Homeಕರ್ನಾಟಕಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಭಾರೀ ಪ್ರತಿರೋಧದ ನಂತರ ವಿವಾದಾತ್ಮಕ ಪೋಸ್ಟರ್ ಹಿಂಪಡೆದು ಅಂಬೇಡ್ಕರ್‌ ಭಾವಚಿತ್ರ ಇರುವ ಪೋಸ್ಟರ್‌ ಬಿಡುಗಡೆ ಮಾಡಿದ ಆಯೋಜಕರು

- Advertisement -
- Advertisement -

ಸಂವಿಧಾನದ ಶಿಲ್ಪಿ, ಭಾರತ ಸಂವಿಧಾನದ ಪಿತಾಮಹಾ ಬಾಬಾ ಸಾಹೇಬ್‌ ಅಂಬೇಡ್ಕರ್ ರವರನ್ನು ನೆನಪಿಸಿಕೊಳ್ಳದೇ ಸಂವಿಧಾನ ದಿನಾಚರಣೆ ಮಾಡಲು ಸಾಧ್ಯವೇ? ಅಂತಹ ದುಸ್ಸಾಹಸಕ್ಕೆ ಮುಂದಾಗಿ ಕೈ ಸುಟ್ಟುಕೊಂಡ ಘಟನೆ ಬೆಂಗಳೂರಿನಲ್ಲಿ ಇಂದು ನಡೆದಿದೆ.

ನವ ಬೆಂಗಳೂರು ಫೌಂಡೇಶನ್‌ ಎಂಬ ಸಂಸ್ಥೆಯು ನವೆಂಬರ್‌ 24ರ ಭಾನುವಾರ ಬೆಂಗಳೂರಿನ ಜಯನಗರದ ಆರ್‌ವಿ ಟೀಚರ್ಸ್‌ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಹಮ್ಮಿಕೊಂಡಿದೆ. ಅದಕ್ಕಾಗಿ ಸಿದ್ದಪಡಿಸಿದ ಪೋಸ್ಟರ್‌ನಲ್ಲಿ ಭಾರತ ಸಂವಿಧಾನದ ಪಿತಾಮಹಾ ಬಾಬಾ ಸಾಹೇಬ್‌ ಅಂಬೇಡ್ಕರ್ ಫೋಟೊ ಹಾಕುವ ಬದಲು ಜನಸಂಘದ ಸ್ಥಾಪಕ ಶ್ಯಾಂ ಪ್ರಸಾದ್‌ ಮುಖರ್ಜಿಯವರ ಫೋಟೊ ಮತ್ತು ಕಾಶ್ಮೀರದ ಭೂಪಟ ಹಾಕಿದ್ದಾರೆ.

ಈ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ಬಂದಿದ್ದೆ ತಡ ಪ್ರಗತಿಪರ ಸಂಘಟನೆಗಳು ಮತ್ತು ವ್ಯಕ್ತಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ನೂರಾರು ಜನ ಸಂಘಟಕರಿಗೆ ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಾಬಾ ಸಾಹೇಬ್ ಅಂಬೇಡ್ಕರರ ಭಾವಚಿತ್ರವಿಲ್ಲದೆ “ಸಂವಿಧಾನ ದಿನಾಚರಣೆ” ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರ ಭಾವಚಿತ್ರ ಇಟ್ಟು ಅವಮಾನಿಸಲಾಗಿದೆ. ಇದನ್ನು ಅಂಬೇಡ್ಕರ್ ಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದು ವಜ್ರಮುನಿ ಸಿಂಗ್‌ ಎಂಬುವವರು ತಿಳಿಸಿದ್ದಾರೆ.

ಇದು ಯಾವ ಸಂವಿಧಾನ ದಿನಾಚರಣೆ? ಸಂವಿಧಾನ ರೂಪಿಸಿದವರು,ಬಾಬಾ ಸಾಹೇಬರಾ ಇಲ್ಲ ಸಂಘೀ ನಾಯಕ ಶ್ಯಾಮ ಪ್ರಸಾದ ಮುಖರ್ಜಿಯಾ? ಕುಚೇಷ್ಟೆಗೂ ಒಂದು ಮಿತಿಯಿರಲಿ ಎಂದು ಹಿರಿಯ ಪತ್ರಕರ್ತರಾದ ಸನತ್‌ ಕುಮಾರ್‌ ಬೆಳಗಲಿಯವರು ಕಿಡಿಕಾರಿದ್ದಾರೆ.

ನಮ್ಮ ಕಾಲದ ಭಂಡಾಟ ಎಂದರೆ ಇದು!! ಎಲ್ಲೂ ಬಾಬಾಸಾಹೇಬರ ಪ್ರಸ್ತಾಪವೇ ಇಲ್ಲ. ಶಾಂಪ್ರಸಾದ್ ಮುಖರ್ಜಿ ಪಟ.ಕೂತಿದೆ. ಚರಿತ್ರೆ ಅಳಿಸಿ ಫೇಕ್ ಚರಿತ್ರೆ ಪ್ರತಿಷ್ಠಾಸುವ ಕ್ರಮ ಇದು. ಸ್ಪೀಕರುಗಳು ಯಾರು ಅಂತ ನೋಡಿದರೆ ಸಾಕು.. ಎಂದು ಹಿರಿಯ ಚಿಂತಕರಾದ ಸುರೇಶ್ ಕಂಜರ್ಪಣೆಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಷ್ಟು ಧೈರ್ಯ ಇವರಿಗೆ ಅಂತ. ಬಹಳ ಅತಿ ಆಗಿದೆ ಈ RSS ಅವರದ್ದು ಬಾಬಾಸಾಹೇಬರ ಫೋಟೋ ತಗೆದುಹಾಕ್ತಾರೆ ಅಂದ್ರೆ‍? ನಿಜಕ್ಕೂ ಇವರಿಗೆ ಪಾಠ ಕಲಿಸದೇ ಬಿಡಬಾರದು ಎಂದು ಸರೋವರ್‌ ಬೆಂಕಿಕೆರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ದೇಶದ ಜಾತಿವ್ಯಾದಿ ಮನುವಾದಿಗಳ ಮನಸ್ಸು ಅದೆಷ್ಟು ಪೂರ್ವಾಗ್ರಹ ಪೀಡಿತರಾಗಿ ಕೊಳೆತು ನಾರುತ್ತಿದೆ ಎಂಬುದನ್ನು ಇಲ್ಲಿ ನೋಡಿ…
#ಅಂಬೇಡ್ಕರರ ಭಾವಚಿತ್ರವಿಲ್ಲದೆ ಸಂವಿಧಾನ ದಿನಾಚರಣೆ ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರನ್ನು ಇಟ್ಟು ಶೋಷಿತರಿಗೆ ಸಂದೇಶ ನೀಡುತ್ತಿದ್ದಾರೆ. ನೀವು ನಮ್ಮ ಕೆಳಗೇ ಇರಬೇಕು ಅಂತ. ನಾವು ಒಗ್ಗಟ್ಟಾಗದಿದ್ದರೆ ಕೆಲವೇ ವರ್ಷಗಳಲ್ಲಿ ಭಾರತವನ್ನ ಸರ್ವಾಧಿಕಾರಕ್ಕೆ ದೂಡಿ ಚಾತುರ್ವರ್ಣ ಸಿದ್ಧಾಂತವನ್ನು ಅಧಿಕೃತವಾಗಿ ಜಾರಿ ಮಾಡಿಬಿಡುತ್ತಾರೆ. ಎಂದು ಅಶೋಕ್‌ ಮೌರ್ಯಯವರು ನುಡಿದಿದ್ದಾರೆ.

#ಅಂಬೇಡ್ಕರರ ಭಾವಚಿತ್ರವಿಲ್ಲದೆ ಸಂವಿಧಾನ ದಿನಾಚರಣೆ ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರನ್ನು ಇಟ್ಟು ಶೋಷಿತರಿಗೆ ಸಂದೇಶ ನೀಡುತ್ತಿದ್ದಾರೆ. ನೀವು ನಮ್ಮ ಕೆಳಗೇ ಇರಬೇಕು ಅಂತ. ನಾವು ಒಗ್ಗಟ್ಟಾಗದಿದ್ದರೆ ಕೆಲವೇ ವರ್ಷಗಳಲ್ಲಿ ಭಾರತವನ್ನ ಸರ್ವಾಧಿಕಾರಕ್ಕೆ ದೂಡಿ ಚಾತುರ್ವರ್ಣ ಸಿದ್ಧಾಂತವನ್ನು ಅಧಿಕೃತವಾಗಿ ಜಾರಿ ಮಾಡಿಬಿಡುತ್ತಾರೆ ಎಂದು ವಿಕಾಸ್ ಆರ್‌ ಮೌರ್ಯ ಹೇಳಿದ್ದಾರೆ.

ಈ ರೀತಿಯಾಗಿ ಸೋಷಿಯಲ್ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಸಂಘಟಕರು ಕೂಡಲೇ ಅಂಬೇಡ್ಕರ್‌ ಭಾವಚಿತ್ರವುಳ್ಳ ಹೊಸ ಪೋಸ್ಟರ್ ಬಿಟ್ಟಿದ್ದಾರೆ. ಶ್ಯಾಂ ಪ್ರಸಾದ್ ಮುಖರ್ಜಿಯವರ ಫೋಟೊವನ್ನು ಕೈಬಿಟ್ಟಿದ್ದಾರೆ.

ಫೋಟೊ ಮಾತ್ರ ಬದಲಾಗಿದೆ ಅಷ್ಟೇ. ಆದರೆ ನಿಮ್ಮ ಮನಸ್ಸಿನಲ್ಲಿನ ವಿಷ ಬದಲಾಗಿಲ್ಲ. ಇರಲಿ ಹೋರಾಟ ಮುಂದುವರೆಯುತ್ತದೆ. ಕೆಟ್ಟ ಮೇಲೆ ನಿಮಗೆ ಬುದ್ದಿ ಬರುತ್ತದೆ ಎಂದು ಹಲವಾರು ಜನ ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...