Homeಕರ್ನಾಟಕಸಂವಿಧಾನಕ್ಕೆ ಅಪಾಯ ಎದುರಾಗಿರುವುದು ಆರ್‌ಎಸ್‌ಎಸ್, ಅದರ ನಾಯಕರಿಂದ: ಸಿಎಂ ಸಿದ್ದರಾಮಯ್ಯ

ಸಂವಿಧಾನಕ್ಕೆ ಅಪಾಯ ಎದುರಾಗಿರುವುದು ಆರ್‌ಎಸ್‌ಎಸ್, ಅದರ ನಾಯಕರಿಂದ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ನರೇಂದ್ರ ಮೋದಿಯವರೇ, ಸಂವಿಧಾನಕ್ಕೆ ಅಪಾಯ ಎದುರಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಇಲ್ಲವೇ ಅವರ ಅನುಯಾಯಿಗಳಿಂದ ಅಲ್ಲ, ಅಪಾಯ ಎದುರಾಗಿರುವುದು ನಿಮ್ಮ ಮಾತೃ ಸಂಸ್ಥೆಯಾದ ಆರ್‌ಎಸ್‌ಎಸ್ ಮತ್ತು ಅದರ ನಾಯಕರಿಂದ. ಇದಕ್ಕೆ ಇತಿಹಾಸ ಸಾಕ್ಷಿ ಇದೆ. ಇತಿಹಾಸವನ್ನು ಮರೆಯಬಾರದೆಂದು ನಮಗೆ ಪಾಠ ಮಾಡಿದವರು ಇದೇ ಬಾಬಾಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಅಂಬೇಡ್ಕರ್ ಅವರು ಮತ್ತೆ ಹುಟ್ಟಿ ಬಂದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಅವರು ಹೇಳಬೇಕಾಗಿರುವುದು ಅದಲ್ಲ, “ಯಾವ ಆರ್‌ಎಸ್‌ಎಸ್ ನಾಯಕರು ಹೇಳಿದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ” ಎಂದು ಹೇಳಬೇಕಾಗಿತ್ತು ಎಂದಿದ್ದಾರೆ.

“ಭಾರತ ಸಂವಿಧಾನದ ಅತ್ಯಂತ ಕೆಟ್ಟ ವಿಚಾರ ಏನಂದ್ರೆ, ಅದರಲ್ಲಿ ಭಾರತೀಯತೆ ಎನ್ನುವುದೇ ಇಲ್ಲ ಪುರಾತನ ಭಾರತದ ಕಾನೂನು-ಕಟ್ಟಳೆಗಳಾಗಲಿ, ಸಂರಚನೆಗಳಾಗಲಿ, ನುಡಿಗಟ್ಟುಗಳಾಗಲಿ ಯಾವುದೂ ಇಲ್ಲ. ಸ್ಪಾರ್ತದ ಲೈಕುರ್ಗಸ್ ಅಥವಾ ಪರ್ಸಿಯಾದ ಸೊಲೊನ್ ಬರೆಯುವುದಕ್ಕು ಮೊದಲೇ ಮನು ಈ ನಿಯಮಗಳನ್ನು ಇಲ್ಲಿ ರಚಿಸಿದ್ದರು. ಇವತ್ತಿಗೂ ಮನುಸಂಸ್ಮೃತಿಯಲ್ಲಿ ಮನು ಉಲ್ಲೇಖಿಸಿರುವ ಕಾನೂನುಗಳು ಪ್ರಪಂಚದ ಗೌರವಕ್ಕೆ ಪಾತ್ರವಾಗಿವೆ ಮತ್ತು ಸ್ವಾಭಾವಿಕ ವಿಧೇಯತೆ ಮತ್ತು ಅನುಸರಣೆಯಲ್ಲಿವೆ. ಆದರೆ, ನಮ್ಮ ಸಂವಿಧಾನವನ್ನು ರಚಿಸಿದ ಪಂಡಿತರಿಗೆ ಇದ್ಯಾವುದೂ ಲೆಕ್ಕಕ್ಕಿಲ್ಲ – ಇದು ಆರ್‌ಎಸ್‌ಎಸ್ ಮುಖವಾಣಿಯಾದ “ಆರ್ಗನೈಸರ್ ಪತ್ರಿಕೆಯ ಸಂಪಾದಕೀಯದ ಸಾಲುಗಳು” ಎಂದು ಸಿಎಂ ತಿಳಿಸಿದ್ದಾರೆ.

ನರೇಂದ್ರ ಮೋದಿಯವರೇ ಬಾಬಾಸಾಹೇಬ್ ಅಂಬೇಡ್ಕರ್ ಅಧ್ಯಕ್ಷತೆಯ ಸಂವಿಧಾನ ರಚನಾ ಸಮಿತಿ ನೀಡಿದ ಕರಡು ಪ್ರತಿಯನ್ನು ನಮ್ಮ ದೇಶ ಅಂಗೀಕರಿಸಿದ್ದು 1949ರ ನವಂಬರ್ 26ರಂದು. ಅದಾಗಿ ಕೇವಲ ನಾಲ್ಕೇ ದಿನಕ್ಕೆ ಅಂದರೆ 1949ರ ನವಂಬರ್ 30ರಂದು ನಿಮ್ಮ ಮಾತೃಸಂಸ್ಥೆಯಾದ ಆರ್‌ಎಸ್‌ಎಸ್ ಬರೆದಿರುವ ಈ ಸಂಪಾದಕೀಯದ ಬಗ್ಗೆ ಈಗಿನ ನಿಮ್ಮ ನಿಲುವು ಏನು? ಇದನ್ನು ಒಪ್ಪುತ್ತೀರಾ? ನಿರಾಕರಿಸುತ್ತೀರಾ?” ಎಂದು ಸಿಎಂ ಪ್ರಶ್ನಿಸಿದ್ದಾರೆ.

“ನಮ್ಮದು ಎಂದು ಹೇಳಲಾಗುತ್ತಿರುವ ಈ ಸಂವಿಧಾನವು, ಪಾಶ್ಚಾತ್ಯ ದೇಶಗಳ ಸಂವಿಧಾನಗಳಿಂದ ಬೇರೆ ಬೇರೆ ಕಲಮ್ಮುಗಳನ್ನು ಹೆಕ್ಕಿ ತಂದು ಒಟ್ಟುಗೂಡಿಸಿದ ಕಂತೆಯಾಗಿದ್ದು, ಇದರಲ್ಲಿ ಹಲವಾರು ತೊಡಕುಗಳು ಮತ್ತು ಭಿನ್ನನಿಲುವುಗಳು ಎದ್ದು ಕಾಣುತ್ತವೆ. ನಮ್ಮದು ಅಂತ ಕರೆದುಕೊಳ್ಳುವ ಯಾವ ಭಾರತೀಯ ಅಂಶವೂ ಇದರಲ್ಲಿಲ್ಲ. ನಮ್ಮ ರಾಷ್ಟ್ರೀಯ ಕಾರ್ಯಯೋಜನೆ ಏನು ಮತ್ತು ನಮ್ಮ ಬದುಕಿನ ಮುಖ್ಯ ಧಾತುವೇನು ಎಂಬುದರ ಬಗ್ಗೆ ಇದರ ನಿರ್ದೇಶಕ ತತ್ವಗಳಲ್ಲಿ ಒಂದೇ ಒಂದು ಪದವಿದೆಯೇ? ಇಲ್ಲ!” ಎಂದು ಹೇಳಿದವರು ಗೋಳ್ವಾಲ್ಕರ್ ಅವರು ಎಂದು ಸಿಎಂ ನೆನಪಿಸಿದ್ದಾರೆ.

“ನರೇಂದ್ರ ಮೋದಿ ಅವರೇ, ನೀವು ಗುರೂಜಿ ಎಂದೇ ಗೌರವದಿಂದ ಕರೆಯುವ ಆರ್‌ಎಸ್‌ಎಸ್‌ನ ಎರಡನೇ ಸಂರಸಂಘ ಚಾಲಕರಾದ ಎಂ.ಎಸ್. ಗೋಳ್ವಾಲ್ಕರ್ ನಿಮ್ಮ ‘ಧರ್ಮ ಗ್ರಂಥ’ ವಾದ ಬಂಚ್ ಆಫ್ ಥಾಟ್ಸ್‌ನಲ್ಲಿ ವ್ಯಕ್ತಪಡಿಸಿರುವ ಈ ಅಭಿಪ್ರಾಯವನ್ನು ಇಲ್ಲಿಯವರೆಗೆ ನೀವು ನಿರಾಕರಿಸಿಲ್ಲ. ಈಗಲಾದರೂ ಹೇಳಿ ಈ ಅಭಿಪ್ರಾಯಕ್ಕೆ ನಿಮ್ಮ ಸಹಮತ ಇದೆಯೇ? ಭಿನ್ನಮತ ಇದೆಯೇ?” ಎಂದು ಸಿಎಂ ಕೇಳಿದ್ದಾರೆ.

“ವೇದಗಳ ನಂತರ ನಮ್ಮ ಹಿಂದೂ ರಾಷ್ಟ್ರಕ್ಕೆ ಪೂಜನೀಯವಾದ ಗ್ರಂಥವೆಂದರೆ ಮನುಸ್ಮೃತಿಯಾಗಿದ್ದು, ಅನಾದಿ ಕಾಲದಿಂದಲೂ ನಮ್ಮ ಸಂಸ್ಕೃತಿ – ಸಂಪ್ರದಾಯ, ಆಲೋಚನೆಗಳು ಮತ್ತು ಆಚಾರಗಳಿಗೆ ಅದುವೇ ಆಧಾರವಾಗಿದೆ. ಶತಮಾನಗಳಿಂದ ನಮ್ಮ ದೇಶವು ಸಾಗಿಬಂದ ಆಧ್ಯಾತ್ಮಿಕ ಮತ್ತು ದೈವಿಕ ಪಥಗಳಿಗೆ ಈ ಕೃತಿಯೇ ಕ್ರೋಢೀಕೃತ ರೂಪವಾಗಿದೆ. ಇವತ್ತಿಗೂ ಕೋಟ್ಯಂತರ ಹಿಂದೂಗಳು ತಮ್ಮ ಜೀವನ ಮತ್ತು ಆಚರಣೆಗಳಲ್ಲಿ ಅನುಸರಿಸುತ್ತಿರುವ ಕಟ್ಟಳೆಗಳಿಗೆ ಈ ಮನುಸ್ಮೃತಿಯೇ ಮೂಲವಾಗಿದೆ. ಇವತ್ತು ಮನುಸ್ಮೃತಿಯೇ ಹಿಂದೂ ಕಾನೂನು” ಎಂದು ಹೇಳಿದವರು ವಿನಾಯಕ ದಾಮೋದರ ಸಾವರ್ಕರ್ ದೆಹಲಿಯ ಪ್ರಭಾತ್ ಸಂಸ್ಥೆ ಹಿಂದಿಯಲ್ಲಿ ಪ್ರಕಟಿಸಿರುವ ಸಾವರ್ಕರ್ ಸಮಗ್ರ ಬರಹಗಳ ಪುಸ್ತಕದ ಸಂಪುಟ 4ರ 416ನೇ ಪುಟದಲ್ಲಿ ಸಂವಿಧಾನದ ಬಗೆಗಿನ ಸಾವರ್ಕರ್ ಅಭಿಪ್ರಾಯ ಇದು” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

“ನರೇಂದ್ರ ಮೋದಿಯವರೇ ನೀವು ಅಧಿಕಾರಕ್ಕೆ ಬಂದ ನಂತರ ನಿಮ್ಮ ಪಕ್ಷ ಮತ್ತು ಪರಿವಾರ ಸಾವರ್ಕರ್ ಅವರನ್ನು ಅಪ್ರತಿಮ ದೇಶಭಕ್ತರೆಂದು ಬಿಂಬಿಸುತ್ತಾ ಬಂದಿದ್ದೀರಿ. ಅವರು ಸಂವಿಧಾನದ ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಕೂಡಾ ನೀವು ಸಮರ್ಥಿಸಬಹುದು ಎಂದು ಭಾವಿಸಿದ್ದೇನೆ. ಆ ಬಗ್ಗೆ ನಿಮಗೆ ಸಹಮತ ಇಲ್ಲ ಎಂದಾದರೆ ಅದನ್ನು ದೇಶದ ಮುಂದೆ ಹೇಳಿಬಿಡಿ” ಎಂದು ಸಿಎಂ ಸವಾಲ್ ಹಾಕಿದ್ದಾರೆ.

ಇದನ್ನೂ ಓದಿ : ಬಡವರಿಗೆ ವಸತಿ, ಶಿಕ್ಷಣ, ವೈದ್ಯಕೀಯ ಸೌಲಭ್ಯ ಸಿಗುವಂತಾಗುವುದೇ ನಿಜವಾದ ಅಭಿವೃದ್ಧಿ: ನ್ಯಾ. ಓಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...