Homeಮುಖಪುಟಸಂವಿಧಾನ ಅಸ್ತಿತ್ವಕ್ಕೆ ಬಂದು 75 ವರ್ಷಗಳ ನಂತರವೂ ಪೊಲೀಸರಿಗೆ ಮೂಲಭೂತ ಹಕ್ಕುಗಳ ಅರಿವಿಲ್ಲ ಎಂದ ಕುನಾಲ್

ಸಂವಿಧಾನ ಅಸ್ತಿತ್ವಕ್ಕೆ ಬಂದು 75 ವರ್ಷಗಳ ನಂತರವೂ ಪೊಲೀಸರಿಗೆ ಮೂಲಭೂತ ಹಕ್ಕುಗಳ ಅರಿವಿಲ್ಲ ಎಂದ ಕುನಾಲ್

- Advertisement -
- Advertisement -

ಸಂವಿಧಾನ ಅಸ್ತಿತ್ವಕ್ಕೆ ಬಂದು 75 ವರ್ಷಗಳಾದರೂ ಕಾನೂನು ಜಾರಿ ಸಂಸ್ಥೆಗಳ ಅಧಿಕಾರಿಗಳು ಮೂಲಭೂತ ಹಕ್ಕುಗಳ ಬಗ್ಗೆ ಅಜ್ಞಾನಿಗಳಾಗಿದ್ದಾರೆ ಅಥವಾ ಅವುಗಳ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಹಾಸ್ಯನಟ ಕುನಾಲ್ ಕಮ್ರಾ ಅವರ ವಕೀಲರು ಬುಧವಾರ ಬಾಂಬೆ ಹೈಕೋರ್ಟ್‌ನಲ್ಲಿ ವಾದಿಸಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಗ್ಗೆ ವಿಡಂಬನಾತ್ಮಕ ಹೇಳಿಕೆ ನೀಡಿದ್ದ ಕುನಾಲ್ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ವಕೀಲ ನವ್ರೋಜ್ ಸೀರ್ವೈ ಈ ಹೇಳಿಕೆ ನೀಡಿದ್ದಾರೆ. ಹೈಕೋರ್ಟ್ ಈ ವಿಷಯದ ಕುರಿತು ತನ್ನ ಆದೇಶವನ್ನು ಬುಧವಾರ ಕಾಯ್ದಿರಿಸಿದೆ.

ಕುನಾಲ್ ಅವರು ವಾಕ್ ಸ್ವಾತಂತ್ರ್ಯದ ಹಕ್ಕನ್ನು ಚಲಾಯಿಸುವುದನ್ನು ಆಕ್ಷೇಪಿಸಿ ಕಾನೂನು ಯಂತ್ರಗಳನ್ನು ಬಳಸಲಾಗುತ್ತಿದೆ. ಅವರ ವಿರುದ್ಧದ ಪ್ರಕರಣವು “ಅಪರೂಪದಲ್ಲಿ ಅಪರೂಪದ” ವರ್ಗದ ಅಡಿಯಲ್ಲಿ ಬರುತ್ತದೆ ಎಂದು ಸೀರ್ವೈ ವಾದಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಕಾನೂನುಬಾಹಿರ ಸೆನ್ಸಾರ್‌ಶಿಪ್ ಪ್ರಯತ್ನಗಳನ್ನು ಸುಪ್ರೀಂ ಕೋರ್ಟ್ ಯಾವಾಗಲೂ ರದ್ದುಗೊಳಿಸಿದೆ ಎಂದು ಹೇಳುವ ಮೂಲಕ ವಕೀಲರು ತನಿಖೆಗೆ ತಡೆ ನೀಡುವಂತೆ ಕೋರಿದ್ದಾರೆ.

ಕುನಾಲ್ ಅವರಿಗೆ ಮಾರಣಾಂತಿಕ ಬೆದರಿಕೆಗಳು ಬಂದಿದ್ದರೂ ಸಹ, ಮುಂಬೈ ಪೊಲೀಸರು ಅವರ ದೈಹಿಕ ಉಪಸ್ಥಿತಿಯನ್ನು ಕೋರಿ ಅವರಿಗೆ ಮೂರು ಸಮನ್ಸ್‌ಗಳನ್ನು ಏಕೆ ಜಾರಿ ಮಾಡಿದ್ದಾರೆ ಎಂದು ವಕೀಲರು ಪ್ರಶ್ನಿಸಿದ್ದಾರೆ. ಅವರು ಹೇಳಿಕೆ ನೀಡಿದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರನ್ನು ಮತ್ತು ಅದನ್ನು ನಡೆಸಿದವರನ್ನು ಪೊಲೀಸರು ಏಕೆ ವಿಚಾರಣೆಗೆ ಕರೆದರು ಎಂದು ಅವರು ಕೇಳಿದ್ದಾರೆ.

“ಸಂವಿಧಾನ ಅಸ್ತಿತ್ವಕ್ಕೆ ಬಂದು 75 ವರ್ಷಗಳ ನಂತರವೂ… ಕಾನೂನು ಜಾರಿ ಯಂತ್ರವು ಮೂಲಭೂತ ಹಕ್ಕಿನ ಬಗ್ಗೆ ತಿಳಿದಿಲ್ಲ ಅಥವಾ ಮೂಲಭೂತ ಹಕ್ಕಿನ ಬಗ್ಗೆ ಕಾಳಜಿ ವಹಿಸುವುದಿಲ್ಲ ಎಂದು ಇದು ತೋರಿಸುತ್ತದೆ” ಎಂದು ಸೀರ್ವೈ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮಾರ್ಚ್ 23 ರಂದು, ಕುನಾಲ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಿಂದಿ ಚಲನಚಿತ್ರವೊಂದರ ಹಾಡನ್ನು ವಿಡಂಬನಾತ್ಮಕವಾಗಿ ಹಾಡಿದ್ದರು. ಈ ವೇಳೆ ಅವರು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಶಿಂಧೆ ಅವರ ಹೆಸರನ್ನು ನೇರವಾಗಿ ಹೇಳದೆ ಟೀಕಿಸುವ ವೀಡಿಯೊವನ್ನು ಪೋಸ್ಟ್ ಮಾಡಿದ್ದರು.

ಈ ಹೇಳಿಕೆಯಲ್ಲಿ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ 2022 ರಲ್ಲಿ ಶಿಂಧೆ ದಂಗೆ ಎದ್ದ ಅವರ ಸರ್ಕಾರವನ್ನು ಉರುಳಿಸಿದ್ದನ್ನು ಉಲ್ಲೇಖಿಸಿದ್ದರು. ಮಹಾರಾಷ್ಟ್ರದ ಈ ರಾಜಕೀಯ ಬಿಕ್ಕಟ್ಟನ್ನು ಉಲ್ಲೇಖಿಸುವಾಗ ಕುನಾಲ್ ಅವರು ಶಿಂಧೆ ಅವರನ್ನು “ದೇಶದ್ರೋಹಿ” ಎಂದು ಹೇಳಿದ್ದರು. ಆದಾಗ್ಯೂ, ಅವರು ಶಿಂಧೆ ಹೆಸರನ್ನು ಉಲ್ಲೇಖಿಸಿರಲಿಲ್ಲ.

ಪ್ರದರ್ಶನದ ತುಣುಕುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆದ ನಂತರ, ಮಾರ್ಚ್ 23 ರ ರಾತ್ರಿ ಶಿವಸೇನೆಯ ಶಿಂಧೆ ನೇತೃತ್ವದ ಬಣದ ಸದಸ್ಯರು ಕಾರ್ಯಕ್ರಮವನ್ನು ರೆಕಾರ್ಡ್‌ ಮಾಡಲಾದ ಮುಂಬೈನ ಖಾರ್ ಪ್ರದೇಶದಲ್ಲಿ ದಿ ಹ್ಯಾಬಿಟ್ಯಾಟ್ ಸ್ಟುಡಿಯೋವನ್ನು ಧ್ವಂಸಗೊಳಿಸಿದ್ದರು.

ಮರುದಿನ, ಮುಂಬೈ ಪೊಲೀಸರು ಕಮ್ರಾ ವಿರುದ್ಧ ಮಾನನಷ್ಟ ಮತ್ತು ಸಾರ್ವಜನಿಕ ಕಿಡಿಗೇಡಿತನಕ್ಕೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತಾ ವಿಭಾಗಗಳ ಅಡಿಯಲ್ಲಿ ಕುನಾಲ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ದಿ ಹ್ಯಾಬಿಟ್ಯಾಟ್ ಸ್ಟುಡಿಯೋ ಧ್ವಂಸ ಪ್ರಕರಣದಲ್ಲಿ ಶಿಂಧೆ ನೇತೃತ್ವದ ಶಿವಸೇನೆಯ 12 ಸದಸ್ಯರನ್ನು ಪೊಲೀಸರು ಬಂಧಿಸಿದರು. ಆದಾಗ್ಯೂ, ಮಾರ್ಚ್ 24 ರಂದು ಅವರಿಗೆ ಜಾಮೀನು ನೀಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...