Homeಮುಖಪುಟಧರ್ಮಾಧಾರಿತ ಪೌರತ್ವ: ಇಂದಿನ ಭಾರತದ ಬಗ್ಗೆ 70 ವರ್ಷಗಳ ಹಿಂದೆಯೇ ಚರ್ಚಿಸಿದ್ದ ಸಂವಿಧಾನ ಸಭೆ

ಧರ್ಮಾಧಾರಿತ ಪೌರತ್ವ: ಇಂದಿನ ಭಾರತದ ಬಗ್ಗೆ 70 ವರ್ಷಗಳ ಹಿಂದೆಯೇ ಚರ್ಚಿಸಿದ್ದ ಸಂವಿಧಾನ ಸಭೆ

ಭಾರತೀಯ ಮುಸ್ಲಿಮರು ಮತ್ತು ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಇಂದು ವ್ಯಕ್ತಪಡಿಸಲಾಗುತ್ತಿರುವ ಅಭಿಪ್ರಾಯಗಳನ್ನು ಸಂವಿಧಾನ ಸಭೆಯು 70 ವರ್ಷಗಳ ಹಿಂದೆಯೇ ಚರ್ಚಿಸಿತ್ತು.

- Advertisement -
- Advertisement -

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ನವಂಬರ್ 1948ರಲ್ಲಿ ಸದಸ್ಯ ಝಡ್.ಎಚ್. ಲಾರಿ ಅವರು ಅಲ್ಪಸಂಖ್ಯಾತರ ಹಕ್ಕುಗಳ ಪರವಾಗಿ ಸಂವಿಧಾನ ಸಭೆಯಲ್ಲಿ ತನ್ನ ವಾದವನ್ನು ಮಂಡಿಸುತ್ತಿದ್ದಾಗ ಅವರನ್ನು ಮತ್ತೆಮತ್ತೆ ಅಣಕಿಸಲಾಗಿತ್ತು. ಯುನೈಟೆಡ್ ಪ್ರಾವಿನ್ಸಸ್ (ಬಹುತೇಕ ಈಗಿನ ಉತ್ತರ ಪ್ರದೇಶ)ನ ಈ ಮುಸ್ಲಿಮ್ ನಾಯಕನಲ್ಲಿ ಕೆಲವು ಸದಸ್ಯರು, ಪಾಕಿಸ್ತಾನದಲ್ಲಿ “ನಿಮ್ಮ ನಾಯಕರು” ಅಲ್ಲಿನ ಅಲ್ಪಸಂಖ್ಯಾತರ ರಕ್ಷಣೆಗೆ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸುವ ಮೂಲಕ ಅವರ ಭಾರತೀಯ ಪೌರತ್ವವನ್ನೇ ಪ್ರಶ್ನೆ ಮಾಡಿದ್ದರು.

“ನಾನು ನನ್ನ ಹಕ್ಕುಗಳನ್ನು ಪಾಕಿಸ್ತಾನಕ್ಕೆ ಅಡವು ಇಟ್ಟಿಲ್ಲ. ಪಾಕಿಸ್ತಾನ ಏನು ಮಾಡುತ್ತದೆ, ಏನು ಮಾಡುವುದಿಲ್ಲ ಎಂಬುದು ನನಗೆ ಸಂಬಂಧಿಸಿದ ವಿಷಯವಲ್ಲ” ಎಂದು ಅವರು ಅಂತವರಿಗೆ ಸರಿಯಾದ ಉತ್ತರವನ್ನೇ ನೀಡಿದ್ದರು. “ಭಾರತೀಯ ಮುಸ್ಲಿಮರು ಈ ಮಣ್ಣಿನ ಮಕ್ಕಳು. ಆದುದರಿಂದ ನಾವು ಭಾರತೀಯ ಪೌರರ ಹಕ್ಕುಗಳನ್ನು ಕೇಳುತ್ತಿದ್ದೇವೆ” ಎಂದು ವಕೀಲರಾದ ಅವರು ಹೇಳಿದ್ದರು.

ಇದೀಗ ಏಳು ದಶಕಗಳ ನಂತರ ಮುಸ್ಲಿಂ ಸಮುದಾಯವನ್ನು ಅದೇ ರೀತಿಯ, ಅಥವಾ ಅದಕ್ಕಿಂತ ಹೆಚ್ಚಿನ ಸಾರ್ವಜನಿಕ ಅಣಕಕ್ಕೆ ಗುರಿಪಡಿಸಲಾಗುತ್ತಿದೆ. ದೇಶದ ಪೌರತ್ವ ಕಾಯಿದೆಗೆ ಧಾರ್ಮಿಕ ಮಾನದಂಡ ನೀಡುವ ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ), ಎನ್‌ಪಿಎ ಮತ್ತು ಎನ್‌ಆರ್‌ಸಿ ವಿರುದ್ಧ ಲಕ್ಷಾಂತರ ಭಾರತೀಯರು ಬೀದಿಗಿಳಿದಿರುವ ಹೊತ್ತಿನಲ್ಲಿ ಅಂದು ಸಂವಿಧಾನ ಸಭೆಯಲ್ಲಿ ಎತ್ತಲಾಗಿದ್ದ ಕೆಲವು ಪ್ರಶ್ನೆಗಳನ್ನೇ ಈಗ ಎತ್ತಲಾಗುತ್ತಿದೆ.

ಸಂವಿಧಾನದ ಕುರಿತು ಹಲವಾರು ಭಯಗಳು, ಅಸಮ್ಮತಿಗಳು ಮತ್ತು ಟೀಕೆಗಳು ಇದ್ದ ಹೊರತಾಗಿಯೂ, ಭಾರತದ ಭವಿಷ್ಯ ಏನಾಗಿರಬೇಕು ಎಂಬದಕ್ಕಿಂತ ಹೆಚ್ಚಾಗಿ, ಏನಾಗಿರಬಾರದು ಎಂಬ ವಿವೇಕ ಅಂದು ಜಯಿಸಿತ್ತು. ಆಗಲೂ ಭಾರತವನ್ನು ಬಹುಸಂಖ್ಯಾತರ ದೇಶವನ್ನಾಗಿ ಮಾಡುವುದರ ಪರವಾಗಿ ಬೊಬ್ಬೆಗಳು ಇದ್ದರೂ, ಅದನ್ನು ಜಾತ್ಯಾತೀತ ಪ್ರಜಾಪ್ರಭುತ್ವವನ್ನಾಗಿ ಮಾಡಬೇಕು ಎಂದು ಅಂಬೇಡ್ಕರ್ ಮತ್ತು ನೆಹರೂ ನೇತೃತ್ವದಲ್ಲಿ ಸಂವಿಧಾನ ಸಭೆಯ ಸದಸ್ಯರು ನಿರ್ಣಾಯಕವಾಗಿ ನಿರ್ಧರಿಸಿದ್ದರು. ಆಗ ನಡೆದ ಚರ್ಚೆಗಳು ಇಂದಿನ ಸಂದರ್ಭವನ್ನು ಅರ್ಥ ಮಾಡಿಕೊಳ್ಳಲು ನೆರವಾಗಬಹುದು.

ರಕ್ತವೇ? ಹುಟ್ಟೇ?

ಸಂವಿಧಾನ ಸಭೆಯಲ್ಲಿ ನಡೆದ ಅತ್ಯಂತ ಕಠಿಣವಾದ ಕದನವು, ಭಾರತದ ಪೌರತ್ವವನ್ನು ಯಾವ ಆಧಾರದಲ್ಲಿ ನಿರ್ಣಯಿಸಬೇಕು ಎಂಬುದಾಗಿತ್ತು. ಇದು ಲೆಕ್ಸ್ ಸೋಲಿ (lex soli) ಅಂದರೆ, ಜನ್ಮಸ್ಥಾನದ ಕಾನೂನು ಮತ್ತು ಲೆಕ್ಸ್ ಸಾಂಗ್ವಿನಿಸ್ (lex sanguinis) ಅಂದರೆ, ರಕ್ತ ಸಂಬಂಧದ ಕಾನೂನುಗಳೆರಡರ ಪ್ರಕಾರವೂ ಪೌರತ್ವವು ನಿರ್ಧಾರವಾಗುತ್ತದೆ ಎಂದು ಅಲ್ಲಾಡಿ ಕೃಷ್ಣಸ್ವಾಮಿ ಅಯ್ಯಂಗಾರ್ ವಾದಿಸಿದ್ದರು. ಸಂವಿಧಾನದಲ್ಲಿರುವ “ನಾವು ಜನರು” ಎಂಬ ಉಲ್ಲೇಖದಂತೆ ದೇಶದಲ್ಲಿ ಹುಟ್ಟಿದ ಎಲ್ಲರನ್ನೂ ಯಾವುದೇ ಧರ್ಮದ ಹಂಗಿಲ್ಲದೆ ಭಾರತೀಯ ಪ್ರಜೆಗಳೆಂದು ಪರಿಗಣಿಸಬೇಕು ಎಂದು ಹಲವರು ವಾದಿಸಿದ್ದರು.

ಇದಕ್ಕೆ ವ್ಯತಿರಿಕ್ತವಾಗಿ ಎಲ್ಲಿಯೇ ಹುಟ್ಟಿದ್ದರೂ ರಕ್ತಸಂಬಂಧ, ನಿರ್ದಿಷ್ಟ ಜನಾಂಗಕ್ಕೆ ಸೇರಿದವರಿಗೆ ಪೌರತ್ವ ನೀಡಬೇಕು ಎಂದು ಕೆಲವರು ವಾದಿಸಿದ್ದರು. ಇಂದು ಇದೇ ವಾದ ಸಿಎಎ ಮೂಲಕ ಮತ್ತೆ ತಲೆಯೆತ್ತಿದೆ. ಅದರ ಪ್ರಕಾರ ನಿರ್ದಿಷ್ಟ ಜನಾಂಗಕ್ಕೆ, ಅಥವಾ ಧರ್ಮಕ್ಕೆ ಸೇರದ ಜನರು (ಮುಖ್ಯವಾಗಿ ಮುಸ್ಲಿಮರು) ಸಮಾನ ಹಕ್ಕುಗಳನ್ನು ಹೊಂದಿಲ್ಲ ಮತ್ತು ಅವರನ್ನು ನೈಸರ್ಗಿಕ ಪೌರರು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂಬುದು ಸಿಎಎ ಬೆಂಬಲಿಗರ ವಾದವಾಗಿದೆ.

ಜಾತ್ಯಾತೀತತೆ ಅಪರಾಧವೇ?

ಧರ್ಮಾಧರಿತ ಪೌರತ್ವವನ್ನು ಬಿ.ಆರ್. ಅಂಬೇಡ್ಕರ್, ಜವಾಹರಲಾಲ್ ನೆಹರೂ ಮತ್ತು ಹಲವಾರು ಇತರರು ವಿರೋಧಿಸಿದ್ದರು. ಆದರೆ ಕೆಲವರು- ನಾಝಿ ಜರ್ಮನಿಯ ತತ್ವಗಳು ಮತ್ತು ಫ್ಯಾಸಿಸ್ಟ್ ಇಟಲಿಯ ತತ್ವಗಳಿಂದ ಪ್ರಭಾವಿತರಾಗಿ ಅವುಗಳನ್ನು ಮೆಚ್ಚಿ ಅನುಸರಿಸುತ್ತಿದ್ದ ಕೆಲವು ಸಂಘಟನೆಗಳಿಗೆ ಸೇರಿದವರೇ ಧರ್ಮ ಮತ್ತು ಪೌರತ್ವಗಳ ನಡುವೆ ಸಂಬಂಧ ಕಲ್ಪಿಸಲು ಪಟ್ಟುಹಿಡಿದಿದ್ದರು. (ಅವರೇ ಇಂದಿಲ್ಲಿ ಅಧಿಕಾರ ಹಿಡಿದಿದ್ದಾರೆ.)  ಇವರಲ್ಲಿ ಪ್ರಮುಖರೆಂದರೆ ಪಿ. ಎಸ್. ದೇಶ್‌ಮುಖ್. ಅವರು ಆಗಸ್ಟ್ 11, 1949ರಂದು ಮಾಡಿದ ಭಾಷಣದ ಸಾರಾಂಶ ಕೆಳಗಿದೆ:

ಡಾ. ಬಿ.ಆರ್.  ಅಂಬೇಡ್ಕರ್ ಅವರ ಪೌರತ್ವ ಕುರಿತ ವ್ಯಾಖ್ಯಾನವು  ಭಾರತೀಯ ಪೌರತ್ವವನ್ನು “ವಿಶ್ವದಲ್ಲಿಯೇ ಅತ್ಯಂತ ಅಗ್ಗದ ಪೌರತ್ವ”ವನ್ನಾಗಿ ಮಾಡುವುದೆಂದು ದೇಶ್‌ಮುಖ್ ಅವರು ಭಾವಿಸಿದ್ದರು. ಹುಟ್ಟಿನಿಂದ ಪೌರತ್ವ ನೀಡುವ ಕುರಿತು ಅವರಿಗೆ ಅಸಮಾಧಾನವಿತ್ತು. ಕರಡು ವಿಧಿಯನ್ನು ಸ್ವೀಕರಿಸಿದರೆ ಮುಂಬಯಿ ಬಂದರಿನ ಮೂಲಕ ಪ್ರಯಾಣಿಸುವ ಮಹಿಳೆಯೊಬ್ಬಳು ಹೆತ್ತ ಮಗುವಿಗೂ ಪೌರತ್ವ ನೀಡಬೇಕಾಗುತ್ತದೆ ಎಂದು ಅವರು ವಾದಿಸಿದ್ದರು ದೇಶ್‌ಮುಖ್ ಅವರು ಕನಿಷ್ಟ ಎರಡು ತಿದ್ದುಪಡಿಗಳಿಗೆ ಬೇಡಿಕೆ ಇಟ್ಟಿದ್ದರು.

ಮೊದಲನೆಯದು ಕೇವಲ ಭಾರತದಲ್ಲಿ ಹುಟ್ಟುವುದು ಸಾಕಾಗದು; ಮಗು ಭಾರತೀಯ ಹೆತ್ತವರಿಗೆ ಹುಟ್ಟಿರಬೇಕು ಎಂಬುದು. ಎರಡನೆಯದೆಂದರೆ, ಹಿಂದೂಗಳು ಮತ್ತು ಸಿಕ್ಖರು ಪ್ರಪಂಚದ ಯಾವುದೇ ಕಡೆಯಲ್ಲಿ ವಾಸಿಸುತ್ತಿದ್ದರೂ ಭಾರತೀಯ ಪೌರತ್ವಕ್ಕೆ ಅರ್ಹರಾಗಿರಬೇಕು ಎಂಬುದು.

ಇದೇ ಅಭಿಪ್ರಾಯಗಳು ನರೇಂದ್ರ ಮೋದಿ ಚುನಾವಣಾ ಗೆಲುವಿನ ನಂತರ ಮೇ 2019ರಂದು ಮಾಡಿದ ಭಾಷಣದಲ್ಲಿ ಪ್ರತಿಫಲಿಸಿದೆ. ಅದರಲ್ಲಿ ಅವರು ಜಾತ್ಯತೀತ ಪರಿಕಲ್ಪನೆಯನ್ನು ದೂರಿ, ಯಾವ ರಾಜಕೀಯ ಪಕ್ಷವೂ ಜಾತ್ಯತೀತತೆಯ ಮುಖವಾಡದ ಹಿಂದೆ ಅಡಗುವ ಧೈರ್ಯ ತೋರಿಲ್ಲ ಎಂದು ಹೇಳಿದ್ದರು. ಅದರ ಬೆನ್ನಲ್ಲೇ ಪೌರತ್ವದ ಪ್ರಶ್ನೆ ಎದ್ದಿದೆ. ದೇಶವನ್ನು ತಳಮಳಕ್ಕೆ ದೂಡಿದೆ. ಇದು 1948ರ ನಾಝಿ, ಫ್ಯಾಸಿಸ್ಟ್ ಬೆಂಬಲಿಗರ ಪ್ರಯತ್ನವನ್ನು ಮುಂದುವರಿಸುವ ಯತ್ನ.

(ಜಾತ್ಯತೀತತೆಯ ಪರವಾಗಿ ಸಂವಿಧಾನ ಸಭೆಯಲ್ಲಿ ಅಂದು ನಡೆದ ಚರ್ಚೆಗಳ ಕುರಿತು ಪ್ರತ್ಯೇಕ ಲೇಖನವನ್ನು ನಿರೀಕ್ಷಿಸಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...