Homeಕರ್ನಾಟಕಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಭಾರೀ ಪ್ರತಿರೋಧದ ನಂತರ ವಿವಾದಾತ್ಮಕ ಪೋಸ್ಟರ್ ಹಿಂಪಡೆದು ಅಂಬೇಡ್ಕರ್‌ ಭಾವಚಿತ್ರ ಇರುವ ಪೋಸ್ಟರ್‌ ಬಿಡುಗಡೆ ಮಾಡಿದ ಆಯೋಜಕರು

- Advertisement -
- Advertisement -

ಸಂವಿಧಾನದ ಶಿಲ್ಪಿ, ಭಾರತ ಸಂವಿಧಾನದ ಪಿತಾಮಹಾ ಬಾಬಾ ಸಾಹೇಬ್‌ ಅಂಬೇಡ್ಕರ್ ರವರನ್ನು ನೆನಪಿಸಿಕೊಳ್ಳದೇ ಸಂವಿಧಾನ ದಿನಾಚರಣೆ ಮಾಡಲು ಸಾಧ್ಯವೇ? ಅಂತಹ ದುಸ್ಸಾಹಸಕ್ಕೆ ಮುಂದಾಗಿ ಕೈ ಸುಟ್ಟುಕೊಂಡ ಘಟನೆ ಬೆಂಗಳೂರಿನಲ್ಲಿ ಇಂದು ನಡೆದಿದೆ.

ನವ ಬೆಂಗಳೂರು ಫೌಂಡೇಶನ್‌ ಎಂಬ ಸಂಸ್ಥೆಯು ನವೆಂಬರ್‌ 24ರ ಭಾನುವಾರ ಬೆಂಗಳೂರಿನ ಜಯನಗರದ ಆರ್‌ವಿ ಟೀಚರ್ಸ್‌ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಹಮ್ಮಿಕೊಂಡಿದೆ. ಅದಕ್ಕಾಗಿ ಸಿದ್ದಪಡಿಸಿದ ಪೋಸ್ಟರ್‌ನಲ್ಲಿ ಭಾರತ ಸಂವಿಧಾನದ ಪಿತಾಮಹಾ ಬಾಬಾ ಸಾಹೇಬ್‌ ಅಂಬೇಡ್ಕರ್ ಫೋಟೊ ಹಾಕುವ ಬದಲು ಜನಸಂಘದ ಸ್ಥಾಪಕ ಶ್ಯಾಂ ಪ್ರಸಾದ್‌ ಮುಖರ್ಜಿಯವರ ಫೋಟೊ ಮತ್ತು ಕಾಶ್ಮೀರದ ಭೂಪಟ ಹಾಕಿದ್ದಾರೆ.

ಈ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ಬಂದಿದ್ದೆ ತಡ ಪ್ರಗತಿಪರ ಸಂಘಟನೆಗಳು ಮತ್ತು ವ್ಯಕ್ತಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ನೂರಾರು ಜನ ಸಂಘಟಕರಿಗೆ ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಾಬಾ ಸಾಹೇಬ್ ಅಂಬೇಡ್ಕರರ ಭಾವಚಿತ್ರವಿಲ್ಲದೆ “ಸಂವಿಧಾನ ದಿನಾಚರಣೆ” ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರ ಭಾವಚಿತ್ರ ಇಟ್ಟು ಅವಮಾನಿಸಲಾಗಿದೆ. ಇದನ್ನು ಅಂಬೇಡ್ಕರ್ ಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದು ವಜ್ರಮುನಿ ಸಿಂಗ್‌ ಎಂಬುವವರು ತಿಳಿಸಿದ್ದಾರೆ.

ಇದು ಯಾವ ಸಂವಿಧಾನ ದಿನಾಚರಣೆ? ಸಂವಿಧಾನ ರೂಪಿಸಿದವರು,ಬಾಬಾ ಸಾಹೇಬರಾ ಇಲ್ಲ ಸಂಘೀ ನಾಯಕ ಶ್ಯಾಮ ಪ್ರಸಾದ ಮುಖರ್ಜಿಯಾ? ಕುಚೇಷ್ಟೆಗೂ ಒಂದು ಮಿತಿಯಿರಲಿ ಎಂದು ಹಿರಿಯ ಪತ್ರಕರ್ತರಾದ ಸನತ್‌ ಕುಮಾರ್‌ ಬೆಳಗಲಿಯವರು ಕಿಡಿಕಾರಿದ್ದಾರೆ.

ನಮ್ಮ ಕಾಲದ ಭಂಡಾಟ ಎಂದರೆ ಇದು!! ಎಲ್ಲೂ ಬಾಬಾಸಾಹೇಬರ ಪ್ರಸ್ತಾಪವೇ ಇಲ್ಲ. ಶಾಂಪ್ರಸಾದ್ ಮುಖರ್ಜಿ ಪಟ.ಕೂತಿದೆ. ಚರಿತ್ರೆ ಅಳಿಸಿ ಫೇಕ್ ಚರಿತ್ರೆ ಪ್ರತಿಷ್ಠಾಸುವ ಕ್ರಮ ಇದು. ಸ್ಪೀಕರುಗಳು ಯಾರು ಅಂತ ನೋಡಿದರೆ ಸಾಕು.. ಎಂದು ಹಿರಿಯ ಚಿಂತಕರಾದ ಸುರೇಶ್ ಕಂಜರ್ಪಣೆಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಷ್ಟು ಧೈರ್ಯ ಇವರಿಗೆ ಅಂತ. ಬಹಳ ಅತಿ ಆಗಿದೆ ಈ RSS ಅವರದ್ದು ಬಾಬಾಸಾಹೇಬರ ಫೋಟೋ ತಗೆದುಹಾಕ್ತಾರೆ ಅಂದ್ರೆ‍? ನಿಜಕ್ಕೂ ಇವರಿಗೆ ಪಾಠ ಕಲಿಸದೇ ಬಿಡಬಾರದು ಎಂದು ಸರೋವರ್‌ ಬೆಂಕಿಕೆರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ದೇಶದ ಜಾತಿವ್ಯಾದಿ ಮನುವಾದಿಗಳ ಮನಸ್ಸು ಅದೆಷ್ಟು ಪೂರ್ವಾಗ್ರಹ ಪೀಡಿತರಾಗಿ ಕೊಳೆತು ನಾರುತ್ತಿದೆ ಎಂಬುದನ್ನು ಇಲ್ಲಿ ನೋಡಿ…
#ಅಂಬೇಡ್ಕರರ ಭಾವಚಿತ್ರವಿಲ್ಲದೆ ಸಂವಿಧಾನ ದಿನಾಚರಣೆ ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರನ್ನು ಇಟ್ಟು ಶೋಷಿತರಿಗೆ ಸಂದೇಶ ನೀಡುತ್ತಿದ್ದಾರೆ. ನೀವು ನಮ್ಮ ಕೆಳಗೇ ಇರಬೇಕು ಅಂತ. ನಾವು ಒಗ್ಗಟ್ಟಾಗದಿದ್ದರೆ ಕೆಲವೇ ವರ್ಷಗಳಲ್ಲಿ ಭಾರತವನ್ನ ಸರ್ವಾಧಿಕಾರಕ್ಕೆ ದೂಡಿ ಚಾತುರ್ವರ್ಣ ಸಿದ್ಧಾಂತವನ್ನು ಅಧಿಕೃತವಾಗಿ ಜಾರಿ ಮಾಡಿಬಿಡುತ್ತಾರೆ. ಎಂದು ಅಶೋಕ್‌ ಮೌರ್ಯಯವರು ನುಡಿದಿದ್ದಾರೆ.

#ಅಂಬೇಡ್ಕರರ ಭಾವಚಿತ್ರವಿಲ್ಲದೆ ಸಂವಿಧಾನ ದಿನಾಚರಣೆ ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರನ್ನು ಇಟ್ಟು ಶೋಷಿತರಿಗೆ ಸಂದೇಶ ನೀಡುತ್ತಿದ್ದಾರೆ. ನೀವು ನಮ್ಮ ಕೆಳಗೇ ಇರಬೇಕು ಅಂತ. ನಾವು ಒಗ್ಗಟ್ಟಾಗದಿದ್ದರೆ ಕೆಲವೇ ವರ್ಷಗಳಲ್ಲಿ ಭಾರತವನ್ನ ಸರ್ವಾಧಿಕಾರಕ್ಕೆ ದೂಡಿ ಚಾತುರ್ವರ್ಣ ಸಿದ್ಧಾಂತವನ್ನು ಅಧಿಕೃತವಾಗಿ ಜಾರಿ ಮಾಡಿಬಿಡುತ್ತಾರೆ ಎಂದು ವಿಕಾಸ್ ಆರ್‌ ಮೌರ್ಯ ಹೇಳಿದ್ದಾರೆ.

ಈ ರೀತಿಯಾಗಿ ಸೋಷಿಯಲ್ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಸಂಘಟಕರು ಕೂಡಲೇ ಅಂಬೇಡ್ಕರ್‌ ಭಾವಚಿತ್ರವುಳ್ಳ ಹೊಸ ಪೋಸ್ಟರ್ ಬಿಟ್ಟಿದ್ದಾರೆ. ಶ್ಯಾಂ ಪ್ರಸಾದ್ ಮುಖರ್ಜಿಯವರ ಫೋಟೊವನ್ನು ಕೈಬಿಟ್ಟಿದ್ದಾರೆ.

ಫೋಟೊ ಮಾತ್ರ ಬದಲಾಗಿದೆ ಅಷ್ಟೇ. ಆದರೆ ನಿಮ್ಮ ಮನಸ್ಸಿನಲ್ಲಿನ ವಿಷ ಬದಲಾಗಿಲ್ಲ. ಇರಲಿ ಹೋರಾಟ ಮುಂದುವರೆಯುತ್ತದೆ. ಕೆಟ್ಟ ಮೇಲೆ ನಿಮಗೆ ಬುದ್ದಿ ಬರುತ್ತದೆ ಎಂದು ಹಲವಾರು ಜನ ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...