Homeಮುಖಪುಟಸಂವಿಧಾನ, ಪ್ರಜಾಪ್ರಭುತ್ವ ದುರ್ಬಲಗೊಳಿಸಲು ಬಿಜೆಪಿ ಯತ್ನ: ಅಖಿಲೇಶ್ ಯಾದವ್

ಸಂವಿಧಾನ, ಪ್ರಜಾಪ್ರಭುತ್ವ ದುರ್ಬಲಗೊಳಿಸಲು ಬಿಜೆಪಿ ಯತ್ನ: ಅಖಿಲೇಶ್ ಯಾದವ್

- Advertisement -
- Advertisement -

ಸಂಸತ್ತಿನಲ್ಲಿ ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನಿಸಿದ ಅಮಿತ್ ಶಾ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿರುವ ಸಮಾಜವಾದಿ ಪಕ್ಷದ ಸಂಸದ ಅಖಿಲೇಶ್ ಯಾದವ್ ಅವರು, ಆಡಳಿತ ಪಕ್ಷವು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಶುಕ್ರವಾರ ಆರೋಪಿಸಿದ್ದಾರೆ.

ಲೋಕಸಭೆಯನ್ನು ಮುಂದೂಡಿದ ನಂತರ ಎಎನ್‌ಐ ಜೊತೆ ಮಾತನಾಡಿದ ಅವರು, ಬಾಬಾಸಾಹೇಬ್ ಅವರ ಸಂವಿಧಾನವು ದೇಶವನ್ನು ಮುನ್ನಡೆಸುವ ಮಾರ್ಗವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಇದೊಂದು ಸುಳ್ಳು ಪ್ರಕರಣ ಎಂದು ಬಣ್ಣಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸಂಸತ್ತಿನ ಅಧಿವೇಶನ ಇಂದು ಮುಕ್ತಾಯವಾಗಬಹುದು, ಆದರೆ ಸಮಸ್ಯೆಗಳು ಮುಕ್ತಾಯಗೊಳ್ಳುವುದಿಲ್ಲ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದು ಮತ್ತು ಅವರ ಬಗ್ಗೆ ಬಿಜೆಪಿಯ ವರ್ತನೆಯ ಬಗ್ಗೆ ಅವರು ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸಬೇಕು ಎಂದು ವಿರೋಧ ಪಕ್ಷಗಳ ಆಗ್ರಹವಾಗಿದೆ…” ಎಂದು ಅಖಿಲೇಶ್ ಅವರು ಹೇಳಿದ್ದಾರೆ.

ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಬೇಕಾದರೆ ಬಾಬಾಸಾಹೇಬರ ಸಂವಿಧಾನವೇ ದಾರಿ ತೋರಿಸುತ್ತದೆ. ಕಾಲಕಾಲಕ್ಕೆ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿಯ ತಂತ್ರಗಾರಿಕೆಯನ್ನು ಅರ್ಥ ಮಾಡಿಕೊಳ್ಳಬೇಕು. ಅವರು ಮೊದಲು ಅಸಾಂವಿಧಾನಿಕ ಕೆಲಸಗಳನ್ನು ಮಾಡುತ್ತಾರೆ ಮತ್ತು ಅನ್ಯಾಯ ಮಾಡುತ್ತಾರೆ. ಅನ್ಯಾಯಕ್ಕೆ ಒಳಗಾದವರ ಜೊತೆ ನಿಂತರೆ ಸುಳ್ಳು ಕೇಸುಗಳನ್ನು ಜಡಿಯುತ್ತಾರೆ. ಇದು ಮೊದಲ ಬಾರಿಗೆ ಆಗುತ್ತಿಲ್ಲ. ಬಿಜೆಪಿಯ ತಂತ್ರ ಇದಾಗಿದೆ ಎಂದು ಅಖಿಲೇಶ್ ಅವರು ಹೇಳಿದ್ದಾರೆ.

ಎಸ್‌ಪಿ ಸಂಸದೆ ಡಿಂಪಲ್ ಯಾದವ್ ಅವರು ಕೂಡಾ ಗುರುವಾರ ಸಂಸತ್ತಿನ ಆವರಣದಲ್ಲಿ ನಡೆದ ಘರ್ಷಣೆಗೆ ಬಿಜೆಪಿ ಸಂಸದರನ್ನು ಹೊಣೆಗಾರರನ್ನಾಗಿ ಮಾಡಿದ್ದಾರೆ. ಈ ಘರ್ಷನೆಯಲ್ಲಿ ಇಬ್ಬರು ಆಡಳಿತ ಪಕ್ಷದ ಸಂಸದರು ಗಾಯಗೊಂಡಿದ್ದರು. “ನಾವು ನಿನ್ನೆ ಮಕರ ದ್ವಾರದಲ್ಲಿ ಕಂಡ ಘರ್ಷಣೆಗೆ ಬಿಜೆಪಿ ಸಂಸದರೆ ಜವಾಬ್ದಾರರು. ನಾವು ಅಂತಹ ಬಿಕ್ಕಟ್ಟನ್ನು ನೋಡಿರಲಿಲ್ಲ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಸಂಸದರ ಕ್ಷಮೆಯಾಚನೆಗೆ ಆಗ್ರಹಿಸಿದ ಅವರು, ‘‘ದೇಶದ ಪ್ರತಿಯೊಬ್ಬ ಪ್ರಜೆಗೂ ಆರಾಧ್ಯ ದೈವವಾಗಿರುವ ಡಾ.ಭೀಮರಾವ್ ಅಂಬೇಡ್ಕರ್ ಅವರನ್ನು ಅವಮಾನಿಸಿರುವ ಬಿಜೆಪಿ ಸಂಸದರು ಕ್ಷಮೆ ಯಾಚಿಸಬೇಕು. ಬಿಜೆಪಿ ಕೇವಲ ಒಂದು ಕಡೆಯಿಂದ ಮುಂದುವರಿಯುತ್ತದೆ. ಅದು ಭಾರತದ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ದೇಶದ ಜನರೊಂದಿಗೆ ಎಂದಿಗೂ ಮುಂದುವರಿಯುವುದಿಲ್ಲ. ನಾಳೆಯ ಮುಖಾಮುಖಿಯಲ್ಲಿ ಬಿಜೆಪಿ ಕ್ಷಮೆಯಾಚಿಸಬೇಕು ಏಕೆಂದರೆ ಬಿಜೆಪಿ ಸರ್ಕಾರ ಮತ್ತು ಬಿಜೆಪಿ ಸಂಸದರು ಮಾತ್ರ ಇದಕ್ಕೆ ಕಾರಣರಾಗಿದ್ದಾರೆ’’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ ಟೇಕ್ ಹೋಮ್ ಪಡಿತರ ಯೋಜನೆ: 2018-21ರಿಂದ ₹428 ಕೋಟಿ ಅಕ್ರಮ

ಮಧ್ಯಪ್ರದೇಶ ಟೇಕ್ ಹೋಮ್ ಪಡಿತರ ಯೋಜನೆ: 2018-21ರಿಂದ ₹428 ಕೋಟಿ ಅಕ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...