Homeಕರ್ನಾಟಕಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಭಾರೀ ಪ್ರತಿರೋಧದ ನಂತರ ವಿವಾದಾತ್ಮಕ ಪೋಸ್ಟರ್ ಹಿಂಪಡೆದು ಅಂಬೇಡ್ಕರ್‌ ಭಾವಚಿತ್ರ ಇರುವ ಪೋಸ್ಟರ್‌ ಬಿಡುಗಡೆ ಮಾಡಿದ ಆಯೋಜಕರು

- Advertisement -
- Advertisement -

ಸಂವಿಧಾನದ ಶಿಲ್ಪಿ, ಭಾರತ ಸಂವಿಧಾನದ ಪಿತಾಮಹಾ ಬಾಬಾ ಸಾಹೇಬ್‌ ಅಂಬೇಡ್ಕರ್ ರವರನ್ನು ನೆನಪಿಸಿಕೊಳ್ಳದೇ ಸಂವಿಧಾನ ದಿನಾಚರಣೆ ಮಾಡಲು ಸಾಧ್ಯವೇ? ಅಂತಹ ದುಸ್ಸಾಹಸಕ್ಕೆ ಮುಂದಾಗಿ ಕೈ ಸುಟ್ಟುಕೊಂಡ ಘಟನೆ ಬೆಂಗಳೂರಿನಲ್ಲಿ ಇಂದು ನಡೆದಿದೆ.

ನವ ಬೆಂಗಳೂರು ಫೌಂಡೇಶನ್‌ ಎಂಬ ಸಂಸ್ಥೆಯು ನವೆಂಬರ್‌ 24ರ ಭಾನುವಾರ ಬೆಂಗಳೂರಿನ ಜಯನಗರದ ಆರ್‌ವಿ ಟೀಚರ್ಸ್‌ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಹಮ್ಮಿಕೊಂಡಿದೆ. ಅದಕ್ಕಾಗಿ ಸಿದ್ದಪಡಿಸಿದ ಪೋಸ್ಟರ್‌ನಲ್ಲಿ ಭಾರತ ಸಂವಿಧಾನದ ಪಿತಾಮಹಾ ಬಾಬಾ ಸಾಹೇಬ್‌ ಅಂಬೇಡ್ಕರ್ ಫೋಟೊ ಹಾಕುವ ಬದಲು ಜನಸಂಘದ ಸ್ಥಾಪಕ ಶ್ಯಾಂ ಪ್ರಸಾದ್‌ ಮುಖರ್ಜಿಯವರ ಫೋಟೊ ಮತ್ತು ಕಾಶ್ಮೀರದ ಭೂಪಟ ಹಾಕಿದ್ದಾರೆ.

ಈ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ಬಂದಿದ್ದೆ ತಡ ಪ್ರಗತಿಪರ ಸಂಘಟನೆಗಳು ಮತ್ತು ವ್ಯಕ್ತಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ನೂರಾರು ಜನ ಸಂಘಟಕರಿಗೆ ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಾಬಾ ಸಾಹೇಬ್ ಅಂಬೇಡ್ಕರರ ಭಾವಚಿತ್ರವಿಲ್ಲದೆ “ಸಂವಿಧಾನ ದಿನಾಚರಣೆ” ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರ ಭಾವಚಿತ್ರ ಇಟ್ಟು ಅವಮಾನಿಸಲಾಗಿದೆ. ಇದನ್ನು ಅಂಬೇಡ್ಕರ್ ಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದು ವಜ್ರಮುನಿ ಸಿಂಗ್‌ ಎಂಬುವವರು ತಿಳಿಸಿದ್ದಾರೆ.

ಇದು ಯಾವ ಸಂವಿಧಾನ ದಿನಾಚರಣೆ? ಸಂವಿಧಾನ ರೂಪಿಸಿದವರು,ಬಾಬಾ ಸಾಹೇಬರಾ ಇಲ್ಲ ಸಂಘೀ ನಾಯಕ ಶ್ಯಾಮ ಪ್ರಸಾದ ಮುಖರ್ಜಿಯಾ? ಕುಚೇಷ್ಟೆಗೂ ಒಂದು ಮಿತಿಯಿರಲಿ ಎಂದು ಹಿರಿಯ ಪತ್ರಕರ್ತರಾದ ಸನತ್‌ ಕುಮಾರ್‌ ಬೆಳಗಲಿಯವರು ಕಿಡಿಕಾರಿದ್ದಾರೆ.

ನಮ್ಮ ಕಾಲದ ಭಂಡಾಟ ಎಂದರೆ ಇದು!! ಎಲ್ಲೂ ಬಾಬಾಸಾಹೇಬರ ಪ್ರಸ್ತಾಪವೇ ಇಲ್ಲ. ಶಾಂಪ್ರಸಾದ್ ಮುಖರ್ಜಿ ಪಟ.ಕೂತಿದೆ. ಚರಿತ್ರೆ ಅಳಿಸಿ ಫೇಕ್ ಚರಿತ್ರೆ ಪ್ರತಿಷ್ಠಾಸುವ ಕ್ರಮ ಇದು. ಸ್ಪೀಕರುಗಳು ಯಾರು ಅಂತ ನೋಡಿದರೆ ಸಾಕು.. ಎಂದು ಹಿರಿಯ ಚಿಂತಕರಾದ ಸುರೇಶ್ ಕಂಜರ್ಪಣೆಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಷ್ಟು ಧೈರ್ಯ ಇವರಿಗೆ ಅಂತ. ಬಹಳ ಅತಿ ಆಗಿದೆ ಈ RSS ಅವರದ್ದು ಬಾಬಾಸಾಹೇಬರ ಫೋಟೋ ತಗೆದುಹಾಕ್ತಾರೆ ಅಂದ್ರೆ‍? ನಿಜಕ್ಕೂ ಇವರಿಗೆ ಪಾಠ ಕಲಿಸದೇ ಬಿಡಬಾರದು ಎಂದು ಸರೋವರ್‌ ಬೆಂಕಿಕೆರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ದೇಶದ ಜಾತಿವ್ಯಾದಿ ಮನುವಾದಿಗಳ ಮನಸ್ಸು ಅದೆಷ್ಟು ಪೂರ್ವಾಗ್ರಹ ಪೀಡಿತರಾಗಿ ಕೊಳೆತು ನಾರುತ್ತಿದೆ ಎಂಬುದನ್ನು ಇಲ್ಲಿ ನೋಡಿ…
#ಅಂಬೇಡ್ಕರರ ಭಾವಚಿತ್ರವಿಲ್ಲದೆ ಸಂವಿಧಾನ ದಿನಾಚರಣೆ ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರನ್ನು ಇಟ್ಟು ಶೋಷಿತರಿಗೆ ಸಂದೇಶ ನೀಡುತ್ತಿದ್ದಾರೆ. ನೀವು ನಮ್ಮ ಕೆಳಗೇ ಇರಬೇಕು ಅಂತ. ನಾವು ಒಗ್ಗಟ್ಟಾಗದಿದ್ದರೆ ಕೆಲವೇ ವರ್ಷಗಳಲ್ಲಿ ಭಾರತವನ್ನ ಸರ್ವಾಧಿಕಾರಕ್ಕೆ ದೂಡಿ ಚಾತುರ್ವರ್ಣ ಸಿದ್ಧಾಂತವನ್ನು ಅಧಿಕೃತವಾಗಿ ಜಾರಿ ಮಾಡಿಬಿಡುತ್ತಾರೆ. ಎಂದು ಅಶೋಕ್‌ ಮೌರ್ಯಯವರು ನುಡಿದಿದ್ದಾರೆ.

#ಅಂಬೇಡ್ಕರರ ಭಾವಚಿತ್ರವಿಲ್ಲದೆ ಸಂವಿಧಾನ ದಿನಾಚರಣೆ ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರನ್ನು ಇಟ್ಟು ಶೋಷಿತರಿಗೆ ಸಂದೇಶ ನೀಡುತ್ತಿದ್ದಾರೆ. ನೀವು ನಮ್ಮ ಕೆಳಗೇ ಇರಬೇಕು ಅಂತ. ನಾವು ಒಗ್ಗಟ್ಟಾಗದಿದ್ದರೆ ಕೆಲವೇ ವರ್ಷಗಳಲ್ಲಿ ಭಾರತವನ್ನ ಸರ್ವಾಧಿಕಾರಕ್ಕೆ ದೂಡಿ ಚಾತುರ್ವರ್ಣ ಸಿದ್ಧಾಂತವನ್ನು ಅಧಿಕೃತವಾಗಿ ಜಾರಿ ಮಾಡಿಬಿಡುತ್ತಾರೆ ಎಂದು ವಿಕಾಸ್ ಆರ್‌ ಮೌರ್ಯ ಹೇಳಿದ್ದಾರೆ.

ಈ ರೀತಿಯಾಗಿ ಸೋಷಿಯಲ್ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಸಂಘಟಕರು ಕೂಡಲೇ ಅಂಬೇಡ್ಕರ್‌ ಭಾವಚಿತ್ರವುಳ್ಳ ಹೊಸ ಪೋಸ್ಟರ್ ಬಿಟ್ಟಿದ್ದಾರೆ. ಶ್ಯಾಂ ಪ್ರಸಾದ್ ಮುಖರ್ಜಿಯವರ ಫೋಟೊವನ್ನು ಕೈಬಿಟ್ಟಿದ್ದಾರೆ.

ಫೋಟೊ ಮಾತ್ರ ಬದಲಾಗಿದೆ ಅಷ್ಟೇ. ಆದರೆ ನಿಮ್ಮ ಮನಸ್ಸಿನಲ್ಲಿನ ವಿಷ ಬದಲಾಗಿಲ್ಲ. ಇರಲಿ ಹೋರಾಟ ಮುಂದುವರೆಯುತ್ತದೆ. ಕೆಟ್ಟ ಮೇಲೆ ನಿಮಗೆ ಬುದ್ದಿ ಬರುತ್ತದೆ ಎಂದು ಹಲವಾರು ಜನ ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...