Homeಕರ್ನಾಟಕಸಂವಿಧಾನಕ್ಕೆ ಅಪಾಯ ಎದುರಾಗಿರುವುದು ಆರ್‌ಎಸ್‌ಎಸ್, ಅದರ ನಾಯಕರಿಂದ: ಸಿಎಂ ಸಿದ್ದರಾಮಯ್ಯ

ಸಂವಿಧಾನಕ್ಕೆ ಅಪಾಯ ಎದುರಾಗಿರುವುದು ಆರ್‌ಎಸ್‌ಎಸ್, ಅದರ ನಾಯಕರಿಂದ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ನರೇಂದ್ರ ಮೋದಿಯವರೇ, ಸಂವಿಧಾನಕ್ಕೆ ಅಪಾಯ ಎದುರಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಇಲ್ಲವೇ ಅವರ ಅನುಯಾಯಿಗಳಿಂದ ಅಲ್ಲ, ಅಪಾಯ ಎದುರಾಗಿರುವುದು ನಿಮ್ಮ ಮಾತೃ ಸಂಸ್ಥೆಯಾದ ಆರ್‌ಎಸ್‌ಎಸ್ ಮತ್ತು ಅದರ ನಾಯಕರಿಂದ. ಇದಕ್ಕೆ ಇತಿಹಾಸ ಸಾಕ್ಷಿ ಇದೆ. ಇತಿಹಾಸವನ್ನು ಮರೆಯಬಾರದೆಂದು ನಮಗೆ ಪಾಠ ಮಾಡಿದವರು ಇದೇ ಬಾಬಾಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಅಂಬೇಡ್ಕರ್ ಅವರು ಮತ್ತೆ ಹುಟ್ಟಿ ಬಂದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಅವರು ಹೇಳಬೇಕಾಗಿರುವುದು ಅದಲ್ಲ, “ಯಾವ ಆರ್‌ಎಸ್‌ಎಸ್ ನಾಯಕರು ಹೇಳಿದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ” ಎಂದು ಹೇಳಬೇಕಾಗಿತ್ತು ಎಂದಿದ್ದಾರೆ.

“ಭಾರತ ಸಂವಿಧಾನದ ಅತ್ಯಂತ ಕೆಟ್ಟ ವಿಚಾರ ಏನಂದ್ರೆ, ಅದರಲ್ಲಿ ಭಾರತೀಯತೆ ಎನ್ನುವುದೇ ಇಲ್ಲ ಪುರಾತನ ಭಾರತದ ಕಾನೂನು-ಕಟ್ಟಳೆಗಳಾಗಲಿ, ಸಂರಚನೆಗಳಾಗಲಿ, ನುಡಿಗಟ್ಟುಗಳಾಗಲಿ ಯಾವುದೂ ಇಲ್ಲ. ಸ್ಪಾರ್ತದ ಲೈಕುರ್ಗಸ್ ಅಥವಾ ಪರ್ಸಿಯಾದ ಸೊಲೊನ್ ಬರೆಯುವುದಕ್ಕು ಮೊದಲೇ ಮನು ಈ ನಿಯಮಗಳನ್ನು ಇಲ್ಲಿ ರಚಿಸಿದ್ದರು. ಇವತ್ತಿಗೂ ಮನುಸಂಸ್ಮೃತಿಯಲ್ಲಿ ಮನು ಉಲ್ಲೇಖಿಸಿರುವ ಕಾನೂನುಗಳು ಪ್ರಪಂಚದ ಗೌರವಕ್ಕೆ ಪಾತ್ರವಾಗಿವೆ ಮತ್ತು ಸ್ವಾಭಾವಿಕ ವಿಧೇಯತೆ ಮತ್ತು ಅನುಸರಣೆಯಲ್ಲಿವೆ. ಆದರೆ, ನಮ್ಮ ಸಂವಿಧಾನವನ್ನು ರಚಿಸಿದ ಪಂಡಿತರಿಗೆ ಇದ್ಯಾವುದೂ ಲೆಕ್ಕಕ್ಕಿಲ್ಲ – ಇದು ಆರ್‌ಎಸ್‌ಎಸ್ ಮುಖವಾಣಿಯಾದ “ಆರ್ಗನೈಸರ್ ಪತ್ರಿಕೆಯ ಸಂಪಾದಕೀಯದ ಸಾಲುಗಳು” ಎಂದು ಸಿಎಂ ತಿಳಿಸಿದ್ದಾರೆ.

ನರೇಂದ್ರ ಮೋದಿಯವರೇ ಬಾಬಾಸಾಹೇಬ್ ಅಂಬೇಡ್ಕರ್ ಅಧ್ಯಕ್ಷತೆಯ ಸಂವಿಧಾನ ರಚನಾ ಸಮಿತಿ ನೀಡಿದ ಕರಡು ಪ್ರತಿಯನ್ನು ನಮ್ಮ ದೇಶ ಅಂಗೀಕರಿಸಿದ್ದು 1949ರ ನವಂಬರ್ 26ರಂದು. ಅದಾಗಿ ಕೇವಲ ನಾಲ್ಕೇ ದಿನಕ್ಕೆ ಅಂದರೆ 1949ರ ನವಂಬರ್ 30ರಂದು ನಿಮ್ಮ ಮಾತೃಸಂಸ್ಥೆಯಾದ ಆರ್‌ಎಸ್‌ಎಸ್ ಬರೆದಿರುವ ಈ ಸಂಪಾದಕೀಯದ ಬಗ್ಗೆ ಈಗಿನ ನಿಮ್ಮ ನಿಲುವು ಏನು? ಇದನ್ನು ಒಪ್ಪುತ್ತೀರಾ? ನಿರಾಕರಿಸುತ್ತೀರಾ?” ಎಂದು ಸಿಎಂ ಪ್ರಶ್ನಿಸಿದ್ದಾರೆ.

“ನಮ್ಮದು ಎಂದು ಹೇಳಲಾಗುತ್ತಿರುವ ಈ ಸಂವಿಧಾನವು, ಪಾಶ್ಚಾತ್ಯ ದೇಶಗಳ ಸಂವಿಧಾನಗಳಿಂದ ಬೇರೆ ಬೇರೆ ಕಲಮ್ಮುಗಳನ್ನು ಹೆಕ್ಕಿ ತಂದು ಒಟ್ಟುಗೂಡಿಸಿದ ಕಂತೆಯಾಗಿದ್ದು, ಇದರಲ್ಲಿ ಹಲವಾರು ತೊಡಕುಗಳು ಮತ್ತು ಭಿನ್ನನಿಲುವುಗಳು ಎದ್ದು ಕಾಣುತ್ತವೆ. ನಮ್ಮದು ಅಂತ ಕರೆದುಕೊಳ್ಳುವ ಯಾವ ಭಾರತೀಯ ಅಂಶವೂ ಇದರಲ್ಲಿಲ್ಲ. ನಮ್ಮ ರಾಷ್ಟ್ರೀಯ ಕಾರ್ಯಯೋಜನೆ ಏನು ಮತ್ತು ನಮ್ಮ ಬದುಕಿನ ಮುಖ್ಯ ಧಾತುವೇನು ಎಂಬುದರ ಬಗ್ಗೆ ಇದರ ನಿರ್ದೇಶಕ ತತ್ವಗಳಲ್ಲಿ ಒಂದೇ ಒಂದು ಪದವಿದೆಯೇ? ಇಲ್ಲ!” ಎಂದು ಹೇಳಿದವರು ಗೋಳ್ವಾಲ್ಕರ್ ಅವರು ಎಂದು ಸಿಎಂ ನೆನಪಿಸಿದ್ದಾರೆ.

“ನರೇಂದ್ರ ಮೋದಿ ಅವರೇ, ನೀವು ಗುರೂಜಿ ಎಂದೇ ಗೌರವದಿಂದ ಕರೆಯುವ ಆರ್‌ಎಸ್‌ಎಸ್‌ನ ಎರಡನೇ ಸಂರಸಂಘ ಚಾಲಕರಾದ ಎಂ.ಎಸ್. ಗೋಳ್ವಾಲ್ಕರ್ ನಿಮ್ಮ ‘ಧರ್ಮ ಗ್ರಂಥ’ ವಾದ ಬಂಚ್ ಆಫ್ ಥಾಟ್ಸ್‌ನಲ್ಲಿ ವ್ಯಕ್ತಪಡಿಸಿರುವ ಈ ಅಭಿಪ್ರಾಯವನ್ನು ಇಲ್ಲಿಯವರೆಗೆ ನೀವು ನಿರಾಕರಿಸಿಲ್ಲ. ಈಗಲಾದರೂ ಹೇಳಿ ಈ ಅಭಿಪ್ರಾಯಕ್ಕೆ ನಿಮ್ಮ ಸಹಮತ ಇದೆಯೇ? ಭಿನ್ನಮತ ಇದೆಯೇ?” ಎಂದು ಸಿಎಂ ಕೇಳಿದ್ದಾರೆ.

“ವೇದಗಳ ನಂತರ ನಮ್ಮ ಹಿಂದೂ ರಾಷ್ಟ್ರಕ್ಕೆ ಪೂಜನೀಯವಾದ ಗ್ರಂಥವೆಂದರೆ ಮನುಸ್ಮೃತಿಯಾಗಿದ್ದು, ಅನಾದಿ ಕಾಲದಿಂದಲೂ ನಮ್ಮ ಸಂಸ್ಕೃತಿ – ಸಂಪ್ರದಾಯ, ಆಲೋಚನೆಗಳು ಮತ್ತು ಆಚಾರಗಳಿಗೆ ಅದುವೇ ಆಧಾರವಾಗಿದೆ. ಶತಮಾನಗಳಿಂದ ನಮ್ಮ ದೇಶವು ಸಾಗಿಬಂದ ಆಧ್ಯಾತ್ಮಿಕ ಮತ್ತು ದೈವಿಕ ಪಥಗಳಿಗೆ ಈ ಕೃತಿಯೇ ಕ್ರೋಢೀಕೃತ ರೂಪವಾಗಿದೆ. ಇವತ್ತಿಗೂ ಕೋಟ್ಯಂತರ ಹಿಂದೂಗಳು ತಮ್ಮ ಜೀವನ ಮತ್ತು ಆಚರಣೆಗಳಲ್ಲಿ ಅನುಸರಿಸುತ್ತಿರುವ ಕಟ್ಟಳೆಗಳಿಗೆ ಈ ಮನುಸ್ಮೃತಿಯೇ ಮೂಲವಾಗಿದೆ. ಇವತ್ತು ಮನುಸ್ಮೃತಿಯೇ ಹಿಂದೂ ಕಾನೂನು” ಎಂದು ಹೇಳಿದವರು ವಿನಾಯಕ ದಾಮೋದರ ಸಾವರ್ಕರ್ ದೆಹಲಿಯ ಪ್ರಭಾತ್ ಸಂಸ್ಥೆ ಹಿಂದಿಯಲ್ಲಿ ಪ್ರಕಟಿಸಿರುವ ಸಾವರ್ಕರ್ ಸಮಗ್ರ ಬರಹಗಳ ಪುಸ್ತಕದ ಸಂಪುಟ 4ರ 416ನೇ ಪುಟದಲ್ಲಿ ಸಂವಿಧಾನದ ಬಗೆಗಿನ ಸಾವರ್ಕರ್ ಅಭಿಪ್ರಾಯ ಇದು” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

“ನರೇಂದ್ರ ಮೋದಿಯವರೇ ನೀವು ಅಧಿಕಾರಕ್ಕೆ ಬಂದ ನಂತರ ನಿಮ್ಮ ಪಕ್ಷ ಮತ್ತು ಪರಿವಾರ ಸಾವರ್ಕರ್ ಅವರನ್ನು ಅಪ್ರತಿಮ ದೇಶಭಕ್ತರೆಂದು ಬಿಂಬಿಸುತ್ತಾ ಬಂದಿದ್ದೀರಿ. ಅವರು ಸಂವಿಧಾನದ ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಕೂಡಾ ನೀವು ಸಮರ್ಥಿಸಬಹುದು ಎಂದು ಭಾವಿಸಿದ್ದೇನೆ. ಆ ಬಗ್ಗೆ ನಿಮಗೆ ಸಹಮತ ಇಲ್ಲ ಎಂದಾದರೆ ಅದನ್ನು ದೇಶದ ಮುಂದೆ ಹೇಳಿಬಿಡಿ” ಎಂದು ಸಿಎಂ ಸವಾಲ್ ಹಾಕಿದ್ದಾರೆ.

ಇದನ್ನೂ ಓದಿ : ಬಡವರಿಗೆ ವಸತಿ, ಶಿಕ್ಷಣ, ವೈದ್ಯಕೀಯ ಸೌಲಭ್ಯ ಸಿಗುವಂತಾಗುವುದೇ ನಿಜವಾದ ಅಭಿವೃದ್ಧಿ: ನ್ಯಾ. ಓಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...