವಗಳಿಂದ ಪ್ರಭಾವಿತರಾಗಿ ಅವುಗಳನ್ನು ಮೆಚ್ಚಿ ಅನುಸರಿಸುತ್ತಿದ್ದ ಕೆಲವು ಸಂಘಟನೆಗಳಿಗೆ ಸೇರಿದವರೇ ಧರ್ಮ ಮತ್ತು ಪೌರತ್ವಗಳ ನಡುವೆ ಸಂಬಂಧ ಕಲ್ಪಿಸಲು ಪಟ್ಟುಹಿಡಿದಿದ್ದರು. (ಅವರೇ ಇಂದಿಲ್ಲಿ ಅಧಿಕಾರ ಹಿಡಿದಿದ್ದಾರೆ.)  ಇವರಲ್ಲಿ ಪ್ರಮುಖರೆಂದರೆ ಪಿ. ಎಸ್. ದೇಶ್‌ಮುಖ್. ಅವರು ಆಗಸ್ಟ್ 11, 1949ರಂದು ಮಾಡಿದ ಭಾಷಣದ ಸಾರಾಂಶ ಕೆಳಗಿದೆ:

ಡಾ. ಬಿ.ಆರ್.  ಅಂಬೇಡ್ಕರ್ ಅವರ ಪೌರತ್ವ ಕುರಿತ ವ್ಯಾಖ್ಯಾನವು  ಭಾರತೀಯ ಪೌರತ್ವವನ್ನು “ವಿಶ್ವದಲ್ಲಿಯೇ ಅತ್ಯಂತ ಅಗ್ಗದ ಪೌರತ್ವ”ವನ್ನಾಗಿ ಮಾಡುವುದೆಂದು ದೇಶ್‌ಮುಖ್ ಅವರು ಭಾವಿಸಿದ್ದರು. ಹುಟ್ಟಿನಿಂದ ಪೌರತ್ವ ನೀಡುವ ಕುರಿತು ಅವರಿಗೆ ಅಸಮಾಧಾನವಿತ್ತು. ಕರಡು ವಿಧಿಯನ್ನು ಸ್ವೀಕರಿಸಿದರೆ ಮುಂಬಯಿ ಬಂದರಿನ ಮೂಲಕ ಪ್ರಯಾಣಿಸುವ ಮಹಿಳೆಯೊಬ್ಬಳು ಹೆತ್ತ ಮಗುವಿಗೂ ಪೌರತ್ವ ನೀಡಬೇಕಾಗುತ್ತದೆ ಎಂದು ಅವರು ವಾದಿಸಿದ್ದರು ದೇಶ್‌ಮುಖ್ ಅವರು ಕನಿಷ್ಟ ಎರಡು ತಿದ್ದುಪಡಿಗಳಿಗೆ ಬೇಡಿಕೆ ಇಟ್ಟಿದ್ದರು.

ಮೊದಲನೆಯದು ಕೇವಲ ಭಾರತದಲ್ಲಿ ಹುಟ್ಟುವುದು ಸಾಕಾಗದು; ಮಗು ಭಾರತೀಯ ಹೆತ್ತವರಿಗೆ ಹುಟ್ಟಿರಬೇಕು ಎಂಬುದು. ಎರಡನೆಯದೆಂದರೆ, ಹಿಂದೂಗಳು ಮತ್ತು ಸಿಕ್ಖರು ಪ್ರಪಂಚದ ಯಾವುದೇ ಕಡೆಯಲ್ಲಿ ವಾಸಿಸುತ್ತಿದ್ದರೂ ಭಾರತೀಯ ಪೌರತ್ವಕ್ಕೆ ಅರ್ಹರಾಗಿರಬೇಕು ಎಂಬುದು.

ಇದೇ ಅಭಿಪ್ರಾಯಗಳು ನರೇಂದ್ರ ಮೋದಿ ಚುನಾವಣಾ ಗೆಲುವಿನ ನಂತರ ಮೇ 2019ರಂದು ಮಾಡಿದ ಭಾಷಣದಲ್ಲಿ ಪ್ರತಿಫಲಿಸಿದೆ. ಅದರಲ್ಲಿ ಅವರು ಜಾತ್ಯತೀತ ಪರಿಕಲ್ಪನೆಯನ್ನು ದೂರಿ, ಯಾವ ರಾಜಕೀಯ ಪಕ್ಷವೂ ಜಾತ್ಯತೀತತೆಯ ಮುಖವಾಡದ ಹಿಂದೆ ಅಡಗುವ ಧೈರ್ಯ ತೋರಿಲ್ಲ ಎಂದು ಹೇಳಿದ್ದರು. ಅದರ ಬೆನ್ನಲ್ಲೇ ಪೌರತ್ವದ ಪ್ರಶ್ನೆ ಎದ್ದಿದೆ. ದೇಶವನ್ನು ತಳಮಳಕ್ಕೆ ದೂಡಿದೆ. ಇದು 1948ರ ನಾಝಿ, ಫ್ಯಾಸಿಸ್ಟ್ ಬೆಂಬಲಿಗರ ಪ್ರಯತ್ನವನ್ನು ಮುಂದುವರಿಸುವ ಯತ್ನ.

(ಜಾತ್ಯತೀತತೆಯ ಪರವಾಗಿ ಸಂವಿಧಾನ ಸಭೆಯಲ್ಲಿ ಅಂದು ನಡೆದ ಚರ್ಚೆಗಳ ಕುರಿತು ಪ್ರತ್ಯೇಕ ಲೇಖನವನ್ನು ನಿರೀಕ್ಷಿಸಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...