Homeಕರ್ನಾಟಕಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಭಾರೀ ಪ್ರತಿರೋಧದ ನಂತರ ವಿವಾದಾತ್ಮಕ ಪೋಸ್ಟರ್ ಹಿಂಪಡೆದು ಅಂಬೇಡ್ಕರ್‌ ಭಾವಚಿತ್ರ ಇರುವ ಪೋಸ್ಟರ್‌ ಬಿಡುಗಡೆ ಮಾಡಿದ ಆಯೋಜಕರು

- Advertisement -
- Advertisement -

ಸಂವಿಧಾನದ ಶಿಲ್ಪಿ, ಭಾರತ ಸಂವಿಧಾನದ ಪಿತಾಮಹಾ ಬಾಬಾ ಸಾಹೇಬ್‌ ಅಂಬೇಡ್ಕರ್ ರವರನ್ನು ನೆನಪಿಸಿಕೊಳ್ಳದೇ ಸಂವಿಧಾನ ದಿನಾಚರಣೆ ಮಾಡಲು ಸಾಧ್ಯವೇ? ಅಂತಹ ದುಸ್ಸಾಹಸಕ್ಕೆ ಮುಂದಾಗಿ ಕೈ ಸುಟ್ಟುಕೊಂಡ ಘಟನೆ ಬೆಂಗಳೂರಿನಲ್ಲಿ ಇಂದು ನಡೆದಿದೆ.

ನವ ಬೆಂಗಳೂರು ಫೌಂಡೇಶನ್‌ ಎಂಬ ಸಂಸ್ಥೆಯು ನವೆಂಬರ್‌ 24ರ ಭಾನುವಾರ ಬೆಂಗಳೂರಿನ ಜಯನಗರದ ಆರ್‌ವಿ ಟೀಚರ್ಸ್‌ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಹಮ್ಮಿಕೊಂಡಿದೆ. ಅದಕ್ಕಾಗಿ ಸಿದ್ದಪಡಿಸಿದ ಪೋಸ್ಟರ್‌ನಲ್ಲಿ ಭಾರತ ಸಂವಿಧಾನದ ಪಿತಾಮಹಾ ಬಾಬಾ ಸಾಹೇಬ್‌ ಅಂಬೇಡ್ಕರ್ ಫೋಟೊ ಹಾಕುವ ಬದಲು ಜನಸಂಘದ ಸ್ಥಾಪಕ ಶ್ಯಾಂ ಪ್ರಸಾದ್‌ ಮುಖರ್ಜಿಯವರ ಫೋಟೊ ಮತ್ತು ಕಾಶ್ಮೀರದ ಭೂಪಟ ಹಾಕಿದ್ದಾರೆ.

ಈ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ಬಂದಿದ್ದೆ ತಡ ಪ್ರಗತಿಪರ ಸಂಘಟನೆಗಳು ಮತ್ತು ವ್ಯಕ್ತಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ನೂರಾರು ಜನ ಸಂಘಟಕರಿಗೆ ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಾಬಾ ಸಾಹೇಬ್ ಅಂಬೇಡ್ಕರರ ಭಾವಚಿತ್ರವಿಲ್ಲದೆ “ಸಂವಿಧಾನ ದಿನಾಚರಣೆ” ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರ ಭಾವಚಿತ್ರ ಇಟ್ಟು ಅವಮಾನಿಸಲಾಗಿದೆ. ಇದನ್ನು ಅಂಬೇಡ್ಕರ್ ಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದು ವಜ್ರಮುನಿ ಸಿಂಗ್‌ ಎಂಬುವವರು ತಿಳಿಸಿದ್ದಾರೆ.

ಇದು ಯಾವ ಸಂವಿಧಾನ ದಿನಾಚರಣೆ? ಸಂವಿಧಾನ ರೂಪಿಸಿದವರು,ಬಾಬಾ ಸಾಹೇಬರಾ ಇಲ್ಲ ಸಂಘೀ ನಾಯಕ ಶ್ಯಾಮ ಪ್ರಸಾದ ಮುಖರ್ಜಿಯಾ? ಕುಚೇಷ್ಟೆಗೂ ಒಂದು ಮಿತಿಯಿರಲಿ ಎಂದು ಹಿರಿಯ ಪತ್ರಕರ್ತರಾದ ಸನತ್‌ ಕುಮಾರ್‌ ಬೆಳಗಲಿಯವರು ಕಿಡಿಕಾರಿದ್ದಾರೆ.

ನಮ್ಮ ಕಾಲದ ಭಂಡಾಟ ಎಂದರೆ ಇದು!! ಎಲ್ಲೂ ಬಾಬಾಸಾಹೇಬರ ಪ್ರಸ್ತಾಪವೇ ಇಲ್ಲ. ಶಾಂಪ್ರಸಾದ್ ಮುಖರ್ಜಿ ಪಟ.ಕೂತಿದೆ. ಚರಿತ್ರೆ ಅಳಿಸಿ ಫೇಕ್ ಚರಿತ್ರೆ ಪ್ರತಿಷ್ಠಾಸುವ ಕ್ರಮ ಇದು. ಸ್ಪೀಕರುಗಳು ಯಾರು ಅಂತ ನೋಡಿದರೆ ಸಾಕು.. ಎಂದು ಹಿರಿಯ ಚಿಂತಕರಾದ ಸುರೇಶ್ ಕಂಜರ್ಪಣೆಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಷ್ಟು ಧೈರ್ಯ ಇವರಿಗೆ ಅಂತ. ಬಹಳ ಅತಿ ಆಗಿದೆ ಈ RSS ಅವರದ್ದು ಬಾಬಾಸಾಹೇಬರ ಫೋಟೋ ತಗೆದುಹಾಕ್ತಾರೆ ಅಂದ್ರೆ‍? ನಿಜಕ್ಕೂ ಇವರಿಗೆ ಪಾಠ ಕಲಿಸದೇ ಬಿಡಬಾರದು ಎಂದು ಸರೋವರ್‌ ಬೆಂಕಿಕೆರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ದೇಶದ ಜಾತಿವ್ಯಾದಿ ಮನುವಾದಿಗಳ ಮನಸ್ಸು ಅದೆಷ್ಟು ಪೂರ್ವಾಗ್ರಹ ಪೀಡಿತರಾಗಿ ಕೊಳೆತು ನಾರುತ್ತಿದೆ ಎಂಬುದನ್ನು ಇಲ್ಲಿ ನೋಡಿ…
#ಅಂಬೇಡ್ಕರರ ಭಾವಚಿತ್ರವಿಲ್ಲದೆ ಸಂವಿಧಾನ ದಿನಾಚರಣೆ ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರನ್ನು ಇಟ್ಟು ಶೋಷಿತರಿಗೆ ಸಂದೇಶ ನೀಡುತ್ತಿದ್ದಾರೆ. ನೀವು ನಮ್ಮ ಕೆಳಗೇ ಇರಬೇಕು ಅಂತ. ನಾವು ಒಗ್ಗಟ್ಟಾಗದಿದ್ದರೆ ಕೆಲವೇ ವರ್ಷಗಳಲ್ಲಿ ಭಾರತವನ್ನ ಸರ್ವಾಧಿಕಾರಕ್ಕೆ ದೂಡಿ ಚಾತುರ್ವರ್ಣ ಸಿದ್ಧಾಂತವನ್ನು ಅಧಿಕೃತವಾಗಿ ಜಾರಿ ಮಾಡಿಬಿಡುತ್ತಾರೆ. ಎಂದು ಅಶೋಕ್‌ ಮೌರ್ಯಯವರು ನುಡಿದಿದ್ದಾರೆ.

#ಅಂಬೇಡ್ಕರರ ಭಾವಚಿತ್ರವಿಲ್ಲದೆ ಸಂವಿಧಾನ ದಿನಾಚರಣೆ ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರನ್ನು ಇಟ್ಟು ಶೋಷಿತರಿಗೆ ಸಂದೇಶ ನೀಡುತ್ತಿದ್ದಾರೆ. ನೀವು ನಮ್ಮ ಕೆಳಗೇ ಇರಬೇಕು ಅಂತ. ನಾವು ಒಗ್ಗಟ್ಟಾಗದಿದ್ದರೆ ಕೆಲವೇ ವರ್ಷಗಳಲ್ಲಿ ಭಾರತವನ್ನ ಸರ್ವಾಧಿಕಾರಕ್ಕೆ ದೂಡಿ ಚಾತುರ್ವರ್ಣ ಸಿದ್ಧಾಂತವನ್ನು ಅಧಿಕೃತವಾಗಿ ಜಾರಿ ಮಾಡಿಬಿಡುತ್ತಾರೆ ಎಂದು ವಿಕಾಸ್ ಆರ್‌ ಮೌರ್ಯ ಹೇಳಿದ್ದಾರೆ.

ಈ ರೀತಿಯಾಗಿ ಸೋಷಿಯಲ್ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಸಂಘಟಕರು ಕೂಡಲೇ ಅಂಬೇಡ್ಕರ್‌ ಭಾವಚಿತ್ರವುಳ್ಳ ಹೊಸ ಪೋಸ್ಟರ್ ಬಿಟ್ಟಿದ್ದಾರೆ. ಶ್ಯಾಂ ಪ್ರಸಾದ್ ಮುಖರ್ಜಿಯವರ ಫೋಟೊವನ್ನು ಕೈಬಿಟ್ಟಿದ್ದಾರೆ.

ಫೋಟೊ ಮಾತ್ರ ಬದಲಾಗಿದೆ ಅಷ್ಟೇ. ಆದರೆ ನಿಮ್ಮ ಮನಸ್ಸಿನಲ್ಲಿನ ವಿಷ ಬದಲಾಗಿಲ್ಲ. ಇರಲಿ ಹೋರಾಟ ಮುಂದುವರೆಯುತ್ತದೆ. ಕೆಟ್ಟ ಮೇಲೆ ನಿಮಗೆ ಬುದ್ದಿ ಬರುತ್ತದೆ ಎಂದು ಹಲವಾರು ಜನ ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...