Homeಕರ್ನಾಟಕಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಭಾರೀ ಪ್ರತಿರೋಧದ ನಂತರ ವಿವಾದಾತ್ಮಕ ಪೋಸ್ಟರ್ ಹಿಂಪಡೆದು ಅಂಬೇಡ್ಕರ್‌ ಭಾವಚಿತ್ರ ಇರುವ ಪೋಸ್ಟರ್‌ ಬಿಡುಗಡೆ ಮಾಡಿದ ಆಯೋಜಕರು

- Advertisement -
- Advertisement -

ಸಂವಿಧಾನದ ಶಿಲ್ಪಿ, ಭಾರತ ಸಂವಿಧಾನದ ಪಿತಾಮಹಾ ಬಾಬಾ ಸಾಹೇಬ್‌ ಅಂಬೇಡ್ಕರ್ ರವರನ್ನು ನೆನಪಿಸಿಕೊಳ್ಳದೇ ಸಂವಿಧಾನ ದಿನಾಚರಣೆ ಮಾಡಲು ಸಾಧ್ಯವೇ? ಅಂತಹ ದುಸ್ಸಾಹಸಕ್ಕೆ ಮುಂದಾಗಿ ಕೈ ಸುಟ್ಟುಕೊಂಡ ಘಟನೆ ಬೆಂಗಳೂರಿನಲ್ಲಿ ಇಂದು ನಡೆದಿದೆ.

ನವ ಬೆಂಗಳೂರು ಫೌಂಡೇಶನ್‌ ಎಂಬ ಸಂಸ್ಥೆಯು ನವೆಂಬರ್‌ 24ರ ಭಾನುವಾರ ಬೆಂಗಳೂರಿನ ಜಯನಗರದ ಆರ್‌ವಿ ಟೀಚರ್ಸ್‌ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಹಮ್ಮಿಕೊಂಡಿದೆ. ಅದಕ್ಕಾಗಿ ಸಿದ್ದಪಡಿಸಿದ ಪೋಸ್ಟರ್‌ನಲ್ಲಿ ಭಾರತ ಸಂವಿಧಾನದ ಪಿತಾಮಹಾ ಬಾಬಾ ಸಾಹೇಬ್‌ ಅಂಬೇಡ್ಕರ್ ಫೋಟೊ ಹಾಕುವ ಬದಲು ಜನಸಂಘದ ಸ್ಥಾಪಕ ಶ್ಯಾಂ ಪ್ರಸಾದ್‌ ಮುಖರ್ಜಿಯವರ ಫೋಟೊ ಮತ್ತು ಕಾಶ್ಮೀರದ ಭೂಪಟ ಹಾಕಿದ್ದಾರೆ.

ಈ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ಬಂದಿದ್ದೆ ತಡ ಪ್ರಗತಿಪರ ಸಂಘಟನೆಗಳು ಮತ್ತು ವ್ಯಕ್ತಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ನೂರಾರು ಜನ ಸಂಘಟಕರಿಗೆ ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಾಬಾ ಸಾಹೇಬ್ ಅಂಬೇಡ್ಕರರ ಭಾವಚಿತ್ರವಿಲ್ಲದೆ “ಸಂವಿಧಾನ ದಿನಾಚರಣೆ” ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರ ಭಾವಚಿತ್ರ ಇಟ್ಟು ಅವಮಾನಿಸಲಾಗಿದೆ. ಇದನ್ನು ಅಂಬೇಡ್ಕರ್ ಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದು ವಜ್ರಮುನಿ ಸಿಂಗ್‌ ಎಂಬುವವರು ತಿಳಿಸಿದ್ದಾರೆ.

ಇದು ಯಾವ ಸಂವಿಧಾನ ದಿನಾಚರಣೆ? ಸಂವಿಧಾನ ರೂಪಿಸಿದವರು,ಬಾಬಾ ಸಾಹೇಬರಾ ಇಲ್ಲ ಸಂಘೀ ನಾಯಕ ಶ್ಯಾಮ ಪ್ರಸಾದ ಮುಖರ್ಜಿಯಾ? ಕುಚೇಷ್ಟೆಗೂ ಒಂದು ಮಿತಿಯಿರಲಿ ಎಂದು ಹಿರಿಯ ಪತ್ರಕರ್ತರಾದ ಸನತ್‌ ಕುಮಾರ್‌ ಬೆಳಗಲಿಯವರು ಕಿಡಿಕಾರಿದ್ದಾರೆ.

ನಮ್ಮ ಕಾಲದ ಭಂಡಾಟ ಎಂದರೆ ಇದು!! ಎಲ್ಲೂ ಬಾಬಾಸಾಹೇಬರ ಪ್ರಸ್ತಾಪವೇ ಇಲ್ಲ. ಶಾಂಪ್ರಸಾದ್ ಮುಖರ್ಜಿ ಪಟ.ಕೂತಿದೆ. ಚರಿತ್ರೆ ಅಳಿಸಿ ಫೇಕ್ ಚರಿತ್ರೆ ಪ್ರತಿಷ್ಠಾಸುವ ಕ್ರಮ ಇದು. ಸ್ಪೀಕರುಗಳು ಯಾರು ಅಂತ ನೋಡಿದರೆ ಸಾಕು.. ಎಂದು ಹಿರಿಯ ಚಿಂತಕರಾದ ಸುರೇಶ್ ಕಂಜರ್ಪಣೆಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಷ್ಟು ಧೈರ್ಯ ಇವರಿಗೆ ಅಂತ. ಬಹಳ ಅತಿ ಆಗಿದೆ ಈ RSS ಅವರದ್ದು ಬಾಬಾಸಾಹೇಬರ ಫೋಟೋ ತಗೆದುಹಾಕ್ತಾರೆ ಅಂದ್ರೆ‍? ನಿಜಕ್ಕೂ ಇವರಿಗೆ ಪಾಠ ಕಲಿಸದೇ ಬಿಡಬಾರದು ಎಂದು ಸರೋವರ್‌ ಬೆಂಕಿಕೆರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ದೇಶದ ಜಾತಿವ್ಯಾದಿ ಮನುವಾದಿಗಳ ಮನಸ್ಸು ಅದೆಷ್ಟು ಪೂರ್ವಾಗ್ರಹ ಪೀಡಿತರಾಗಿ ಕೊಳೆತು ನಾರುತ್ತಿದೆ ಎಂಬುದನ್ನು ಇಲ್ಲಿ ನೋಡಿ…
#ಅಂಬೇಡ್ಕರರ ಭಾವಚಿತ್ರವಿಲ್ಲದೆ ಸಂವಿಧಾನ ದಿನಾಚರಣೆ ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರನ್ನು ಇಟ್ಟು ಶೋಷಿತರಿಗೆ ಸಂದೇಶ ನೀಡುತ್ತಿದ್ದಾರೆ. ನೀವು ನಮ್ಮ ಕೆಳಗೇ ಇರಬೇಕು ಅಂತ. ನಾವು ಒಗ್ಗಟ್ಟಾಗದಿದ್ದರೆ ಕೆಲವೇ ವರ್ಷಗಳಲ್ಲಿ ಭಾರತವನ್ನ ಸರ್ವಾಧಿಕಾರಕ್ಕೆ ದೂಡಿ ಚಾತುರ್ವರ್ಣ ಸಿದ್ಧಾಂತವನ್ನು ಅಧಿಕೃತವಾಗಿ ಜಾರಿ ಮಾಡಿಬಿಡುತ್ತಾರೆ. ಎಂದು ಅಶೋಕ್‌ ಮೌರ್ಯಯವರು ನುಡಿದಿದ್ದಾರೆ.

#ಅಂಬೇಡ್ಕರರ ಭಾವಚಿತ್ರವಿಲ್ಲದೆ ಸಂವಿಧಾನ ದಿನಾಚರಣೆ ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರನ್ನು ಇಟ್ಟು ಶೋಷಿತರಿಗೆ ಸಂದೇಶ ನೀಡುತ್ತಿದ್ದಾರೆ. ನೀವು ನಮ್ಮ ಕೆಳಗೇ ಇರಬೇಕು ಅಂತ. ನಾವು ಒಗ್ಗಟ್ಟಾಗದಿದ್ದರೆ ಕೆಲವೇ ವರ್ಷಗಳಲ್ಲಿ ಭಾರತವನ್ನ ಸರ್ವಾಧಿಕಾರಕ್ಕೆ ದೂಡಿ ಚಾತುರ್ವರ್ಣ ಸಿದ್ಧಾಂತವನ್ನು ಅಧಿಕೃತವಾಗಿ ಜಾರಿ ಮಾಡಿಬಿಡುತ್ತಾರೆ ಎಂದು ವಿಕಾಸ್ ಆರ್‌ ಮೌರ್ಯ ಹೇಳಿದ್ದಾರೆ.

ಈ ರೀತಿಯಾಗಿ ಸೋಷಿಯಲ್ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಸಂಘಟಕರು ಕೂಡಲೇ ಅಂಬೇಡ್ಕರ್‌ ಭಾವಚಿತ್ರವುಳ್ಳ ಹೊಸ ಪೋಸ್ಟರ್ ಬಿಟ್ಟಿದ್ದಾರೆ. ಶ್ಯಾಂ ಪ್ರಸಾದ್ ಮುಖರ್ಜಿಯವರ ಫೋಟೊವನ್ನು ಕೈಬಿಟ್ಟಿದ್ದಾರೆ.

ಫೋಟೊ ಮಾತ್ರ ಬದಲಾಗಿದೆ ಅಷ್ಟೇ. ಆದರೆ ನಿಮ್ಮ ಮನಸ್ಸಿನಲ್ಲಿನ ವಿಷ ಬದಲಾಗಿಲ್ಲ. ಇರಲಿ ಹೋರಾಟ ಮುಂದುವರೆಯುತ್ತದೆ. ಕೆಟ್ಟ ಮೇಲೆ ನಿಮಗೆ ಬುದ್ದಿ ಬರುತ್ತದೆ ಎಂದು ಹಲವಾರು ಜನ ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...