Homeಕರ್ನಾಟಕಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಭಾರೀ ಪ್ರತಿರೋಧದ ನಂತರ ವಿವಾದಾತ್ಮಕ ಪೋಸ್ಟರ್ ಹಿಂಪಡೆದು ಅಂಬೇಡ್ಕರ್‌ ಭಾವಚಿತ್ರ ಇರುವ ಪೋಸ್ಟರ್‌ ಬಿಡುಗಡೆ ಮಾಡಿದ ಆಯೋಜಕರು

- Advertisement -
- Advertisement -

ಸಂವಿಧಾನದ ಶಿಲ್ಪಿ, ಭಾರತ ಸಂವಿಧಾನದ ಪಿತಾಮಹಾ ಬಾಬಾ ಸಾಹೇಬ್‌ ಅಂಬೇಡ್ಕರ್ ರವರನ್ನು ನೆನಪಿಸಿಕೊಳ್ಳದೇ ಸಂವಿಧಾನ ದಿನಾಚರಣೆ ಮಾಡಲು ಸಾಧ್ಯವೇ? ಅಂತಹ ದುಸ್ಸಾಹಸಕ್ಕೆ ಮುಂದಾಗಿ ಕೈ ಸುಟ್ಟುಕೊಂಡ ಘಟನೆ ಬೆಂಗಳೂರಿನಲ್ಲಿ ಇಂದು ನಡೆದಿದೆ.

ನವ ಬೆಂಗಳೂರು ಫೌಂಡೇಶನ್‌ ಎಂಬ ಸಂಸ್ಥೆಯು ನವೆಂಬರ್‌ 24ರ ಭಾನುವಾರ ಬೆಂಗಳೂರಿನ ಜಯನಗರದ ಆರ್‌ವಿ ಟೀಚರ್ಸ್‌ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಹಮ್ಮಿಕೊಂಡಿದೆ. ಅದಕ್ಕಾಗಿ ಸಿದ್ದಪಡಿಸಿದ ಪೋಸ್ಟರ್‌ನಲ್ಲಿ ಭಾರತ ಸಂವಿಧಾನದ ಪಿತಾಮಹಾ ಬಾಬಾ ಸಾಹೇಬ್‌ ಅಂಬೇಡ್ಕರ್ ಫೋಟೊ ಹಾಕುವ ಬದಲು ಜನಸಂಘದ ಸ್ಥಾಪಕ ಶ್ಯಾಂ ಪ್ರಸಾದ್‌ ಮುಖರ್ಜಿಯವರ ಫೋಟೊ ಮತ್ತು ಕಾಶ್ಮೀರದ ಭೂಪಟ ಹಾಕಿದ್ದಾರೆ.

ಈ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ಬಂದಿದ್ದೆ ತಡ ಪ್ರಗತಿಪರ ಸಂಘಟನೆಗಳು ಮತ್ತು ವ್ಯಕ್ತಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ನೂರಾರು ಜನ ಸಂಘಟಕರಿಗೆ ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಾಬಾ ಸಾಹೇಬ್ ಅಂಬೇಡ್ಕರರ ಭಾವಚಿತ್ರವಿಲ್ಲದೆ “ಸಂವಿಧಾನ ದಿನಾಚರಣೆ” ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರ ಭಾವಚಿತ್ರ ಇಟ್ಟು ಅವಮಾನಿಸಲಾಗಿದೆ. ಇದನ್ನು ಅಂಬೇಡ್ಕರ್ ಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದು ವಜ್ರಮುನಿ ಸಿಂಗ್‌ ಎಂಬುವವರು ತಿಳಿಸಿದ್ದಾರೆ.

ಇದು ಯಾವ ಸಂವಿಧಾನ ದಿನಾಚರಣೆ? ಸಂವಿಧಾನ ರೂಪಿಸಿದವರು,ಬಾಬಾ ಸಾಹೇಬರಾ ಇಲ್ಲ ಸಂಘೀ ನಾಯಕ ಶ್ಯಾಮ ಪ್ರಸಾದ ಮುಖರ್ಜಿಯಾ? ಕುಚೇಷ್ಟೆಗೂ ಒಂದು ಮಿತಿಯಿರಲಿ ಎಂದು ಹಿರಿಯ ಪತ್ರಕರ್ತರಾದ ಸನತ್‌ ಕುಮಾರ್‌ ಬೆಳಗಲಿಯವರು ಕಿಡಿಕಾರಿದ್ದಾರೆ.

ನಮ್ಮ ಕಾಲದ ಭಂಡಾಟ ಎಂದರೆ ಇದು!! ಎಲ್ಲೂ ಬಾಬಾಸಾಹೇಬರ ಪ್ರಸ್ತಾಪವೇ ಇಲ್ಲ. ಶಾಂಪ್ರಸಾದ್ ಮುಖರ್ಜಿ ಪಟ.ಕೂತಿದೆ. ಚರಿತ್ರೆ ಅಳಿಸಿ ಫೇಕ್ ಚರಿತ್ರೆ ಪ್ರತಿಷ್ಠಾಸುವ ಕ್ರಮ ಇದು. ಸ್ಪೀಕರುಗಳು ಯಾರು ಅಂತ ನೋಡಿದರೆ ಸಾಕು.. ಎಂದು ಹಿರಿಯ ಚಿಂತಕರಾದ ಸುರೇಶ್ ಕಂಜರ್ಪಣೆಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಷ್ಟು ಧೈರ್ಯ ಇವರಿಗೆ ಅಂತ. ಬಹಳ ಅತಿ ಆಗಿದೆ ಈ RSS ಅವರದ್ದು ಬಾಬಾಸಾಹೇಬರ ಫೋಟೋ ತಗೆದುಹಾಕ್ತಾರೆ ಅಂದ್ರೆ‍? ನಿಜಕ್ಕೂ ಇವರಿಗೆ ಪಾಠ ಕಲಿಸದೇ ಬಿಡಬಾರದು ಎಂದು ಸರೋವರ್‌ ಬೆಂಕಿಕೆರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ದೇಶದ ಜಾತಿವ್ಯಾದಿ ಮನುವಾದಿಗಳ ಮನಸ್ಸು ಅದೆಷ್ಟು ಪೂರ್ವಾಗ್ರಹ ಪೀಡಿತರಾಗಿ ಕೊಳೆತು ನಾರುತ್ತಿದೆ ಎಂಬುದನ್ನು ಇಲ್ಲಿ ನೋಡಿ…
#ಅಂಬೇಡ್ಕರರ ಭಾವಚಿತ್ರವಿಲ್ಲದೆ ಸಂವಿಧಾನ ದಿನಾಚರಣೆ ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರನ್ನು ಇಟ್ಟು ಶೋಷಿತರಿಗೆ ಸಂದೇಶ ನೀಡುತ್ತಿದ್ದಾರೆ. ನೀವು ನಮ್ಮ ಕೆಳಗೇ ಇರಬೇಕು ಅಂತ. ನಾವು ಒಗ್ಗಟ್ಟಾಗದಿದ್ದರೆ ಕೆಲವೇ ವರ್ಷಗಳಲ್ಲಿ ಭಾರತವನ್ನ ಸರ್ವಾಧಿಕಾರಕ್ಕೆ ದೂಡಿ ಚಾತುರ್ವರ್ಣ ಸಿದ್ಧಾಂತವನ್ನು ಅಧಿಕೃತವಾಗಿ ಜಾರಿ ಮಾಡಿಬಿಡುತ್ತಾರೆ. ಎಂದು ಅಶೋಕ್‌ ಮೌರ್ಯಯವರು ನುಡಿದಿದ್ದಾರೆ.

#ಅಂಬೇಡ್ಕರರ ಭಾವಚಿತ್ರವಿಲ್ಲದೆ ಸಂವಿಧಾನ ದಿನಾಚರಣೆ ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರನ್ನು ಇಟ್ಟು ಶೋಷಿತರಿಗೆ ಸಂದೇಶ ನೀಡುತ್ತಿದ್ದಾರೆ. ನೀವು ನಮ್ಮ ಕೆಳಗೇ ಇರಬೇಕು ಅಂತ. ನಾವು ಒಗ್ಗಟ್ಟಾಗದಿದ್ದರೆ ಕೆಲವೇ ವರ್ಷಗಳಲ್ಲಿ ಭಾರತವನ್ನ ಸರ್ವಾಧಿಕಾರಕ್ಕೆ ದೂಡಿ ಚಾತುರ್ವರ್ಣ ಸಿದ್ಧಾಂತವನ್ನು ಅಧಿಕೃತವಾಗಿ ಜಾರಿ ಮಾಡಿಬಿಡುತ್ತಾರೆ ಎಂದು ವಿಕಾಸ್ ಆರ್‌ ಮೌರ್ಯ ಹೇಳಿದ್ದಾರೆ.

ಈ ರೀತಿಯಾಗಿ ಸೋಷಿಯಲ್ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಸಂಘಟಕರು ಕೂಡಲೇ ಅಂಬೇಡ್ಕರ್‌ ಭಾವಚಿತ್ರವುಳ್ಳ ಹೊಸ ಪೋಸ್ಟರ್ ಬಿಟ್ಟಿದ್ದಾರೆ. ಶ್ಯಾಂ ಪ್ರಸಾದ್ ಮುಖರ್ಜಿಯವರ ಫೋಟೊವನ್ನು ಕೈಬಿಟ್ಟಿದ್ದಾರೆ.

ಫೋಟೊ ಮಾತ್ರ ಬದಲಾಗಿದೆ ಅಷ್ಟೇ. ಆದರೆ ನಿಮ್ಮ ಮನಸ್ಸಿನಲ್ಲಿನ ವಿಷ ಬದಲಾಗಿಲ್ಲ. ಇರಲಿ ಹೋರಾಟ ಮುಂದುವರೆಯುತ್ತದೆ. ಕೆಟ್ಟ ಮೇಲೆ ನಿಮಗೆ ಬುದ್ದಿ ಬರುತ್ತದೆ ಎಂದು ಹಲವಾರು ಜನ ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...