Homeಕರ್ನಾಟಕಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಭಾರೀ ಪ್ರತಿರೋಧದ ನಂತರ ವಿವಾದಾತ್ಮಕ ಪೋಸ್ಟರ್ ಹಿಂಪಡೆದು ಅಂಬೇಡ್ಕರ್‌ ಭಾವಚಿತ್ರ ಇರುವ ಪೋಸ್ಟರ್‌ ಬಿಡುಗಡೆ ಮಾಡಿದ ಆಯೋಜಕರು

- Advertisement -
- Advertisement -

ಸಂವಿಧಾನದ ಶಿಲ್ಪಿ, ಭಾರತ ಸಂವಿಧಾನದ ಪಿತಾಮಹಾ ಬಾಬಾ ಸಾಹೇಬ್‌ ಅಂಬೇಡ್ಕರ್ ರವರನ್ನು ನೆನಪಿಸಿಕೊಳ್ಳದೇ ಸಂವಿಧಾನ ದಿನಾಚರಣೆ ಮಾಡಲು ಸಾಧ್ಯವೇ? ಅಂತಹ ದುಸ್ಸಾಹಸಕ್ಕೆ ಮುಂದಾಗಿ ಕೈ ಸುಟ್ಟುಕೊಂಡ ಘಟನೆ ಬೆಂಗಳೂರಿನಲ್ಲಿ ಇಂದು ನಡೆದಿದೆ.

ನವ ಬೆಂಗಳೂರು ಫೌಂಡೇಶನ್‌ ಎಂಬ ಸಂಸ್ಥೆಯು ನವೆಂಬರ್‌ 24ರ ಭಾನುವಾರ ಬೆಂಗಳೂರಿನ ಜಯನಗರದ ಆರ್‌ವಿ ಟೀಚರ್ಸ್‌ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಹಮ್ಮಿಕೊಂಡಿದೆ. ಅದಕ್ಕಾಗಿ ಸಿದ್ದಪಡಿಸಿದ ಪೋಸ್ಟರ್‌ನಲ್ಲಿ ಭಾರತ ಸಂವಿಧಾನದ ಪಿತಾಮಹಾ ಬಾಬಾ ಸಾಹೇಬ್‌ ಅಂಬೇಡ್ಕರ್ ಫೋಟೊ ಹಾಕುವ ಬದಲು ಜನಸಂಘದ ಸ್ಥಾಪಕ ಶ್ಯಾಂ ಪ್ರಸಾದ್‌ ಮುಖರ್ಜಿಯವರ ಫೋಟೊ ಮತ್ತು ಕಾಶ್ಮೀರದ ಭೂಪಟ ಹಾಕಿದ್ದಾರೆ.

ಈ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ಬಂದಿದ್ದೆ ತಡ ಪ್ರಗತಿಪರ ಸಂಘಟನೆಗಳು ಮತ್ತು ವ್ಯಕ್ತಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ನೂರಾರು ಜನ ಸಂಘಟಕರಿಗೆ ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಾಬಾ ಸಾಹೇಬ್ ಅಂಬೇಡ್ಕರರ ಭಾವಚಿತ್ರವಿಲ್ಲದೆ “ಸಂವಿಧಾನ ದಿನಾಚರಣೆ” ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರ ಭಾವಚಿತ್ರ ಇಟ್ಟು ಅವಮಾನಿಸಲಾಗಿದೆ. ಇದನ್ನು ಅಂಬೇಡ್ಕರ್ ಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದು ವಜ್ರಮುನಿ ಸಿಂಗ್‌ ಎಂಬುವವರು ತಿಳಿಸಿದ್ದಾರೆ.

ಇದು ಯಾವ ಸಂವಿಧಾನ ದಿನಾಚರಣೆ? ಸಂವಿಧಾನ ರೂಪಿಸಿದವರು,ಬಾಬಾ ಸಾಹೇಬರಾ ಇಲ್ಲ ಸಂಘೀ ನಾಯಕ ಶ್ಯಾಮ ಪ್ರಸಾದ ಮುಖರ್ಜಿಯಾ? ಕುಚೇಷ್ಟೆಗೂ ಒಂದು ಮಿತಿಯಿರಲಿ ಎಂದು ಹಿರಿಯ ಪತ್ರಕರ್ತರಾದ ಸನತ್‌ ಕುಮಾರ್‌ ಬೆಳಗಲಿಯವರು ಕಿಡಿಕಾರಿದ್ದಾರೆ.

ನಮ್ಮ ಕಾಲದ ಭಂಡಾಟ ಎಂದರೆ ಇದು!! ಎಲ್ಲೂ ಬಾಬಾಸಾಹೇಬರ ಪ್ರಸ್ತಾಪವೇ ಇಲ್ಲ. ಶಾಂಪ್ರಸಾದ್ ಮುಖರ್ಜಿ ಪಟ.ಕೂತಿದೆ. ಚರಿತ್ರೆ ಅಳಿಸಿ ಫೇಕ್ ಚರಿತ್ರೆ ಪ್ರತಿಷ್ಠಾಸುವ ಕ್ರಮ ಇದು. ಸ್ಪೀಕರುಗಳು ಯಾರು ಅಂತ ನೋಡಿದರೆ ಸಾಕು.. ಎಂದು ಹಿರಿಯ ಚಿಂತಕರಾದ ಸುರೇಶ್ ಕಂಜರ್ಪಣೆಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಷ್ಟು ಧೈರ್ಯ ಇವರಿಗೆ ಅಂತ. ಬಹಳ ಅತಿ ಆಗಿದೆ ಈ RSS ಅವರದ್ದು ಬಾಬಾಸಾಹೇಬರ ಫೋಟೋ ತಗೆದುಹಾಕ್ತಾರೆ ಅಂದ್ರೆ‍? ನಿಜಕ್ಕೂ ಇವರಿಗೆ ಪಾಠ ಕಲಿಸದೇ ಬಿಡಬಾರದು ಎಂದು ಸರೋವರ್‌ ಬೆಂಕಿಕೆರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ದೇಶದ ಜಾತಿವ್ಯಾದಿ ಮನುವಾದಿಗಳ ಮನಸ್ಸು ಅದೆಷ್ಟು ಪೂರ್ವಾಗ್ರಹ ಪೀಡಿತರಾಗಿ ಕೊಳೆತು ನಾರುತ್ತಿದೆ ಎಂಬುದನ್ನು ಇಲ್ಲಿ ನೋಡಿ…
#ಅಂಬೇಡ್ಕರರ ಭಾವಚಿತ್ರವಿಲ್ಲದೆ ಸಂವಿಧಾನ ದಿನಾಚರಣೆ ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರನ್ನು ಇಟ್ಟು ಶೋಷಿತರಿಗೆ ಸಂದೇಶ ನೀಡುತ್ತಿದ್ದಾರೆ. ನೀವು ನಮ್ಮ ಕೆಳಗೇ ಇರಬೇಕು ಅಂತ. ನಾವು ಒಗ್ಗಟ್ಟಾಗದಿದ್ದರೆ ಕೆಲವೇ ವರ್ಷಗಳಲ್ಲಿ ಭಾರತವನ್ನ ಸರ್ವಾಧಿಕಾರಕ್ಕೆ ದೂಡಿ ಚಾತುರ್ವರ್ಣ ಸಿದ್ಧಾಂತವನ್ನು ಅಧಿಕೃತವಾಗಿ ಜಾರಿ ಮಾಡಿಬಿಡುತ್ತಾರೆ. ಎಂದು ಅಶೋಕ್‌ ಮೌರ್ಯಯವರು ನುಡಿದಿದ್ದಾರೆ.

#ಅಂಬೇಡ್ಕರರ ಭಾವಚಿತ್ರವಿಲ್ಲದೆ ಸಂವಿಧಾನ ದಿನಾಚರಣೆ ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರನ್ನು ಇಟ್ಟು ಶೋಷಿತರಿಗೆ ಸಂದೇಶ ನೀಡುತ್ತಿದ್ದಾರೆ. ನೀವು ನಮ್ಮ ಕೆಳಗೇ ಇರಬೇಕು ಅಂತ. ನಾವು ಒಗ್ಗಟ್ಟಾಗದಿದ್ದರೆ ಕೆಲವೇ ವರ್ಷಗಳಲ್ಲಿ ಭಾರತವನ್ನ ಸರ್ವಾಧಿಕಾರಕ್ಕೆ ದೂಡಿ ಚಾತುರ್ವರ್ಣ ಸಿದ್ಧಾಂತವನ್ನು ಅಧಿಕೃತವಾಗಿ ಜಾರಿ ಮಾಡಿಬಿಡುತ್ತಾರೆ ಎಂದು ವಿಕಾಸ್ ಆರ್‌ ಮೌರ್ಯ ಹೇಳಿದ್ದಾರೆ.

ಈ ರೀತಿಯಾಗಿ ಸೋಷಿಯಲ್ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಸಂಘಟಕರು ಕೂಡಲೇ ಅಂಬೇಡ್ಕರ್‌ ಭಾವಚಿತ್ರವುಳ್ಳ ಹೊಸ ಪೋಸ್ಟರ್ ಬಿಟ್ಟಿದ್ದಾರೆ. ಶ್ಯಾಂ ಪ್ರಸಾದ್ ಮುಖರ್ಜಿಯವರ ಫೋಟೊವನ್ನು ಕೈಬಿಟ್ಟಿದ್ದಾರೆ.

ಫೋಟೊ ಮಾತ್ರ ಬದಲಾಗಿದೆ ಅಷ್ಟೇ. ಆದರೆ ನಿಮ್ಮ ಮನಸ್ಸಿನಲ್ಲಿನ ವಿಷ ಬದಲಾಗಿಲ್ಲ. ಇರಲಿ ಹೋರಾಟ ಮುಂದುವರೆಯುತ್ತದೆ. ಕೆಟ್ಟ ಮೇಲೆ ನಿಮಗೆ ಬುದ್ದಿ ಬರುತ್ತದೆ ಎಂದು ಹಲವಾರು ಜನ ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...