Homeಕರ್ನಾಟಕಸಂವಿಧಾನಕ್ಕೆ ಅಪಾಯ ಎದುರಾಗಿರುವುದು ಆರ್‌ಎಸ್‌ಎಸ್, ಅದರ ನಾಯಕರಿಂದ: ಸಿಎಂ ಸಿದ್ದರಾಮಯ್ಯ

ಸಂವಿಧಾನಕ್ಕೆ ಅಪಾಯ ಎದುರಾಗಿರುವುದು ಆರ್‌ಎಸ್‌ಎಸ್, ಅದರ ನಾಯಕರಿಂದ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ನರೇಂದ್ರ ಮೋದಿಯವರೇ, ಸಂವಿಧಾನಕ್ಕೆ ಅಪಾಯ ಎದುರಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಇಲ್ಲವೇ ಅವರ ಅನುಯಾಯಿಗಳಿಂದ ಅಲ್ಲ, ಅಪಾಯ ಎದುರಾಗಿರುವುದು ನಿಮ್ಮ ಮಾತೃ ಸಂಸ್ಥೆಯಾದ ಆರ್‌ಎಸ್‌ಎಸ್ ಮತ್ತು ಅದರ ನಾಯಕರಿಂದ. ಇದಕ್ಕೆ ಇತಿಹಾಸ ಸಾಕ್ಷಿ ಇದೆ. ಇತಿಹಾಸವನ್ನು ಮರೆಯಬಾರದೆಂದು ನಮಗೆ ಪಾಠ ಮಾಡಿದವರು ಇದೇ ಬಾಬಾಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಅಂಬೇಡ್ಕರ್ ಅವರು ಮತ್ತೆ ಹುಟ್ಟಿ ಬಂದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಅವರು ಹೇಳಬೇಕಾಗಿರುವುದು ಅದಲ್ಲ, “ಯಾವ ಆರ್‌ಎಸ್‌ಎಸ್ ನಾಯಕರು ಹೇಳಿದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ” ಎಂದು ಹೇಳಬೇಕಾಗಿತ್ತು ಎಂದಿದ್ದಾರೆ.

“ಭಾರತ ಸಂವಿಧಾನದ ಅತ್ಯಂತ ಕೆಟ್ಟ ವಿಚಾರ ಏನಂದ್ರೆ, ಅದರಲ್ಲಿ ಭಾರತೀಯತೆ ಎನ್ನುವುದೇ ಇಲ್ಲ ಪುರಾತನ ಭಾರತದ ಕಾನೂನು-ಕಟ್ಟಳೆಗಳಾಗಲಿ, ಸಂರಚನೆಗಳಾಗಲಿ, ನುಡಿಗಟ್ಟುಗಳಾಗಲಿ ಯಾವುದೂ ಇಲ್ಲ. ಸ್ಪಾರ್ತದ ಲೈಕುರ್ಗಸ್ ಅಥವಾ ಪರ್ಸಿಯಾದ ಸೊಲೊನ್ ಬರೆಯುವುದಕ್ಕು ಮೊದಲೇ ಮನು ಈ ನಿಯಮಗಳನ್ನು ಇಲ್ಲಿ ರಚಿಸಿದ್ದರು. ಇವತ್ತಿಗೂ ಮನುಸಂಸ್ಮೃತಿಯಲ್ಲಿ ಮನು ಉಲ್ಲೇಖಿಸಿರುವ ಕಾನೂನುಗಳು ಪ್ರಪಂಚದ ಗೌರವಕ್ಕೆ ಪಾತ್ರವಾಗಿವೆ ಮತ್ತು ಸ್ವಾಭಾವಿಕ ವಿಧೇಯತೆ ಮತ್ತು ಅನುಸರಣೆಯಲ್ಲಿವೆ. ಆದರೆ, ನಮ್ಮ ಸಂವಿಧಾನವನ್ನು ರಚಿಸಿದ ಪಂಡಿತರಿಗೆ ಇದ್ಯಾವುದೂ ಲೆಕ್ಕಕ್ಕಿಲ್ಲ – ಇದು ಆರ್‌ಎಸ್‌ಎಸ್ ಮುಖವಾಣಿಯಾದ “ಆರ್ಗನೈಸರ್ ಪತ್ರಿಕೆಯ ಸಂಪಾದಕೀಯದ ಸಾಲುಗಳು” ಎಂದು ಸಿಎಂ ತಿಳಿಸಿದ್ದಾರೆ.

ನರೇಂದ್ರ ಮೋದಿಯವರೇ ಬಾಬಾಸಾಹೇಬ್ ಅಂಬೇಡ್ಕರ್ ಅಧ್ಯಕ್ಷತೆಯ ಸಂವಿಧಾನ ರಚನಾ ಸಮಿತಿ ನೀಡಿದ ಕರಡು ಪ್ರತಿಯನ್ನು ನಮ್ಮ ದೇಶ ಅಂಗೀಕರಿಸಿದ್ದು 1949ರ ನವಂಬರ್ 26ರಂದು. ಅದಾಗಿ ಕೇವಲ ನಾಲ್ಕೇ ದಿನಕ್ಕೆ ಅಂದರೆ 1949ರ ನವಂಬರ್ 30ರಂದು ನಿಮ್ಮ ಮಾತೃಸಂಸ್ಥೆಯಾದ ಆರ್‌ಎಸ್‌ಎಸ್ ಬರೆದಿರುವ ಈ ಸಂಪಾದಕೀಯದ ಬಗ್ಗೆ ಈಗಿನ ನಿಮ್ಮ ನಿಲುವು ಏನು? ಇದನ್ನು ಒಪ್ಪುತ್ತೀರಾ? ನಿರಾಕರಿಸುತ್ತೀರಾ?” ಎಂದು ಸಿಎಂ ಪ್ರಶ್ನಿಸಿದ್ದಾರೆ.

“ನಮ್ಮದು ಎಂದು ಹೇಳಲಾಗುತ್ತಿರುವ ಈ ಸಂವಿಧಾನವು, ಪಾಶ್ಚಾತ್ಯ ದೇಶಗಳ ಸಂವಿಧಾನಗಳಿಂದ ಬೇರೆ ಬೇರೆ ಕಲಮ್ಮುಗಳನ್ನು ಹೆಕ್ಕಿ ತಂದು ಒಟ್ಟುಗೂಡಿಸಿದ ಕಂತೆಯಾಗಿದ್ದು, ಇದರಲ್ಲಿ ಹಲವಾರು ತೊಡಕುಗಳು ಮತ್ತು ಭಿನ್ನನಿಲುವುಗಳು ಎದ್ದು ಕಾಣುತ್ತವೆ. ನಮ್ಮದು ಅಂತ ಕರೆದುಕೊಳ್ಳುವ ಯಾವ ಭಾರತೀಯ ಅಂಶವೂ ಇದರಲ್ಲಿಲ್ಲ. ನಮ್ಮ ರಾಷ್ಟ್ರೀಯ ಕಾರ್ಯಯೋಜನೆ ಏನು ಮತ್ತು ನಮ್ಮ ಬದುಕಿನ ಮುಖ್ಯ ಧಾತುವೇನು ಎಂಬುದರ ಬಗ್ಗೆ ಇದರ ನಿರ್ದೇಶಕ ತತ್ವಗಳಲ್ಲಿ ಒಂದೇ ಒಂದು ಪದವಿದೆಯೇ? ಇಲ್ಲ!” ಎಂದು ಹೇಳಿದವರು ಗೋಳ್ವಾಲ್ಕರ್ ಅವರು ಎಂದು ಸಿಎಂ ನೆನಪಿಸಿದ್ದಾರೆ.

“ನರೇಂದ್ರ ಮೋದಿ ಅವರೇ, ನೀವು ಗುರೂಜಿ ಎಂದೇ ಗೌರವದಿಂದ ಕರೆಯುವ ಆರ್‌ಎಸ್‌ಎಸ್‌ನ ಎರಡನೇ ಸಂರಸಂಘ ಚಾಲಕರಾದ ಎಂ.ಎಸ್. ಗೋಳ್ವಾಲ್ಕರ್ ನಿಮ್ಮ ‘ಧರ್ಮ ಗ್ರಂಥ’ ವಾದ ಬಂಚ್ ಆಫ್ ಥಾಟ್ಸ್‌ನಲ್ಲಿ ವ್ಯಕ್ತಪಡಿಸಿರುವ ಈ ಅಭಿಪ್ರಾಯವನ್ನು ಇಲ್ಲಿಯವರೆಗೆ ನೀವು ನಿರಾಕರಿಸಿಲ್ಲ. ಈಗಲಾದರೂ ಹೇಳಿ ಈ ಅಭಿಪ್ರಾಯಕ್ಕೆ ನಿಮ್ಮ ಸಹಮತ ಇದೆಯೇ? ಭಿನ್ನಮತ ಇದೆಯೇ?” ಎಂದು ಸಿಎಂ ಕೇಳಿದ್ದಾರೆ.

“ವೇದಗಳ ನಂತರ ನಮ್ಮ ಹಿಂದೂ ರಾಷ್ಟ್ರಕ್ಕೆ ಪೂಜನೀಯವಾದ ಗ್ರಂಥವೆಂದರೆ ಮನುಸ್ಮೃತಿಯಾಗಿದ್ದು, ಅನಾದಿ ಕಾಲದಿಂದಲೂ ನಮ್ಮ ಸಂಸ್ಕೃತಿ – ಸಂಪ್ರದಾಯ, ಆಲೋಚನೆಗಳು ಮತ್ತು ಆಚಾರಗಳಿಗೆ ಅದುವೇ ಆಧಾರವಾಗಿದೆ. ಶತಮಾನಗಳಿಂದ ನಮ್ಮ ದೇಶವು ಸಾಗಿಬಂದ ಆಧ್ಯಾತ್ಮಿಕ ಮತ್ತು ದೈವಿಕ ಪಥಗಳಿಗೆ ಈ ಕೃತಿಯೇ ಕ್ರೋಢೀಕೃತ ರೂಪವಾಗಿದೆ. ಇವತ್ತಿಗೂ ಕೋಟ್ಯಂತರ ಹಿಂದೂಗಳು ತಮ್ಮ ಜೀವನ ಮತ್ತು ಆಚರಣೆಗಳಲ್ಲಿ ಅನುಸರಿಸುತ್ತಿರುವ ಕಟ್ಟಳೆಗಳಿಗೆ ಈ ಮನುಸ್ಮೃತಿಯೇ ಮೂಲವಾಗಿದೆ. ಇವತ್ತು ಮನುಸ್ಮೃತಿಯೇ ಹಿಂದೂ ಕಾನೂನು” ಎಂದು ಹೇಳಿದವರು ವಿನಾಯಕ ದಾಮೋದರ ಸಾವರ್ಕರ್ ದೆಹಲಿಯ ಪ್ರಭಾತ್ ಸಂಸ್ಥೆ ಹಿಂದಿಯಲ್ಲಿ ಪ್ರಕಟಿಸಿರುವ ಸಾವರ್ಕರ್ ಸಮಗ್ರ ಬರಹಗಳ ಪುಸ್ತಕದ ಸಂಪುಟ 4ರ 416ನೇ ಪುಟದಲ್ಲಿ ಸಂವಿಧಾನದ ಬಗೆಗಿನ ಸಾವರ್ಕರ್ ಅಭಿಪ್ರಾಯ ಇದು” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

“ನರೇಂದ್ರ ಮೋದಿಯವರೇ ನೀವು ಅಧಿಕಾರಕ್ಕೆ ಬಂದ ನಂತರ ನಿಮ್ಮ ಪಕ್ಷ ಮತ್ತು ಪರಿವಾರ ಸಾವರ್ಕರ್ ಅವರನ್ನು ಅಪ್ರತಿಮ ದೇಶಭಕ್ತರೆಂದು ಬಿಂಬಿಸುತ್ತಾ ಬಂದಿದ್ದೀರಿ. ಅವರು ಸಂವಿಧಾನದ ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಕೂಡಾ ನೀವು ಸಮರ್ಥಿಸಬಹುದು ಎಂದು ಭಾವಿಸಿದ್ದೇನೆ. ಆ ಬಗ್ಗೆ ನಿಮಗೆ ಸಹಮತ ಇಲ್ಲ ಎಂದಾದರೆ ಅದನ್ನು ದೇಶದ ಮುಂದೆ ಹೇಳಿಬಿಡಿ” ಎಂದು ಸಿಎಂ ಸವಾಲ್ ಹಾಕಿದ್ದಾರೆ.

ಇದನ್ನೂ ಓದಿ : ಬಡವರಿಗೆ ವಸತಿ, ಶಿಕ್ಷಣ, ವೈದ್ಯಕೀಯ ಸೌಲಭ್ಯ ಸಿಗುವಂತಾಗುವುದೇ ನಿಜವಾದ ಅಭಿವೃದ್ಧಿ: ನ್ಯಾ. ಓಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...