Homeಕರ್ನಾಟಕಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಭಾರೀ ಪ್ರತಿರೋಧದ ನಂತರ ವಿವಾದಾತ್ಮಕ ಪೋಸ್ಟರ್ ಹಿಂಪಡೆದು ಅಂಬೇಡ್ಕರ್‌ ಭಾವಚಿತ್ರ ಇರುವ ಪೋಸ್ಟರ್‌ ಬಿಡುಗಡೆ ಮಾಡಿದ ಆಯೋಜಕರು

- Advertisement -
- Advertisement -

ಸಂವಿಧಾನದ ಶಿಲ್ಪಿ, ಭಾರತ ಸಂವಿಧಾನದ ಪಿತಾಮಹಾ ಬಾಬಾ ಸಾಹೇಬ್‌ ಅಂಬೇಡ್ಕರ್ ರವರನ್ನು ನೆನಪಿಸಿಕೊಳ್ಳದೇ ಸಂವಿಧಾನ ದಿನಾಚರಣೆ ಮಾಡಲು ಸಾಧ್ಯವೇ? ಅಂತಹ ದುಸ್ಸಾಹಸಕ್ಕೆ ಮುಂದಾಗಿ ಕೈ ಸುಟ್ಟುಕೊಂಡ ಘಟನೆ ಬೆಂಗಳೂರಿನಲ್ಲಿ ಇಂದು ನಡೆದಿದೆ.

ನವ ಬೆಂಗಳೂರು ಫೌಂಡೇಶನ್‌ ಎಂಬ ಸಂಸ್ಥೆಯು ನವೆಂಬರ್‌ 24ರ ಭಾನುವಾರ ಬೆಂಗಳೂರಿನ ಜಯನಗರದ ಆರ್‌ವಿ ಟೀಚರ್ಸ್‌ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಹಮ್ಮಿಕೊಂಡಿದೆ. ಅದಕ್ಕಾಗಿ ಸಿದ್ದಪಡಿಸಿದ ಪೋಸ್ಟರ್‌ನಲ್ಲಿ ಭಾರತ ಸಂವಿಧಾನದ ಪಿತಾಮಹಾ ಬಾಬಾ ಸಾಹೇಬ್‌ ಅಂಬೇಡ್ಕರ್ ಫೋಟೊ ಹಾಕುವ ಬದಲು ಜನಸಂಘದ ಸ್ಥಾಪಕ ಶ್ಯಾಂ ಪ್ರಸಾದ್‌ ಮುಖರ್ಜಿಯವರ ಫೋಟೊ ಮತ್ತು ಕಾಶ್ಮೀರದ ಭೂಪಟ ಹಾಕಿದ್ದಾರೆ.

ಈ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ಬಂದಿದ್ದೆ ತಡ ಪ್ರಗತಿಪರ ಸಂಘಟನೆಗಳು ಮತ್ತು ವ್ಯಕ್ತಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ನೂರಾರು ಜನ ಸಂಘಟಕರಿಗೆ ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಾಬಾ ಸಾಹೇಬ್ ಅಂಬೇಡ್ಕರರ ಭಾವಚಿತ್ರವಿಲ್ಲದೆ “ಸಂವಿಧಾನ ದಿನಾಚರಣೆ” ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರ ಭಾವಚಿತ್ರ ಇಟ್ಟು ಅವಮಾನಿಸಲಾಗಿದೆ. ಇದನ್ನು ಅಂಬೇಡ್ಕರ್ ಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದು ವಜ್ರಮುನಿ ಸಿಂಗ್‌ ಎಂಬುವವರು ತಿಳಿಸಿದ್ದಾರೆ.

ಇದು ಯಾವ ಸಂವಿಧಾನ ದಿನಾಚರಣೆ? ಸಂವಿಧಾನ ರೂಪಿಸಿದವರು,ಬಾಬಾ ಸಾಹೇಬರಾ ಇಲ್ಲ ಸಂಘೀ ನಾಯಕ ಶ್ಯಾಮ ಪ್ರಸಾದ ಮುಖರ್ಜಿಯಾ? ಕುಚೇಷ್ಟೆಗೂ ಒಂದು ಮಿತಿಯಿರಲಿ ಎಂದು ಹಿರಿಯ ಪತ್ರಕರ್ತರಾದ ಸನತ್‌ ಕುಮಾರ್‌ ಬೆಳಗಲಿಯವರು ಕಿಡಿಕಾರಿದ್ದಾರೆ.

ನಮ್ಮ ಕಾಲದ ಭಂಡಾಟ ಎಂದರೆ ಇದು!! ಎಲ್ಲೂ ಬಾಬಾಸಾಹೇಬರ ಪ್ರಸ್ತಾಪವೇ ಇಲ್ಲ. ಶಾಂಪ್ರಸಾದ್ ಮುಖರ್ಜಿ ಪಟ.ಕೂತಿದೆ. ಚರಿತ್ರೆ ಅಳಿಸಿ ಫೇಕ್ ಚರಿತ್ರೆ ಪ್ರತಿಷ್ಠಾಸುವ ಕ್ರಮ ಇದು. ಸ್ಪೀಕರುಗಳು ಯಾರು ಅಂತ ನೋಡಿದರೆ ಸಾಕು.. ಎಂದು ಹಿರಿಯ ಚಿಂತಕರಾದ ಸುರೇಶ್ ಕಂಜರ್ಪಣೆಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಷ್ಟು ಧೈರ್ಯ ಇವರಿಗೆ ಅಂತ. ಬಹಳ ಅತಿ ಆಗಿದೆ ಈ RSS ಅವರದ್ದು ಬಾಬಾಸಾಹೇಬರ ಫೋಟೋ ತಗೆದುಹಾಕ್ತಾರೆ ಅಂದ್ರೆ‍? ನಿಜಕ್ಕೂ ಇವರಿಗೆ ಪಾಠ ಕಲಿಸದೇ ಬಿಡಬಾರದು ಎಂದು ಸರೋವರ್‌ ಬೆಂಕಿಕೆರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ದೇಶದ ಜಾತಿವ್ಯಾದಿ ಮನುವಾದಿಗಳ ಮನಸ್ಸು ಅದೆಷ್ಟು ಪೂರ್ವಾಗ್ರಹ ಪೀಡಿತರಾಗಿ ಕೊಳೆತು ನಾರುತ್ತಿದೆ ಎಂಬುದನ್ನು ಇಲ್ಲಿ ನೋಡಿ…
#ಅಂಬೇಡ್ಕರರ ಭಾವಚಿತ್ರವಿಲ್ಲದೆ ಸಂವಿಧಾನ ದಿನಾಚರಣೆ ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರನ್ನು ಇಟ್ಟು ಶೋಷಿತರಿಗೆ ಸಂದೇಶ ನೀಡುತ್ತಿದ್ದಾರೆ. ನೀವು ನಮ್ಮ ಕೆಳಗೇ ಇರಬೇಕು ಅಂತ. ನಾವು ಒಗ್ಗಟ್ಟಾಗದಿದ್ದರೆ ಕೆಲವೇ ವರ್ಷಗಳಲ್ಲಿ ಭಾರತವನ್ನ ಸರ್ವಾಧಿಕಾರಕ್ಕೆ ದೂಡಿ ಚಾತುರ್ವರ್ಣ ಸಿದ್ಧಾಂತವನ್ನು ಅಧಿಕೃತವಾಗಿ ಜಾರಿ ಮಾಡಿಬಿಡುತ್ತಾರೆ. ಎಂದು ಅಶೋಕ್‌ ಮೌರ್ಯಯವರು ನುಡಿದಿದ್ದಾರೆ.

#ಅಂಬೇಡ್ಕರರ ಭಾವಚಿತ್ರವಿಲ್ಲದೆ ಸಂವಿಧಾನ ದಿನಾಚರಣೆ ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರನ್ನು ಇಟ್ಟು ಶೋಷಿತರಿಗೆ ಸಂದೇಶ ನೀಡುತ್ತಿದ್ದಾರೆ. ನೀವು ನಮ್ಮ ಕೆಳಗೇ ಇರಬೇಕು ಅಂತ. ನಾವು ಒಗ್ಗಟ್ಟಾಗದಿದ್ದರೆ ಕೆಲವೇ ವರ್ಷಗಳಲ್ಲಿ ಭಾರತವನ್ನ ಸರ್ವಾಧಿಕಾರಕ್ಕೆ ದೂಡಿ ಚಾತುರ್ವರ್ಣ ಸಿದ್ಧಾಂತವನ್ನು ಅಧಿಕೃತವಾಗಿ ಜಾರಿ ಮಾಡಿಬಿಡುತ್ತಾರೆ ಎಂದು ವಿಕಾಸ್ ಆರ್‌ ಮೌರ್ಯ ಹೇಳಿದ್ದಾರೆ.

ಈ ರೀತಿಯಾಗಿ ಸೋಷಿಯಲ್ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಸಂಘಟಕರು ಕೂಡಲೇ ಅಂಬೇಡ್ಕರ್‌ ಭಾವಚಿತ್ರವುಳ್ಳ ಹೊಸ ಪೋಸ್ಟರ್ ಬಿಟ್ಟಿದ್ದಾರೆ. ಶ್ಯಾಂ ಪ್ರಸಾದ್ ಮುಖರ್ಜಿಯವರ ಫೋಟೊವನ್ನು ಕೈಬಿಟ್ಟಿದ್ದಾರೆ.

ಫೋಟೊ ಮಾತ್ರ ಬದಲಾಗಿದೆ ಅಷ್ಟೇ. ಆದರೆ ನಿಮ್ಮ ಮನಸ್ಸಿನಲ್ಲಿನ ವಿಷ ಬದಲಾಗಿಲ್ಲ. ಇರಲಿ ಹೋರಾಟ ಮುಂದುವರೆಯುತ್ತದೆ. ಕೆಟ್ಟ ಮೇಲೆ ನಿಮಗೆ ಬುದ್ದಿ ಬರುತ್ತದೆ ಎಂದು ಹಲವಾರು ಜನ ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...